ಕಾಂಗ್ರೆಸ್‌ ಕಾರ್ಯಕರ್ತರ ಚಳಿ ಬಿಡಿಸಿದ ಡಿ.ಕೆ.ಸುರೇಶ್‌

ಪುರಸಭೆ ಚುನಾವಣೆ ಕೈ ಅಭ್ಯರ್ಥಿ ತಾವೇ ಎಂದು ಪ್ರಚಾರ ನಡೆಸುತ್ತಿದ್ದ ಆಕಾಂಕ್ಷಿಗಳಿಗೆ ಸಂಸದರಿಂದ ಖಡಕ್‌ ಎಚ್ಚರಿಕೆ

Team Udayavani, May 13, 2019, 4:39 PM IST

tumkur–04-tdy..

ಕುಣಿಗಲ್: ಪುರಸಭೆ ಚುನಾವಣೆ ಸಂಬಂಧ ಅಧಿಕೃತವಾಗಿ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡುವ ಮುನ್ನವೇ, ಸಾಮಾಜಿಕ ಜಾಲತಾಣದಲ್ಲಿ ಹಾಗೂ ಕರಪತ್ರ ಮುದ್ರಿಸಿಕೊಂಡು ತಾವೇ ಅಭ್ಯರ್ಥಿ ಎಂದು ಪ್ರಚಾರದಲ್ಲಿ ತೊಡಗಿರುವ ಕೆಲವು ಕಾಂಗ್ರೆಸ್‌ ಕಾರ್ಯಕರ್ತರ ಧೋರಣೆ ಬಗ್ಗೆ ಕೆಂಡಾಮಂಡಲರಾದ ಸಂಸದ ಡಿ.ಕೆ.ಸುರೇಶ್‌, ಸ್ವಯಂಘೋಷಣೆ ಮಾಡಿಕೊಳ್ಳುವ ಅಧಿಕಾರ ನಿಮಗೆ ಕೊಟ್ಟವರು ಯಾರು ಎಂದು ಆಕಾಂಕ್ಷಿ ಅಭ್ಯರ್ಥಿಗಳ ಚಳಿ ಬಿಡಿಸಿದ ಪ್ರಸಂಗ ತಾಲೂಕು ಹೊರವಲಯದ ಖಾಸಗಿ ಗೆಸ್ಟ್‌ ಹೌಸ್‌ನಲ್ಲಿ ನಡೆಯಿತು.

ಮೇ 29ರಂದು ನಡೆಯುವ ಕುಣಿಗಲ್ ಪುರಸಭಾ ಚುನಾವಣೆ ಹಿನ್ನೆಲೆಯಲ್ಲಿ ತಾಲೂಕಿನ ಎಡಿಯೂರು ಸಮೀಪದ ಕಾಳಿಂಗನಹಳ್ಳಿ ಖಾಸಗಿ ಗೆಸ್ಟ್‌ಹೌಸ್‌ನಲ್ಲಿ ಸಂಸದ ಡಿ.ಕೆ.ಸುರೇಶ್‌, ಶಾಸಕ ಡಾ.ಎಚ್.ಡಿ.ರಂಗನಾಥ್‌ ಅವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಟಿಕೆಟ್ ಆಕಾಂಕ್ಷಿ ಕಾರ್ಯಕರ್ತರಿಗೆ ಸಂಸದರು ಕ್ಲಾಸ್‌ ತೆಗೆದುಕೊಂಡರು.

ಆಟ ನಡೆಯುವುದಿಲ್ಲ: ಇದೇ ತಿಂಗಳು 29 ರಂದು ಕುಣಿಗಲ್ ಪುರಸಭೆಯ 23ವಾರ್ಡ್‌ಗಳಿಗೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ 23ವಾರ್ಡ್‌ಗಳ ಆಕಾಂಕ್ಷಿ ಅಭ್ಯರ್ಥಿಗಳು ಸೇರಿದಂತೆ 100ಅಧಿಕ ಕಾರ್ಯಕರ್ತರು ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ತಮಗೆ ಟಿಕೆಟ್ ನೀಡುವಂತೆ ಸಂಸದರಿಗೆ ಮನವಿ ಮಾಡಿದರು. ಇದರಿಂದ ಕೆಂಡಾಮಂಡಲರಾದ ಸಂಸದ ಡಿ.ಕೆ.ಸುರೇಶ್‌, ಚುನಾವಣೆ ಎಂದರೆ ಮಕ್ಕಳ ಆಟವಲ್ಲ ಎಂದು ಎಚ್ಚರಿಕೆ ನೀಡಿದರು.

