ಹಾಲಿನ ಉತ್ಪಾದಕರ ಸಂಘಕ್ಕೆ ಸಹಾಯ ಧನ ವಿತರಣೆ


Team Udayavani, Mar 18, 2022, 6:12 PM IST

14milk

ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯಲ್ಲಿ ಶಂಭೋನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ನಿರ್ಮಾಣಕ್ಕೆ, ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬಂದಿರುವ ಒಂದು ಲಕ್ಷ ಅನುದಾನವನ್ನು ಜಿಲ್ಲಾ ನಿರ್ದೇಶಕ ದಿನೇಶ್ ರವರು ಸಂಘದ ಅದ್ಯಕ್ಷರಿಗೆ ಚೆಕ್ ವಿತರಿಸಿದರು.

ತಾಲ್ಲೂಕಿನ ಶಂಭೋನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಚೆಕ್ ವಿತರಿಸಿ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅನೋನ್ಯ ಭಾವನೆ ಇದೆ. 40 ವರ್ಷಗಳ ಹಿಂದೆ ಬೆಳ್ತಂಗಡಿ ತಾಲೂಕಿನಲ್ಲಿ ಹಾಲು ಉತ್ಪಾದಕರ ಸಂಘಕ್ಕೆ ಯಾವುದೇ ಉತ್ಪತ್ತಿಗಳಿರಲಿಲ್ಲ.ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯು ಕೆಎಂಎಪ್ ಜೊತೆಯಲ್ಲಿ ಅಲ್ಲಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಗಳನ್ನು ನಿರ್ಮಾಣ ಮಾಡಿಕೊಂಡು, ಹಾಲು ಉತ್ಪಾದಕರಸಹಕಾರ ಸಂಘದ ಅಭಿವೃದ್ದಿಗಾಗಿ, ಶ್ರೀ ಯುತ ಪೂಜ್ಯ ವಿರೇಂದ್ರ ಹೆಗ್ಗಡೆಯವರು ರಾಜ್ಯಾದ್ಯಂತ ಹಾಲು ಉತ್ಪಾದಕರ ಸಂಘಕ್ಕೆ ನೆರವನ್ನು ನೀಡುತ್ತಿದ್ದಾರೆ. ಸಂಘದ ಸದಸ್ಯರು ಹಾಗೂ ಪದಾಧಿಕಾರಿಗಳು ಹೈನುಗಾರಿಕೆಯಿಂದ ಸ್ವ ಉದ್ಯೋಗದ ಜೊತೆ ಲಕ್ಷಾಂತರ ಕುಟುಂಬಗಳು ತಮ್ಮ ಬದುಕನ್ನು ಕಟ್ಟಿ ಕೊಂಡಿವೆ. ಇದರಿಂದ ಕುಟುಂಬದ ಆರ್ಥಿಕ ಮಟ್ಟ , ಮಕ್ಕಳ ಶಿಕ್ಷಣ ಮಟ್ಟ, ಸಾಮಾಜಿಕವಾಗಿ ಸದೃಢ ಬದುಕನ್ನು ನಿರ್ಮಾಣ ಮಾಡಿಕೊಂಡಿದ್ದಾರೆ. ಹೈನುಗಾರಿಕೆ ಮಾಡುವ ಕುಟುಂಬಗಳಿಗೆ 10 ಸಾವಿರದಿಂದ 2 ಲಕ್ಷದವರೆಗೆ ಸಾಲವನ್ನು ಸಂಸ್ಥೆಯ ಪ್ರಗತಿ ನಿಧಿಯಿಂದ ಯ್ಯೂನಿಯನ್ ಬ್ಯಾಂಕ್ ನಿಂದ ನೀಡುತ್ತಿದ್ದೇವೆ. ಎಂದರು.

