![modi (4)](https://www.udayavani.com/wp-content/uploads/2024/07/modi-4-4-415x256.jpg)
ಬೇಡಿಕೆ ಈಡೇರಿಸಿದ್ರೆನೇ ಖಾಸಗಿ ಬಸ್ ರಸ್ತೆಗೆ
Team Udayavani, Jun 3, 2020, 6:27 AM IST
![namagu package](https://www.udayavani.com/wp-content/uploads/2020/06/namagu-package-620x349.jpg)
ತುಮಕೂರು: ಕೋವಿಡ್ 19 ವೈರಸ್ನಿಂದ ಲಾಕ್ಡೌನ್ ಆಗಿರುವ ಹಿನ್ನೆಲೆಯಲ್ಲಿ ಖಾಸಗಿ ಬಸ್ ಮಾಲೀಕರು ತೀವ್ರ ಸಂಕಷ್ಟ ಎದುರಿಸು ತ್ತಿದ್ದು, ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿ ಸಿದರೆ ಮಾತ್ರ ಖಾಸಗಿ ಬಸ್ಗಳು ರಸ್ತೆಗೆ ಇಳಿಯ ಲಿವೆ ಎಂದು 14 ಜಿಲ್ಲೆಗಳ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷರು ಹೇಳಿದರು.
ನಗರಕ್ಕೆ ಸಮೀಪದ ಹಿರೇಹಳ್ಳಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಖಾಸಗಿ ಬಸ್ ಮಾಲೀಕರ ಸಂಘದ ತುಮಕೂರು ಜಿಲ್ಲಾಧ್ಯಕ್ಷ ಬಿ.ಎಸ್.ಬಲಶಾಮಸಿಂಗ್, ನಮ್ಮ ಜಿಲ್ಲೆಯೂ ಸೇರಿದಂತೆ ಶಿವಮೊಗ್ಗ, ಚಿತ್ರದುರ್ಗ, ದಾವಣ ಗೆರೆ, ಬಳ್ಳಾರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಚಿಕ್ಕ ಮಗಳೂರು, ಚಾಮರಾಜನಗರ ಸೇರಿದಂತೆ 14 ಜಿಲ್ಲೆಗಳ ಖಾಸಗಿ ಬಸ್ ಮಾಲೀಕರ ಸಂಘದ ಜಿಲ್ಲಾಧ್ಯಕ್ಷರು ಸೇರಿ ಸಭೆ ನಡೆಸಲಾಗಿದೆ ಎಂದರು.
ರಿಯಾಯಿತಿ ನೀಡಲು ಮನವಿ: ಈ ಸಭೆಯಲ್ಲಿ ಒಮ್ಮತದ ತೀರ್ಮಾನಕ್ಕೆ ಬಂದು ನಮ್ಮ ಬೇಡಿಕೆಗಳ ಈಡೇರಿಕೆಗೆ ಸರ್ಕಾರಕ್ಕೆ ಒಕ್ಕೊರಲ ಮನವಿ ಸಲ್ಲಿಸಲಾಗುವುದು. ಕೋವಿಡ್-19 ನಿಂದ ಮಾ.24ರಿಂದಲೇ ಸಾರಿಗೆ ಪ್ರಾಧಿಕಾರದ ಆದೇಶದಂತೆ ಖಾಸಗಿ ಬಸ್ಗಳನ್ನು ನಿಲ್ಲಿಸಲಾಗಿದೆ. ಕೆಎಂವಿಟಿ ಆಕ್ಟ್ ಪ್ರಕಾರ ರಾಜ್ಯ ಸರ್ಕಾರವು ಬಸ್ಗಳ ತ್ರೆçಮಾಸಿಕ ತೆರಿಗೆಯನ್ನು ಮುಂಗಡವಾಗಿ ಪಡೆಯುತ್ತಿದ್ದು, ಇದನ್ನು ಮರುಪರಿಶೀಲಿಸಿ ತೆರಿಗೆ ಮುಕ್ತ ಹಾಗೂ ರಿಯಾಯಿತಿ ನೀಡಲು ಅವಕಾಶವಿದೆ ಇದನ್ನು ಪರಿಶೀಲಿಸಿ ಪರಿಗಣಿಸಬೇಕೆಂದು ಒತ್ತಾಯಿಸಿದರು.
ತೆರಿಗೆ ಮನ್ನಾ ಮಾಡಿ: ಚಿತ್ರದುರ್ಗ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಟಿ.ಎ. ಲಿಂಗಾರೆಡ್ಡಿ ಮಾತನಾಡಿ, 2020ರವರೆಗೆ ತೆರಿಗೆಯನ್ನು ಮನ್ನಾ ಮಾಡಿ ಮತ್ತೆ 2021ರ ಮಾರ್ಚ್ವರೆಗೆ ಶೇ.50ರಷ್ಟು ತೆರಿಗೆ ಪಾವತಿಗೆ ಅವಕಾಶ ಕಲ್ಪಿಸಬೇಕು. ಈಗಾಗಲೇ ಖಾಸಗಿ ಬಸ್ಗಳನ್ನು ನಿರುಪಯುಕ್ತತೆಗಾಗಿ ಸರೆಂಡರ್ ಮಾಡಿದ್ದು, ಈ ಅವಧಿಯನ್ನು ಬಿಟ್ಟು ಮುಂದಿನ ಅವಧಿಗೆ ತೆರಿಗೆ ವಿನಾಯಿತಿ ಕೊಟ್ಟು ಮತ್ತು ಡಿಸೆಂಬರ್ ನಂತರ ಶೇ.50ರಷ್ಟು ವಿನಾಯ್ತಿ ನೀಡಬೇಕು ಎಂದರು.
