ಒಂದು ಸಮುದಾಯವನ್ನು ದ್ವೇಷಿಸಬಾರದು


Team Udayavani, Apr 9, 2020, 6:07 PM IST

TK-TDY-1

ತುಮಕೂರು: ಕೋವಿಡ್ 19 ವೈರಸ್‌ ಹರಡುತ್ತಿರುವ ಕುರಿತು ಒಂದೇ ಸಮುದಾಯವನ್ನು ಗುರಿಯಾಗಿಸುವುದು ತರವಲ್ಲ. ಇಂದು ಕೋವಿಡ್ 19  ವೈರಸ್‌ ಬಂದು ಯಾವುದೋ ಒಂದು ಸಮುದಾಯವನ್ನು ದ್ವೇಷ ಮಾಡುವ ರೀತಿಯಲ್ಲಿ ಬೆಳವಣಿಗೆಗಳಾಗುತ್ತಿವೆ ಇದು ಆಗಬಾರದು ಎಂದು ಮಾಜಿ ಶಾಸಕ ಹಾಗೂ ರಾಜ್ಯ ಅಪೆಕ್ಸ್‌ ಬ್ಯಾಂಕ್‌ ಅಧ್ಯಕ್ಷ ಕೆ.ಎನ್‌. ರಾಜಣ್ಣ ತಿಳಿಸಿದರು.

ನಗರದ ಕುಣಿಗಲ್‌ ರಸ್ತೆಯಲ್ಲಿರುವ ಬೀರೇಶ್ವರ ಕನ್ವೆಷನ್‌ ಹಾಲ್‌ನಲ್ಲಿ ಬುಧವಾರ ಆರ್‌.ಆರ್‌. ಅಭಿಮಾನಿ ಬಳಗದಿಂದ ನಿರಾಶ್ರಿತರಿಗೆ, ಅಸಹಾಯಕರಿಗೆ ಹಮ್ಮಿಕೊಂಡಿದ್ದ ಊಟದ ವ್ಯವಸ್ಥೆಗೆ ಬಡವರಿಗೆ ಊಟ ನೀಡುವ ಮೂಲಕ ಚಾಲನೆ ನೀಡಿ ಮಾತನಾಡಿ, ಯಾರೋ ಮಾಡಿದ ಇನ್ನೊಬ್ಬರಿಗೆ ಅನಾನುಕೂಲ ಆಗುವುದು ತಪ್ಪು ಎಂದರು.

ಯಾರೋ ಕೆಲವು ಜನರಿಂದ ತೊಂದರೆಯಾಗಿರಬಹುದು. ಹಿಂದುಗಳಿಂದಲೂ ಆಗಿರಬಹುದು, ಮುಸ್ಲಿಮರಿಂದಲೂ ಆಗಿರಬಹುದು, ಕ್ರಿಶ್ಚಿಯನ್‌ರಿಂದಲೂ ಆಗಿರಬಹುದು, ಆದರೆ ಸಮಾಜದಲ್ಲಿ ಜಾತಿ ನೋಡಿ ರೋಗ ಬರುವುದಿಲ್ಲ, ಬೇರೆ ಬೇರೆ ಕಾರಣಗಳಿಂದ ರೋಗ ಬರುತ್ತದೆ. ಒಂದು ಸಮುದಾಯವನ್ನು ಗುರಿಯಾಗಿಟ್ಟುಕೊಂಡು ದೂಷಣೆ ಮಾಡುವಂತಹದ್ದು ತರವಲ್ಲ ಎಂದು ಹೇಳಿದರು.

ಇಂದು ಸುಳ್ಳು ಸುದ್ದಿಗಳನ್ನು ಹರಡುವಂತಹದ್ದು, ಒಂದು ಜಾತಿಯನ್ನು ಗಮನದಲ್ಲಿಟ್ಟು ಕೊಂಡು ಅವರನ್ನು ದ್ವೇಷ ಮಾಡುವಂತಹದ್ದು ಸರಿಯಾದುದಲ್ಲ ಎಂದು ತಿಳಿಸಿದರು. ಕೋವಿಡ್ 19 ವೈರಸ್‌ ಹರಡುವ ಭೀತಿಯಿಂದ ದೇಶವೇ ಲಾಕ್‌ಡೌನ್‌ ಆಗಿದ್ದು, ಈ ವೇಳೆ ಜಿಲ್ಲೆಯಲ್ಲಿ ಅಸಹಾಯಕರು ಯಾವುದೇ ರೀತಿಯ ಕೊರತೆಯನ್ನು ಅನುಭವಿಸಬಾರದು ಎಂದು ಆರ್‌.ಆರ್‌. ಅಭಿಮಾನಿ ಬಳಗವು ಪ್ರತಿನಿತ್ಯ ದಾಸೋಹದ ರೀತಿಯಲ್ಲಿ ಸೇವಾ ಕಾರ್ಯದಲ್ಲಿ ತೊಡಗಿಕೊಂಡಿರುವುದು ಶ್ಲಾಘನೀಯ ಎಂದು ಹೇಳಿದರು.

