ಕುಡಿವ ನೀರಿನ ಅಭಾವ ಸೃಷ್ಟಿಸಿದರೆ ಕಠಿಣ ಕ್ರಮ

Creating drastic water shortage is a tough step

Team Udayavani, May 12, 2019, 2:29 PM IST

TUMKUR-TDY-7..

ಕೊರಟಗೆರೆ ಪಪಂ ಕಚೇರಿಯಲ್ಲಿ ನಡೆದ ತುರ್ತು ಕುಡಿಯುವ ನೀರಿನ ಸಭೆಯಲ್ಲಿ ತುಮಕೂರು ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕಿ ಅನುಪಮಾ ಮಾತನಾಡಿದರು.

ಕೊರಟಗೆರೆ: ಕುಡಿಯುವ ನೀರಿನ ಸರಬರಾಜು ಮತ್ತು ಸ್ವಚ್ಛತೆ ನಿರ್ವಹಣೆಯಲ್ಲಿ ವಿಳಂಬ ಮಾಡಿ ಪಟ್ಟಣದಲ್ಲಿ ಕುಡಿಯುವ ನೀರಿನ ಅಭಾವ ಸೃಷ್ಟಿ ಮಾಡುವ ವಾಟರ್‌ ಮ್ಯಾನ್‌ ಮತ್ತು ನೌಕರರ ವಿರುದ್ಧ ತಕ್ಷಣ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಅಮಾನತಿಗೆ ಆದೇಶ ಮಾಡುತ್ತೇನೆ ಎಂದು ತುಮಕೂರು ನಗರಾಭಿ ವೃದ್ಧಿ ಕೋಶ ಯೋಜನಾ ನಿರ್ದೇಶಕಿ ಅನುಪಮಾ ಖಡಕ್‌ ಎಚ್ಚರಿಕೆ ನೀಡಿದರು.

ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರ ಆದೇಶದ ಮೇರೆಗೆ ಕೊರಟಗೆರೆ ಪಪಂಗೆ ಶುಕ್ರವಾರ ಸಂಜೆ ದಿಢೀರ್‌ ಭೇಟಿ ನೀಡಿದ ಅವರು, ಪಪಂ ಅಧಿಕಾರಿ ಮತ್ತು ಸಿಬ್ಬಂದಿಗಳ ಕುಡಿಯುವ ನೀರಿನ ತುರ್ತು ಸಭೆ ನಡೆಸಿದರು.

ಅನಿವಾರ್ಯ: ಈ ವೇಳೆ ವಾಟರ್‌ ಮ್ಯಾನ್‌ಗಳಿಂದ ಮಾಹಿತಿ ಪಡೆದು ಅಧಿಕಾರಿಗಳ ವಿರುದ್ಧ ಕಿಡಿಕಾರಿ ದರು. ಪಟ್ಟಣದಲ್ಲಿ 15 ಸಾವಿರ ಜನರಿಗೆ ಇನ್ನೆರಡು ವರ್ಷ ಆಗುವಷ್ಟು ಕುಡಿಯುವ ನೀರಿನ ಶೇಖರಣೆ ಆಗಿದೆ. 15 ವಾರ್ಡುಗಳಿಗೆ ಪ್ರತಿದಿನ ಒಂದು ಗಂಟೆ ಕಡ್ಡಾಯವಾಗಿ ಕುಡಿಯುವ ನೀರಿನ ಪೂರೈಕೆ ಮಾಡಿ. ಪ್ರತಿದಿನ ಸಂಜೆ ತನಗೆ ದಾಖಲೆ ಸಮೇತ ವರದಿ ಸಲ್ಲಿಸಬೇಕು. ಇಲ್ಲವಾದರೇ ವಾಟರ್‌ ಮ್ಯಾನ್‌ಗಳಿಗೆ ಪಾವಗಡ ಮತ್ತು ಮಧುಗಿರಿ ಪಟ್ಟಣಕ್ಕೆ ನೀರಿನ ಪೂರೈಕೆ ಗಾಗಿ ವರ್ಗಾವಣೆ ಮಾಡುವುದು ಅನಿವಾರ್ಯ ಎಂದು ಎಚ್ಚರಿಕೆ ನೀಡಿದರು.

