ಮನೆಮನೆಗೆ ಸರ್ಕಾರಗಳ ಯೋಜನೆ ತಲುಪಿಸಿ

ಜಿಲ್ಲಾ ಬಿಜೆಪಿ ರೈತ ಮೋರ್ಚಾ ಕಾರ್ಯಕಾರಣಿ ಸಭೆ

Team Udayavani, Aug 10, 2021, 5:58 PM IST

ಮನೆಮನೆಗೆ ಸರ್ಕಾರಗಳ ಯೋಜನೆ ತಲುಪಿಸಿ

ತುಮಕೂರು: ಕೇಂದ್ರ -ರಾಜ್ಯ ಸರ್ಕಾರಗಳು ನೀಡಿರುವ ಜನಪರ, ರೈತಪರ ಯೋಜನೆಗಳನ್ನು ಕಾರ್ಯಕರ್ತರು ಮನೆ ಮನೆಗೆ ತಲುಪಿಸುವಲ್ಲಿ
ಕಾರ್ಯೋನ್ಮುಖರಾಗುವ ಮೂಲಕ ಮುಂಬರುವ ಚುನಾವಣೆಯಲ್ಲೂ ಬಿಜೆಪಿ ಅಧಿಕಾರಕ್ಕೆ ತರಲು ಶ್ರಮಿಸಬೇಕೆಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಸ್‌.ಶಿವಪ್ರಸಾದ್‌ ತಿಳಿಸಿದರು.

ನಗರದ ಕನ್ನಡ ಭವನದಲ್ಲಿ ಜಿಲ್ಲಾ ಬಿಜೆಪಿ ರೈತ ಮೋರ್ಚಾವತಿಯಿಂದಸೋಮವಾರಹಮ್ಮಿಕೊಂಡಿದ್ದ 2ನೇ ಜಿಲ್ಲಾ ಕಾರ್ಯಕಾರಣಿ ಸಭೆ ಉದ್ಘಾಟಿಸಿ ಮಾತನಾಡಿದರು. ದೇಶದಲ್ಲಿ ಶೇ.50 ಮಂದಿ ಕೃಷಿಯನ್ನೇ ನಂಬಿ ಬದುಕುತ್ತಿದ್ದಾರೆ. ಇನ್ನುಳಿದ ಶೇ.50 ಮಂದಿಯೂ ಕೃಷಿಯನ್ನು ಅವಲಂಬಿಸಲೇಬೇಕು.

ಇಂದು ಶೇ.50ರಷ್ಟಿರುವ ಕೃಷಿ ಒಟ್ಟಾರೆ ನಮ್ಮ ಜಿಡಿಪಿಯಲ್ಲಿ ಕೃಷಿಯ ಪಾಲು2013-14ರಲ್ಲಿ ಕೇವಲ ಶೇ.14 ರಷ್ಟಿತ್ತು, ಶೇ.50 ಕೃಷಿ ಆಧಾರಿತವಾಗಿರುವ ದೇಶದಲ್ಲಿ ಒಟ್ಟಾರೆ ಜಿಡಿಪಿಯ ಪಾಲು ಕೇವಲ 14ರಷ್ಟಿತ್ತು. ಈಗ ಶೇ.20.20 ಆಗಿದ್ದು, 7 ವರ್ಷಗಳಲ್ಲಿಕೇಂದ್ರ ಸರ್ಕಾರ ಕೃಷಿ ಕ್ಷೇತ್ರಕ್ಕೆ ಕೊಟ್ಟಂತಹ ಜನಪರ, ರೈತಪರ ಯೋಜನೆಗಳಿಂದ ಶೇ.6ರಷ್ಟು ಜಿಡಿಪಿ ಹೆಚ್ಚಳವಾಗಿದೆ ಎಂದು ಹೇಳಿದರು.

