ಮಾರ್ಕೋನಹಳ್ಳಿ ಜಲಾಶಯಕ್ಕೆ ಯಾವುದೇ ಅಪಾಯವಿಲ್ಲ : ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್
Team Udayavani, Aug 8, 2022, 5:41 PM IST
ಕುಣಿಗಲ್ : ಮಾರ್ಕೋನಹಳ್ಳಿ ಜಲಾಶಯದ ನೀರು ಹೊರ ಹಾಕುವ ತಾತ್ಕಾಲಿಕ ಗೇಟ್ ನ ಸರಪಳಿ ಮುರಿದಿರುವುದರಿಂದ ಅಣೆಕಟ್ಟೆಗೆ ಯಾವುದೇ ಅಪಾಯವಿಲ್ಲ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್ ತಿಳಿಸಿದ್ದಾರೆ,.
ತಾಲೂಕಿನ ಮಾರ್ಕೋನಹಳ್ಳಿ ಜಲಾಶಯದ ತಾತ್ಕಲಿಕ ಗೇಟ್ ಸರಪಳಿ ಮುರಿದಿರುವುದರಿಂದ ಜಲಾಶಯ ಕ್ಕೆ ಅಪಾಯವಿದೆ ಎಂದು ಸಾಮಾಜಿಕ ಜಾಲಾತಾಣ ಹಾಗೂ ಕೆಲ ಮಾಧ್ಯಗಳಲ್ಲಿ ವರದಿ ಹಬ್ಬಿದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿಗಳು, ಜಲಾಶಯದ ಮುಖ್ಯ ಗೇಟ್ ಗಳಿಗೆ ಯಾವುದೇ ಹಾನಿಯಾಗಿಲ್ಲ. ಉತ್ತಮವಾಗಿ ಕೆಲಸ ಮಾಡುತ್ತಿದೆ ಆದರೆ ತಾತ್ಕಾಲಿಕ ಗೇಟ್ ಅಪರೇಟ್ ಮಾಡುವ ವೇಳೆ ಸರಪಳಿ ತುಂಡಾಗಿದೆ ಇದರಿಂದ ಜಲಾಶಯದ ಅಣೆಕಟ್ಟೆಗೆ ಯಾವುದೇ ತೊಂದರೆ ಯಾಗುವುದಿಲ್ಲ, ಎಂದು ಸ್ಪಷ್ಟಪಡಿಸಿದ ಅವರು ತುಂಡಾಗಿರುವ ಸರಪಳಿಯನ್ನು ದುರಸ್ಥಿ ಅಥವಾ ಹೊಸದಾಗಿ ಅಳವಡಿಸುವಂತೆ ಹೇಮಾವತಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಅಲ್ಲದೆ ಎಲ್ಲಾ ಗೇಟ್ ಗಳನ್ನು ಬಂದ್ ಮಾಡಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