Election ಪ್ರಚಾರದ ವೇಳೆ ಡಾ.ಜಿ.ಪರಮೇಶ್ವರ್ ಅವರ ತಲೆಗೆ ಕಲ್ಲು ಬಿದ್ದು ಗಾಯ
ಜೆಸಿಬಿಯಿಂದ ಹೂವಿನ ಮಳೆ ಸುರಿಸುವಾಗ ಆಕಸ್ಮಿಕವಾಗಿ...
Team Udayavani, Apr 28, 2023, 8:22 PM IST
ಕೊರಟಗೆರೆ:ತಾಲೂಕಿನ ಹೊಳವನಹಳ್ಳಿ ಹೋಬಳಿಯ ಬೈರೇನಹಳ್ಳಿಯಲ್ಲಿ ಚುನಾವಣಾ ಪ್ರಚಾರದ ವೇಳೆ ಜೆಸಿಬಿಯಿಂದ ಕಾರ್ಯಕರ್ತರು ಪುಷ್ಪ ವೃಷ್ಟಿ ಮಾಡುವಾಗ ತಲೆಗೆ ಆಕಸ್ಮಿಕ ವಾಗಿ ತಲೆಗೆ ಕಲ್ಲು ಬಿದ್ದು ಗಾಯಗೊಂಡಿರುವ ಘಟನೆ ನಡೆದಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ಉದಯವಾಣಿ ಪತ್ರಿಕೆಗೆ ಕೊರಟಗೆರೆ ವೃತ್ತ ನಿರೀಕ್ಷಕರಾದ ಸುರೇಶ್.ಕೆ ಮಾತನಾಡಿ ಬೈರೇನಹಳ್ಳಿ ಕ್ರಾಸ್ ಬಳಿ ಚುನಾವಣ ಪ್ರಚಾರದ ವೇಳೆ ಆಭಿಮಾನಿಗಳು ಅವರನ್ನು ಎತ್ತಿ ಕುಣಿಸುವಾಗ ಜೆಸಿಬಿಯಿಂದ ಹೂವಿನ ಮಳೆ ಸುರಿಸುವಾಗ ಆಕಸ್ಮಿಕವಾಗಿ ತಲೆಗೆ ಕಲ್ಲು ಬಿದ್ದು ಗಾಯಗೊಂಡಿದ್ದು ರಕ್ತಸ್ರಾವ ವಾಗಿದೆ. ಕೂಡಲೇ ಸಮೀಪದ ಅಕ್ಕಿರಾಂಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಲಾಗಿದೆ.
ಚುನಾವಣ ಪ್ರಚಾರವನ್ನು ಅರ್ಧಕ್ಕೆ ಮೊಟಕುಗೊಳಿಸಿ ತುಮಕೂರಿನ ಅಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