ಅರಣ್ಯೀಕರಣದಿಂದ ಪರಿಸರ ಸಮತೋಲನ

ವಿಭಾಗೀಯ ನಿಯಂತ್ರಣಾಧಿಕಾರಿ ಗಜೇಂದ್ರ ಕುಮಾರ್‌ ಅಭಿಪ್ರಾಯ • ಪರಿಸರ ದಿನಾಚರಣೆ

Team Udayavani, Jun 7, 2019, 8:29 AM IST

tk-tdy-2..

ತುಮಕೂರು: ಪರಿಸರದ ಅಸಮತೋಲನದಿಂದ ಉಂಟಾಗುತ್ತಿರುವ ಪ್ರಾಕೃತಿಕ ವಿಕೋಪಗಳಿಗೆ ನಾವೆಲ್ಲರೂ ಕಾರಣರಾಗಿದ್ದು, ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ಅರಣ್ಯೀಕರಣ ಕಾರ್ಯಕ್ರಮ ವ್ಯಾಪಕವಾಗಿ ನಡೆಯಬೇಕೆಂದು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಗಜೇಂದ್ರ ಕುಮಾರ್‌ ತಿಳಿಸಿದರು.

ನಗರದ ಸಿರಾಗೇಟ್‌ನಲ್ಲಿರುವ ಕೆಎಸ್‌ಆರ್‌ಟಿಸಿ ಘಟಕ ಎರಡರಲ್ಲಿ ಹಮ್ಮಿಕೊಂಡಿದ್ದ ಪರಿಸರ ದಿನಾ ಚರಣೆ ಅಂಗವಾಗಿ ಘಟಕದ ಆವರಣದಲ್ಲಿ ನೇರಳೆ, ಹೊಂಗೆ, ಬೇವು ಹಾಗೂ ಮಾವಿನ ಗಿಡಗಳನ್ನು ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಘಟಕದಲ್ಲಿ ಉತ್ಪತಿಯಾಗುವ ತ್ಯಾಜ್ಯ ವಸ್ತು ಗಳನ್ನು ಪ್ರತ್ಯೇಕಿಸುವುದರಿಂದ ಪರಿಸರ ಮಾಲಿನ್ಯ ತಡೆಯಬಹುದಾಗಿದೆ.

ಘಟಕದಲ್ಲಿ ಉತ್ಪತಿಯಾಗುವ ಪ್ಲಾಸ್ಟಿಕ್‌ ತ್ಯಾಜ್ಯ, ವೇಸ್ಟ್‌ ಆಯಿಲ್ ಮನಬಂದಂತೆ ಎಸೆಯದೆ ಒಂದೆಡೆ ಹಾಕಿ, ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿ ನಿಗಾವಹಿಸ ಬೇಕಾಗಿದೆ ಎಂದು ಹೇಳಿದರು.

ಘಟಕದ ಹಿರಿಯ ಅಧಿಕಾರಿ ಮಂಜುನಾಥ್‌ ಮಾತನಾಡಿ, ಮನುಷ್ಯನ ದುರಾಸೆ ಫ‌ಲವಾಗಿ ಉಂಟಾ ಗಿರುವ ಪರಿಸರ ಮಾಲಿನ್ಯದಿಂದ ಭೂಮಿ ಮೇಲೆ ನೀರಿದ್ದರೂ ಬಾಟಲಿ ನೀರು ಕುಡಿಯುವ ಸ್ಥಿತಿಗೆ ಬಂದಿದ್ದೇವೆ. ಮುಂದಿನ ದಿನಗಳಲ್ಲಿ ಗಾಳಿಯನ್ನು ಸಿಲಿಂಡರ್‌ ಮೂಲಕ ಬಳಸುವ ಕಾಲ ದೂರವಿಲ್ಲ ಎಂದು ಎಚ್ಚರಿಕೆ ನೀಡಿದರು.

ಘಟಕದ ವ್ಯವಸ್ಥಾಪಕ ಎಸ್‌.ಆರ್‌.ಸಂತೋಷ್‌ ಮಾತನಾಡಿ, ವಿಶ್ವಸಂಸ್ಥೆಯು ಪ್ರತಿ ವರ್ಷ ಹೊಸ ಘೋಷವಾಕ್ಯದೊಂದಿಗೆ ಪರಿಸರ ರಕ್ಷಣೆಗೆ ಪ್ರೇರೇಪಿ ಸುತ್ತಿದೆ. ಈ ವರ್ಷ ಮಾಲಿನ್ಯಮುಕ್ತ ವಾಯು ಎಂಬ ಘೋಷವಾಕ್ಯವಿದ್ದು, ಇದರಲ್ಲಿ ಸಾರಿಗೆ ಸಂಸ್ಥೆಯ ಜವಾಬ್ದಾರಿ ಹೆಚ್ಚಿದೆ. ನಮ್ಮ ಬಸ್‌ಗಳು ಹೆಚ್ಚಿನ ಹೊಗೆ ಉಗುಳದಂತೆ ಸುಸ್ಥಿತಿಯಲ್ಲಿ ನೋಡಿಕೊಳ್ಳಬೇಕಾದ ಜವಾಬ್ದಾರಿ ನಮ್ಮ ಮೇಲಿದೆ ಎಂದರು.

