ಬೇಡಿಕೆ ಈಡೇರಿಸಿದ್ರೆನೇ ಖಾಸಗಿ ಬಸ್‌ ರಸ್ತೆಗೆ


Team Udayavani, Jun 3, 2020, 6:27 AM IST

namagu package

ತುಮಕೂರು: ಕೋವಿಡ್‌ 19 ವೈರಸ್‌ನಿಂದ ಲಾಕ್‌ಡೌನ್‌ ಆಗಿರುವ ಹಿನ್ನೆಲೆಯಲ್ಲಿ ಖಾಸಗಿ ಬಸ್‌ ಮಾಲೀಕರು ತೀವ್ರ ಸಂಕಷ್ಟ ಎದುರಿಸು ತ್ತಿದ್ದು, ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿ ಸಿದರೆ ಮಾತ್ರ ಖಾಸಗಿ ಬಸ್‌ಗಳು ರಸ್ತೆಗೆ ಇಳಿಯ  ಲಿವೆ ಎಂದು 14 ಜಿಲ್ಲೆಗಳ ಖಾಸಗಿ ಬಸ್‌ ಮಾಲೀಕರ ಸಂಘದ ಅಧ್ಯಕ್ಷರು ಹೇಳಿದರು.

ನಗರಕ್ಕೆ ಸಮೀಪದ ಹಿರೇಹಳ್ಳಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಖಾಸಗಿ ಬಸ್‌ ಮಾಲೀಕರ ಸಂಘದ  ತುಮಕೂರು ಜಿಲ್ಲಾಧ್ಯಕ್ಷ ಬಿ.ಎಸ್‌.ಬಲಶಾಮಸಿಂಗ್‌, ನಮ್ಮ ಜಿಲ್ಲೆಯೂ ಸೇರಿದಂತೆ ಶಿವಮೊಗ್ಗ, ಚಿತ್ರದುರ್ಗ, ದಾವಣ ಗೆರೆ, ಬಳ್ಳಾರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ,  ಮೈಸೂರು, ಚಿಕ್ಕ ಮಗಳೂರು, ಚಾಮರಾಜನಗರ ಸೇರಿದಂತೆ 14 ಜಿಲ್ಲೆಗಳ ಖಾಸಗಿ ಬಸ್‌ ಮಾಲೀಕರ ಸಂಘದ ಜಿಲ್ಲಾಧ್ಯಕ್ಷರು ಸೇರಿ ಸಭೆ ನಡೆಸಲಾಗಿದೆ ಎಂದರು.

ರಿಯಾಯಿತಿ ನೀಡಲು ಮನವಿ: ಈ ಸಭೆಯಲ್ಲಿ ಒಮ್ಮತದ ತೀರ್ಮಾನಕ್ಕೆ ಬಂದು ನಮ್ಮ ಬೇಡಿಕೆಗಳ ಈಡೇರಿಕೆಗೆ ಸರ್ಕಾರಕ್ಕೆ ಒಕ್ಕೊರಲ ಮನವಿ ಸಲ್ಲಿಸಲಾಗುವುದು. ಕೋವಿಡ್‌-19 ನಿಂದ ಮಾ.24ರಿಂದಲೇ ಸಾರಿಗೆ ಪ್ರಾಧಿಕಾರದ  ಆದೇಶದಂತೆ ಖಾಸಗಿ ಬಸ್‌ಗಳನ್ನು ನಿಲ್ಲಿಸಲಾಗಿದೆ. ಕೆಎಂವಿಟಿ ಆಕ್ಟ್ ಪ್ರಕಾರ ರಾಜ್ಯ ಸರ್ಕಾರವು ಬಸ್‌ಗಳ ತ್ರೆçಮಾಸಿಕ ತೆರಿಗೆಯನ್ನು ಮುಂಗಡವಾಗಿ ಪಡೆಯುತ್ತಿದ್ದು, ಇದನ್ನು ಮರುಪರಿಶೀಲಿಸಿ ತೆರಿಗೆ ಮುಕ್ತ ಹಾಗೂ ರಿಯಾಯಿತಿ  ನೀಡಲು ಅವಕಾಶವಿದೆ ಇದನ್ನು ಪರಿಶೀಲಿಸಿ ಪರಿಗಣಿಸಬೇಕೆಂದು ಒತ್ತಾಯಿಸಿದರು.

