ತುಮಕೂರು ಮಾದರಿ ನಗರ ನನ್ನ ಕನಸು


Team Udayavani, Sep 23, 2020, 5:07 PM IST

ತುಮಕೂರು ಮಾದರಿ ನಗರ ನನ್ನ ಕನಸು

ತುಮಕೂರು: ನಗರದಲ್ಲಿ ಸ್ಮಾರ್ಟ್‌ಸಿಟಿ ಯೋಜನೆಯಿಂದ ಹಲವಾರು ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿದೆ. ಜೊತೆಗೆ ಮುಖ್ಯಮಂತ್ರಿಗಳ ವಿಶೇಷ ಅನುದಾನದ ವಾರ್ಡ್‌ ಗಳಲ್ಲಿಅಭಿವೃದ್ಧಿ ಕಾಮಗಾರಿಗಳನ್ನು ಮಾಡಲಾಗುತ್ತಿದ್ದು ಮುಂದಿನ ದಿನಗಳಲ್ಲಿ ತುಮಕೂರು ಒಂದು ಮಾದರಿ ನಗರವನ್ನಾಗಿಸುವ ಗುರಿ ಹೊಂದಲಾಗಿದೆ ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್‌ ಹೇಳಿದರು.

ಇಲ್ಲಿಯ ಮಹಾನಗರಪಾಲಿಕೆ ವ್ಯಾಪ್ತಿಯ 35ನೇ ವಾರ್ಡ್‌ನಲ್ಲಿ ಮುಖ್ಯಮಂತ್ರಿಗಳ ವಿವೇಚನಾ ಅನುದಾನದಲ್ಲಿ ಮಹಾಲಕ್ಷ್ಮೀ ಬಡಾವಣೆಯ 1ನೇ ಹಂತದ 2ನೇ ಮುಖ್ಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ರಾಜಸ್ವ ವಸೂಲಾತಿ: ನಗರದ ಹಲವು ಕಡೆಗಳಲ್ಲಿ ಸ್ಮಾರ್ಟ್‌ಸಿಟಿ ಯೋಜನೆಯಿಂದ ಈಗ ನೂರಾರು ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳು ಪ್ರಗತಿಯಲ್ಲಿದೆ. ಇತ್ತೀಚಿನ ದಿನಗಳಲ್ಲಿ ಹೆಚ್ಚವಿರುವ ಕೋವಿಡ್ ದಿಂದಾಗಿ ಸರ್ಕಾರದಲ್ಲಿ ರಾಜಸ್ವ ವಸೂಲಾತಿ ಕಡಿಮೆಯಾಗಿದ್ದು, ಇನ್ನು ರಾಜಸ್ವ ವಸೂಲಾತಿ ಹೆಚ್ಚಳವಾಗಲಿದೆ ಎನ್ನುವ ವಿಶ್ವಾಸವಿದೆ. ಅದು ಹೆಚ್ಚಾದರೆ ಮುಂದಿನ ದಿನದಲ್ಲಿ ಇನ್ನು ಅಗತ್ಯವಿರುವ ಕಡೆಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿ, ನಗರವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು. ಈಗ ಸ್ಮಾರ್ಟ್‌ಸಿಟಿ ಹೊರತುಪಡಿಸಿ ಮುಖ್ಯ ಮಂತ್ರಿಗಳು ಹೆಚ್ಚಿನ 25 ಕೋಟಿಗಳನ್ನು ನಗರದ ಅಭಿವೃದ್ಧಿಗೆ ಅನುದಾನ ನೀಡಿದ್ದಾರೆ, ಈ ಭಾಗದಲ್ಲಿ 90 ಲಕ್ಷ ವೆಚ್ಚಗಳಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯಲಿದೆ ಎಂದು ನುಡಿದರು.

ಹೆಚ್ಚಿನ ಅಭಿವೃದ್ಧಿ ಕಾರ್ಯ: ಸಾರ್ವಜನಿಕರ ಅನುಕೂಲಕ್ಕೆ ಅವಶ್ಯಕತೆ ಇರುವಲ್ಲಿ ಕಾಮಗಾರಿ ಮಾಡಲಾಗಿದ್ದು, ಈ ವಾಡ್‌ ನಗರದ ಒಂದು ದೊಡ್ಡ ವಾರ್ಡ್‌ ಆಗಿದ್ದು, ರಾಷ್ಟ್ರೀಯ ಹೆದ್ದಾರಿ ಹಾಗೂ ರೈಲ್ವೆ ಹಳಿ ಕೂಡ ಹಾದು ಹೋಗಿದ್ದು, ಈ ಭಾಗದಲ್ಲಿ ಬಹುತೇಕವಾಗಿ ಹೊಸ ಬಡಾವಣೆಗಳಿದ್ದು, ಸುಮಾರು 3 ಕಿ.ಮೀ ನಷ್ಟು ಸಿ.ಸಿ. ಚರಂಡಿ ಹಾಗೂ 200 ಮೀಟರ್‌ ನಷ್ಟು ಸಿ.ಸಿ. ರಸ್ತೆ ಅಭಿವೃದ್ಧಿ ಮಾಡ ಲಾಗುತ್ತಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನ ಬರಲಿದ್ದು, ಇನ್ನು ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುವುದು ಎಂದು ತಿಳಿಸಿದರು.

