ಸಂಸ್ಕಾರಯುತ ಶಿಕ್ಷಣ ಕೊಡುವುದು ನಿಜವಾದ ಶಿಕ್ಷಣ: ಡಾ. ಹನುಮಂತನಾಥ ಸ್ವಾಮೀಜಿ


Team Udayavani, Apr 17, 2022, 7:28 PM IST

1-g-fddg

ಕೊರಟಗೆರೆ: ಮಕ್ಕಳಿಗೆ ಕೇವಲ ಪಠ್ಯದ ವಿಷಯ ಆಭ್ಯಾಸ ಮಾಡಿ ಅಂಕ ಗಳಿಸುವುದನ್ನು ಹೇಳಿಕೊಡುವುದಲ್ಲ ಸಂಸ್ಕಾರಯುತ ಶಿಕ್ಷಣ ಹೇಳಿಕೊಡುವುದು ನಿಜವಾದ ಶಿಕ್ಷಣ ಎಂದು ಎಲೆರಾಂಪುರ ಕುಂಚಿಟಿಗ ಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ಹನುಮಂತನಾಥಸ್ವಾಮೀಜಿ ತಿಳಿಸಿದರು.

ತಾಲೂಕಿನ ಕೋಳಾಲ ಹೋಬಳಿಯ ಎಲೆರಾಂಪುರ ಕುಂಚಿಟಿಗ ಮಹಾಸಂಸ್ಥಾನ ಮಠದಲ್ಲಿ ಸಂಸ್ಕಾರ ಶಿಬಿರದ ದಿವ್ಯ ಸಾನಿಧ್ಯವನ್ನು ವಹಿಸಿ ಮಾತನಾಡಿದರು.

ಇಂದು ನಮ್ಮ ದೇಶದಲ್ಲಿ ಅತ್ಯುತ್ತಮ ಶಿಕ್ಷಣವನ್ನು ಪಡೆದು ಸಮಾಜಲ್ಲಿ ಅತ್ಯುನ್ನತ ಸ್ಥಾನಮಾನ ಗಳಿಸಿರುವಂತಹ ಬಹುತೇಕರ ಪೋಷಕರು ಇಂದು ವೃದ್ದಾಶ್ರಮದಲ್ಲಿ ಇದ್ದಾರೆ ಇದಕ್ಕೆ ಮುಖ್ಯ ಕಾರಣ ಅವರಿಗೆ ಮೌಲ್ಯಯುವ ಶಿಕ್ಷಣ ಸಿಗದಿರುವುದು ಈ ಹಿನ್ನೆಲೆಯಲ್ಲಿ ಮಠದಲ್ಲಿ ಸಂಸ್ಕಾರಯುವ ಶಿಕ್ಷಣಕ್ಕಾಗಿಯೇ ಸಂಸ್ಕಾರ ಶಿಬಿರನ್ನು ಆಯೋಜಿಸಿರುವುದಾಗಿ ತಿಳಿಸಿದರು.

ನಮ್ಮ ನಿತ್ಯದ ಬದುಕಿನಲ್ಲಿ ನಾವು ಮೊಬೈಲ್ ಮತ್ತು ಸಾಮಾಜಿಕ ಜಾಲತಾಣದಿಂದ ಎಷ್ಟು ದೂರವಿರುತ್ತೇವೆಯೋ ನಮ್ಮ ಬದುಕು ಅಷ್ಟು ಸಂತೋಷವಾಗಿರುತ್ತದೆ ಆದರೆ ನಾವು ಇಂದು ಇದನ್ನು ಬಿಟ್ಟು ಒಂದು ನಿಮಿಷವೂ ಇರಲು ಸಾಧ್ಯವಿಲ್ಲವೇನೋ ಎನ್ನುವಷ್ಟರ ಮಟ್ಟಿಗೆ ನಾವು ದಾಸರಾಗಿದ್ದೇವೆ ಇದರಿಂದಲೇ ನಮಗೆ ಹಲವು ತೊಂದರೆಗಳು ಆಗುತ್ತಿದ್ದು, ಆದಷ್ಟು ಇವುಗಳಿಂದ ದೂರವಿರುವಂತೆ ಸೂಚಿಸಿದರು.

ಮಠದಲ್ಲಿ ಸಂಸ್ಕೃತ ಶಾಲೆಯನ್ನು ಆರಂಭಿಬೇಕು ಎನ್ನುವ ಕನಸು ನನಸಾಗಿದೆ ಮುಂದಿನ ದಿನದಲ್ಲಿ ಮಠದಲ್ಲಿ ನರ್ಸಿಂಗ್ ಕಾಲೇಜ್ ಮತ್ತು ಬಡ ಮಕ್ಕಳಿಗಾಗಿ ಹೈಟೆಕ್ ಶಾಲೆ ಸೇರಿದಂತೆ ಹಲವು ಮಹತ್ತರ ಯೋಜನೆಗಳನ್ನು ಹೊಂದಿದ್ದು ಇವುಗಳ ಸ್ಥಾಪನೆಯನ್ನು ಮಾಡಬೇಕಿದ್ದು ಎಲ್ಲರೂ ಸಹಕರಿಸುವಂತೆ ಹೇಳಿದರು.

