ಜಿಲ್ಲೆಯಲ್ಲಿ ಒಂಟಿ ಸಲಗ ಸಂಚಾರ


Team Udayavani, Feb 25, 2020, 3:00 AM IST

jilleyalli

ತುಮಕೂರು: ಕಲ್ಪತರು ನಾಡಿನಲ್ಲಿ ಮತ್ತೆ ಕಾಡಾನೆ ಉಪಟಳ ಆರಂಭವಾಗಿದೆ. ಚಿತ್ರದುರ್ಗದ ಕಡೆಯಿಂದ ಬಂದಿರುವ ಒಂಟಿಸಲಗ ಜಿಲ್ಲೆಯಲ್ಲಿ ಸಂಚರಿಸುತ್ತಿರುವುದು ರೈತರ ನಿದ್ದೆಗೆಡಿಸಿದೆ. ಎರಡು ವರ್ಷದ ಹಿಂದೆ ಸಾವನದುರ್ಗ ಅರಣ್ಯ ಪ್ರದೇಶದಿಂದ ನೆಲಮಂಗಲ ಮಾರ್ಗವಾಗಿ ತುಮಕೂರು ತಾಲೂಕಿಗೆ ಪ್ರವೇಶಿಸಿ ರೈತರಿಗೆ ತಲೆ ನೋವಾಗಿತ್ತು.

ಈ ಬಾರಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಅರಣ್ಯ ಪ್ರದೇಶದಿಂದ ಜಿಲ್ಲೆಯ ಬುಕ್ಕಾಪಟ್ಟಣ ಅರಣ್ಯ ಪ್ರದೇಶದ ಮೂಲಕ ಜಿಲ್ಲೆಗೆ ಕಾಲಿಟ್ಟಿರುವ ಒಂಟಿಸಲಗ ಚಿಕ್ಕನಾಯಕನಹಳ್ಳಿ, ತಿಪಟೂರು ಅರಣ್ಯ ಪ್ರದೇಶದ ಮೂಲಕ ಗುಬ್ಬಿ ಭಾಗಕ್ಕೆ ಪ್ರವೇಶಿಸಿದ್ದು, ಬೆಳೆಗಳು ಆನೆ ಪಾಲಾಗುತ್ತಿರುವುದರಿಂದ ಜಿಲ್ಲೆಯ ರೈತರಲ್ಲಿ ಆತಂಕ ಮೂಡಿಸಿದೆ.

ಇಲಾಖೆ ಮುನ್ನೆಚ್ಚರಿಕೆ: ಈ ಹಿಂದೆ ಜಿಲ್ಲೆಗೆ ಪ್ರವೇಶಿಸಿದ್ದ ಕಾಡಾನೆಗಳು ಬೆಳೆ ನಾಶ, ಸಾವು-ನೋವಿಗೆ ಕಾರಣವಾಗಿದ್ದವು. ನಂತರ ಒಂಟಿಸಲಗವೊಂದು ಜಿಲ್ಲೆಯಲ್ಲಿ ಸಂಚರಿಸಿ ರೈತನನ್ನು ಬಲಿ ಪಡೆದಿತ್ತು. ಈ ನಿಟ್ಟಿನಲ್ಲಿ ಕಾಡಾನೆ ಅರಣ್ಯ ಪ್ರದೇಶ ಮತ್ತು ರೈತರ ಜಮೀನುಗಳಲ್ಲಿ ಸಂಚರಿಸುತ್ತಿರುವ ಆನೆ ಜನವಸತಿ ಕಡೆ ನುಗ್ಗದಂತೆ ಅರಣ್ಯ ಇಲಾಖೆ ಮುನ್ನೆಚ್ಚರಿಕೆ ವಹಿಸಿದ್ದು, ಆನೆಯನ್ನು ಕಾಡಿಗಟ್ಟುವ ಕಾರ್ಯ ಪ್ರಗತಿಯಲ್ಲಿದೆ.

ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿ ಆನೆಯ ಚಲನವಲನಗಳ ಬಗ್ಗೆ ನಿಗಾವಹಿಸಿ ಸಾರ್ವಜನಿಕರ ಸಹಕಾರದೊಂದಿಗೆ ಆನೆ ಓಡಿಸಲು ಕಾರ್ಯೋನ್ಮುಖರಾಗಿದ್ದಾರೆ. ಕಾರ್ಯಾಚರಣೆ ವೇಳೆ ಸಾರ್ವಜನಿಕರು ಆನೆಗಳ ಮೇಲೆ ಕಲ್ಲು ಎಸೆಯುವುದು ಪಟಾಕಿ ಸಿಡಿಸುವುದು ಮತ್ತು ಓಡಿಸುವ ಪ್ರಯತ್ನ ಮಾಡಬಾರದು.

