ಹಿಂ.ವರ್ಗಕ್ಕೆ ಅನ್ಯಾಯವಾದರೆ ಸಹಿಸಲ್ಲ: ಮಾಜಿ ಸಿಎಂ ಸಿದ್ದು
Team Udayavani, Dec 25, 2022, 12:20 AM IST
ತುಮಕೂರು: ರಾಜಕೀಯ ಅಧಿಕಾರಕ್ಕಾಗಿ ಯಾವುದೇ ಕಾರಣಕ್ಕೂ ಅಂಟಿ ಕೂರುವುದಿಲ್ಲ. ಹಿಂದುಳಿದ ವರ್ಗಗಳಿಗೆ ಮೀಸಲಾತಿಯಲ್ಲಿ ಅನ್ಯಾಯವಾದರೆ ನಾನು ಯಾವ ಕಾರಣಕ್ಕೂ ಸಹಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರಕ್ಕೆ ಎಚ್ಚರಿಕೆ ನೀಡಿದರು.
ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ 102 ಜಾತಿಗಳಿದ್ದು ಎಲ್ಲ ಸಮುದಾಯಕ್ಕೂ ಒಳಮೀಸಲಾತಿ ಕಲ್ಪಿಸಿದರೆ ತಮ್ಮದೇನೂ ತಕರಾರಿಲ್ಲ. ಒಳ ಮೀಸಲಾತಿ ಕೊಟ್ಟರೆ ಸಣ್ಣಪುಟ್ಟ ಸಮುದಾಯಗಳಿಗೂ ನ್ಯಾಯ ಸಿಗಲಿದೆ. ಜನಸಂಖ್ಯೆಗೆ ಅನುಗುಣವಾಗಿ ಎಲ್ಲ ಸಮುದಾಯಗಳಿಗೂ ಮೀಸಲಾತಿ ಕಲ್ಪಿಸಬೇಕು ಎಂದು ಹೇಳಿದರು.
ಮುಖ್ಯಮಂತ್ರಿ ಚಂದ್ರು ಮಾತ ನಾಡಿ, ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಮೀಸಲಾತಿ ವಿಚಾರದಲ್ಲಿ ಹಿಂದೂ ಸಾದರು ಸಮುದಾಯಕ್ಕೆ ಅನ್ಯಾಯ ಮಾಡಿದರು. ಲಿಂಗಾಯತ ಸಾದರಿಗೆ 2-ಎ ಜಾತಿ ಪ್ರಮಾಣ ಪತ್ರ ನೀಡಿ ಅನ್ಯಾಯವೆಸಗಿದರು ಎಂದು ಆರೋಪಿಸಿದರು.
ವಿಧಾನ ಸಭೆ ಮಾಜಿ ಅಧ್ಯಕ್ಷ ರಮೇಶ್ ಕುಮಾರ್ ಮಾತನಾಡಿ, ಅಂಗವಿಕಲರಿಗೆ, ಕಾಲು ತೊಂದರೆ ಇದ್ದವರಿಗೆ ಊರುಗೋಲು ಕೊಡುವುದು ಬಿಟ್ಟು, ಪೈಲ್ವಾನರಿಗೆ ಕೊಡಲು ಹೊರಟಿದ್ದಾರೆ ಎಂದು ಪಂಚಮಸಾಲಿ ಸಮುದಾಯಕ್ಕೆ 2-ಎನಲ್ಲಿ ಮೀಸಲಾತಿ ಕಲ್ಪಿಸುವುದಕ್ಕೆ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