ರೈತರ ವಿನಾಕಾರಣ ಅಲೆದಾಡಿಸಬೇಡಿ

ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್‌ ಖಡಕ್‌ ಸೂಚನೆ • ಚಿನ್ನಹಳ್ಳಿಯಲ್ಲಿ ಜನಸಂಪರ್ಕ ಸಭೆ

Team Udayavani, Jun 24, 2019, 12:34 PM IST

tk-tdy-2..

ಕೊರಟಗೆರೆ: ಕಚೇರಿಯಲ್ಲಿ ಕುಳಿತು ಏನು ಮಾಡುತ್ತಿದ್ದಿರಾ.. ಕಾಮಗಾರಿ ಮಾಡಿಸಲು ನಿರ್ಲಕ್ಷ್ಯವೇಕೆ?, ನೀವು ಕೆಲಸ ಮಾಡಿಸದಿದ್ದರೆ ನಾನೇ ಕ್ರಮಕ್ಕೆ ಮುಂದಾ ಗುತ್ತೇನೆ.. ಇದು ಲ್ಯಾಂಡ್‌ ಆರ್ಮಿಯ ಹಿರಿಯ ಇಂಜಿನಿಯರ್‌ಗಳ ವಿರುದ್ಧ ಡಿಸಿಎಂ ಡಾ.ಜಿ. ಪರಮೇಶ್ವರ್‌ ಆಕ್ರೋಶದ ನುಡಿಗಳು. ಕೋಳಾಲ ಹೋಬಳಿ ಚಿನ್ನಹಳ್ಳಿ ಗ್ರಾಮದಲ್ಲಿ ತಾಪಂ ಮತ್ತು ಜಿಲ್ಲಾಡಳಿತದ ವತಿಯಿಂದ ಭಾನುವಾರ ಏರ್ಪಡಿಸಿದ್ದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದರು.

ರೈತರ ಅಲೆದಾಡಿಸಬೇಡಿ: ಬೆಸ್ಕಾಂ ಅಧಿಕಾರಿಗಳು ಕೋಳಾಲ ವ್ಯಾಪ್ತಿಯ ರೈತರಿಂದ ಟಿ.ಸಿ.ಬದಲಾವಣೆ ಹಾಗೂ ಸುಟ್ಟ ಟಿ.ಸಿ ಅಳವಡಿಸಲು 5ರಿಂದ 10 ಸಾವಿರ ರೂ. ಪಡೆದು ಕಾಮಗಾರಿ ವಿಳಂಬ ಮಾಡುತ್ತಿರುವ ದೂರುಗಳು ಬಂದಿದೆ. ರೈತರನ್ನು ವಿನಾಕಾರಣ ಅಲೆದಾಡಿಸಿದರೆ ಸಹಿಸುವುದಿಲ್ಲ. ವಿದ್ಯುತ್‌ ಸೌಲಭ್ಯ ಇಲ್ಲದಿರುವ ಗ್ರಾಮ ಅಥವಾ ಮನೆ ಗುರುತಿಸಿ ಮಾಹಿತಿ ನೀಡಬೇಕು. ಸರಕಾರದ ಯೋಜನೆಗಳ ಬಗ್ಗೆ ರೈತರಿಗೆ ಮಾಹಿತಿ ನೀಡಿ ಎಂದು ಸೂಚಿಸಿದರು.ಆಡಳಿತ ಯಂತ್ರದ ಚುರುಕಿಗಾಗಿ ಸರಕಾರವೇ ಜನರ ಬಳಿ ಬಂದಿದೆ. ಮುಖ್ಯಮಂತ್ರಿ ಗ್ರಾಮ ವಾಸ್ತವ್ಯ ಮಾಡುತ್ತಿದ್ದಾರೆ. ನಾನು ಜನಸಂಪರ್ಕ ಸಭೆ ನಡೆಸಿ ಜನರ ಅಹವಾಲು ಸ್ವೀಕರಿಸುತ್ತಿದ್ದೇನೆ. ಕ್ಷೇತ್ರದ ಒಟ್ಟು ಆರು ಕಡೆಯಲ್ಲಿ ಆಧಾರ್‌ಕೇಂದ್ರ ಸ್ಥಾಪಿಸಿ ಸಮಸ್ಯೆ ಸರಿಪಡಿಸಲು ಸೂಚಿಸಿದ್ದೇನೆ ಎಂದರು.