ಆನೆ ತೋಟಗಳಲ್ಲಿ ರಾತ್ರಿ ವೇಳೆಆಹಾರ ಸೇವಿಸಿ ಮತ್ತೆ ಮುಂದೆ ಸಾಗುತ್ತಿದೆ. ಗುಬ್ಬಿ ಅರಣ್ಯದಲ್ಲಿರುವ ಕಾಡಾನೆ ಕುಣಿಗಲ್‌ ಅರಣ್ಯಪ್ರದೇಶದ ಮಾರ್ಗವಾಗಿ ಸಾವನದುರ್ಗ, ಬನ್ನೇರುಘಟ್ಟ ಅರಣ್ಯಪ್ರದೇಶ‌ದ ಕಡೆ ಹೋಗಬಹುದೆಂದು ಎಂದು ಅರಣ್ಯಾಧಿಕಾರಿ ತಿಳಿಸಿದ್ದಾರೆ.

ಕಾಡಿಗಟ್ಟಲು ಕಾರ್ಯಾಚರಣೆ: ತುಮಕೂರು ಆನೆಗಳ ಕಾರಿಡಾರ್‌ ಆಗಿದ್ದು, ಆಗಿಂದಾಗ್ಗೆ ಜಿಲ್ಲೆಯಲ್ಲಿ ಆನೆಗಳು ಸಂಚರಿಸುತ್ತವೆ. ಬನ್ನೇರುಘಟ್ಟ, ಸಾವನದುರ್ಗ ಮಾರ್ಗದಿಂದ ಪ್ರತಿವರ್ಷ ಆನೆಗಳ ಹಿಂಡೇ ಬರುತ್ತಿದ್ದವು. ಕಳೆದ 2 ವರ್ಷದಿಂದ ಉಪಟಳವಿರಲಿಲ್ಲ. ಈಗ ಬಂದಿರುವ ಒಂಟಿ ಸಲಗ ಉತ್ತರ ಕರ್ನಾಟಕ ಭಾಗದಿಂದ ಚಿತ್ರದುರ್ಗದ ಮಾರ್ಗವಾಗಿ ಜಿಲ್ಲೆ ಪ್ರವೇಶಿಸಿದೆ.

ಗುಬ್ಬಿ ತಾಲೂಕಿನ ಅರಕಲದೇವಿಗುಡ್ಡದಲ್ಲಿ ಬೀಡು ಬಿಟ್ಟಿದ್ದು, ಮುಂದೆ ತುಮಕೂರು, ಕುಣಿಗಲ್‌, ಸಾವನದುರ್ಗ, ಬನ್ನೇರುಘಟ್ಟ, ಚಿಕ್ಕಮಗಳೂರು, ಮೂಡಿಗೆರೆ ಹೋಗಬಹುದು. ಒಂಟಿಸಲಗವಾದ್ದರಿಂದ ಗಾಬರಿಪಡಿಸಬಾರದು. ಅದನ್ನು ಅರಣ್ಯದ ಕಡೆ ಅಟ್ಟಲು ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಚುಕ್ಕನಾಯಕನಹಳ್ಳಿ, ತಿಪಟೂರು ಹಾಗೂ ತಾಲೂಕಿನ ಗಡಿ ಪ್ರದೇಶದಲ್ಲಿ ಒಂಟಿ ಕಾಡಾನೆ ಕಾಣಿಸಿಕೊಂಡು ಜನರಲ್ಲಿ ಭೀತಿ ಹುಟ್ಟಿಸಿದೆ. ಗುಬ್ಬಿಯಿಂದ ತುಮಕೂರು ನಂತರ ಕುಣಿಗಲ್‌ ತಾಲೂಕಿಗೆ ನುಗ್ಗುವ ಸಾಧ್ಯತೆ ಇರುವುದರಿಂದ ಮುಸ್ಸಂಜೆ ಮತ್ತು ಬೆಳಗ್ಗೆ ಸಮಯದಲ್ಲಿ ಹೊಲ, ಗದ್ದೆ, ತೋಟಗಳಿಗೆ ರೈತರು ಹೋಗಬಾರದು. ಜಾಗೃತೆಯಿಂದ ಇರಬೇಕು. ಇಲಾಖೆಯಿಂದ ಕಾಡಾನೆ ಹಿಮ್ಮೆಟ್ಟಿಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ.
-ಎಚ್‌.ಸಿ.ಗಿರೀಶ್‌, ಉಪ ಅರಣ್ಯ ಸಂರಕ್ಷಣಾಧಿಕಾರಿ

* ಚಿ.ನಿ ಪುರುಷೋತ್ತಮ್‌

ಟಾಪ್ ನ್ಯೂಸ್

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

12-review

Movie Review: ಒಂದು ಸರಳ ಪ್ರೇಮ ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.