ಕ್ರಿಯಾ ಯೋಜನೆ ವಿಳಂಬ: ಅಧಿಕಾರಿಗೆ ತರಾಟೆ


Team Udayavani, Jul 6, 2019, 5:06 PM IST

tk-tdy-04..

ಕುಣಿಗಲ್ ತಾಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೆಡಿಪಿ ಸಭೆಯಲ್ಲಿ ಲೋಕೋಪ ಯೋಗಿ ಇಲಾಖೆ ಅಧಿಕಾರಿಯನ್ನು ತಾಲೂಕು ಪಂಚಾಯತಿ ಅಧ್ಯಕ್ಷ ಹರೀಶ್‌ ನಾಯ್ಕ ತರಾಟೆ ತೆಗೆದುಕೊಂಡರು. ಇಒ ಶಿವರಾಜಯ್ಯ ಇದ್ದರು.

ಕುಣಿಗಲ್: ದೇವಾಲಯ ನಿರ್ಮಾಣದ ಕ್ರಿಯಾ ಯೋಜನೆ ತಯಾರಿಸದ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್‌ ಡಿ.ಜೆ. ಪ್ರಕಾಶ್‌ಗೆ ತಾಪಂ ಅಧ್ಯಕ್ಷ ಹರೀಶ್‌ ನಾಯ್ಕ ತರಾಟೆ ತೆಗೆದುಕೊಂಡ ಘಟನೆ ತಾಪಂ ಕೆಡಿಪಿ ಸಭೆಯಲ್ಲಿ ನಡೆಯಿತು.

ಸಭೆಯಲ್ಲಿ ಮಾತನಾಡಿದ ಹರೀಶ್‌ ನಾಯ್ಕ, ಬೋರಸಂದ್ರ, ದಾಸನಪುರ ಹಾಗೂ ತೆಪ್ಪಸಂದ್ರ ಗ್ರಾಮದ ದೇವಸ್ಥಾನಗಳ ಅಭಿವೃದ್ಧಿ ಕ್ರಿಯಾ ಯೋಜನೆ ಸಿದ್ಧಪಡಿಸಿಲ್ಲ ಎಂದು ಸಿಟ್ಟಾದರು.

ಲೋಕೋಪಯೋಗಿ ಅಧಿಕಾರಿಗಳು ಸರಿ ಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ. ಕೇಳಿದರೆ ಗೊತ್ತಿಲ್ಲ ಎನ್ನುವ ಸಿದ್ಧ ಉತ್ತರವಿರುತ್ತದೆ. ಕ್ರಿಯಾ ಯೋಜನೆ ತಯಾರಿಸಲು ಎಷ್ಟು ದಿನ ಬೇಕು. ಕ್ರಿಯಾ ಯೋಜನೆ ತಯಾರಿಸಲು ಲಂಚ ಬೇಕಾದರೆ ಗ್ರಾಮಸ್ಥರಿಗೆ ಕೊಡಲು ಹೇಳುತ್ತೇನೆ ಎಂದು ಹರೀಶ್‌ ಹರಿಹಾಯ್ದರು.

ಗಬ್ಬೆದ್ದಿದೆ ಪ್ರವಾಸಿ ಮಂದಿರ: ಪ್ರತಿ ವರ್ಷ ಲಕ್ಷಾಂತರ ಖರ್ಚು ಮಾಡಿ ಪ್ರವಾಸಿ ಮಂದಿರ ಅಭಿವೃದ್ಧಿ ಮಾಡುತ್ತಿದ್ದೀರಿ. ಆದರೆ ಸ್ವಚ್ಛತೆ ಇಲ್ಲದೇ ಅವ್ಯವಸ್ಥೆಯಿಂದ ಕೂಡಿದೆ. ಒಂದು ಕಾರ್ಯಕ್ರಮವನ್ನು ಸರಿಯಾಗಿ ಮಾಡಲು ಆಗುತ್ತಿಲ್ಲ,. ಅಭಿವೃದ್ಧಿ ನೆಪದಲ್ಲಿ ಖರ್ಚು ತೋರಿಸಿ ಹಣ ಲಪ ಟಾಯಿಸುತ್ತಿದ್ದೀರಾ ಎಂದು ಅಧಿಕಾರಿಗೆ ಹರೀಶ್‌ ನಾಯ್ಕ, ಕಿಡಿಕಾರಿದರು. ಲೋಕೋ ಪಯೋಗಿ ಕಿರಿಯ ಇಂಜಿನಿಯರ್‌ ಪ್ರಕಾಶ್‌ ಮಾತನಾಡಿ, ಮುಂದಿನ ವರದಿ ಯಲ್ಲಿ ಸರಿಪಡಿಸಿ ಮಾಹಿತಿ ನೀಡುವುದಾಗಿ ತಿಳಿಸಿದರು.

