35 ರೂ.ಗೆ ಇಳಿದ ಕೆ.ಜಿ.ಕೋಳಿ ಮಾಂಸ ದರ!


Team Udayavani, Mar 13, 2020, 4:24 PM IST

35 ರೂ.ಗೆ ಇಳಿದ ಕೆ.ಜಿ.ಕೋಳಿ ಮಾಂಸ ದರ!

ಸಾಂದರ್ಭಿಕ ಚಿತ್ರ

ಕುಣಿಗಲ್‌: ಜಾಗತಿಕ ಮಟ್ಟದಲ್ಲಿ ಹರಡುತ್ತಿರು ಕೊರೊನಾ ವೈರಸ್‌ ಹಾಗೂ ಹಕ್ಕಿಜ್ವರ ಹಿನ್ನೆಲೆಯಲ್ಲಿ ಕೋಳಿ ಮಾಂಸದಂಗಡಿ ವ್ಯಾಪಾರಕ್ಕೆ ಸಾಕಷ್ಟು ಹೊಡೆತ ಬಿದ್ದಿದ್ದು, ಕೋಳಿ ಮಾಂಸ ಕೊಳ್ಳುವವರಿಲ್ಲದೇ ವ್ಯಾಪಾರಸ್ಥರು, ಕೋಳಿ ಫಾರಂ ಮಾಲೀಕರು ತಲೆ ಮೇಲೆ ಕೈ ಇಟ್ಟುಕೊಳ್ಳುವ ಪರಿಸ್ಥಿತಿ ಎದುರಾಗಿದೆ.

ಮೇಕೆ, ಕುರಿ, ಮೀನಿಗೆ ಬೇಡಿಕೆ: ಕುಣಿಗಲ್‌ ತಾಲೂಕಾದ್ಯಂತ ಕೋಳಿ ಮಾಂಸ ಕೊಳ್ಳುವ ಗ್ರಾಹಕರ ಸಂಖ್ಯೆ ತೀವ್ರ ಇಳಿಮುಖವಾಗಿದ್ದು, ಇದರಿಂದ ವ್ಯಾಪಾರವಿಲ್ಲದೆ ವ್ಯಾಪಾರಿಗಳು ತೀವ್ರ ನಷ್ಟ ಅನುಭವಿಸುವಂತಾಗಿದೆ. ಪ್ರತಿವರ್ಷದಂತೆ ಈ ವರ್ಷವೂ ಮೇ ತಿಂಗಳ ವರೆಗೆ ಪಟ್ಟಣ ಸೇರಿ ತಾಲೂಕಿನಲ್ಲಿ ಮುನಿಯಪ್ಪ ಹಾಗೂ ಮಾರಿ ಹಬ್ಬ ನಡೆಯುತ್ತಿದೆ.

ಹಬ್ಬದ ವಿಶೇಷವಾಗಿ ಕೋಳಿ, ಮೇಕೆ, ಕುರಿ, ಮೀನು ಮಾಂಸದ ವ್ಯಾಪಾರ ಭರ್ಜರಿಯಾಗಿ ನಡೆಯುತ್ತದೆ. ದೂರದ ಊರಿನಿಂದ ಸಂಬಂಧಿಕರು, ಸ್ನೇಹಿತರನ್ನು ಕರೆಸಿ ಭರ್ಜರಿ ಮಾಂಸದ ಊಟ ಏರ್ಪಡಿಸಿ ಸಂತೋಷ ಹಂಚಿಕೊಳ್ಳುವುದು ವಿಶೇಷವಾಗಿದೆ. ಹೆಚ್ಚಾಗಿ ಕೋಳಿ ಮಾಂಸವನ್ನು ಜನರು ಉಪಯೋಗಿಸುತ್ತಾರೆ.

ಹಬ್ಬದ ಅವಧಿಯಲ್ಲಿ ಸುಮಾರು 2.50 ಲಕ್ಷ ಕೆ.ಜಿ. ಕೋಳಿ ಮಾಂಸ ಪ್ರತಿವರ್ಷ ಮಾರಾಟವಾಗುತ್ತದೆ. ಹಾಗಾಗಿ ಕೋಳಿ ಫಾರಂ ಮಾಲೀಕರು ಲಕ್ಷಾಂತರ ರೂ. ಬಂಡವಾಳ ಹೂಡಿ ಕೋಳಿಗಳನ್ನು ತರಿಸಿ ನಗರ, ಪಟ್ಟಣ ಗ್ರಾಮೀಣ ಪ್ರದೇಶದ ಕೋಳಿ ಅಂಗಡಿಗಳಿಗೆ ಮಾರಾಟ ಮಾಡುತ್ತಾರೆ. ಆದರೆ ಕೊರೊನಾ ವೈರಸ್‌ ಹಾಗೂ ಹಕ್ಕಿ ಜ್ವರ ಭೀತಿಯಿಂದ ಕೋಳಿ ವ್ಯಾಪಾರದ ಮೇಲೆ ಪರಿಣಾಮ ಬೀರಿದ್ದು, ವ್ಯಾಪಾರವಿಲ್ಲದೆ ಕೋಳಿ ವ್ಯಾಪಾರಿಗಳು ತೊಂದರೆ ಅನೂಭವಿಸುವಂತಾಗಿದೆ.