ಕಾಂಗ್ರೆಸ್‌ ಅರ್ಥೈಸಿಕೊಳ್ಳುತ್ತಿಲ್ಲ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅನೇಕ ಸಂದರ್ಭಗಳಲ್ಲಿ ಮಸೂದೆಗಳು ತಿದ್ದುಪಡಿಯಾಗಿವೆ. ಅಂತಿಮವಾಗಿ ಬಹುಮತದ ಆಧಾರದ ಮೇಲೆ ಜನರ ಹಿತ ಅರ್ಥಮಾಡಿಕೊಂಡು ಆಡಳಿತ ಮತ್ತು ಪ್ರತಿಪಕ್ಷಗಳ ಜತೆ ಸಮಾಲೋಚನೆ ನಡೆಸಿ ಕಾರ್ಯರೂಪಕ್ಕೆ ತಂದಂತಹ ಸಂದರ್ಭದಲ್ಲಿ ಅದನ್ನು ಕಾಂಗ್ರೆಸ್‌ ಅರ್ಥೈಸಿಕೊಳ್ಳಲಾಗದೆ ಕೇವಲ ರಾಜಕೀಯದ ಹುನ್ನಾರ, ಷಡ್ಯಂತ್ರ ಮಾಡುತ್ತಾ ತಮ್ಮ
ಪಕ್ಷದ ಅಸ್ಥಿತ್ವನ್ನು ಉಳಿಸುಕೊಳ್ಳುವುದಕ್ಕೋಸ್ಕರ ದೇಶದ ದಿಕ್ಕನ್ನೇ ಬದಲಾವಣೆ ಮಾಡುವಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ರೈತರ ಖಾತೆಗೆ ಹಣ ಜಮೆ ಆಗಿದೆ: ಕೇಂದ್ರದ ಅನೇಕ ಜನಪರ ಯೋಜನೆಗಳಲ್ಲಿ ರೈತಪರ ಯೋಜನೆಯಾದ ಕಿಸಾನ್‌ ಸಮ್ಮಾನ್‌ ಯೋಜನೆ ಅತ್ಯಂತ ಮಹತ್ವ ಪಡೆದಿದೆ. ಚುನಾವಣಾ ಪ್ರಣಾಳಿಕೆಯಲ್ಲಿ ಹೇಳದೆಯೇ 2018ರಲ್ಲಿ ಕಿಸಾನ್‌ ಸಮ್ಮಾನ್‌ ಯೋಜನೆಯ ಮೊದಲನೇ ಕಂತು
ರೈತರ ಬ್ಯಾಂಕ್‌ ಖಾತೆಗಳಿಗೆ 2000 ರೂ. ನೇರವಾಗಿ ಜಮೆ ಮಾಡಲಾಗಿದೆ. ದೇಶದ 9.5 ಕೋಟಿ ರೈತರಿಗೆ 19 ಸಾವಿರ ಕೋಟಿ ರೂ.ಗಳನ್ನು ನೇರವಾಗಿ ಅವರ ಖಾತೆಗೆ ಜಮೆ ಮಾಡುವ ಕೆಲಸವಾಗಿದೆ. ಇದುವರೆಗೂ 9 ಕಂತು ಸೇರಿ 1 ಲಕ್ಷ 72 ಸಾವಿರ ಕೋಟಿ ರೂ. ರೈತರ ಖಾತೆಗೆ
ಜಮೆ ಆಗಿದೆ ಎಂದು ತಿಳಿಸಿದರು.

ದಾವಣಗೆರೆ ವಿಭಾಗದ ಬಿಜೆಪಿ ಸಹ ಪ್ರಭಾರಿ ಲಕ್ಷ್ಮೀಶ್‌ ಮಾತನಾಡಿ, ಬಿಜೆಪಿಯ ಎಲ್ಲಾ ವಿಭಾಗಗಳಿಗಿಂತಲೂ ರೈತ ಮೋರ್ಚಾ ಹೆಚ್ಚು ಮಹತ್ವ ಪಡೆದುಕೊಂಡಿದೆ. ರೈತಮೋರ್ಚಾಕ್ಕೆ ಯಾವುದೇ ಜಾತಿ, ಲಿಂಗ ಬೇಧವಿಲ್ಲ ಎಂದರು.