ಕನ್ನಡ ಕ್ರಿಯಾ ಸಮಿತಿ ಅಧ್ಯಕ್ಷ ಹಾಗೂ ಸಾಹಿತಿ ವಿ.ಡಿ.ಹನುಮಂತರಾಯಪ್ಪ ಮಾತನಾಡಿ, ಕಾಡಿ ನಲ್ಲಿರಬೇಕಾದ ಜೀವ ಸಂಕುಲಗಳು ಆಹಾರ ನೀರು ಅರಸಿ ನಾಡಿಗೆ ಬರುವಂತಾಗಿದೆ. ಇದೇ ರೀತಿಯ ದೌರ್ಜನ್ಯ ಮುಂದುವರೆದಲ್ಲಿ ಮುಂದಿನ ಪೀಳಿಗೆಗೆ ಉಳಿಗಾಲವಿಲ್ಲದಂತಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ವಿಭಾಗದ ಅಧಿಕಾರಿಗಳಾದ ನಾಗರಾಜು, ಬಸವರಾಜು, ಮಹೇಶ್‌, ಲಕ್ಷ್ಮೀಪತಿ, ಹಂಸವೀಣಾ, ಕನ್ನಡ ಕ್ರಿಯಾ ಸಮಿತಿ ಉಪಾಧ್ಯಕ್ಷ ರಾಜಶೇಖರ್‌ ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು.

ಅಭಿವೃದ್ಧಿ ಹೆಸರಲ್ಲಿ ಹಾಗೂ ವೈಯಕ್ತಿಕ ಲಾಭಕ್ಕಾಗಿ ನಡೆಯುತ್ತಿರುವ ಮರಗಳ ಮಾರಣ ಹೋಮ ನಿಂತು, ಪ್ರತಿಯೊಬ್ಬರಲ್ಲೂ ಗಿಡಮರ ಬೆಳೆಸುವ ಮನೋಭಾವ ಮೂಡಿದಾಗ ಮಾತ್ರ ಪರಿಸರ ಸಂರಕ್ಷಣೆ ಆಗಲಿದೆ ಎಂದು ಕೆಂಕೆರೆ ಗ್ರಾಪಂ ಅಧ್ಯಕ್ಷ ಆಶಾಉಮೇಶ್‌ ಅಭಿಪ್ರಾಯಪಟ್ಟರು.

ಕೆಂಕೆರೆ ಗ್ರಾಮ ಪಂಚಾಯಿತಿ, ಚಿಕ್ಕನಾಯಕನಹಳ್ಳಿ ತಾಲೂಕು ಕಾನೂನು ಸೇವಾ ಪ್ರಾಧಿಕಾರ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಕೆಂಕೆರೆ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಸಾಲು ಮರದ ತಿಮ್ಮಕ್ಕ ಇಕೋ ಕ್ಲಬ್‌ ವತಿಯಿಂದ ಪರಿಸರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಗಿಡ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ವಕೀಲರಾದ ಕೆ.ಆರ್‌.ಚನ್ನಬಸವಯ್ಯ ಮಾತನಾಡಿ, ವಾತಾವರಣದ ಸಮತೋಲನ ಕಾಪಾಡುವಲ್ಲಿ ಗಿಡ ಮರಗಳು ಪ್ರಮುಖ ಪಾತ್ರವಹಿಸುತ್ತವೆ. ಹಾಗಾಗಿ ಎಲ್ಲರೂ ಗಿಡ ಮರ ರಕ್ಷಣೆಗೆ ಯತ್ನಿಸಬೇಕು. ಸರ್ಕಾರ ಹಸಿರು ಹೊನ್ನು ಮತ್ತು ಕೃಷಿ ಅರಣ್ಯ ಯೋಜನೆಯಡಿ ಗಿಡಗಳನ್ನು ನೀಡುತ್ತಿದ್ದು, ಕೃಷಿಕರು ಸಸಿ ಪಡೆದು ಕೃಷಿ ಭೂಮಿಯ ಅಂಚಿನಲ್ಲಿ ಬೆಳೆಸಿ, ಲಾಭಗಳಿಸುವ ಜತೆಗೆ ಪರಿಸರ ಸಂರಕ್ಷಣೆಯ ಕೊಡುಗೆ ನೀಡಬೇಕು ಎಂದರು. ವಕೀಲರಾದ ಕೆ.ಸಿ.ವಿಶ್ವನಾಥ್‌ ಮಾತನಾಡಿ, ಗಿಡ ಮರ ಬೆಳೆಸುವ, ಪರಿಸರ ಉಳಿಸುವ,ವನ್ಯಪ್ರಾಣಿಗಳ ಸಂರಕ್ಷಿಸುವ ನಿಟ್ಟಿನಲ್ಲಿ ಜೀವನವಿಡಿ ಹೋರಾಟ ನಡೆಸಿರುವ ಮೇಧಾ ಪಾಟ್ಕರ್‌, ಪಾಂಡುರಂಗ ಹೆಗಡೆ, ಸಾಲುಮರದ ತಿಮ್ಮಕ್ಕ ಅವರ ಸಾಧನೆ ನಮಗೆ ಆದರ್ಶವಾಗಿದ್ದು, ಅವರ ದಾರಿಯಲ್ಲಿ ನಡೆದು ಪರಿಸರ ಉಳಿಸುವ ಕೆಲಸ ಕೈಗೊಳ್ಳಬೇಕಿದೆ ಎಂದು ಹೇಳಿದರು.

ಗ್ರಾಪಂ ಪಿಡಿಒ ತೇಜಸ್ವಿ, ಶಿಕ್ಷಕರಾದ ಕಾಂತರಾಜು, ಜಯಣ್ಣ, ತಮ್ಮಯ್ಯ, ಕುಮಾರ್‌, ಸೇರಿದಂತೆ ಶಾಲಾ ಆಡಳಿತ ಮಂಡಳಿ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು, ಸಿಬ್ಬಂದಿ ಹಾಜರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.