ಬಿಕೋ ಎನ್ನುತ್ತಿರುವ ಅಂಗಡಿ: ಪ್ರತಿವರ್ಷ ಹಬ್ಬ ಹರಿದಿನಗಳಲ್ಲಿ ಕೋಳಿ ಮಾಂಸ ಕೊಳ್ಳಲು ಜನರು ಮುಗಿ ಬೀಳುತ್ತಿದ್ದರು. ಅಂಗಡಿಗಳು ಜನರಿಂದ ತುಂಬಿ ಹೋಗುತಿತ್ತು. ಆದರೆ ಈ ವರ್ಷ ಕೊರೊನಾ ವೈರಸ್‌ ಭೀತಿಯಿಂದ ಕೋಳಿ ಕೊಳ್ಳಲು ಜನರು ಮುಂದೆ ಬರುತ್ತಿಲ್ಲ, ಕಳೆದ ತಿಂಗಳು ಕೆ.ಜಿ ಬಾಯ್ಲರ್‌ ಕೋಳಿಗೆ 170 ರೂ. ಇದ್ದ ದರ ಈ ತಿಂಗಳು 35 ರೂ.ಗೆ ಇಳಿದಿದ್ದರೂ ಜನರು ಕೋಳಿ ಅಂಗಡಿ ಬಳಿ ಬರಲು ಹಿಂದೇಟು ಹಾಕುತ್ತಿದ್ದಾರೆ.

ಮಾ.10, 11ರಂದು ಪಟ್ಟಣದಲ್ಲಿ ನಡೆದ ಕೊಲ್ಲಾಪುರದಮ್ಮ, ದುರ್ಗಾದೇವಿ, ಆದಿಶಕ್ತಿ ಪರಾಶಕ್ತಿ, ಕೋಟೆ ಮಾರಮ್ಮ ಸೇರಿ ಶಕ್ತಿ ದೇವರ ಜಾತ್ರೆ ಹಿನ್ನೆಲೆಯಲ್ಲಿ ಕೋಳಿ ಅಂಗಡಿ ಬೆಳಂಬೆಳಗ್ಗೆ ತೆರೆದು ಕಾಯುತ್ತಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಗ್ರಾಹಕರು ಬಂದಿರಲಿಲ್ಲ. ವೈರಸ್‌ ಭೀತಿಯಿಂದ ಜನರು ಕೋಳಿ ಮಾಂಸ ಬಿಟ್ಟು ಮಟನ್‌ ಹಾಗೂ ಮೀನು ಖರೀದಿಗೆ ಹೆಚ್ಚು ಗಮನ ಹರಿಸಿದ್ದರಿಂದ ಮಟನ್‌ ಕೆ.ಜಿ.ಗೆ 400 ರೂ. ಇದ್ದ ದರ ದಿಢೀರ್‌ 550ರಿಂದ 600ರೂ.ಗೆ ದರ ಹೆಚ್ಚಿದೆ.

ಕಳೆದ ವರ್ಷ ಈ ಹಬ್ಬದಂದು ಸುಮಾರು ಎರಡರಿಂದ ಮೂರು ಸಾವಿರ ಕೆ.ಜಿ.ಚಿಕನ್‌ ಮಾರಾಟ ಮಾಡುತ್ತಿದ್ದೆವು. ಆದರೆ ಕೊರೊನಾ ಹಾಗೂ ಹಕ್ಕಿ ಜ್ವರ ಭೀತಿಯಿಂದ ಈ ಬಾರಿ 60 ಕೆ.ಜಿ. ಚಿಕನ್‌ ಮಾರಾಟವಾಗಿಲ್ಲ, ಕೆಲಸಗಾರರಿಗೆ ಸಂಬಳ, ಅಂಗಡಿ ಬಾಡಿಗೆ, ವಿದ್ಯುತ್‌ ಬಿಲ್‌ ಕಟ್ಟಲಾಗದ ಪರಿಸ್ಥಿತಿ ಎದುರಾಗಿದೆ. ಶಿವರಾಮ್‌, ಕೋಳಿ ಅಂಗಡಿ ವ್ಯಾಪಾರಿ

 

-ಕೆ.ಎನ್‌.ಲೋಕೇಶ್‌

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.