ತಿಪಟೂರಿಗೆ ಎತ್ತಿನಹೊಳೆ ನೀರು ಹರಿಸಿ
Team Udayavani, Jun 10, 2020, 7:08 AM IST
ತಿಪಟೂರು: ಎತ್ತಿನಹೊಳೆ ಯೋಜನೆಯಿಂದ ತಿಪಟೂರು ತಾಲೂಕಿಗೆ ನೀರು, ಸಂತ್ರಸ್ತರಿಗೆ ನ್ಯಾಯಯುತ ಭೂ ಪರಿಹಾರ ಮತ್ತು ಇತರೆ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎತ್ತಿನ ಹೊಳೆ ಹೋರಾಟ ಸಮಿತಿ ಮುಖಂಡರು ಉಪ ವಿಭಾಗಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಸಮಿತಿ ಹೋರಾಟಗಾರರು ಮಾತನಾಡಿ, ಎತ್ತಿನಹೊಳೆ ಯೋಜನೆ ತಿಪಟೂರಿನಲ್ಲಿ ಹಾದು ಹೋಗಿದ್ದು, ಸಾವಿರಾರು ರೂ. ಎಕರೆ ಭೂಮಿ ಸ್ವಾಧೀನ ಪಡಿಸಿಕೊಂಡಿದ್ದಾರೆ. ಆದರೆ ಈ ಭಾಗದ ರೈತರಿಗೆ ನೀರು ಕೊಡುವುದಿಲ್ಲವೆಂದರೆ ಯಾವ ನ್ಯಾಯ? ಭೂ ಪರಿಹಾರಕ್ಕೆ ಸಂಬಂಧಪಟ್ಟಂತೆ ರೈತರ ಆತಂಕವನ್ನು ನಿವಾರಿಸುವ ದಿಕ್ಕಿನಲ್ಲಿ ಯಾವ ಪ್ರಯತ್ನವೂ ಅಧಿಕಾರಿಗಳಿಂದ ಅಥವಾ ಜಿಲ್ಲಾಡಳಿತದಿಂದ ನಡೆದಿಲ್ಲ ಎಂದು ಆರೋಪಿಸಿದರು.
ಯೋಜನೆಯಲ್ಲಿ ಭೂಮಿ ಕಳೆದುಕೊಳ್ಳುವ ಮತ್ತು ಬರ ಹಾಗೂ ಅಂತರ್ಜಲ ಕೊರತೆಯಿಂದ ನರಳು ತ್ತಿರುವ ತಿಪಟೂರು, ಗುಬ್ಬಿ, ಚಿಕ್ಕನಾಯಕನಹಳ್ಳಿ ತಾಲೂಕು ಗಳಿಗೆ ಅಗತ್ಯ ಪ್ರಮಾಣದ ನೀರನ್ನೂ ಹಂಚಿಕೆ ಮಾಡದೇ ವಂಚನೆ ಮಾಡಲಾಗಿದೆ ಎಂದು ದೂರಿದರು. ಕಳೆದ 2 ತಿಂಗಳಿಂದ ಲಾಕ್ಡೌನ್ನಿಂದಾಗಿ ಇಡೀ ಜಿಲ್ಲೆಯ ರೈತರ ಸಮುದಾಯ ಸಾಕಷ್ಟು ನಷ್ಟಕ್ಕೆ ಗುರಿ ಯಾಗಿದ್ದು, ಅವರ ಸಮಸ್ಯೆಯನ್ನು ಸರ್ಕಾರ ಪರಿಹರಿ ಸಿಲ್ಲ.
ತರಾತುರಿಯಲ್ಲಿ ಯೋಜನೆ ಮುಗಿಸಲು ಸರ್ಕಾರ ಜಮೀನು ಕಳೆದುಕೊಳ್ಳುವ ಸಂತ್ರಸ್ತರ ಸಮಸ್ಯೆಗಳನ್ನು ಮಾತ್ರ ಕೇಳುತ್ತಿಲ್ಲ ಎಂದರು. ರೈತರಿಗೆ ಸಂಪೂರ್ಣ ಪರಿಹಾರ ಸಂದಾಯವಾದ ನಂತರವಷ್ಟೇ ಕಾಮಗಾರಿ ಆರಂಭಿಸಬೇಕು ಎಂದು ಒತ್ತಾಯಿಸಿದರು. ಸಮಿತಿ ಅಧ್ಯಕ್ಷ ದೇವರಾಜು ತಿಮ್ಲಾಪುರ, ಕಾರ್ಯದರ್ಶಿ ಎಸ್.ಎನ್.ಸ್ವಾಮಿ, ಉಪಾಧ್ಯಕ್ಷ ಬಿ.ಬಿ.ಸಿದ್ದಲಿಂಗಮೂರ್ತಿ, ಸಹ ಕಾರ್ಯ ದರ್ಶಿಗಳಾದ ಲೋಕೇಶ್, ಮನೋಹರ್ ಪಟೇಲ್, ಆರ್.ಡಿ. ಯೋಗಾನಂದಸ್ವಾಮಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ
Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!
Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು
ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್ ಹೆಗಡೆಗೆ ಟಿಕೆಟ್ ತಪ್ಪಿದೆ: ಸೋಮಣ್ಣ
MUST WATCH
ಹೊಸ ಸೇರ್ಪಡೆ
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್