Tumkur; ಕಾಂಗ್ರೆಸ್ ಸರ್ಕಾರ ಪತನದ ಬಿಜೆಪಿಯವರ ಹಗಲು ಕನಸು : ಡಾ.ಜಿ.ಪರಮೇಶ್ವರ್


Team Udayavani, Jan 26, 2024, 3:27 PM IST

ಡಾ.ಜಿ.ಪರಮೇಶ್ವರ್

ತುಮಕೂರು: ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ ಎಂಬುದು ಬಿಜೆಪಿಯ ಹಗಲುಗನಸು. ಇದಕ್ಕೆ ಜೆಡಿಎಸ್ ಕೂಡ ಹೊರತಾಗಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಟೀಕಿಸಿದರು.

ತುಮಕೂರು ನಗರದಲ್ಲಿ ಗಣರಾಜ್ಯೋತ್ಸವ ಆಚರಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಬಿಜೆಪಿಗೆ ಹೋಗಿದ್ದಾರೆ, ಹೋಗಲಿ. ಅವರನ್ನು ನಮ್ಮ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವಾಗ ಅದ್ದೂರಿಯಾಗಿ ಸ್ವಾಗತ ಬಯಸಿದ್ದೆವು. ನನ್ನನ್ನು ಸರಿಯಾಗಿ ಬಿಜೆಪಿಯವರು ನಡೆಸಿಕೊಂಡಿಲ್ಲ ಅಂತೆಲ್ಲಾ ಹೇಳಿ ಪಕ್ಷಕ್ಕೆ ಬಂದಿದ್ದರು. ಪಕ್ಷಕ್ಕೆ ಅವರು ಬಂದ ಬಳಿಕ ಕಾಂಗ್ರೆಸ್ ನಲ್ಲಿ ಅವರಿಗೆ ಗೌರವಯುತವಾಗಿ ನಡೆಸಿಕೊಂಡಿದ್ದೆವು. ವಿಧಾನಸಭಾ ಚುನಾವಣೆಯಲ್ಲಿ ಅವರಿಗೆ ಅವಕಾಶ ಕಲ್ಪಿಸಿದೆವು. ಮುಖ್ಯಮಂತ್ರಿಯಾಗಿದ್ದವರು ಸೋಲಬಾರದು ಆದರೂ ಸೋತರು.‌ ಇದು ಅವರಿಗೆ ಜನಬೆಂಬಲ‌ ಇಲ್ಲ ಎನ್ನುವುದು ಗೊತ್ತಾಗುತ್ತದೆ. ಆದರೂ ಅವರು ಮುಖ್ಯಮಂತ್ರಿಯಾಗಿದ್ದವರು ಎಂದು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿದ್ದವು. ಆದರೆ ಬಿಜೆಪಿಯನ್ನು ಬೈದವರು ಮತ್ತೆ ವಾಪಸು ಹೋಗಿದ್ದಾರೆ ಎಂದರೆ ಯಾಕೆ ಹೋಗಿದ್ದಾರೆ ಎಂದು ಗೊತ್ತಿಲ್ಲ. ಇದರ ಹಿಂದಿನ ಮರ್ಮ, ಒತ್ತಡದ ಗುಟ್ಟು ಗೊತ್ತಿಲ್ಲ ಎಂದರು.

ಜಗದೀಶ್ ಶೆಟ್ಟರ್ ಹೋಗಿರುವುದಕ್ಕೆ ಟೀಕೆ ಟಿಪ್ಪಣಿ ಮಾಡಲ್ಲ. ನಮಗೆ ಲಾಭನೂ ಇಲ್ಲ‌. ನಷ್ಟ ಇಲ್ಲ‌. ಅವರನ್ನು ಲಾಭ ಆಗುತ್ತದೆ ಅಂತಾನೆ ಕರೆಸಿಕೊಂಡಿದ್ದೆವು. ಆದರೆ ಸೋತರಲ್ಲ ಆದರಿಂದ ನಮಗೆ ನಷ್ಟ ಆಯಿತಲ್ಲ ಎಂದರು.