70 ಲಕ್ಷ ರೂ. ರೇಷ್ಮೆ ಬೆಳಗಾರರ ಖಾತೆಗೆ : ರೇಷ್ಮೆ ಸಹಾಯಕ ನಿರ್ದೇಶಕ ರವಿ ಮಾತನಾಡಿ, 1.4ಕೋಟಿ ರೂ. ರೇಷ್ಮೆ ಬೆಳೆಗಾರರ ಬೋನಸ್‌ ಬಾಕಿ ಉಳಿದಿತ್ತು. ಈ ಪೈಕಿ ಈಗ 70 ಲಕ್ಷ ರೂ. ಬೆಳೆಗಾರರ ಖಾತೆಗೆ ಪಾವತಿಸಲಾಗಿದೆ. ಉಳಿಕೆ 24 ಲಕ್ಷ ರೂ. ಬೋನಸ್‌ ಬರಬೇಕಾಗಿದೆ. ಇನ್ನೆರಡು ತಿಂಗಳಲ್ಲಿ ಪಾವತಿಸಲು ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಮರಗಡ್ಡಿ ಬೇಸಾಯ ಪದ್ಧತಿಯಲ್ಲಿ ಹಿಪ್ಪು ನೇರಳೆ ಸೊಪ್ಪು ಬೆಳೆಯಲು ಹೆಚ್ಚು ಒತ್ತು ನೀಡಲಾಗುತ್ತಿದೆ. ಈ ಸಂಬಂಧ ಭಕ್ತರ ಹಳ್ಳಿಯಲ್ಲಿ 6 ಹಾಗೂ ಮಡಿಕೆಹಳ್ಳಿಯಲ್ಲಿ 60 ರೈತರು ಮರಗಡ್ಡಿ ಬೇಸಾಯ ಪದ್ಧತಿ ಅಳವಡಿಸಿ ಕೊಂಡಿದ್ದಾರೆ. ಹುಲಿಯೂರುದುರ್ಗ ಹಾಗೂ ಸಂತೆ ಮಾವತ್ತೂರು ಭಾಗದಲ್ಲಿ ಈ ಪದ್ಧ್ದತಿ ಅಳವಡಿಸಿಕೊಳ್ಳುವ ಬಗ್ಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

ತಾಲೂಕು ವೈದ್ಯಾಧಿಕಾರಿ ಡಾ.ಜಗದೀಶ್‌ ಮಾತನಾಡಿ, ತಾಲೂಕಿನಲ್ಲಿ ಕ್ಷಯ ರೋಗ ಪತ್ತೆ ಆಂದೋಲನ ಹಮ್ಮಿಕೊಂಡು ಜಾಗೃತಿ ಮೂಡಿಸ ಲಾಗುತ್ತಿದೆ. ರೋಗಿಗಳನ್ನು ಗುರುತಿಸಿ ಚಿಕಿತ್ಸೆ ನೀಡಲಾಗುವುದು. 155 ಕ್ಷಯ ರೋಗಿಗಳನ್ನು ಪತ್ತೆ ಮಾಡಲಾಗಿದೆ ಎಂದು ಮಾಹಿತಿ ನೀಡಿ ದರು. ತಾಲೂಕು ಪಂಚಾಯತಿ ಕಾರ್ಯ ನಿರ್ವಹಣಾಧಿಕಾರಿ ಶಿವರಾಜಯ್ಯ, ಪಶು ಇಲಾಖೆ ಸಹಯಕ ನಿರ್ದೇಶಕ ಶಶಿಕಾಂತ್‌ಬೂದಾಳ್‌, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ನಾಗರಾಜ್‌, ಕಾರ್ಮಿಕ ನಿರೀಕ್ಷಕಿ ಅನುಪಮ ಮತ್ತಿತರರಿದ್ದರು.

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.