ಹೊಲ ಗದ್ದೆಗಳಿಗೆ ಒಂಟಿಯಾಗಿ ತೆರಳಬೇಡಿ


Team Udayavani, Mar 6, 2020, 3:00 AM IST

hola-gadde

ಮಧುಗಿರಿ: ಜಮೀನು ಹಾಗೂ ಗುಡ್ಡಗಾಡು ಪ್ರದೇಶದಲ್ಲಿ ಬೇಸಾಯ ಮಾಡುವ ರೈತರು ಹಾಗೂ ಸಾರ್ವಜನಿಕರು ಒಂಟಿಯಾಗಿ ಓಡಾಡಬೇಡಿ ಎಂದು ತಹಶೀಲ್ದಾರ್‌ ಡಾ.ವಿಶ್ವನಾಥ್‌ ಹೇಳಿದರು. ಕಚೇರಿಯಲ್ಲಿ ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ಚಿರತೆ ದಾಳಿ ಹೆಚ್ಚಾಗುತ್ತಿದ್ದು, ಜನರು ಸಂಜೆ ನಂತರ ಹೊರಗಡೆ ಬರಬಾರದು. ಹೊಲ ಗದ್ದೆಗಳಿಗೆ ಒಂಟಿಯಾಗಿ ತೆರಳಬಾರದು.

ನಾಲ್ಕೈದು ಮಂದಿ ಒಟ್ಟಾಗಿ ವ್ಯವಸಾಯ ಕಾರ್ಯ ಮಾಡಬೇಕು. ನಾಯಿ ಬೇಟೆಯಾಡಲು ಮನೆಯಂಗಳಕ್ಕೆ ಬರುವುದರಿಂದ ಹೆಚ್ಚಿನ ಪ್ರಖರತೆ ಇರುವ ವಿದ್ಯುತ್‌ ದೀಪ ಅಳವಡಿಸಬೇಕು. ಸಾಕು ಪ್ರಾಣಿಗಳನ್ನು ರಾತ್ರಿ ವೇಳೆ ಭದ್ರವಾಗಿ ಕೂಡಿ ಹಾಕಬೇಕು. ಮಾಂಸ ತ್ಯಾಜ್ಯ ಮಣ್ಣಿನಲ್ಲಿ ಹೂತು ಹಾಕಬೇಕು. ಮಕ್ಕಳು ಒಂಟಿಯಾಗಿ ಆಡುವುದು, ಜಮೀನಿಗೆ ಹೋಗಬಾರದು. ಪೊದೆಗಳಿದ್ದಲ್ಲಿ ಸ್ವತ್ಛಗೊಳಿಸಬೇಕು.

ಈ ಬಗ್ಗೆ ಶಾಲೆಗಳಲ್ಲಿ ಮಕ್ಕಳಿಗೆ ಅರಿವು ಮೂಡಿಸಲು ಶಿಕ್ಷಣ ಇಲಾಖೆಗೆ ಸೂಚಿಸಿದರು. ಬಯಲಲ್ಲಿ ಜಾನುವಾರು ಮೇಯಿಸುವಾಗ ರೈತರು ಗುಂಪಾಗಿರಬೇಕು. ರಕ್ಷಣೆಗೆ ದೊಣ್ಣೆ, ಕೊಡಲಿಯಂತಹ ಅಸ್ತ್ರ ಇಟ್ಟುಕೊಂಡಿರಬೇಕು ಎಂದು ಸಲಹೆ ನೀಡಿದರು. ತಾಲೂಕು ಆಡಳಿತ ಚಿರತೆ ಜಾಡಿನ ಜಾಗ ಗುರುತಿಸಿದ್ದು, ಅವುಗಳಲ್ಲಿ ಕಸಬಾ ಹೋಬಳಿಯ ಅಗಸರಹೊಳೆ, ಕಮ್ಮನಕೋಟೆ, ಆವೇಕಟ್ಟೆ ಗ್ರಾಮಗಳು ಸೇರಿವೆ.

ದೊಡ್ಡೇರಿ ಹೋಬಳಿಯ ತಿಮ್ಮಲಾಪುರ ಅರಣ್ಯಪ್ರದೇಶ, ಮಿಡಿಗೇಶಿ ಹೋಬಳಿಯ ಚಿನೆ ಗ್ರಾಮದ ಸುತ್ತಲಿನ ಪ್ರದೇಶದಲ್ಲಿ ಚಿರತೆ ಹಾಗೂ ಕರಡಿ ಸಂಚಾರವಿದೆ. ಕಾಡುಪ್ರಾಣಿಗಳು ತುಮಕೂರು-ಮಧುಗಿರಿಯ ಕೆಶಿಫ್ ರಸ್ತೆ ಹಾಗೂ ಗೌರಿಬಿದನೂರು-ಮಧುಗಿರಿ ರಸ್ತೆಗಳಲ್ಲಿ ಹೆಚ್ಚಾಗಿ ಕಾಣಿಸಿದ್ದು, ಸೂಕ್ಷ್ಮ ತಿರುವುಗಳಲ್ಲಿ ಸಿ.ಸಿ.ಟಿವಿ ಅಳವಡಿಸಿ ಚಲನವಲನ ಪತ್ತೆ ಹಚ್ಚಬೇಕು.

ಎಲ್ಲಾದರೂ ಮೃಗಗಳು ಕಂಡು ಬಂದರೆ ಕೂಡಲೇ ತಿಳಿಸಲು ಸಹಾಯವಾಣಿ ತೆರೆಯಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ವಾಸುದೇವಮೂರ್ತಿ, ಸಾಮಾಜಿಕ ವಲಯ ಅರಣ್ಯಾಧಿಕಾರಿ, ಪಿಎಸೈ, ಕಾಂತರಾಜು, ತಾ.ಪಂ. ಮಂಜುಳಾ, ಪುರಸಭೆ ಮುಖ್ಯಾಧಿಕಾರಿ ಅಮರನಾರಾಯಣ್‌, ಶಿಕ್ಷಣ ಇಲಾಖೆಯ ಇಸಿಓ ಪ್ರಾಣೇಶ್‌, ಹಾಗೂ ಇತರೆ ಅಧಿಕಾರಿಗಳು ಇದ್ದರು.

ಕಾಡು ನಾಶ ಮಾಡಿದ್ದಕ್ಕೆ ಪ್ರಾಣಿಗಳಿಂದ ಅಪಾಯ ಎದುರಿಸುವ ‌ನ್ನಿವೇಶ ಸೃಷ್ಟಿಯಾಗಿದೆ ನೀರು-ಆಹಾರ ಅರಸಿ ನಾಡಿಗೆ ಬರುತ್ತಿದ್ದು, ಇದರ ತಡೆಗೆ ತಾಲೂಕು ಆಡಳಿತ ಎದುರಿಸಲು ಸಿದ್ಧವಾಗಿದೆ. ಜನತೆ ಸರ್ಕಾರದ ನಿಯಮ ಕಡ್ಡಾಯವಾಗಿ ಪಾಲಿಸಬೇಕು.
-ಡಾ.ವಿಶ್ವನಾಥ್‌, ತಹಶೀಲ್ದಾರ್‌, ಮಧುಗಿರಿ

ಹಗಲಲ್ಲಿ ವಿದ್ಯುತ್‌ ನೀಡಬೇಕು. ಇದರಿಂದ ರಾತ್ರಿ ವೇಳೆ ಬೇಸಾಯ ಮಾಡುವುದು ತಪ್ಪಿ ರೈತರ ಪ್ರಾಣ ಉಳಿಯುತ್ತದೆ.
-ಶಂಕರಪ್ಪ, ರೈತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.