ಕೆಎಸ್ಆರ್ಟಿಸಿ ನೌಕರರ ಸಂಘದಿಂದ ಪ್ರತಿಭಟನೆ
Team Udayavani, Nov 22, 2019, 5:11 PM IST
ತುಮಕೂರು: ತೆಲಂಗಾಣದಲ್ಲಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಬೆಂಬಲಿಸಿ ರಾಜ್ಯ ಕೆಎಸ್ಆರ್ಟಿಸಿ ನೌಕರರ ಸಂಘದ ಪದಾಧಿಕಾರಿಗಳು ಸಿಐಟಿಯು ನೇತೃತ್ವದಲ್ಲಿ ನಗರದ ಕೆಎಸ್ ಆರ್ಟಿಸಿ ಬಸ್ ನಿಲ್ದಾಣದ ಮುಂದೆ ಗುರುವಾರ ಪ್ರತಿಭಟನೆ ನಡೆಸಿದರು.
ತೆಲಂಗಾಣ ಸಾರಿಗೆ ನೌಕರರು ಕಳೆದ 45 ದಿನದಿಂದ ಮುಷ್ಕರ ನಡೆಸುತ್ತಿದ್ದಾರೆ. 2017ರ ಏಪ್ರಿಲ್ನಲ್ಲಿ ಆಗಿರುವ ವೇತನ ಒಪ್ಪಂದ ಜಾರಿ ಆಗಬೇಕು. ಖಾಸಗೀಕರಣ ಕೈಬಿಡಬೇಕು ಎಂದು ಒತ್ತಾಯಿಸುತ್ತಿದ್ದರೂ ತೆಲಂಗಾಣ ಸರ್ಕಾರ ಟೆಂಡರ್ ಕರೆದು ಶೇ.30 ಹುದ್ದೆಖಾಸಗೀಕರಣಗೊಳಿಸಲು ಹೊರಟಿರುವುದು ಸರಿಯಲ್ಲ ಎಂದು ಕೆಎಸ್ಆರ್ಟಿಸಿ ನೌಕರರ ಸಂಘ ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಎಸ್. ಮಂಜುನಾಥ್ ಆಗ್ರಹಿಸಿದರು.
ಈಗಾಗಲೇ ಶೇ.20ರಷ್ಟು ನೌಕರರನ್ನು ಗುತ್ತಿಗೆ ಆಧಾರದಲ್ಲಿ ದುಡಿಸಿಕೊಳ್ಳುತ್ತಿದ್ದಾರೆ. ಸರ್ಕಾರ ಖಾಸಗೀಕರಣಕ್ಕೆ ಒತ್ತು ನೀಡಿದರೆ ಅರ್ಧದಷ್ಟು ನೌಕರರು ಸಾಮಾಜಿಕ ಭದ್ರತೆ ಇಲ್ಲದೆ ಕೆಲಸ ಮಾಡಬೇಕಾದ ಪರಿಸ್ಥಿತಿ ಉದ್ಭವಿಸುತ್ತದೆ.ಹೀಗಾಗಿ ಖಾಸಗೀಕರಣ ಮಾಡ ಬಾರದು. ಮುಖ್ಯಮಂತ್ರಿ ಚಂದ್ರಶೇಖರ ರಾವ್ ಸಾರಿಗೆ ನೌಕರರ ಸಂಘಟನೆಗಳ ಮುಖಂಡರ ಕರೆಸಿ ಮಾತುಕತೆ ಮಾಡ ಬೇಕು. ಆದರೆ ತೆಲಂಗಾಣ ಸರ್ಕಾರ ಸರ್ವಾಧಿಕಾರಿಯಂತೆ ವರ್ತಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬರ ಹಕ್ಕು. ಅದರಂತೆ ಬೇಡಿಕೆ ಈಡೇರಿಕೆಗಾಗಿ ಅಲ್ಲಿ ಸಾರಿಗೆ ನೌಕರರು ಪ್ರತಿಭಟನೆ ನಡೆಸುತ್ತಿರುವುದು ನ್ಯಾಯೋ ಚಿತವಾಗಿದೆ. ಅವರ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಬೇಕು ಎಂದು ಒತ್ತಾಯಿಸಿದರು. ಕೆಎಸ್ಆರ್ಟಿಸಿ ನೌಕರರ ಸಂಘದ ಜಿಲ್ಲಾಧ್ಯಕ್ಷ ದೇವರಾಜ್, ಕರ್ನಾಟಕ ಪ್ರಾಂತ ರೈತ ಸಂಘದ ಸಂಚಾಲಕ ಸಿ.ಅಜ್ಜಪ್ಪ, ಸಿಪಿಎಂ ನಗರ ಕಾರ್ಯದರ್ಶಿ ಎಸ್.ರಾಘವೇಂದ್ರ, ಸಿಐಟಿಯು ಕಾರ್ಯದರ್ಶಿ ಎನ್. ಕೆ.ಸುಬ್ರಹ್ಮಣ್ಯ, ಕಮ್ಮಾರ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