ಬೇಡಿಕೆ ಈಡೇರಿಕೆಗೆ ದಲಿತ ಹಕ್ಕುಗಳ ಸಮಿತಿ ಪ್ರತಿಭಟನೆ
ವಿಶೇಷ ಸಭೆ ಕರೆದು ಸಮಸ್ಯೆಗಳಿಗೆ ಪರಿಹಾರ ನೀಡಲು ಆಗ್ರಹ
Team Udayavani, Jul 26, 2019, 4:23 PM IST
ತುಮಕೂರು ಡೀಸಿ ಕಚೇರಿ ಮುಂದೆ ದಲಿತ ಹಕ್ಕುಗಳ ಸಮಿತಿ ನೇತೃತ್ವದಲ್ಲಿ ದಲಿತ ಮೇಲಿನ ಹಲ್ಲೆ, ದೌರ್ಜನ್ಯ ಖಂಡಿಸಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ತುಮಕೂರು: ಪರಿಶಿಷ್ಟ ಜಾತಿ ಹಾಗೂ ಪಂಗಡ ನಿಗಮಗಳ ವತಿಯಿಂದ ಗಂಗಾ ಕಲ್ಯಾಣ, ಸ್ವಯಂ ಉದ್ಯೋಗಕ್ಕೆ ಸಹಾಯಧನ ಮತ್ತಿತರ ಸೌಲಭ್ಯ ಗಳನ್ನು ಅರ್ಹತೆಗನುಗುಣವಾಗಿ ನೀಡುವಂತೆ ಒತ್ತಾಯಿಸಿ ಹಾಗೂ ದಲಿತ ಮೇಲಿನ ಹಲ್ಲೆ, ದೌರ್ಜನ್ಯ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ದಲಿತ ಹಕ್ಕುಗಳ ಸಮಿತಿ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಯಿತು.
ಶಿಕ್ಷೆ ನೀಡಿ: ದಲಿತ ಹಕ್ಕುಗಳ ಸಮಿತಿ ರಾಜ್ಯ ಸಂಚಾಲಕ ಗೋಪಾಲಕೃಷ್ಣ ಹರಳಹಳ್ಳಿ, ಜಿಲ್ಲೆಯ ಮಲ್ಲೇಕಾವು ಗ್ರಾಮದಲ್ಲಿ ದಲಿತರು ದೇವಾಲಯಕ್ಕೆ ಪ್ರವೇಶ ಮಾಡಿದರೆಂದು ಜಗದೀಶ್ ಎಂಬವರ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡಲಾಗಿದೆ. ಆದರೂ ಆರೋಪಿಗಳನ್ನು ಇದುವರೆಗೂ ಬಂಧಿಸಿಲ್ಲ. ಕೂಡಲೇ ಆರೋಪಿಗಳನ್ನು ಬಂಧಿಸ ಬೇಕು ಎಂದು ಆಗ್ರಹಿಸಿದರು.
ಸೌಲಭ್ಯ ವಿತರಿಸಿ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ದಲಿತರ ಮೇಲೆ ಹಲ್ಲೆ, ಅಸ್ಪೃಶ್ಯತಾ ಆಚರಣೆ ಜಾರಿಯಲ್ಲಿದ್ದು ಸರ್ಕಾರ ಇದನ್ನು ತಡೆಗಟ್ಟುವಲ್ಲಿ ಸಂಪೂರ್ಣ ವಿಫಲವಾಗಿದೆ. ಹೀಗಾಗಿ ಸರ್ಕಾರ ದಲಿತರ ವಿಶೇಷ ಸಭೆ ಕರೆದು ಮುಂದೆ ಬರುವ ಅಧಿವೇಶನದಲ್ಲಿ ಚರ್ಚೆ ಮಾಡಿ ದೌರ್ಜನ್ಯ ನಡೆಯದಂತೆ ಕ್ರಮ ಕೈಗೊಳ್ಳಬೇಕು. ಅರ್ಜಿ ಸಲ್ಲಿಸಿದ ಎಲ್ಲಾ ಬಡವರಿಗೂ ಗಂಗಾ ಕಲ್ಯಾಣ ಯೋಜನೆ, ಭೂಒಡೆತನ ಸ್ವಾಧೀನ, ಸ್ವಯಂ ಉದ್ಯೋಗ ಈ ರೀತಿ ಯೋಜನೆಗಳು ದಲಿತರ ಅಭಿವೃದ್ಧಿಗಾಗಿ ಇದ್ದು ಅರ್ಹ ಫಲಾನುಭವಿಗಳಿಗೆ ನಿಗಮ ಮಂಡಳಿಗಳ ಮೂಲಕ ಸಮರ್ಪ ಸೌಲಭ್ಯ ವಿತರಣೆ ಮಾಡಬೇಕು ಎಂದು ಒತ್ತಾಯಿಸಿದರು.
