ಒತ್ತುವರಿ ತೆರವುಗೊಳಿಸದಿದ್ದರೆ ಕ್ರಿಮಿನಲ್‌ ಪ್ರಕರಣ


Team Udayavani, Feb 18, 2020, 3:00 AM IST

ottuvari-tera

ಕುಣಿಗಲ್‌: ಸರ್ಕಾರಿ ರಸ್ತೆ ಹಾಗೂ ಸ್ಮಶಾನಕ್ಕೆ ಮೀಸಲಿಟ್ಟಿರುವ ಜಾಗ ತೆರವುಗೊಳಿಸದ ರಾಜಸ್ವ ನಿರೀಕ್ಷಕರು, ಗ್ರಾಮ ಲೆಕ್ಕಿಗರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸುವುದಾಗಿ ತಹಶೀಲ್ದಾರ್‌ ವಿ.ಆರ್‌.ವಿಶ್ವನಾಥ್‌ ಎಚ್ಚರಿಸಿದರು. ತಾಪಂ ಸಭಾಂಗಣದಲ್ಲಿ ಸೋಮವಾರ ನಡೆದ ತಾಲೂಕು ಮಟ್ಟದ ಪ.ಜಾತಿ, ಪ.ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯಲ್ಲಿ ಮಾತನಾಡಿದರು.

ಸಭೆ ಪ್ರಾರಂಭವಾಗುತ್ತಿದಂತೆ ವರದರಾಜು, ದಲಿತ್‌ ನಾರಾಯಣ್‌, ಎನ್‌.ನರಸಿಂಹಪ್ರಸಾದ್‌, ಎನ್‌. ರಾಜೇಶ್‌ ಮೊದಲಾದ ದಲಿತ ಮುಖಂಡರು ದಲಿತರ ಶವ ಸಂಸ್ಕಾರಕ್ಕೆ ಮೀಸಲಿಟ್ಟಿರುವ ಸರ್ಕಾರಿ ಜಾಗವನ್ನು ಬಲಾಡ್ಯರು ಒತ್ತುವರಿ ಮಾಡಿದ್ದು, ಹಲವು ಬಾರಿ ದೂರು ನೀಡಿದರೂ ಕ್ರಮ ಕೈಗೊಳ್ಳುವಲ್ಲಿ ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕರು ವಿಫಲವಾಗಿದ್ದಾರೆ ಎಂದು ಆರೋಪಿಸಿದರು.

ಇಂದರಿಂದ ಸಿಟ್ಟಾದ ತಹಶೀಲ್ದಾರ್‌, ತಾಲೂಕು ದಲಿತ ಹಿತ ರಕ್ಷಣ ಸಮಿತಿ ಅಧ್ಯಕ್ಷನಾಗಿದ್ದು, ನನ್ನ ಇಲಾಖೆಯಲ್ಲೇ ಕೆಲಸವಾಗುತ್ತಿಲ್ಲ ಎಂದರೆ ಜನರಿಗೆ ಏನೆಂದು ಉತ್ತರಿಸಲಿ ಎಂದು ಪ್ರಶ್ನಿಸಿದರು. ಜನರ ಕೆಲಸ ಮಾಡದಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಸಭೆಯಲ್ಲಿ ಕೈಗೊಳ್ಳುವ ಯಾವುದೇ ತೀರ್ಮಾನ ಕಾರ್ಯರೂಪಕ್ಕೆ ಬರುತ್ತಿಲ್ಲ ಎಂದು ದಲಿತ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು, ಇದಕ್ಕೆ ಪ್ರತಿಕ್ರಿಯಿಸಿದ ತಹಶೀಲ್ದಾರ್‌, ಜನರು ಅರ್ಜಿ ಕೊಟ್ಟ ತಕ್ಷಣ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಬೇಕು. ಸರ್ಕಾರಿ ಜಮೀನು ಒತ್ತುವರಿ ಮಾಡಿರುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಆರ್‌ಐ, ವಿಎಗಳಿಗೆ ತಿಳಿಸಿದರು.