ವಿಎಸ್‌ಎಸ್‌ಎನ್‌ ಸೊಸೈಟಿಗಳಲ್ಲಿ ಪಡಿತರ ವಿತರಣೆಯಾಗುತ್ತಿದೆ. ಇದರ ಜೊತೆಗೆ ಮಾಸ್ಕ್ ಧರಿಸಿ ಪಡಿತರ ನೀಡಬೇಕೆಂದು ಸೂಚನೆ ಕೂಡ ನೀಡಲಾಗಿದ್ದು, ಈಗಾಗಲೇ 1 ಲಕ್ಷ ಮಾಸ್ಕ್ ತರಿಸಿ 50 ಸಾವಿರ ಮಾಸ್ಕನ್ನು ಮಧುಗಿರಿ ತಾಲೂಕಿನಲ್ಲಿ ಸೊಸೈಟಿ ಮೂಲಕ ಹಂಚಲಾಗಿದೆ. ಇನ್ನುಳಿದ 50 ಸಾವಿರ ಮಾಸ್ಕನ್ನು ಇಡೀ ಜಿಲ್ಲಾದ್ಯಂತ ಸೊಸೈಟಿಗಳ ಮೂಲಕ ಹಂಚಲಾಗುತ್ತಿದೆ ಎಂದರು.

ಆರ್‌.ಆರ್‌ ಬಳಗದ ಆರ್‌.ರಾಜೇಂದ್ರ ಮಾತನಾಡಿ, ಕೊರೊನಾ ಲಾಕ್‌ಡೌನ್‌ ನಿಂದ ಊಟ ಇಲ್ಲದೇ ತೀರಾ ಕಷ್ಟಕ್ಕೆ ಸಿಲುಕಿರುವರಿಗೆ ಅವರಿದ್ದಲ್ಲಿಗೆ ಹೋಗಿ ಊಟ ನೀಡುವ ಕೆಲಸದಲ್ಲಿ ನಮ್ಮ ಆರ್‌.ಆರ್‌. ಅಭಿಮಾನಿ ಬಳಗ ಮುಂದಾಗಿದೆ ಎಂದರು.

ಕಳೆದ ಮಾ. 26 ರಿಂದಲೂ ಆರ್‌.ಆರ್‌. ಅಭಿಮಾನಿ ಬಳಗ ದಿಂದ ಜಿಲ್ಲಾಧಿಕಾರಿಗಳ ಕಚೇರಿ, ಪೊಲೀಸ್‌ ಸಿಬ್ಬಂದಿ, ಆಸ್ಪತ್ರೆಗಳ ವೈದ್ಯರು ಮತ್ತು ಸಿಬ್ಬಂದಿಗೆ, ಹೋಂಗಾರ್ಡ್ಸ್‌ ಗಳಿಗೆ ನಿರಂತರವಾಗಿ ಬೆಳಗ್ಗೆ ಮತ್ತು ಮಧ್ಯಾಹ್ನ ಊಟದ ವ್ಯವಸ್ಥೆ ಕಲ್ಪಿಸುತ್ತಿದ್ದಾರೆ. ಇದರ ಜೊತೆಗೆ ನಗರವೂ ಸೇರಿದಂತೆ ಜಿಲ್ಲೆಯಲ್ಲಿರುವ ನಿರಾಶ್ರಿತರು, ಕಾರ್ಮಿಕರಿಗೆ ಊಟದ ವ್ಯವಸ್ಥೆಯನ್ನು ಮಾಡುತ್ತಿದ್ದು, ನಿತ್ಯ ದಾಸೋಹದ ಸೇವಾ ಕಾರ್ಯದಲ್ಲಿ ಆರ್‌. ರಾಜೇಂದ್ರ ಮತ್ತು ಬಳಗದವರು ತೊಡಗಿಕೊಂಡಿದ್ದಾರೆ. ಸಂಸದ ಜಿ.ಎಸ್‌. ಬಸವರಾಜ್‌ ಇದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.