ಅನ್ಯಾಯ ಆಗಲು ಬಿಡೋಲ್ಲ: ಎತ್ತಿನಹೊಳೆ ಯೋಜ ನೆಯ ಅನುಷ್ಠಾನಕ್ಕೆ 13500 ಕೋಟಿ ಮೀಸ ಲಿಡಲಾಗಿದೆ. 300 ಕಿಮೀ ದೂರದಿಂದ ನೀರು ತರಲು ಈಗಾಗಲೇ 6 ಸಾವಿರ ಕೋಟಿ ಖರ್ಚಾಗಿದೆ. ಬಫ‌ರ್‌ಡ್ಯಾಂ ನಿರ್ಮಾಣಕ್ಕೆ 5 ಸಾವಿರ ಎಕರೆ ಭೂಮಿ ಸ್ವಾಧೀನ ಆಗಲಿದೆ. ರೈತರಿಗೆ ಅನ್ಯಾಯ ಆಗಲು ಬಿಡೋದಿಲ್ಲ. ನೀರಾವರಿ ಯೋಜನೆ ಅನುಷ್ಠಾನಕ್ಕೆ ರೈತರ ಸಹಕಾರ ಅಗತ್ಯ. ದೊಡ್ಡಬಳ್ಳಾಪುರದಲ್ಲಿ ಜಮೀನಿಗೆ ನೀಡುವಷ್ಟು ಪರಿಹಾರ ಇಲ್ಲೂ ನೀಡುವುದಾಗಿ ತಿಳಿಸಿದರು.

ರೈತರ ಆಕ್ರೋಶ: ಕ್ಷೇತ್ರದಲ್ಲಿ ಸರ್ಕಾರಿ ಅಧಿಕಾರಿಗಳು ರೈತರ ಯಾವ ಕೆಲಸವೂ ಮಾಡಿಕೊಡುತಿಲ್ಲ.ತಾಲೂಕು ಕಚೇರಿಗೆ ಹೋದರೆ ಸಬೂಬು ಹೇಳಿ ಕಳಿಸ್ತಾರೆ. ಡೀಸಿ ಕಚೇರಿಗೆ ಹೋದರೆ ಅವರೇ ಇರುವುದಿಲ್ಲ. ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುವಂತೆ ಕ್ರಮ ಕೈಗೊಳ್ಳಿ ಎಂದು ರೈತರು ಆಗ್ರಹಿಸಿದರು.

ಜನರಿಂದ ಅಹವಾಲು ಸ್ವೀಕಾರ: ಜನಸಂಪರ್ಕ ಸಭೆಗೆ ಅಹವಾಲು ನೀಡಲು ಜನಸಾಗರವೇ ಹರಿದು ಬಂದಿತ್ತು. ಕೆಲವರು ಸ್ವಂತ ಸಮಸ್ಯೆಗಳಿಗೆ ಪರಿಹಾರಕ್ಕೆ ಮನವಿ ಮಾಡಿದರೆ ಮತ್ತೆ ಕೆಲವರು ಗ್ರಾಮದ ಅಭಿವೃದ್ಧಿಗೆ ಸಹಕಾರ ನೀಡುವಂತೆ ಕೇಳಿಕೊಂಡರು. ಪಶು ಇಲಾಖೆ, ಸರಕಾರಿ ಶಾಲೆ ಮತ್ತು ಶಿಕ್ಷಕರ ನೇಮಕ್ಕಾಗಿ ಡಿಸಿಎಂ ಸ್ಥಳದಲ್ಲಿಯೇ ಪರಿಹಾರ ಸೂಚಿಸಿದರು. ಇನ್ನೂಳಿದ ರೈತರು ನಮಗೆ ನಮ್ಮ ಜಮೀನು ಉಳಿಸಿ ಕೊಡುವಂತೆ ಕೈ ಮುಗಿದ ಮನವಿ ಮಾಡಿದರು. ಜಿಲ್ಲಾಧಿಕಾರಿ ಡಾ.ರಾಕೇಶ್‌ ಕುಮಾರ್‌, ಎಸ್‌ಪಿ ಡಾ.ಕೋನ ವಂಶಿಕೃಷ್ಣ, ಪಿಡಬ್ಲ್ಯುಡಿ ಎಇಇ ಜಗದೀಶ್‌, ಜಿಪಂ ಸದಸ್ಯ ಶಿವರಾಮಯ್ಯ, ತಾಪಂ ಅಧ್ಯಕ್ಷ ಕೆಂಪರಾಮಯ್ಯ, ಜಿಪಂ ಅಧಿಕಾರಿ ಪ್ರೇಮಾ ಕುಮಾರ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ಕೊಡ್ಲಹಳ್ಳಿ ಅಶ್ವತ್ಥನಾರಾಯಣ್‌, ಅರಕೆರೆ ಶಂಕರ್‌, ಜಿ.ವೆಂಕಟಾಚಲಯ್ಯ, ಗ್ರಾಪಂ ಅಧ್ಯಕ್ಷ ಸೀತರಾಮು ಇತರರಿದ್ದರು.

ಟಾಪ್ ನ್ಯೂಸ್

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.