ಸೌಲಭ್ಯ ತಲುಪಿಸದಿದ್ದರೆ ಕ್ರಿಮಿನಲ್ ಕೇಸ್
Team Udayavani, Aug 11, 2019, 5:55 PM IST
ರಾಜ್ಯ ಅಂಗವಿಕಲ ಇಲಾಖೆ ಆಯುಕ್ತ ಬಸವರಾಜುಗೆ ಪಾವಗಡ ಸ್ವಾಮಿ ವಿವೇಕಾನಂದ ಅಂಗವಿಕಲರ ಒಕ್ಕೂಟದ ಸದಸ್ಯರು ಮನವಿ ಸಲ್ಲಿಸಿದರು.
ಪಾವಗಡ: ಅಂಗವಿಕಲರಿಗೆ ಸೌಲಭ್ಯ ತಲುಪಿಸದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ರಾಜ್ಯ ಅಂಗವಿಕಲ ಇಲಾಖೆ ಆಯುಕ್ತ ಬಸವ ರಾಜು ಎಚ್ಚರಿಸಿದರು. ಅಂಗವಿಕಲ ಸೌಲಭ್ಯಗಳ ಅನುಷ್ಠಾನ ಕುರಿತು ಪಟ್ಟಣದ ಬಿಆರ್ಸಿ ಕಚೇರಿಯಲ್ಲಿ ಆಯೋಜಿ ಸಿದ್ದ ತುಮಕೂರು, ಚಿತ್ರದುರ್ಗ ಜಿಲ್ಲೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಅಂಗವಿಕಲ ಮಕ್ಕಳ ಭವಿಷ್ಯ ಹಾಳು ಮಾಡುತ್ತ ಸರ್ಕಾರಕ್ಕೆ ತಪ್ಪು ಮಾಹಿತಿ ನೀಡುತ್ತಿ ದ್ದಾರೆ. 14ನೇ ಹಣಕಾಸು ಯೋಜನೆಯಡಿ ಅಂಗವಿಕಲರಿಗೆ ನೀಡುವ ಶೇ.5 ಅನುದಾನ ಜಾರಿಗೊಳಿಸಬೇಕು. ಶಾಸಕರು ಮತ್ತು ಸಂಸ ದರ ನಿಧಿ ಬಳಸಿ ಸೌಲಭ್ಯ ಕೊಡಬೇಕು. ಪೊಲೀಸ್ ಠಾಣೆ, ಸರ್ಕಾರಿ ಬಸ್ ನಿಲ್ದಾಣದಲ್ಲಿ ಅಂಗ ವಿಕಲರಿಗೆ ಪ್ರತ್ಯೇಕ ಶೌಚಗೃಹ ವ್ಯವಸ್ಥೆ ಮಾಡ ಬೇಕು ಎಂದು ತಾಕೀತು ಮಾಡಿದರು.
ಅಂಗವಿಕಲರಿಗೆ ಬಸ್ಪಾಸ್ ನೀಡುವಲ್ಲಿ ವಿಳಂಬವಾಗುತ್ತಿದೆ. ಪಾವಗಡ ತಾಲೂಕಿನ ಅಂಗವಿಕಲರು ಬಸ್ಪಾಸ್ ಮಾಡಿಸಲು ತುಮಕೂರು ಡಿಪೋ, ಚಿತ್ರದುರ್ಗ ಡಿಪೋಗೆ ಹೋಗಬೇಕು ಎಂದು ಅಂಗವಿಕಲ ಒಕ್ಕೂಟದ ಉಪಾಧ್ಯಕ್ಷ ಚಂದ್ರ ಶೇಖರ್ ದೂರಿದರು. ಇದಕ್ಕುತ್ತರಿಸಿದ ಆಯುಕ್ತ ಅಂಗವಿಕಲರ ಅಲೆ ದಾಡಿಸದೆ ವ್ಯವಸ್ಥೆ ಮಾಡಿ ಎಂದು ರಸ್ತೆ ಸಾರಿಗೆ ನಿಗಮದ ಅಧಿಕಾರಿಗೆ ಸೂಚನೆ ನೀಡಿದರು. ಜಿಲ್ಲಾ ಶಿಶುಭಿವೃದ್ಧಿ ಯೋಜನಾಧಿಕಾರಿ ನಟರಾಜ್ ಮಾತನಾಡಿ, ಚಿಕ್ಕವಯಸ್ಸಿನಿಂದಲೇ ಅಂಗವಿಕಲರಿಗೆ ಸೂಕ್ತ ಚಿಕಿತ್ಸೆ ನೀಡಿದರೆ ಭವಿಷ್ಯ ಉಜ್ವಲವಾಗುತ್ತದೆ ಎಂದು ಹೇಳಿದರು.
ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ರಮೇಶ್, ಮಧುಗಿರಿ ಉಪವಿಭಾಗಾಧಿಕಾರಿ ಚಂದ್ರಶೇಖರಯ್ಯ, ತಹಶೀಲ್ದಾರ್ ವರದರಾಜು, ಇಒ ನರಸಿಂಹಮೂರ್ತಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?