ಸ್ಥಳೀಯ ಜನರಿಗೆ ಸರ್ಕಾರದಿಂದ ಹಾಗೂ ಸ್ಥಳೀಯ ಸಂಸ್ಥೆಯಿಂದ ಸಿಗುವ ಮೂಲಭೂತ ಸೌಲಭ್ಯಗಳನ್ನು ದೊರಕಿಸಿಕೊಟ್ಟು, ಜನರ ವಿಶ್ವಾಸ ಗಳಿಸಬೇಕು. ಅಲ್ಲದೇ, ತಮ್ಮ ಎದುರಾಳಿಗಳನ್ನು ಸಮರ್ಥವಾಗಿ ಎದುರಿಸುವಂತಹ ರಾಜಕೀಯ ಚಾಣಾಕ್ಷತನ ಇರಬೇಕು. ಇಲ್ಲವಾದಲ್ಲಿ ಚುನಾವಣೆ ಎದುರಿಸಲು ಸಾಧ್ಯವಿಲ್ಲ. ಇದನ್ನು ಅನುಸರಿಸದೇ, ತಮಗೆ ಬೇಕಾದ ವಾರ್ಡ್‌ಗಳನ್ನು ತಾವೇ ಆಯ್ಕೆ ಮಾಡಿಕೊಂಡು ನಾನೇ ಅಭ್ಯರ್ಥಿ ಎಂದು ಸಾಮಾಜಿಕ ಜಾಲತಾಣದಲ್ಲಿ ಹಾಗೂ ಕರಪತ್ರಗಳನ್ನು ಮುದ್ರಿಸಿಕೊಂಡು ಪ್ರಚಾರದಲ್ಲಿ ತೊಡಗಿಸಿ ಕೊಂಡಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಖಾರವಾಗಿ ಪ್ರಶ್ನಿಸಿದರು. ಎಲ್ಲವನ್ನೂ ಕಾರ್ಯಕರ್ತರೇ ತಿರ್ಮಾನ ಮಾಡುವುದಾದರೆ ಪಕ್ಷ ಏಕೆ ಎಂದು ಕಿಡಿಕಾರಿದ ಸಂಸದರು, ಈ ಆಟ ನಡೆಯುವುದಿಲ್ಲ ಎಂದು ಖಡಕ್‌ ಎಚ್ಚರಿಕೆ ನೀಡಿದರು.

ಶಿಫಾರಸು ನಡೆಯಲ್ಲ: ಟಿಕೆಟ್ಗಾಗಿ ಸಚಿವರು ಸೇರಿದಂತೆ ಹಲವು ಮುಖಂಡರಿಂದ ಒತ್ತಡ ಹಾಕುತ್ತಿರುವುದರ ಬಗ್ಗೆ ಆಕಾಂಕ್ಷಿಗಳನ್ನು ತರಾಟೆ ತೆಗೆದುಕೊಂಡ ಸಂಸದರು, ಸ್ಥಳೀಯ ಜನಪ್ರಿಯತೆ ಹೊಂದಿದ ವ್ಯಕ್ತಿಗಳಿಗೆ ಹಾಗೂ ಗೆಲ್ಲುವಂತಹ ಅಭ್ಯರ್ಥಿಗಳನ್ನು ಗುರುತಿಸಿ ಬಿ.ಫಾರಂ ನೀಡಲಾಗುವುದು. ಟಿಕೆಟ್ಗಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ್‌ಗುಡೂರಾವ್‌, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ಸಚಿವರಾದ ಡಿ.ಕೆ.ಶಿವಕುಮಾರ್‌, ಜಮೀರ್‌ಅಹಮದ್‌ ಅವರಿಂದ ಒತ್ತಡ ಹಾಕಿಸಿದರೆ ಅದಕ್ಕೆ ಮಣಿಯುವುದಿಲ್ಲ. ಈಗಾಗಲೇ ಪಟ್ಟಣದ 23ವಾರ್ಡ್‌ಗಳಲ್ಲಿ ಸಮೀಕ್ಷೆ ನಡೆಸಲಾಗಿದೆ. ಯಾರಿಗೆ ಟಿಕೆಟ್ ನೀಡಬೇಕೆಂಬುದು ತೀರ್ಮಾನ ಕೈಗೊಳ್ಳಲಾಗುವುದೆಂದು ಹೇಳಿದರು.