ಹೋರಾಟ ಅವಶ್ಯ: ಎಸ್ಎಫ್ಐ ಜಿಲ್ಲಾಧ್ಯಕ್ಷ ಈ.ಶಿವಣ್ಣ, ಹೋರಾಟದ ಮೂಲಕ ದೌರ್ಜನ್ಯ ಹಿಮ್ಮೆಟ್ಟಿಸಬೇಕು, ನಿಗಮ ಮಂಡಳಿಗಳ ಮೂಲಕ ದಲಿತರ ಅಭಿವೃದ್ಧಿಗಾಗಿ ಇರುವ ಸೌಲಭ್ಯಗಳನ್ನು ಹೋರಾಟದ ಮೂಲಕ ಪಡೆಯಬೇಕು ಎಂದರು.
ಕೋಮುವಾದ ವಿರೋಧಿಸಿ: ಡಿವೈಎಫ್ಐ ಜಿಲ್ಲಾ ಧ್ಯಕ್ಷ ಎಸ್.ರಾಘವೇಂದ್ರ ಮಾತನಾಡಿ, ದೇಶದ ಅಭಿವೃದ್ಧಿಗಿಂತ ಮುಖ್ಯವಾಗಿ ಧಾರ್ಮಿಕತೆ ಹೆಸರಿ ನಲ್ಲಿ ಕೋಮುವಾದವನ್ನು ಪ್ರಬಲವಾಗಿ ಬೆಳೆಸಲಾ ಗುತ್ತಿದೆ. ಹೆಚ್ಚು ಸಂಘಟನಾತ್ಮಕವಾಗಿ ಹೋರಾಟ ಮಾಡಬೇಕು ಎಂದು ಒತ್ತಾಯಿಸಿದರು.
ಪ್ರಾಂತ ರೈತ ಸಂಘದ ಸಹ ಸಂಚಾಲಕ ಬಿ.ಉಮೇಶ್, ರೈತರು-ದಲಿತರ ಸಮಸ್ಯೆಗಳು ಒಂದೇ ರೀತಿಯವಾದರೂ ದಲಿತರ ಸಮಸ್ಯೆಗಳು ಜಾತಿ ಆಧಾರದ ಮೇಲೆ ಪರಿಗಣಿಸುವುದು ತಪ್ಪು ಎಂದರು. ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಹ್ಮಣ್ಯ, ನಮ್ಮ ಸಮಸ್ಯೆ ಪರಿಹರಿಸಲು ಹೋರಾಟವೊಂದೇ ಮಾರ್ಗ ಎಂದು ತಿಳಿಸಿದರು.
ಪ್ರತಿಭಟನೆಯಲ್ಲಿ ಸಂಚಾಲಕರಾದ ರಾಜಣ್ಣ, ಜಗದೀಶ್, ರಾಜು ವೆಂಕಟಪ್ಪ, ನಾಗಣ್ಣ, ಸುರೇಶ, ಎಸ್.ಡಿ.ಪಾರ್ವತಮ್ಮ, ಮಮತಾ, ಮದಲೇಟಪ್ಪ, ನರಸಿಂಹಮೂರ್ತಿ ಮತ್ತಿತರರು ಅಪರ ಜಿಲ್ಲಾಧಿ ಕಾರಿ ಸಹಾಯಕರಿಗೆ ಮನವಿ ಪತ್ರ ಸಲ್ಲಿಸಿ ದಲಿತರ ಕುಂದುಕೊರತೆ ವಿಶೇಷ ಸಭೆ ಕರೆಯುವಂತೆ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ
Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು
ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್ ಕಾರ್ಯಕರ್ತೆಯರು
2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ
MUST WATCH
ಹೊಸ ಸೇರ್ಪಡೆ
Sandalwood; ‘ಫಾರೆಸ್ಟ್’ನಲ್ಲಿ ಚಿಕ್ಕಣ್ಣ & ಟೀಂ
Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