ಜಿಲ್ಲೆಯ ಕೃಷಿ, ನೀರಾವರಿ ಯೋಜನೆಗೆ ಒತ್ತು
Team Udayavani, Feb 9, 2019, 10:51 AM IST
ವಿಜಯಪುರ: ನಗರದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಮೃತಪಟ್ಟು, ಓರ್ವ ಬಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ.
ಬರಟಗಿ ತಾಂಡಾ ಬಳಿ ಟಂಟಂ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಟಂಟಂ ವಾಹನ ಚಾಲಕ ಸೇರಿ ಆತನ ಕುಟುಂಬದ ಐವರು ಮೃತಪಟ್ಟಿದ್ದಾರೆ. ಮೃತರನ್ನು ಬಸವನಬಾಗೇವಾಡಿ ತಾಲೂಕಿನ ಡೋಣೂರು ಗ್ರಾಮದ ಅರವಿಂದ ಅಗಸರ (35), ಪತ್ನಿ ಸುನಿತಾ (30), 3 ಹಾಗೂ 4 ವರ್ಷದ ಇಬ್ಬರು ಮಕ್ಕಳು, ಅರವಿಂದನ 50 ವರ್ಷದ ಅತ್ತೆ ಎಂದು ಗುರುತಿಸಲಾಗಿದ್ದು ಹೆಸರು ತಿಳಿದು ಬಂದಿಲ್ಲ. ಘಟನೆಯಲ್ಲಿ ಇನ್ನೊಬ್ಬ ಬಾಲಕನಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು ನಗರದ ಬಿಎಲ್ಡಿಇ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಜಯಪುರ ಗ್ರಾಮಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್ 500 ಕೋಟಿ ರೂ. ಖರ್ಚು’
Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ
2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ
UPSC Result: ವಿಜಯಪುರದ ವಿಜೇತಾಗೆ ಯುಪಿಎಸ್ಸಿಯಲ್ಲಿ 100ನೇ ರ್ಯಾಂಕ್