ಸಂಸ್ಥೆಯ ಯೋಜನಾಧಿಕಾರಿ ಬಾಲಕೃಷ್ಣ.ಎಮ್ ಮಾತನಾಡಿ ಸಂಘದಲ್ಲಿ 230 ಸದಸ್ಯರಿಗೆ ಪ್ರಗತಿ ರಕ್ಷಾ ಕವಚ ಕಾರ್ಯಕ್ರಮದಡಿಯಲ್ಲಿ 1 ಕೋಟಿ 30 ಲಕ್ಷ ಮರಣ ಸಾಂತ್ವಾನ ಧನ ನೀಡಲಾಗಿದೆ.ಹಾಗೂ ಆರೋಗ್ಯ ರಕ್ಷಾ77 ಕ್ಲೈಮ್ ಗಳಿಗೆ 6 ಲಕ್ಷ 65 ಸಾವಿರ ರೂಗಳನ್ನು ಆಸ್ಪತ್ರೆಯ ವೆಚ್ಚವನ್ನು ಭರಿಸಲಾಗಿದೆ. ಮತ್ತು ತಾಲ್ಲೂಕಿನ ಸ್ವಸಹಾಯ ಸಂಘಗಳಿಗೆ2 ಕೋಟಿ9 ಲಕ್ಷ ಲಾಭಾಂಶವನ್ನು ಪ್ರಗತಿ ಬಂದು ಯೋಜನೆಯಡಿ ವಿತರಿಸಲಾಗಿದೆ. ಕ್ಷೇತ್ರದ ಪ್ರಸಾದ ಮನೆ ಬಾಗಿಲಿಗೆ ಬಂದಾಗ, ಅದನ್ನು ಸಮರ್ಪಕ ಬಳಕೆ ಮಾಡಿಕೊಂಡು ಮುಂದಿನ ನಮ್ನ ಜೀವನ ಉತ್ತಮ ವಾಗಿ ನಿರ್ವಹಣೆಯಾಗಲಿ ಅಂತ ಬೇಡಿಕೆಯೊಂದಿಗೆ ಹಾಗೂ ಮಂಜುನಾಥ ಸ್ವಾಮಿ ಮತ್ತು ಅಣ್ಣಪ್ಪ ಸ್ವಾಮಿ ದೇವರ ಅನುಗ್ರಹ ನಮ್ಮೆಲ್ಲರ ಮೇಲೆ ಇರಲಿದೆ.ಈ ಒಂದು ಲಕ್ಷ ಅನುದಾನದ ಮಂಜೂರಾತಿ ಪತ್ರವನ್ನು ಸಂಘದ ಅದ್ಯಕ್ಷ ರಿಗೆ ನೀಡುತ್ತಿದ್ದೇವೆ ಎಂದರು .

ಈ ಸಂದರ್ಭದಲ್ಲಿ ಗ್ರಾಮಾಭಿವೃದ್ದಿ ಸಂಸ್ಥೆಯ ಮೇಲ್ವಿಚಾರಕರಾದ ಸಂದೇಶ್ ಸೇವಾ ಪ್ರತಿ ನಿಧಿ ಆಶಾ, ಮೋಹನ್ ಕುಮಾರಿ,ಅರುಣಾ ಸಂಘದ ಅದ್ಯಕ್ಷ ಶಿವಣ್ಣ, ಉಪಾಧ್ಯಕ್ಷೆ ಕಾತ್ಯಾಯಿನಿ ನಿರ್ದೇಶಕ ಶ್ರೀರಾಮ ರೆಡ್ಡಿ ಸೇರಿದಂತೆ ಇತರೆ ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.

ಚಿತ್ರ; ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಶಂಭೋನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ವತಿಯಿಂದ ಒಂದು ಲಕ್ಷದ ಅನುದಾನ ಪತ್ರವನ್ನು ಜಿಲ್ಲಾ ನಿರ್ದೇಶಕ ದಿನೇಶ್ ರವರು ಸಂಘದ ಅದ್ಯಕ್ಷರಿಗೆ ನೀಡಿದ ಸಂಧರ್ಭ, ತಾಲ್ಲೂಕು ಯೋಜನಾಧಿಕಾರಿ ಬಾಲಕೃಷ್ಣ ಹಾಗೂ ಮೇಲ್ವಿಚಾರಕರು ಹಾಜರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.