ಪತ್ರ ಬರೆಯುವೆ: ಉತ್ತರ ಕರ್ನಾಟಕ ಭಾಗದಲ್ಲಿ ಒಂದು ಕೊಡ ನೀರಿಗಾಗಿ 5-6 ಕಿ.ಮೀ ದೂರ ಹೋಗುತ್ತಿದ್ದಾರೆ. ಕಾಡಿನಲ್ಲಿ ವಾಸಿಸುವ ಪ್ರಾಣಿ ಪಕ್ಷಿಗಳಿಗೆ ನೀರಿಲ್ಲದೇ ನಾಡಿಗೆ ಬರುತ್ತಿವೆ. ಪಾವಗಡ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆಯಿಂದ ತೋಟಗಳು ಒಣಗಿ ಹೋಗಿವೆ. ಕೊರಟಗೆರೆ ಪಟ್ಟಣದ 15 ವಾರ್ಡ್‌ನಲ್ಲಿ ಒಂದು ಹನಿ ಕುಡಿಯುವ ನೀರು ವ್ಯರ್ಥ ಆಗುತ್ತಿರುವ ಮಾಹಿತಿ ಬಂದರೆ ಅಧಿಕಾರಿಗಳ ವಿರುದ್ಧ ಸರ್ಕಾರಕ್ಕೆ ಪತ್ರ ಬರೆಯುತ್ತೇನೆಂದರು. ಪಟ್ಟಣದ 15 ವಾರ್ಡುಗಳಿಗೆ ಪ್ರತಿದಿನ 1 ಗಂಟೆ ನೀರು ಬಿಡುವಂತಹ ಸಮಯವನ್ನು ನಿಗದಿ ಮಾಡಿ ಪಪಂ ಕಚೇರಿ ಸೂಚನಾ ಫ‌ಲಕ ಮತ್ತು ಆಯಾ ವಾರ್ಡುಗಳಿಗೆ ಬಿತ್ತಿಪತ್ರದ ಮೂಲಕ ಪ್ರಚಾರಪಡಿಸಬೇಕು.

ನೀರಿನ ಸರಬರಾಜು ಆಗದಿರುವ ವಾರ್ಡುಗಳಿಗೆ ಪ್ರತಿದಿನ ನೀರಿನ ಟ್ಯಾಂಕರ್‌ಗಳ ಮೂಲಕ ಸರಬ ರಾಜು ಮಾಡಬೇಕು. ದಿನಪತ್ರಿಕೆಗಳಿಗೆ ಮಾಹಿತಿ ನೀಡಿ ಕುಡಿಯುವ ನೀರಿನ ಅರಿವು ಮೂಡಿಸಿ ಪ್ರಯತ್ನ ಮಾಡಿ ಎಂದು ಪಪಂ ಮುಖ್ಯಾಧಿಕಾರಿಗೆ ಸೂಚಿಸಿದರು.

ಮುಲಾಜಿಲ್ಲದೇ ಕ್ರಮ: ಪಪಂ ಮುಖ್ಯಾಧಿಕಾರಿ ರುಕ್ಮಿಣಿ ಪ್ರತಿಕ್ರಿಯಿಸಿ, ಪಟ್ಟಣಕ್ಕೆ ಆಗುವಷ್ಟು ಹೇಮಾವತಿ ನೀರು ಜೆಟ್ಟಿಅಗ್ರಹಾರ ಕೆರೆಯಲ್ಲಿ ಶೇಖರಣೆ ಆಗಿದೆ. ನಿರ್ವಹಣೆ ಕೊರತೆಯಿಂದ ನೀರಿನ ಅಭಾವ ಸೃಷ್ಟಿಯಾಗಿದೆ. ಸ್ವಚ್ಛತೆ ನಿರ್ವಹಣೆ ಮತ್ತು ಕುಡಿಯುವ ನೀರಿನ ಪೂರೈಕೆ ಬಗ್ಗೆ ತಾನೇ ಖುದ್ದಾಗಿ ಪಟ್ಟಣದ ವಾರ್ಡುಗಳಿಗೆ ಭೇಟಿ ನೀಡಿ ಸಾರ್ವ ಜನಿಕರಿಂದ ಮಾಹಿತಿ ಕಲೆ ಹಾಕುತ್ತೇನೆ. ನಿರ್ಲಕ್ಷ್ಯ ವಹಿಸುವ ಸಿಬ್ಬಂದಿ ವಿರುದ್ಧ ಮುಲಾಜಿಲ್ಲದೇ ಕ್ರಮಕ್ಕೆ ಸೂಚಿಸುತ್ತೇನೆಂದರು.

ಪಪಂ ಎಂಜಿನಿಯರ್‌ ತ್ಯಾಗರಾಜು ಮಾತನಾಡಿ, ಕೊರಟಗೆರೆ ಪಟ್ಟಣಕ್ಕೆ ಪ್ರತಿದಿನ 28 ಲಕ್ಷ ಲೀಟರ್‌ ಕುಡಿಯುವ ನೀರಿನ ಸರಬರಾಜು ಆಗುತ್ತಿದೆ. 15 ವಾರ್ಡುಗಳ 144 ಲೈನ್‌ಗಳಿಗೆ ನೀರು ಸರಬರಾಜು ಮಾಡಲು ಗಿರಿನಗರ, ತಾಪಂ ಕಚೇರಿ, ಕೋಟೆ ಬೀದಿ ಮತ್ತು ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಸಮೀಪ ನೀರಿನ ಶೇಖರಣೆ ಘಟಕವಿದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ರುಕ್ಮಿಣಿ, ಆರೋಗ್ಯ ಅಧಿಕಾರಿ ರೈಸ್‌ಅಹಮ್ಮದ್‌, ಸಿಬ್ಬಂದಿಗಳಾದ ವೆಂಕಟಾಪತಿ, ನಾಗರತ್ನಮ್ಮ, ಸಾವಿತ್ರಮ್ಮ ಮತ್ತಿತರರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.