ಮುದ್ದಹನುಮೇಗೌಡ ಅವರು ಕಾಂಗ್ರೆಸ್ ಸೇರುತ್ತಾರೆ ಅಂತಾ ಸಚಿವ ಕೆ.ಎನ್. ರಾಜಣ್ಣ ಹೇಳಿಕೆ‌ ನೀಡಿದ್ದಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಪರಮೇಶ್ವರ್, ರಾಜಣ್ಣ ಹೇಳಿದರೆ ನಾನು‌ ಹೇಳಿದಂತೆ. ಪಕ್ಷದಲ್ಲಿ ಅಧ್ಯಕ್ಷರಿಗೆ ಎಲ್ಲಾ ವಿಚಾರ ಗೊತ್ತು. ಮುದ್ದಹನುಮೇಗೌಡ ಅವರು ಪಕ್ಷಕ್ಕೆ ಬರುವ ವಿಚಾರದ ಬಗ್ಗೆ ನನಗೆ ಮಾಹಿತಿಯಿಲ್ಲ. ನಾನು ಪಕ್ಷದ ಅಧಿಕಾರಿಯಲ್ಲ. ಸರಕಾರಿ ಕಾರ್ಯಕ್ರಮದ ಅನುಷ್ಟಾನಕ್ಕೆ ಸರಕಾರಿ ಉಸ್ತುವಾರಿಯಿದ್ದೇನೆ. ಪಕ್ಷಕ್ಕೆ ನಮ್ಮ ಅಧ್ಯಕ್ಷರೇ ಸುಪ್ರಿಂ ಎಂದು ತಿಳಿಸಿದರು.

ರಾಜ್ಯ ಸರ್ಕಾರ ಸಂವಿಧಾನದ ಮಹತ್ವ ಸಾರುವ ಹಿನ್ನೆಲೆಯಲ್ಲಿ ಜಾಥಾ ಹಮ್ಮಿಕೊಂಡಿದೆ. ಈ ಜಾಥಾ ಇಂದಿನಿಂದ  ಫೆ.23 ತಾರೀಖಿನವರೆಗೆ ನಡೆಯುತ್ತದೆ. ಜಿಲ್ಲೆಯ 330 ಗ್ರಾಮ ಪಂಚಾಯತಿಗಳಿಗೆ ಜಾಥಾ ಸಂವಿಧಾನದ ಅರಿವು ಮೂಡಿಸಲಿದೆ ಎಂದರು.

ರಾಜ್ಯ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಈಡೇರಿಸಿದೆ. ಅದರಲ್ಲಿ ನ್ಯೂನತೆ ಬಂದಿದ್ದರೆ ಈ ಜಾಥಾದಲ್ಲಿ ತಿಳಿಸಬಹುದು. ಅದನ್ನು ಸರಿಪಡಸಲಾಗುವುದು. ಅಲ್ಲದೆ, ಜನಪರ ಆಡಳಿತ ಕೊಡುವುದಿಕ್ಕೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬದ್ಧವಾಗಿದೆ ಎಂಬುದನ್ನು ಜಾಥಾದಲ್ಲಿ ತಿಳಿಸಲಾಗುತ್ತದೆ.

ಜ.29 ರಂದು ಜಿಲ್ಲೆಗೆ ಸಿಎಂ

ಇದೇ ಜ. 29 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಕಳೆದ ಎಂಟು ತಿಂಗಳಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ನಾನಾ ಕಾಮಾಗಾರಿಗಳಿಗೆ ಗುದ್ದಲಿಪೂಜೆ ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ 200 ಹೆಚ್ಚು ಅಡಿಗಲ್ಲು ಹಾಕಬೇಕು ಎಂ ಚಿಂತನೆಯಿದೆ. ಆದರೆ ಕಡಿಮೆ ಮಾಡಿ ನೂರಕ್ಕೆ ಇಳಿಸಿದ್ದೇವೆ. ಸುಮಾರು 697 ಕೋಟಿ ರೂ ವೆಚ್ಚದಲ್ಲಿ ‌ಅಡಿಗಲ್ಲು ಮತ್ತು ಶಂಕುಸ್ಥಾಪನೆ ಮಾಡುತ್ತೇವೆ. ಜೊತೆಗೆ ವಿಶ್ವವಿದ್ಯಾಲಯವನ್ನು ಸುಮಾರು 40 ಕೋಟಿ ವೆಚ್ಚದಲ್ಲಿ ಕಟ್ಟಿದ್ದಾರೆ. ಅದನ್ನು ಉದ್ಘಾಟನೆ ಮಾಡಲಾಗುತ್ತದೆ. ಭವಿಷ್ಯ ತುಮಕೂರು ಇತಿಹಾಸದಲ್ಲಿ ಬೃಹತ್ ಮೊತ್ತದ ಅಡಿಗಲ್ಲು, ಕಾಮಗಾರಿಗೆ ಗುದ್ದಲಿಪೂಜೆಯನ್ನು ಮೊದಲ ಬಾರಿಗೆ ಮಾಡಲಾಗುತ್ತಿದೆ. ‌ಇದು ತುಮಕೂರು ‌ಜಿಲ್ಲೆಗೆ ಹೆಮ್ಮೆಯ‌ ವಿಚಾರವಾಗಿದೆ ಎಂದರು.