ತಾಲೂಕಿನಲ್ಲಿ 540 ಮುಜರಾಯಿ ದೇವಾಲಯಗಳಿದ್ದು, ಪ್ರತಿಯೊಬ್ಬರೂ ಮುಕ್ತವಾಗಿ ಹೋಗುವ ಅವಕಾಶವಿದೆ. ಹೀಗಾಗಿ ಎಲ್ಲಾ ದೇವಾಲಯಗಳ ಬಳಿ ನಾಮಫಲಕ ಹಾಕಬೇಕೆಂದು ಮುಖಂಡರು ಆಗ್ರಹಿಸಿದರು. ಕ್ರಮ ಕೈಗೊಳ್ಳುವುದಾಗಿ ತಹಶೀಲ್ದಾರ್‌ ಭರವಸೆ ನೀಡಿದರು.

ಸಭೆಗೆ ಸಮರ್ಪಕವಾಗಿ ಮಾಹಿತಿ ತರದ ಕೆಳ ಹಂತದ ಅಧಿಕಾರಿಗಳ ವಿರುದ್ಧ ಹರಿಹಾಯ್ದ ಇಒ, ಸಭೆಗೆ ಬರುವಾಗ ಅಗತ್ಯ ದಾಖಲೆ ಇಲ್ಲದೆ ಬಂದಿರುವುದಕ್ಕೆ ನಾಚಿಕೆ ಆಗುವುದಿಲ್ಲವೇ ಎಂದು ತರಾಟೆ ತೆಗೆದುಕೊಂಡರು. ಸಭೆಗೆ ಗೈರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದಲಿತ ಮುಖಂಡರು ಆಗ್ರಹಿಸಿದರು. ಇದಕ್ಕೆ ಉತ್ತರಿಸಿದ ತಹಶೀಲ್ದಾರ್‌, ಠರಾವು ಅಂಗೀಕರಿಸಿ ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಲು ಕ್ರಮ ಕೈಗೊಂಡರು.

ಏಜೆನ್ಸಿ ಬದಲಾವಣೆಗೆ ಚಿಂತನೆ: ಪಟ್ಟಣದಲ್ಲಿನ ಹಳೇಯ ಅಂಬೇಡ್ಕರ್‌ ಭವನ ಕೆಡವಿ ವರ್ಷ ಕಳೆದರೂ ಕಟ್ಟಡ ನಿರ್ಮಿಸಿಲ್ಲ ಏಕೆ ಎಂದು ಮುಖಂಡರು ಪ್ರಶ್ನಿಸಿದರು. ಬೆಂಗಳೂರಿನ ಕರ್ನಾಟಕ ವಸತಿ ಶಿಕ್ಷಣ ಮಂಡಲಿಗೆ ಟೆಂಡರ್‌ ಆಗಿದೆ. ಈವರೆಗೂ ಕಟ್ಟಡ ಪ್ರಾರಂಭಿಸಿಲ್ಲ. ಹೀಗಾಗಿ ಏಜೆನ್ಸಿ ಬದಲಾವಣೆಗೆ ಜಿಲ್ಲಾಧಿಕಾರಿಗೆ ದೂರು ಸಲ್ಲಿಸುವುದಾಗಿ ತಹಶೀಲ್ದಾರ್‌ ವಿಶ್ವನಾಥ್‌ ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಕಾಳಮ್ಮ, ಸಿಪಿಐ ನಿರಂಜನ್‌ ಹಾಗೂ ಪುರಸಭೆ ಸದಸ್ಯ ಶ್ರೀನಿವಾಸ್‌, ಗ್ರಾಪಂ ಸದಸ್ಯ ಕೆ.ಶ್ರೀನಿವಾಸ್‌, ಮುಖಂಡರಾದ ಶಿವಶಂಕರ್‌, ಚಲುವನಾರಾಯಣ್‌, ಧನರಾಜ್‌, ಎಸ್‌.ಟಿ.ಕೃಷ್ಣರಾಜು ಇದ್ದರು.

ಟಾಪ್ ನ್ಯೂಸ್

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.