ಮಹಾನಗರಪಾಲಿಕೆಯ ಸದಸ್ಯೆ ನಿರ್ಮಲ, ಮಾಜಿ ಪಾಲಿಕೆ ಸದಸ್ಯರಾದ ಟಿ.ಆರ್‌.ಬಸವ ರಾಜು, ಮುನಿಯಪ್ಪ, ಬಂಡೇಪಾಳ್ಯ ಸೋಮಶೇಖರ್‌ ಇದ್ದರು.

90 ಲಕ್ಷ ವೆಚ್ಚದಕಾಮಗಾರಿ : ತುಮಕೂರು ಮಹಾನಗರಪಾಲಿಕೆಯ 35ನೇ ವಾರ್ಡ್‌ ವ್ಯಾಪ್ತಿಯಲ್ಲಿ ಮುಖ್ಯಮಂತ್ರಿಗಳ ವಿವೇಚನಾ ಅನುದಾನದಲ್ಲಿ ಮಹಾಲಕ್ಷ್ಮೀ ಬಡಾವಣೆಯ 1ನೇ ಹಂತದ 2ನೇ ಮುಖ್ಯರಸ್ತೆ (ಲಕ್ಷ್ಮೀ ನರಸಿಂಹಯ್ಯನವರ ಮನೆ ಹಿಂಭಾಗ ಆರ್‌ಎಸ್‌ಎಸ್‌ ಬಸವರಾಜು) ಮತ್ತು 11 ಎ ಮುಖ್ಯರಸ್ತೆಗೆ ಸಿ.ಸಿ. ಚರಂಡಿ ಕಾಮಗಾರಿ ಹಾಗೂ ಮಹಾಲಕ್ಷ್ಮೀ ನಗರ ದಕ್ಷಿಣ 1ನೇ ಮುಖ್ಯರಸ್ತೆಯ ಹಾಗೂ ಅಡ್ಡರಸ್ತೆಗಳಿಗೆ ಸಿ.ಸಿ. ಚರಂಡಿ ಕಾಮಗಾರಿ ಸಿದ್ದರಾಮೇಶ್ವರ ಬಡಾವಣೆಯ ಪೂರ್ವ ಮತ್ತು ಪಶ್ಚಿಮ ಭಾಗದ ಆಯ್ದ ರಸ್ತೆಗಳಿಗೆ ಸಿ.ಸಿ. ಚರಂಡಿ ಕಾಮಗಾರಿ ಹಾಗೂ ದೇವರಾಯಪಟ್ಟದ ಹೊಸಬಡಾವಣೆ ನಂಜುಂಡಪ್ಪ ನಿವೃತ್ತ ಕಂಡಕ್ಟರ್‌ ಮತ್ತು ಸೆಹನ್‌ವಾಜ್‌ ಎಚ್‌ಎಂಟಿ ಇವರ ಮನೆ ಮುಂದೆ ಸೇರಿದಂತೆ ವಿವಿಧೆಡೆ 90 ಲಕ್ಷ ವೆಚ್ಚದ ಕಾಮಗಾರಿ ನಡೆಯಲಿದೆ ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್‌ ತಿಳಿಸಿದರು.

ನಗರದಲ್ಲಿಉತ್ತಮವಾದವಾತಾವರಣ ಕಾಣಬೇಕೆಂದರೆ ನಮ್ಮಪ್ರಧಾನಿಮೋದಿ ನಮಗೆ ನೀಡಿರುವ ಸ್ಮಾರ್ಟ್‌ಸಿಟಿ ಯೋಜನೆ ಇದರ ಅನುದಾನ ಮುಖ್ಯವಾದುದಾಗಿದ್ದು, ಈಗ ನೂರಾರು ಕೋಟಿರೂಗಳ ಕಾಮಗಾರಿ ಪ್ರಗತಿಯಲ್ಲಿಇದೆ,ಮುಂದಿನ ಹಲವು ಕಾಮಗಾರಿಪೂರ್ಣಗೊಳ್ಳಲಿವೆ.ಜನರು ಸಹಕಾರನೀಡಬೇಕು. ಜಿ.ಬಿ.ಜ್ಯೋತಿಗಣೇಶ್‌, ಶಾಸಕ

ಟಾಪ್ ನ್ಯೂಸ್

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.