ತಹಶೀಲ್ದಾರ್ ನಾಹಿದಾ ಮಾತನಾಡಿ ನಾವು ಮಕ್ಕಗೆ ಎಂದೂ ಮೇಲು-ಕೀಳು ಎನ್ನುವ ಭಾವನೆಗಳನ್ನು ತುಂಬಬಾರದು ಹಣಗಳಿಸಲು ಇರುವಂತಹ ಮಾರ್ಗ ಗಳನ್ನೇ ಯಾವಾಗಲು ತಿಳಿಸಬಾರದು, ಅಂತಹ ವಿಚಾರಗಳನ್ನು ಹೇಳಿ ಪ್ರೇರೇಪಿಸುವುದು ನಿಲ್ಲಬೇಕು ಮಗುವಿಗೆ ಅಭಿವ್ಯಕ್ತಿ ಸ್ವಾತಂತ್ರವನ್ನು ಕಲ್ಪಿಸಬೇಕು, ಪ್ರತಿಯೊಂದು ಮಗುವೂ ಭಿನ್ನವಾಗಿರುತ್ತದೆ ಒಬ್ಬರನ್ನು ತೋರಿಸಿ ಹೀಗೆ ಆಗು ಎನ್ನುವ ಮಾತುಗಳನ್ನು ಬಿಟ್ಟು ಮಗುವಿನಲ್ಲಿ ಇರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದರು.

ಜಿ.ಪಂ ಮಾಜಿ ಸದಸ್ಯ ಶಿವರಾಮಯ್ಯ ಮಾತನಾಡಿ, ಸಮಾಜ ಅದಪತ್ತನತ್ತ ಸಾಗಿದೆ ಹಿಂದೆ ಸಂಜೆಯಾದರೆ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದರು ಆದರೆ ಇಂದು ಸಮಾಜ ಮತ್ತು ನಮ್ಮ ಸಂಸ್ಕೃತಿ ಬದಲಾಗಿ ದೇವಾಲಯ ಬದಲು ಮದ್ಯದಂಗಡಿಗೆ ಹೋಗುವಂತಹ ಸ್ಥಿತಿ ನಿರ್ಮಾಣವಾಗಿದೆ ಆದ್ದರಿಂದ ನಮ್ಮ ಮುಂದಿನ ಸಮಾಜಕ್ಕೆ ಸಂಸ್ಕಾರಯುತ ಶಿಕ್ಷಣವನ್ನು ನೀಡಬೇಕು ಎಂದರು.

ಕಾರ್ಯಕ್ರಮದಲ್ಲಿ ಕುಂಚಿಟಿಗ ಮಹಾಸಂಸ್ಥಾನ ಮಠದ ನಿರ್ದೇಶಕ ನರಸಿಂಹ ಮೂರ್ತಿ ,ಕ್ಷೇತ್ರ ಶಿಕ್ಷಣಾಧಿಕಾರಿ ಸುಧಾಕರ್, ಗ್ರಾ.ಪಂ ಉಪಾಧ್ಯಕ್ಷ ಉಮೇಶ್ ಚಂದ್ರ, ಧಾರ್ಮಿಕ ಮುಖಂಡ ಲಗ್ಗೆರೆ ನಾರಾಯಣಸ್ವಾಮಿ,ಉಪನ್ಯಾಸಕ ಭೋಗಣ್ಣ ಮಾತನಾಡಿದರು.

ವೇದಿಕೆಯಲ್ಲಿ ಎಲೆರಾಂಪು ಗ್ರಾ.ಪಂ ಅಧ್ಯಕ್ಷೆ ಗಂಗಾದೇವಿ, ಬೆಂಗಳೂರಿನ ಅಂಜನಾದ್ರಿ ವಿದ್ಯಾಕೇಂದ್ರದ ಪಿನ್ಸಿಪಾಲ್ ಡಾ. ಗಣೇಶ್, ಉದ್ಯಮಿ ನಿಲೇಶ್ , ಕುಂಚಿಟಿಗ ಸಂಘದ ಮಹಿಳಾ ಅಧ್ಯಕ್ಷೆ ಲಲಿತಾ ಮಲ್ಲಣ್ಣ,ಮಧುಗಿರಿ ಕುಂಚಿಟಿಗರ ಸಂಘದ ತಾಲೂಕು ಅಧ್ಯಕ್ಷ ರಾಜಶೇಖರ್,ಶಿಕ್ಷಕರಾದ ಕುಮಾರಸ್ವಾಮಿ, ರವಿಚಂದ್ರ,ಜಗದೀಶ್, ಮುಖಂಡರಾದ ಶಶಿಧರ್,ಈರಣ್ಣ, ಕಾಂತರಾಜು, ಚಂದ್ರಶೇಖರ್, ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.