ತೆರಿಗೆ ಮನ್ನಾ ಮಾಡಿ: ಚಿತ್ರದುರ್ಗ ಖಾಸಗಿ ಬಸ್‌ ಮಾಲೀಕರ ಸಂಘದ ಅಧ್ಯಕ್ಷ ಟಿ.ಎ. ಲಿಂಗಾರೆಡ್ಡಿ ಮಾತನಾಡಿ, 2020ರವರೆಗೆ ತೆರಿಗೆಯನ್ನು ಮನ್ನಾ ಮಾಡಿ ಮತ್ತೆ 2021ರ ಮಾರ್ಚ್‌ವರೆಗೆ ಶೇ.50ರಷ್ಟು ತೆರಿಗೆ ಪಾವತಿಗೆ ಅವಕಾಶ  ಕಲ್ಪಿಸಬೇಕು. ಈಗಾಗಲೇ ಖಾಸಗಿ ಬಸ್‌ಗಳನ್ನು ನಿರುಪಯುಕ್ತತೆಗಾಗಿ ಸರೆಂಡರ್‌ ಮಾಡಿದ್ದು, ಈ ಅವಧಿಯನ್ನು ಬಿಟ್ಟು ಮುಂದಿನ ಅವಧಿಗೆ ತೆರಿಗೆ ವಿನಾಯಿತಿ ಕೊಟ್ಟು ಮತ್ತು ಡಿಸೆಂಬರ್‌ ನಂತರ ಶೇ.50ರಷ್ಟು ವಿನಾಯ್ತಿ ನೀಡಬೇಕು  ಎಂದರು.

ನಮಗೂ ಪ್ಯಾಕೇಜ್‌ ಘೋಷಿಸಿ: ಕೋಲಾರ ಜಿಲ್ಲಾಧ್ಯಕ್ಷ ಶುಭಾಷ್‌ ರೆಡ್ಡಿ ಮಾತನಾಡಿ, ನಮ್ಮಿಂದ ತ್ರೆçಮಾಸಿಕ ತೆರಿಗೆಯನ್ನು ಮುಂಗಡವಾಗಿ ಪಡೆಯುತ್ತಿದ್ದು, ಇದನ್ನು 15 ದಿನಗಳ ಬದಲಾಗಿ ಒಂದು ತಿಂಗಳ  ಮುಂಗಡವಾಗಿ ಪಡೆಯಬೇಕು.  ಈಗಾಗಲೇ ವಿವಿಧ ಟ್ಯಾಕ್ಸಿ, ಆಟೋ ಚಾಲಕರಿಗೆ ಪ್ಯಾಕೇಜ್‌ ಘೋಷಣೆ ಮಾಡಿದಂತೆ ಖಾಸಗಿ ಬಸ್‌ಗಳ ಚಾಲಕರಿಗೂ ನೀಡಬೇಕೆಂದು ಆಗ್ರಹಿಸಿದರು.

ಸ್ಪಷ್ಟ ನಿಲುವು ಪ್ರಕಟಿಸಿ: ಲಾಕ್‌ಡೌನ್‌ ಸಡಿಲಿಕೆ ನಂತರ ಖಾಸಗಿ ಬಸ್‌ ಓಡಿಸಲು ಸೂಚನೆ ಬಂದಲ್ಲಿ, ಪ್ರಯಾಣಿಕರ ಸಾಗಾಟದ ಸಂಖ್ಯೆಯು ಪ್ರತಿ ಬಸ್‌ಗೆ 48 ಜನ ಇದ್ದು, ಶೇ.33ಕ್ಕೆ ಇಳಿಸಬಹುದು. ಜೊತೆಗೆ ಅಂತರ್‌ ಜಿಲ್ಲಾ ಓಡಾಟಕ್ಕೆ  ನಿರ್ಬಂಧ ಬರಬಹುದು. ಬಸ್‌ಗಳಲ್ಲಿ ಪ್ರಯಾಣಿಕರು ಮಾಸ್ಕ್ ಧರಿಸುವುದು ಕಡ್ಡಾಯ, ಸ್ಯಾನಿಟೈಸರ್‌ ಬಳಸುವುದು ಕಡ್ಡಾಯ, ಸ್ಕ್ರೀನಿಂಗ್‌ ತಪಾಸಣೆ ಕಡ್ಡಾಯ ಎಂದು ಸರ್ಕಾರ ಏನಾದರೂ ಆದೇಶಿಸಿದರೆ ನಾವು ಅವೆಲ್ಲವನ್ನು  ನಿಭಾಯಿಸಲು ಕಷ್ಟಸಾಧ್ಯವಾಗಲಿದೆ.

ಇವೆಲ್ಲಾ ಒಂದು ರೀತಿಯ ಗೊಂದಲ ಉಂಟಾದಂತೆ ಆಗುತ್ತದೆ. ಆದ್ದರಿಂದ ಸರ್ಕಾರ ಸ್ಪಷ್ಟ ನಿಲುವು ಪ್ರಕಟಿಸಬೇಕೆಂದು ಒತ್ತಾಯಿಸಿದರು. ವಿವಿಧ ಜಿಲ್ಲೆಗಳ ಖಾಸಗಿ ಬಸ್‌ ಮಾಲೀಕರ ಸಂಘದ ಅಧ್ಯಕ್ಷರು ಇದ್ದರು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.