![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-415x276.jpg)
ಹೊರರೋಗಿಗಳ ಸಂಖ್ಯೆ ಇಳಿಮುಖ
Team Udayavani, Mar 22, 2020, 5:17 PM IST
![ಹೊರರೋಗಿಗಳ ಸಂಖ್ಯೆ ಇಳಿಮುಖ](https://www.udayavani.com/wp-content/uploads/2020/03/tk-tdy-1-6-620x286.jpg)
ತುಮಕೂರು: ಜಗತ್ತಿನಾದ್ಯಂತ ಮಹಾಮಾರಿ ಕೋವಿಡ್ 19 ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಯ ಹೊರ ರೋಗಿಗಳ ವಿಭಾಗಕ್ಕೆ ಬರುತ್ತಿರುವ ರೋಗಿಗಳ ಸಂಖ್ಯೆಯಲ್ಲಿಯೂ ಗಣನೀಯವಾಗಿ ಇಳಿಮುಖವಾಗಿದೆ.
ತಲ್ಲಣ ಮೂಡಿಸಿರುವ ವೈರಸ್ ರಾಜ್ಯದಲ್ಲೂ ಹರಡುತ್ತಿದ್ದು, ಇದನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ, ಜಿಲ್ಲಾಡಳಿತ, ಆರೋಗ್ಯ ಇಲಾಖೆ ಜನ ಜಾಗೃತಿ ಮೂಡಿಸುತ್ತಿದೆ. ಈ ಹಿನ್ನೆಲೆಯಲ್ಲಿ ಸಣ್ಣಪುಟ್ಟ ಕಾಯಿಲೆ ತೋರಿಸಲು ಆಸ್ಪತ್ರೆಗಳಿಗೆ ತೆರಳುತ್ತಿದ್ದ ರೋಗಿಗಳ ಸಂಖ್ಯೆ ತಾನಾಗಿಯೇ ಕ್ಷೀಣಿಸಿದೆ. ಸದಾ ಜನದಟ್ಟಣೆ ಜಾಸ್ತಿ ಇರುವ ಕಡೆ ಈ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿರುವುದರಿಂದ ಆದಷ್ಟು ಜನಸಂಪರ್ಕ ಕಡಿಮೆ ಇರುವಂತೆ ನೋಡಿಕೊಳ್ಳಬೇಕು. ಜನಸಾಮಾನ್ಯರೂ ಜನ ಸಂದಣಿ ಇರುವಲ್ಲಿ ಹೆಚ್ಚು ಸಮಯ ಬೆರೆಯಬಾರದು ಎಂಬ ಅಂಶ ಅರಿತಿರುವುದರಿಂದ ಜಿಲ್ಲಾಸ್ಪತ್ರೆಯ ಹೊರ ರೋಗಿಗಳ ವಿಭಾಗಕ್ಕೆ ಬರುತ್ತಿರುವ ರೋಗಿಗಳ ಸಂಖ್ಯೆಯಲ್ಲಿ ಗಣ ನೀಯವಾಗಿ ಇಳಿಕೆಯಾಗಿದೆ.
ಪ್ರತಿನಿತ್ಯ ಜಿಲ್ಲಾಸ್ಪತ್ರೆ ಹೊರ ರೋಗಿಗಳ ವಿಭಾಗಕ್ಕೆ 1,500 ರೋಗಿಗಳ ಬರುತ್ತಿದ್ದರು. ಹೊರ ರೋಗಿಗಳ ವಿಭಾಗದ ನೋಂದಣಿ ಕೌಂಟರ್ನಲ್ಲಿ ಐದಾರು ಸಾಲಿನಲ್ಲಿ ನೂರಾರು ಜನ ನೋಂದಣಿಗೆ ನಿಲ್ಲುತ್ತಿದ್ದರು. ಆದರೆ ಕೋವಿಡ್ 19 ಹರಡುತ್ತಿರುವ ಭೀತಿ ಹೆಚ್ಚುತ್ತಿರುವುದರಿಂದ ಅವಶ್ಯ ಇರುವ ರೋಗಿಗಳಷ್ಟೇ ಆಸ್ಪತ್ರೆಗೆ ಬರುತ್ತಿದ್ದಾರೆ.
ಕೋವಿಡ್ 19 ವೈರಸ್ ಹರಡುವ ಭೀತಿ ಹಿನ್ನೆಲೆಯಲ್ಲಿ ಅವಶ್ಯವಿದ್ದರಷ್ಟೇ ಆಸ್ಪತ್ರೆಗೆ ಬನ್ನಿ, ಸಣ್ಣ ಪುಟ್ಟ ಕಾಯಿಲೆಗಳಿಗೆ ಬರಬೇಡಿ ಎಂದು ಆರೋಗ್ಯ ಇಲಾಖೆ ಅಪರ ಪ್ರಧಾನ ಕಾರ್ಯದರ್ಶಿಗಳು ಮನವಿ ಮಾಡಿದ್ದಾರೆ. ಜಿಲ್ಲಾ ಆಸ್ಪತ್ರೆಗೆ ಬರುತ್ತಿದ್ದ ರೋಗಿಗಳ ಸಂಖ್ಯೆಯೂ ಗಣನೀಯವಾಗಿ ಇಳಿಮುಖವಾಗಿದೆ. ಅಗತ್ಯ ಇರುವ ರೋಗಿಗಳಷ್ಟೇ ಆಸ್ಪತ್ರೆಗೆ ಬರುತ್ತಿದ್ದಾರೆ. – ಡಾ.ಟಿ.ಎ.ವೀರಭದ್ರಯ್ಯ, ಜಿಲ್ಲಾ ಶಸ್ತ್ರಚಿಕಿತ್ಸಕ
ಟಾಪ್ ನ್ಯೂಸ್
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-415x276.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shobha-Kharandlaje](https://www.udayavani.com/wp-content/uploads/2024/07/Shobha-Kharandlaje-150x90.jpg)
Congrees Government; ರಾಜ್ಯದಲ್ಲಿರುವುದು ಗೋಲ್ಮಾಲ್ ಸರ್ಕಾರ: ಕೇಂದ್ರ ಸಚಿವೆ ಶೋಭಾ
![5-tumkur](https://www.udayavani.com/wp-content/uploads/2024/07/5-tumkur-150x90.jpg)
Tumkur ZP CEO ಕೊರಟಗೆರೆ ರೌಂಡ್ಸ್; ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಿಇಓ ಪ್ರಭು.ಜಿ
![4-koratagere](https://www.udayavani.com/wp-content/uploads/2024/07/4-koratagere-150x90.jpg)
Koratagere: ಮಜ್ಜಿಗೆ ಫ್ಯಾಕ್ಟರಿಯ ಬಾಯ್ಲರ್ ಸ್ಪೋಟ; ಕಾರ್ಮಿಕನಿಗೆ ಗಂಭೀರ ಗಾಯ
![1-ewewqe](https://www.udayavani.com/wp-content/uploads/2024/07/1-ewewqe-150x85.jpg)
Koratagere; ಬಸ್ ಗಳ ಸಮಸ್ಯೆ: ಅಳಲು ತೋಡಿಕೊಂಡ ವಿದ್ಯಾರ್ಥಿಗಳು
![Naxal chandru- Naxal Chandru arrested after 19 years; What is the case?](https://www.udayavani.com/wp-content/uploads/2024/07/Naxal-150x86.jpg)
Naxal chandru-19 ವರ್ಷದ ಬಳಿಕ ನಕ್ಸಲ್ ಚಂದ್ರು ಸೆರೆ; ಏನಿದು ಪ್ರಕರಣ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.