ಇದನ್ನೂ ಓದಿ:ರಾಜ್ಯದ ಕೃಷಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಕೇಂದ್ರ ಸಚಿವರಿಗೆ ಬಿ.ಸಿ.ಪಾಟೀಲ್ ಮನವಿ

ಶಿಷ್ಯ ವೇತನ ಸಹಕಾರಿ: ಬಸವರಾಜ್‌ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದ ನಂತರ ರೈತರ ಮಕ್ಕಳಿಗೆ ಶಿಷ್ಯ ವೇತನ ನೀಡುವ ಯೋಜನೆ ಜಾರಿಗೆ ತಂದಿದ್ದು, ಬಿಜೆಪಿ ರೈತ ಮಂಡಲಗಳು ತಂಡ ಮಾಡಿಕೊಂಡು ಶಾಲೆಗಳಲ್ಲಿ ಮುಖ್ಯೋಪಾಧ್ಯಾಯರ ಜತೆ ಚರ್ಚೆ ನಡೆಸಿ ರೈತ ಮಕ್ಕಳಿಗೆ ಯೋಜನೆ ತಲುಪುವಂತೆ ನೋಡಿಕೊಳ್ಳ ಬೇಕು ಎಂದರು. ಕಾರ್ಯಕಾರಣಿ ಸಭೆಯಲ್ಲಿ ಬಿಜೆಪಿ ರೈತಮೋರ್ಚಾ ಜಿಲ್ಲಾಧ್ಯಕ್ಷ ಶಿವಶಂಕರ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಪಿಗೆ ಶ್ರೀಧರ್‌, ಜಿಲ್ಲಾ ಉಪಾಧ್ಯಕ್ಷರಾದ ಕೆ.ಕೆ.ರಮೇಶ್‌, ತರಕಾರಿ ಮಹೇಶ್‌, ನಗರ ರೈತಮೋರ್ಚಾ ಅಧ್ಯಕ್ಷ ಸತ್ಯಮಂಗಲ ಜಗದೀಶ್‌, ಜಿಲ್ಲಾ ಉಪಾಧ್ಯಕ್ಷ ಬಸವರಾಜ್‌, ರೈತಮೋರ್ಚಾ ಪದಾಧಿಕಾರಿಗಳು, ರೈತರು ಇದ್ದರು.

ಕೇಂದ್ರ ದಿಂದ ಐತಿಹಾಸಿಕ ನಿರ್ಣಯ
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತಪರ ಕೃಷಿ ಮಸೂದೆಗಳಿಂದ ತಾವು ಬೆಳೆದ ಬೆಳೆಗಳನ್ನು ಎಲ್ಲಿ ಬೇಕಾದರೂ ಯಾರಿಗೆ ಬೇಕಾದರೂ ಮಾರಬಹುದು ಎಂಬ ಸ್ವಾತಂತ್ರ್ಯ ಕೊಟ್ಟಿದೆ. ಈ ಐತಿಹಾಸಿಕ ನಿರ್ಣಯದ ವಿರುದ್ಧ ಅನವಶ್ಯಕವಾಗಿ ರೈತರಲ್ಲಿ ಗೊಂದಲ ಮೂಡಿಸುತ್ತಾ,ಕಲಾಪ ನಡೆಯುವುದಕ್ಕೆ ಅಡಚಣೆ ಉಂಟು ಮಾಡುತ್ತಿದೆ ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಪ್ರಧಾನಕಾರ್ಯದರ್ಶಿ ಎಸ್‌. ಶಿವಪ್ರಸಾದ್‌ ದೂರಿದರು.

ಟಾಪ್ ನ್ಯೂಸ್

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.