ಹಸುವಿನ ಹೊಟ್ಟೆಯಿಂದ ತಂತಿ ಹೊರ ತೆಗೆದ ವೈದ್ಯರು


Team Udayavani, Dec 11, 2021, 2:53 PM IST

ಪಶು ವೈದ್ಯ

ತಿಪಟೂರು: ತಾಲೂಕಿನ ನೊಣವಿನಕೆರೆ ಗ್ರಾಮದ ನವೀನ್‌ ಎಂಬುವವರ ಸೀಮೆಹಸು ಹೊಟ್ಟೆ ಉಬ್ಬರದಿಂದ ನರಳುತ್ತಿತ್ತು. ಈ ಸಮಯದಲ್ಲಿ ಸ್ಥಳಕ್ಕೆ ಬಂದ ನೊಣವಿನಕೆರೆ ಪಶು ಆಸ್ಪತ್ರೆಯ ವೈದ್ಯ ಡಾ.ಎಸ್‌.ಪಿ.ಮಂಜುನಾಥ್‌ ಹಾಗೂ ಹುಣಸೇಘಟ್ಟದ ಡಾ.ಡಿ.ಎನ್‌. ಅಭಿಷೇಕ್‌ ಅವರು ಶಸ್ತ್ರಚಿಕಿತ್ಸೆ ಮಾಡಿ, ಹಸುವಿನ ಹೊಟ್ಟೆಯಲ್ಲಿದ್ದ ತಂತಿ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.

ವೈದ್ಯ ಎಸ್‌.ಪಿ.ಮಂಜುನಾಥ್‌ ಮಾತನಾಡಿ, ಹಸುಗಳಲ್ಲಿ ಹೊಟ್ಟೆಗೆ ನಾಲ್ಕು ಭಾಗಗಳಿದ್ದು, ಚೂಪಾದ ವಸ್ತುಗಳು, ಪ್ಲಾಸ್ಟಿಕ್‌, ರೆಕ್ಸಿನ್‌ಗಳಂತಹ ವಸ್ತುಗಳನ್ನು ಹಸುವು ಮೇವಿನೊಂದಿಗೆ ತಿಂದಾಗ, ಹಸುವಿನ ಹೊಟ್ಟೆಯ ಎರಡನೇ ಭಾಗದಲ್ಲಿ ಸಿಕ್ಕಿಕೊಳ್ಳುತ್ತವೆ. ಈ ಹಸುವಿನಲ್ಲಿ ಅದರ ಸಗಣಿಯ ಸಾಂದ್ರತೆ ಮತ್ತು ಹಸುವು ತೋರುತ್ತಿದ್ದ ಕೆಲವು ಲಕ್ಷಣಗಳಿಂದ ಚೂಪಾಗಿರುವ ವಸ್ತುವೊಂದು ಸಿಕ್ಕಿಕೊಂಡಿರುವುದನ್ನು ಪತ್ತೆ ಹಚ್ಚಲಾಯಿತು. ಶಸ್ತ್ರ ಚಿಕಿತ್ಸೆ ನಡೆಸಿ ತಂತಿ ಹೊರ ತೆಗೆಯಲು ಸಹಕಾರಿಯಾಯಿತು ಎಂದರು.

60 ಜಾನುವಾರುಗಳಿಗೆ ಶಸ್ತ್ರ ಚಿಕಿತ್ಸೆ: ಈ ಮೊದಲು ತಮ್ಮ ತಂಡದಿಂದ ತುಮಕೂರು, ಹಾಸನ ಜಿಲ್ಲೆಯ ಅನೇಕ ಹಳ್ಳಿಗಳಲ್ಲಿ ಸುಮಾರು 60 ಜಾನುವಾರುಗಳಿಗೆ ಶಸ್ತ್ರ ಚಿಕಿತ್ಸೆ ನಡೆಸಿ ತಂತಿ, ಸೂಜಿ, ಕಬ್ಬಿಣದ ಮೊಳೆ, ಚಮಚ ಮುಂತಾದ ಚೂಪಾದ ವಸ್ತುಗಳನ್ನು ಯಶಸ್ವಿಯಾಗಿ ಹೊರ ತೆಗೆಯಲಾಗಿದೆ.

ಈ ಭಾಗದಲ್ಲಿ ಟೊಮೊಟೋ ಬೆಳೆಯುವ ರೈತರು ಹೆಚ್ಚಿನ ಸಂಖ್ಯೆಯಲ್ಲಿದ್ದು, ತಂತಿಗಳನ್ನು ಬಳಕೆ ಮಾಡುತ್ತಾರೆ. ಇದರಿಂದ ದನಕರುಗಳ ಮೇವು ತಿನ್ನುವಾಗ ಎಚ್ಚರವಹಿಸಬೇಕು. ಕಬ್ಬಿಣದ ವಸ್ತುಗಳು ಹೊಟ್ಟೆಯನ್ನು ಸೇರಿಕೊಂಡಾಗ, ಅನೇಕ ರೀತಿಯ ಗಂಭೀರ ಸ್ಥಿತಿಗಳಿಗೆ ಕಾರಣವಾಗುತ್ತವೆ. ಆದ್ದರಿಂದ ಪಶುಪಾಲಕರು ಗಮನಹರಿಬೇಕು ಎಂದರು.

ಟಾಪ್ ನ್ಯೂಸ್

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.