ಅಭ್ಯರ್ಥಿ ಎದೆಯಲ್ಲಿ ಡವಡವ: ಟಿಕೆಟ್ ನಮಗೆ ಖಚಿತ ಎಂದು ಹೇಳಿಕೊಂಡು ಪ್ರಚಾರದಲ್ಲಿ ತೊಡಗಿದ್ದ ಆಕಾಂಕ್ಷಿ ಅಭ್ಯರ್ಥಿಗಳಿಗೆ ಸಂಸದರ ಖಡಕ್‌ ಎಚ್ಚರಿಕೆಯಿಂದ ಎದೆಯಲ್ಲಿ ಡವಡ‌ವ ಶುರುವಾಗಿದೆ.

ಹೊಸಮುಖಕ್ಕೆ ಅವಕಾಶ ನೀಡಿ: ಇದಕ್ಕೂ ಮುನ್ನಾ ಸಭೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್‌ ಹಿರಿಯ ಮುಖಂಡರು ಮಾತನಾಡಿ, ಡಿ.ಕೆ.ಸುರೇಶ್‌ ಅವರು ಸಂಸದರಾದ ಮೇಲೆ ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಹತ್ತು ಹಲವು ಅಭಿವೃದ್ಧಿ ಕಾರ್ಯಕ್ರಮಗಳು ನಡೆದಿವೆ. ಈ ನಿಟ್ಟಿನಲ್ಲಿ ಪಟ್ಟಣದಲ್ಲಿ ಚತುಷ್ಪಥ ರಸ್ತೆ, ಒಳಚರಂಡಿ, ದೊಡ್ಡಕೆರೆ ಸೌಂದರೀಕರಣ, ಶುದ್ಧ ಕುಡಿಯುವ ನೀರಿನ ಘಟಕಗಳು, ಪುರಸಭೆ ನೂತನ ಕಚೇರಿ ಕಟ್ಟಡ, ವಿದ್ಯುತ್‌ ಚಿತಾಗಾರ, ಕರ್ನಾಟಕ ನೀರು ಮತ್ತು ಒಳಚರಂಡಿ ಮಂಡಳಿಯಿಂದ ಸ್ಲಂ ನಿವಾಸಿಗಳಿಗೆ 500ಮನೆ ಮಂಜೂರು, ಮಿನಿ ವಿಧಾನಸೌಧಕ್ಕೆ ಹೆಚ್ಚಿನ ಅನುದಾನ, ಐದು ಕೋಟಿ ರೂ. ವೆಚ್ಚದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಭಿವೃದ್ಧಿಗೆ ಕ್ರಮ ಸೇರಿದಂತೆ ನೂರಾರು ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕೆಲಸಗಳಾಗಿವೆ. ಮತಷ್ಟು ಪಟ್ಟಣ ಅಭಿವೃದ್ಧಿಯಾಗಬೇಕಾದರೆ ಪುರಸಭೆಗೆ ಕಾಂಗ್ರೆಸ್‌ ಆಡಳಿತ ಬರಬೇಕಾಗಿದೆ. ಹೀಗಾಗಿ, ಈ ಬಾರಿ ಪುರಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹೊಸ ಮುಖಗಳಿಗೆ ಟಿಕೆಟ್ ನೀಡಿ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಆಡಳಿತ ಚುಕ್ಕಾಣಿ ಹಿಡಿಯಬೇಕಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.