ಭಾರೀ ಮಳೆಗೆ ಅಪಾರ ಬೆಳೆ ನಷ್ಟ
Team Udayavani, Oct 18, 2021, 3:49 PM IST
Representative Image used
ಪಾವಗಡ: ತಾಲೂಕಾದ್ಯಂತ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ಕಸಬಾ ಹೋಬಳಿ ನಲಿಗಾನಹಳ್ಳಿ ಗ್ರಾಪಂ ವ್ಯಾಪ್ತಿಯ ಕುರುಬರಹಳ್ಳಿ ಗ್ರಾಮದ ಸರ್ವೆ ನಂಬರ್ 72/2ರ ನರಸಿಂಹರೆಡ್ಡಿ ಎಂಬ ರೈತನಿಗೆ ಸೇರಿದ 2.20 ಎಕರೆ ನೀರಾವರಿ ಜಮೀನಿನಲ್ಲಿ ಶೇಂಗಾ, ದಾಳಿಂಬೆ ಹಾಗೂ ಜಮೀನು ಸುತ್ತ ಹಾಕಿದ ತಂತಿಬೇಲಿ ಮಳೆಗೆ ಕೊಚ್ಚಿ ಹೋಗಿದ್ದು, 4 ಲಕ್ಷ ರೂ. ನಷ್ಟ ಉಂಟಾಗಿದೆ.
ರೈತ ನರಸಿಂಹ ರೆಡ್ಡಿ ಸಾಲ ಮಾಡಿ ಶೇಂಗಾ ಬಿತ್ತನೆ ಮಾಡಿದ್ದು, ಮಳೆ ಯಿಂದ ಎಲ್ಲ ಕೊಚ್ಚಿ ಹೋಗಿದೆ. ಮಳೆಯಿಂದ ಆದ ಅನಾಹುತಕ್ಕೆ ರೈತ ಕುಟುಂಬಕ್ಕೆ ಕಣ್ಣಿರು ಸುರಿಸುತ್ತಿದೆ. ಸ್ಥಳಕ್ಕೆ ಭೇಟಿ ನೀಡಿದ ರಾಜ್ಯ ರೈತ ಸಂಘದ ತಾಲೂಕು ಘಟಕದ ಅಧ್ಯಕ್ಷ ಪೂಜಾರಪ್ಪ ಮಾತನಾಡಿ, ಕಳೆದ ಒಂದು ವಾರದಿಂದ ಸುರಿದ ಮಳೆಗೆ ರೈತರು ಬೆಳೆದಂತಹ ಬೆಳೆ ಸಂಪೂರ್ಣ ನೆಲ ಕಚ್ಚಿ ಹೋಗಿದೆ. ಶೇಂಗಾ ಗಿಡ ಕಿತ್ತು ಒಣಗಿಸುವ ಉದ್ದೇಶದಿಂದ ಹೊಲದಲ್ಲಿಯೇ ಬಿಡಲಾ ಗಿತ್ತು.
ಈ ಹಂತದಲ್ಲಿ ಸುರಿದ ಮಳೆಯಿಂದ ಎಲ್ಲ ಶೇಂಗಾ ಗಿಡ ಕೊಚ್ಚಿ ಹೋಗಿ ಕೆರೆಯ ಪಾಲಾಗಿವೆ. ರೈತ ನರಸಿಂಹ ರೆಡ್ಡಿಗೆ ಸರ್ಕಾರದಿಂದ ಪರಿಹಾರವನ್ನು ನೀಡಬೇಕು ಎಂದು ಮನವಿ ಮಾಡಿದರು. ಕಂದಾಯ ಇಲಾಖೆ ಅಧಿಕಾರಿ ತಿಪ್ಪೇಸ್ವಾಮಿ ಮಾತನಾಡಿ, ಕುರುಬರಹಳ್ಳಿ ಗ್ರಾಮದ ರೈತ ನರಸಿಂಹರೆಡ್ಡಿ ಅವರು,ತಮ್ಮ ಜಮೀನಿನಲ್ಲಿ ಬೆಳೆದ ಶೇಂಗಾ ಸಂಪೂರ್ಣ ಕೊಚ್ಚಿ ಹೋಗಿದೆ.
ನಾಟಿ ಮಾಡಿರುವ ದಾಳಿಂಬೆ ಗಿಡಗಳು ಮತ್ತು ತಂತಿಬೇಲಿ ಮಳೆಯಿಂದ ಹಾನಿಯಾಗಿದ್ದು, ಈ ವಿಷಯವನ್ನು ಮೇಲಿನ ಅಧಿಕಾರಿಗಳಿಗೆ ವರದಿ ಮಾಡಿ ಸೂಕ್ತ ಪರಿಹಾರ ನೀಡವುದಕ್ಕೆ ಪ್ರಯತ್ನ ಮಾಡುವುದಾಗಿ ತಿಳಿಸಿದರು. ಹಸಿರು ಸೇನೆಯ ಉಪಾಧ್ಯಕ್ಷ ನಾರಾಯಣಪ್ಪ, ಕಾರ್ಯದರ್ಶಿ ಶಿವರಾಜ್, ಸದಸ್ಯ ಬ್ಯಾಡನೂರು ಶಿವ ರುದ್ರಪ್ಪ, ಶನಿವಾರಪ್ಪ, ಪೂಜಾರಿ ಚಿತ್ತಯ್ಯ, ಸಿ.ಕೆ.ಪುರ ನರಸಣ್ಣ, ಅನ್ನಪೂರ್ಣಮ್ಮ, ಹನುಮ ಸಾಗರದ ಹುಲಿ ಯಪ್ಪ, ದೊಡ್ಡಣ್ಣ, ರಾಮಚಂದ್ರಪ್ಪ ಹಾಗೂ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು
ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್ ಕಾರ್ಯಕರ್ತೆಯರು
2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ
LS Polls: ಮಂಜುನಾಥನಿಗೂ ನನಗೂ ವಯಕ್ತಿಕ ಗಲಾಟೆ, ರಾಜಕೀಯವಲ್ಲ: ಬೋರೇಗೌಡ
Congress vs BJP+JDS :ಅಂಚೆಪಾಳ್ಯ, ನಡೆಮಾವಿನಪುರ ಘಟನೆಗೆ ಹೊಸ ತಿರುವು!!
MUST WATCH
ಹೊಸ ಸೇರ್ಪಡೆ
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