ಕಳೆದ 7 ತಿಂಗಳಲ್ಲಿ ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ‌ 55 ಲಕ್ಷ ಮಾನವ ದಿನಗಳನ್ನು ಸೃಜನೆ ಮಾಡಲಾಗಿದೆ. ಇದರಿಂದ ಸುಮಾರು 450 ಕೋಟಿ ರೂ. ಉತ್ಪತ್ತಿ ಮಾಡಲಾಗಿದೆ.‌ ಇದರಿಂದಾಗಿ‌ ಇಡೀ ರಾಜ್ಯದಲ್ಲಿ ತುಮಕೂರು ಜಿಲ್ಲೆ ಮೊದಲ ಸ್ಥಾನದಲ್ಲಿದ್ದೇವೆ ಎಂದರು.

ನರೇಗಾಕ್ಕೆ ಪೂರಕವಾಗಿ ಒಂದು ಸಾವಿರ ಶಾಲೆಗಳನ್ನು ಪೇಸ್ ಲಿಫ್ಟ್ ಮಾಡಿ ಕಾಂಪೌಡ್ ಮಾಡಿ ರಿಪೇರಿ ಮಾಡಲಾಗಿದೆ. ಇದಕ್ಕಾಗಿ 85 ಕೋಟಿ ಖರ್ಚು ಮಾಡಲಾಗಿದೆ ಎಂದರು

ಸಿಎಂ ಜಿಲ್ಲೆಗೆ ಬರುವುದರಿಂದ ಜಿಲ್ಲೆಗೆ ನಾನಾ ಬೇಡಿಕೆ ಇಡಲಾಗುತ್ತಿದೆ. ನಾನು ಉನ್ನತ ಶಿಕ್ಷಣ ಸಚಿವನಾಗಿದ್ದಾಗ ಇಡೀ ಜಿಲ್ಲೆಗೆ ಒಂದು ವಿವಿ ಕೊಟ್ಟಿದ್ದು ಇತಿಹಾಸ. ತುಮಕೂರು ವಿಶ್ವವಿದ್ಯಾಲಯದಲ್ಲಿ ಲಕ್ಷಾಂತರ ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ನೂತನ ಕ್ಯಾಂಪಸ್ ಬರುತ್ತಿದೆ. ಹಾಗಾಗಿ ಹೆಚ್ಚಿನ ಕೋರ್ಸ್ ಗಳನ್ನು ಮಾಡಲಿಕ್ಕೆ ಹೆಚ್ಚು ಹಣ ಕೊಡಬೇಕೆಂಬ ಬೇಡಿಕೆ‌‌ ಇಡಲಾಗುತ್ತಿದೆ ಎಂದರು.

ತುಮಕೂರು ಬಹಳ ವೇಗವಾಗಿ ಬೆಳೆಯುತ್ತಿದೆ. ಬೆಂಗಳೂರಿಗಿಂತ ವೇಗವಾಗಿ ಬೆಳೆಯುತ್ತಿದೆ. ಬೆಂಗಳೂರು ವಿಸ್ತಾರವಾಗುತ್ತಿದೆ. ಹಾಗಾಗಿ ತುಮಕೂರು , ರಾಮನಗರ ಕೋಲಾರ ಚೆನ್ನಪಟ್ಟಣ ಅಭಿವೃದ್ಧಿ ಮಾಡಿಬೇಕಿದೆ. ಆ ಮೂಲಕ ಬೆಂಗಳೂರು ಮೇಲಿನ ಒತ್ತಡ ಕಡಿಮೆಯಾಗಲಿದೆ. ಹಾಗಾಗಿ ಈಗಾಗಲೇ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಒತ್ತಡ ಇದೆ. ಒಂದು ಕೋಟಿ ಮೂವತ್ತು ಲಕ್ಷ ವಾಹನಗಳಿವೆ. ಅದರಲ್ಲಿ 80 ಲಕ್ಷ ದ್ವಿಚಕ್ರವಾಹನಗಳಿವೆ. ಹಾಗಾಗಿ ರಸ್ತೆಗಳು ಅಗಲೀಕರಣ ಮಾಡಲು ಸಾಧ್ಯವಿಲ್ಲ. ಈಗಾಗಲೇ‌ ಸಾಧ್ಯವಾದಷ್ಡು ಮಾಡಲಾಗಿದೆ. ಹಾಗಾಗಿ ಬೆಂಗಳೂರರನ್ನು ತುಮಕೂರು ನಗರಕ್ಕೆ ಸಂಪರ್ಕ ಕಲ್ಪಿಸಬೇಕು. ಈ ಹಿನ್ನೆಲೆಯಲ್ಲಿ ಮೆಟ್ರೊ ರೈಲನ್ನು ತುಮಕೂರಿಗೆ ತರಬೇಕು ಎಂದು ಸಿಎಂ ಡಿಸಿಎಂ ಇಬ್ಬರಿಗೂ ಮನವಿ ಮಾಡಿದ್ದೇನೆ. ಹಾಗಾಗಿ ಇಬ್ಬರೂ ಡಿಪಿಆರ್ ಮಾಡುವಂತೆ ಸೂಚನೆ ಕೊಟ್ಟಿದ್ದಾರೆ. ಇದು ಮೊದಲ ಹಂತ. ಎರಡನೇ ಹಂತದಲ್ಲಿ ರಾಜ್ಯ ಮತ್ತು‌ ಕೇಂದ್ರ ಸರ್ಕಾರದಿಂದ ಅನುಮತಿ ಸಿಗಬೇಕು. ಸದ್ಯಕ್ಕೆ ಡಿಪಿಆರ್ ಆಗಬೇಕು. ಅದಾದ ಬಳಿಕ‌ ಮುಂದಿನ ಚರ್ಚೆ ಮಾಡಲಾಗುವುದು ಎಂದು ಹೇಳಿದರು.

ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಉದ್ಘಾಟನೆ ಮಾಡುತ್ತೇವೆ. ರಾಮಮಂದಿರದ ರೀತಿಯಲ್ಲಿ ಮೊದಲನೆ ಹಂತದಲ್ಲಿ ಉದ್ಘಾಟನೆ ಮಾಡುತ್ತೇವೆ. ಪದೇ ಪದೆ ಮುಖ್ಯಮಂತ್ರಿ ಬರುವುದಿಲ್ಲ. ಹಾಗಾಗಿ ಮುಖ್ಯಮಂತ್ರಿಗಳ ಅಮೃತ ಹಸ್ತದಿಂದ ಉದ್ಘಾಟನೆ ಮಾಡಲಿದ್ದಾರೆ. ತರಾತುರಿಯಲ್ಲಿ ಉದ್ಘಾಟನೆ ಮಾಡಲಾಗುತ್ತಿದೆ ಎಂದರು.

ಲಿಕಿಂಗ್ ಕೆನಾಲ್ ವಿಚಾರ ಮಾತ‌ನಾಡಿ, ಈ ವಿಚಾರ ಕ್ಯಾಬಿನೆಟ್ ಚರ್ಚೆಯಾಗಿದೆ. ಇದರಿಂದ ಯಾವುದೇ ಏನು ತೊಂದರೆಯಾಗಲ್ಲ ಎಂದರು.

ಸ್ಟೇಡಿಯಂ ಅನ್ನು ಹಸ್ತಾಂತರವಾಗಿದೆ ಎಡಿ ಸ್ಪೋರ್ಟ್ಸ್ ಅವರಿಗೆ ಹಸ್ತಾಂತರ ಮಾಡಲಾಗಿದೆ‌. ಕೊಬ್ಬರಿಗೆ ಬೆಂಬಲ‌ ಬೆಲೆ ವಿಚಾರ ವಾಗಿ ಮಾತನಾಡಿ, 1500 ನಾವು ಕೊಡುತ್ತೇವೆ. ಕೇಂದ್ರದಿಂದ 12ಸಾವಿರ ಕೊಟ್ಟಿದ್ದೀರಾ ಮಾರ್ಕೆಟಿಂಗ್ ಬೆಲೆ 15 ಸಾವಿರ ಇದೆ ಎಂದಾಗ ಕೇಂದ್ರದವರು 15 ಕೊಡಿಲಿ , ನಾವು 2 ಸಾವಿರ ಕೊಡುತ್ತೇವೆ. ಒಟ್ಟು 17 ಸಾವಿರ ಆಗುತ್ತದೆ ಎಂದರು.

ಟಾಪ್ ನ್ಯೂಸ್

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

10-uv-fusion

Harekala Hajabba: ಕೋಟಿ ಒಡೆಯನಲ್ಲ, ಆದರೂ ಈತ ಕೋಟಿಗೊಬ್ಬ

ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

10-uv-fusion

Harekala Hajabba: ಕೋಟಿ ಒಡೆಯನಲ್ಲ, ಆದರೂ ಈತ ಕೋಟಿಗೊಬ್ಬ

ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.