ದಲಿತರ ವಂಚಿಸುತ್ತಿರುವ ಅಧಿಕಾರಿಗಳು


Team Udayavani, Feb 5, 2019, 7:10 AM IST

dalitara.jpg

ಕುಣಿಗಲ್‌: ಬಜೆಟ್‌ನಲ್ಲಿ ದಲಿತರಿಗೆ ಮೀಸ ಲಿಟ್ಟ ಅಭಿವೃದ್ಧಿ ಹಣ ಸಮರ್ಪಕವಾಗಿ ಜಾರಿ ಮಾಡದ ಅಧಿಕಾರಿಗಳ ಮೇಲೆ ಕ್ರಿಮಿನಲ್‌ ಪ್ರಕರಣಕ್ಕೆ ಆಗ್ರಹಿಸಿ ತಾಲೂಕು ದಲಿತ ಹಕ್ಕುಗಳ ಸಮಿತಿಯ ಪದಾಧಿಕಾರಿಗಳು ಸೋಮವಾರ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಹಲವು ಬೇಡಿಕೆಗಳಿಗಾಗಿ ಆಗ್ರಹಿಸಿ ತಾಲೂಕು ದಲಿತ ಹಕ್ಕುಗಳ ಸಮಿತಿಯ ಪದಾಧಿಕಾರಿಗಳು ಸಮಿತಿಯ ಸಂಚಾಲಕ ರಾಜುವೆಂಕಟಪ್ಪ ಅವರ ನೇತೃತ್ವದಲ್ಲಿ ತಾಲೂಕು ಕಚೇರಿ ಮುಂಭಾಗ ಜಮಾವಣೆ ಗೊಂಡು, ಪ್ರತಿಭಟನೆ ನಡೆಸಿ ಎಸ್ಸಿ, ಎಸ್ಟಿ ದಲಿತ ವಿರೋಧಿ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ಮಿತಿ ಮೀರಿದ ದಬ್ಟಾಳಿಕೆ: ಪ್ರತಿಭಟನಾ ಕಾರರನ್ನು ಉದ್ದೇಶಿಸಿ ಮಾತನಾಡಿದ ಸಮಿತಿಯ ಸಂಚಾಲಕ ರಾಜುವೆಂಕಟಪ್ಪ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಐದು ವರ್ಷದ ಅವಧಿಯಲ್ಲಿ ದಲಿತರ ಮೇಲೆ ದೌರ್ಜನ್ಯ, ದಬ್ಟಾಳಿಕೆ ಕೊಲೆ, ಸುಲಿಗೆ ಮಿತಿ ಮೀರಿದ್ದು, ಸಂವಿಧಾನಬದ್ಧ ಹಕ್ಕು ಭಾದ್ಯತೆಗಳು ಉಲ್ಲಂಘನೆಯಾಗಿವೆ. ಅಸ್ಪೃಶ್ಯತೆ ಜಾತಿ ತಾರತಮ್ಯ ನಾಗರಿಕ ಹಕ್ಕುಗಳು ನಿರಾಕರಿಸಲ್ಪಟ್ಟಿವೆ.

ದಲಿತ ಉಪ ಯೋಜನೆಯನ್ನು ಸಂಪೂರ್ಣ ವಾಗಿ ಕೈ ಬಿಟ್ಟಿದೆ. ನೀತಿ ಯೋಜನೆ ಆಧಾರದ ಮೇಲೆ ಹಣ ಕಡಿತ ಮಾಡಿ ದಲಿತರಿಗೆ ವಂಚನೆ ಮಾಡಲಾಗಿದೆ. ಕೇಂದ್ರ ಸರ್ಕಾರ ದೇಶದ ಪ.ಜಾತಿ, ಪ.ಪಂಗಡ ಜನ ಸಂಖ್ಯೆಗೆ ಅನುಗುಣ ವಾಗಿ ಹಣ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು.

ತಪ್ಪಿತಸ್ಥ ಅಧಿಕಾರಿಗಳನ್ನು ಶಿಕ್ಷಿಸಿ: ರಾಜ್ಯದ ಉಪಯೋಜನೆ ಜಾರಿಯಲ್ಲಿ ಹಿಂದಿನಿಂದಲೂ ಬಜೆಟ್‌ನಲ್ಲಿ ಹಣ ಒದಗಿಸಲಾಗಿದೆ ಎಂದು ಸರ್ಕಾರ ಹೇಳುತ್ತಾ ಬಂದಿದೆ. ದಲಿತರ ನಿರಂತರ ಹೋರಾಟಗಳಿಂದ ಎಸ್ಸಿ, ಎಸ್ಪಿ, ಟಿಎಸ್ಪಿ ಕಾಯ್ದೆ ಅಧಿನಿಯಮ ಜಾರಿಗೆ ಬಂದ ನಂತರದಲ್ಲಿ ದಲಿತರ ಸಂಖ್ಯೆಗೆ ಅನುಗುಣ ವಾಗಿ 24.1 ರಷ್ಟು ಹಣ ಒದಗಿಸಲಾಗುತ್ತಿದೆ. 2017-18ನೇ ಸಾಲಿನ ಪ್ರಗತಿಯಲ್ಲಿ ಒಟ್ಟು 27.840.98 ಕೋಟಿಯಲ್ಲಿ 26.124.33 ಕೋಟಿ ರೂ. ವೆಚ್ಚ ಮಾಡಿದೆ.

1198.99 ಕೋಟಿ ಕಳೆದ ವರ್ಷವೇ ಉಳಿಯವಾಗಿದೆ. ಈ ಹಣವನ್ನು ಮುಂದಿನ ವರ್ಷಕ್ಕೆ ಸೇರಿ ಕೊಳ್ಳುವುದಾಗಿ ಸರ್ಕಾರ ತಿಳಿಸಿದೆ. ಆದರೆ, ಅಧಿಕಾರಿಗಳು ಇದನ್ನು ಪರಿಪೂರ್ಣವಾಗಿ ಜಾರಿಗೆ ತಂದು ಈ ಸಮುದಾಯದ ಜನರಿಗೆ ಅನುಕೂಲ ಮಾಡಿಕೊಡುವಲ್ಲಿ ವಿಫಲಗೊಂಡಿದ್ದಾರೆ. ಹಾಗಾಗಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿದರು.

ಬಳಿಕ ತಾಲೂಕು ಕಚೇರಿ ಶಿರಸ್ತೇದಾರ್‌ ಅವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆ ಯಲ್ಲಿ ಡಿಎಸ್‌ಎಸ್‌ ಜಿಲ್ಲಾ ಸಂಘಟನಾ ಸಂಚಾಲಕ ವಿ.ಶಿವಶಂಕರ್‌, ಐಎನ್‌ಟಿಯುಸಿ ಅಧ್ಯಕ್ಷ ಅಬ್ದುಲ್‌ವುುನಾಫ್‌, ಶ್ರಮಜೀವಿ ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷ ಕೃಷ್ಣರಾಜು, ಮುಖಂಡರಾದ ನಂಜಪ್ಪ, ಮಂಜುಳಾ, ಪವನ್‌ಕುಮಾರ್‌, ರಮೇಶ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.