ಪೈಪ್ಲೈನ್ ಕಾಮಗಾರಿಗೆ ಹದಗೆಟ್ಟ ರಸ್ತೆ
Team Udayavani, Oct 26, 2019, 4:12 PM IST
ತಿಪಟೂರು: ಕಸಬಾ ಹೋಬಳಿ ಈಚನೂರು ಗ್ರಾಮದ ರಸ್ತೆಯಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿಯಿಂದ ಮಣ್ಣು ಕುಸಿಯುತ್ತಿದ್ದು, ಮಳೆ ಬಂದ ಕಾರಣ ಕೆಸರುಗದ್ದೆಯಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ರಸ್ತೆ ದುರಸ್ತಿಗೊಳಿಸ ಬೇಕೆಂದು ಗ್ರಾಮಸ್ಥರು ಹಾಗೂ ವಾಹನ ಸವಾರರು ಒತ್ತಾಯಿಸಿದ್ದಾರೆ.
ಈಚನೂರು ಕೆರೆಯಿಂದ ತಿಪಟೂರು ಅಮಾನಿ ಕೆರೆಗೆ ಪೈಪ್ಲೈನ್ ಮೂಲಕ 24×7 ಕುಡಿಯುವ ನೀರು ತರಲಾಗುತ್ತಿದೆ. ಈಚನೂರು ಗ್ರಾಮದ ಸಂಪರ್ಕ ರಸ್ತೆ ಬದಿಯಲ್ಲಿ ಪೈಪ್ಲೈನ್ ಕಾಮಗಾರಿಗೆ ತೆಗೆದಿದ್ದ ಮಣ್ಣು ಸರಿಯಾಗಿ ಮುಚ್ಚದಿರುವುದರಿಂದ ಕೆಸರು ಗದ್ದೆಯಂತಾಗಿದೆ.
ರಸ್ತೆಯು ಕರಡಾಳು, ಅರಳಗುಪ್ಪೆ ಸೇರಿ ಹಲವು ಗ್ರಾಮಗಳಿಗೆ ಸಂಪರ್ಕ ರಸ್ತೆಯಾಗಿದೆ. ಅಲ್ಲದೆ ಪ್ರತಿನಿತ್ಯ 10ಕ್ಕೂ ಹೆಚ್ಚು ಕೆಎಸ್ಆರ್ಟಿ ಬಸ್, ಆಟೋ, ಬೈಕ್ಗಳು ಓಡಾಡುತ್ತವೆ. ಆದರೆ ಅವೈಜ್ಞಾನಿಕ ಕಾಮಗಾರಿ ಒಂದೆಡೆಯಾದರೆ ರಸ್ತೆ ತುಂಬ ಗುಂಡಿಗಳು ಬಿದ್ದಿದ್ದು, ಮಳೆ ನೀರು ಶೇಖರಣೆಯಾಗಿ ಗುಂಡಿ ಗಳು ಕಾಣದಂತಾಗಿ ಸರ್ಕಸ್ ಮಾಡಿಕೊಂಡು ಓಡಾಡುವಂತಾಗಿದೆ. ಇದರಿಂದ ಒಂದಲ್ಲೊಂದು ಅಪಘಾತಗಳು ಸಂಭವಿ ಸುತ್ತಿದ್ದು, ಅಧಿಕಾರಿಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಗ್ರಾಮಸ್ಥರು ಹಿಡಿಶಾಪ ಹಾಕುತ್ತಿದ್ದಾರೆ. ಕೂಡಲೇ ರಸ್ತೆ ದುರಸ್ತಿಗೊಳಿಸಬೇಕೆಂದು ವಾಹನ ಸವಾರರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