ನಮಗೂ ಪ್ಯಾಕೇಜ್ ಘೋಷಿಸಿ: ಕೋಲಾರ ಜಿಲ್ಲಾಧ್ಯಕ್ಷ ಶುಭಾಷ್ ರೆಡ್ಡಿ ಮಾತನಾಡಿ, ನಮ್ಮಿಂದ ತ್ರೆçಮಾಸಿಕ ತೆರಿಗೆಯನ್ನು ಮುಂಗಡವಾಗಿ ಪಡೆಯುತ್ತಿದ್ದು, ಇದನ್ನು 15 ದಿನಗಳ ಬದಲಾಗಿ ಒಂದು ತಿಂಗಳ ಮುಂಗಡವಾಗಿ ಪಡೆಯಬೇಕು. ಈಗಾಗಲೇ ವಿವಿಧ ಟ್ಯಾಕ್ಸಿ, ಆಟೋ ಚಾಲಕರಿಗೆ ಪ್ಯಾಕೇಜ್ ಘೋಷಣೆ ಮಾಡಿದಂತೆ ಖಾಸಗಿ ಬಸ್ಗಳ ಚಾಲಕರಿಗೂ ನೀಡಬೇಕೆಂದು ಆಗ್ರಹಿಸಿದರು.
ಸ್ಪಷ್ಟ ನಿಲುವು ಪ್ರಕಟಿಸಿ: ಲಾಕ್ಡೌನ್ ಸಡಿಲಿಕೆ ನಂತರ ಖಾಸಗಿ ಬಸ್ ಓಡಿಸಲು ಸೂಚನೆ ಬಂದಲ್ಲಿ, ಪ್ರಯಾಣಿಕರ ಸಾಗಾಟದ ಸಂಖ್ಯೆಯು ಪ್ರತಿ ಬಸ್ಗೆ 48 ಜನ ಇದ್ದು, ಶೇ.33ಕ್ಕೆ ಇಳಿಸಬಹುದು. ಜೊತೆಗೆ ಅಂತರ್ ಜಿಲ್ಲಾ ಓಡಾಟಕ್ಕೆ ನಿರ್ಬಂಧ ಬರಬಹುದು. ಬಸ್ಗಳಲ್ಲಿ ಪ್ರಯಾಣಿಕರು ಮಾಸ್ಕ್ ಧರಿಸುವುದು ಕಡ್ಡಾಯ, ಸ್ಯಾನಿಟೈಸರ್ ಬಳಸುವುದು ಕಡ್ಡಾಯ, ಸ್ಕ್ರೀನಿಂಗ್ ತಪಾಸಣೆ ಕಡ್ಡಾಯ ಎಂದು ಸರ್ಕಾರ ಏನಾದರೂ ಆದೇಶಿಸಿದರೆ ನಾವು ಅವೆಲ್ಲವನ್ನು ನಿಭಾಯಿಸಲು ಕಷ್ಟಸಾಧ್ಯವಾಗಲಿದೆ.
ಇವೆಲ್ಲಾ ಒಂದು ರೀತಿಯ ಗೊಂದಲ ಉಂಟಾದಂತೆ ಆಗುತ್ತದೆ. ಆದ್ದರಿಂದ ಸರ್ಕಾರ ಸ್ಪಷ್ಟ ನಿಲುವು ಪ್ರಕಟಿಸಬೇಕೆಂದು ಒತ್ತಾಯಿಸಿದರು. ವಿವಿಧ ಜಿಲ್ಲೆಗಳ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷರು ಇದ್ದರು.
ಟಾಪ್ ನ್ಯೂಸ್
![modi (4)](https://www.udayavani.com/wp-content/uploads/2024/07/modi-4-4-415x256.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shobha-Kharandlaje](https://www.udayavani.com/wp-content/uploads/2024/07/Shobha-Kharandlaje-150x90.jpg)
Congrees Government; ರಾಜ್ಯದಲ್ಲಿರುವುದು ಗೋಲ್ಮಾಲ್ ಸರ್ಕಾರ: ಕೇಂದ್ರ ಸಚಿವೆ ಶೋಭಾ
![5-tumkur](https://www.udayavani.com/wp-content/uploads/2024/07/5-tumkur-150x90.jpg)
Tumkur ZP CEO ಕೊರಟಗೆರೆ ರೌಂಡ್ಸ್; ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಿಇಓ ಪ್ರಭು.ಜಿ
![4-koratagere](https://www.udayavani.com/wp-content/uploads/2024/07/4-koratagere-150x90.jpg)
Koratagere: ಮಜ್ಜಿಗೆ ಫ್ಯಾಕ್ಟರಿಯ ಬಾಯ್ಲರ್ ಸ್ಪೋಟ; ಕಾರ್ಮಿಕನಿಗೆ ಗಂಭೀರ ಗಾಯ
![1-ewewqe](https://www.udayavani.com/wp-content/uploads/2024/07/1-ewewqe-150x85.jpg)
Koratagere; ಬಸ್ ಗಳ ಸಮಸ್ಯೆ: ಅಳಲು ತೋಡಿಕೊಂಡ ವಿದ್ಯಾರ್ಥಿಗಳು
![Naxal chandru- Naxal Chandru arrested after 19 years; What is the case?](https://www.udayavani.com/wp-content/uploads/2024/07/Naxal-150x86.jpg)
Naxal chandru-19 ವರ್ಷದ ಬಳಿಕ ನಕ್ಸಲ್ ಚಂದ್ರು ಸೆರೆ; ಏನಿದು ಪ್ರಕರಣ?
MUST WATCH
ಹೊಸ ಸೇರ್ಪಡೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.