ಪವರ್‌ ಸ್ಟೇಷನ್‌ ನಿರ್ಮಿಸಲು ಜಾಗ ನೀಡಲ್ಲ 


Team Udayavani, May 25, 2022, 5:17 PM IST

ಪವರ್‌ ಸ್ಟೇಷನ್‌ ನಿರ್ಮಿಸಲು ಜಾಗ ನೀಡಲ್ಲ 

ತಿಪಟೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಹೋಬಳಿ ಡಿಂಕನಹಳ್ಳಿ ಗ್ರಾಮದಲ್ಲಿಕೆಪಿಟಿಸಿಎಲ್‌ ವತಿಯಿಂದ 400 ಕೆವಿಯ ಸ್ವಿಚಿಂಗ್‌ಸ್ಟೇಷನ್‌ ಸ್ಥಾಪಿಸಲು ಉದ್ದೇಶಿಸಿರುವ ಸ್ಥಳವನ್ನುಬದಲಾಯಿಸುವಂತೆ ಒತ್ತಾಯಿಸಿ ಭಾರತೀಯ ಕೃಷಿಕ ಸಮಾಜದ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿ ದಿಗ್ವಿಜಯ್‌ ಬೋಡ್ವೆಗೆ ಮನವಿ ಪತ್ರ ಸಲ್ಲಿಸಲಾಯಿತು.

ಈ ವೇಳೆ ಭಾರತೀಯ ಕೃಷಿಕ ಸಮಾಜದ ಜಿಲ್ಲಾಧ್ಯಕ್ಷ ಕೋಡಿಹಳ್ಳಿ ಜಗದೀಶ್‌ ಮಾತನಾಡಿ, ಡಿಂಕನಹಳ್ಳಿ ಗ್ರಾಮದಲ್ಲಿ ರೈತರ ಫ‌ಲವತ್ತಾದ ಭೂಮಿಯನ್ನೇ ಗುರಿಯಾಗಿಸಿಕೊಂಡು ಸುಮಾರು 36.8 ಎಕರೆ ಜಾಗವನ್ನುಪವರ್‌ ಸ್ಟೇಷನ್‌ ಸ್ಥಾಪಿಸಲು ಉದ್ದೇಶಿರುವುದುಸರಿಯಲ್ಲ. ಈ ಭಾಗದ ಸುತ್ತಮುತ್ತಲಿನ ಫ‌ಲವತ್ತಾದಭೂಮಿಯಲ್ಲಿರುವ ರೈತರ ಜೀವನಾಧಾರ ಬೆಳೆಗಳಾದತೆಂಗು, ಅಡಕೆ, ಮಾವು, ಹುಣಸೆ, ಹಲಸು ಇತ್ಯಾದಿ ಮರಗಳಿವೆ.

ರೈತರು ಇವುಗಳನ್ನೇ ನಂಬಿ ಜೀವನ ನಡೆಸುತ್ತಿದ್ದಾರೆ.ಇನ್ನೂ ಕೆಲ ರೈತರು ಸಾಲಶೂಲ ಮಾಡಿಕೊಂಡು ಬೋರ್‌ವೆಲ್‌ ಕೊರೆಸಿ ನಿತ್ಯದ ಜೀವನ ನಿರ್ವಹಣೆ ಮಾಡುತ್ತಿದ್ದಾರೆ. ಸ್ಟೇಷನ್‌ ಸ್ಥಾಪಿಸಿದರೆ ರೈತರ ಶೇ. 70ರಷ್ಟು ತೆಂಗು ಮತ್ತು ಅಡಕೆ ನಾಶವಾಗಲಿದೆ. ಅಲ್ಲದೆ ಇಲ್ಲಿಅತ್ಯಧಿಕ ಶಕ್ತಿಯ 20ಕ್ಕೂ ಹೆಚ್ಚು ವಿದ್ಯುತ್‌ ಲೈನುಗಳುಹಾದು ಹೋಗಲಿದ್ದು, ಇಲ್ಲಿ ಸರ್ಕಾರಿ ಶಾಲೆ ಇದ್ದು500ಕ್ಕೂ ಹೆಚ್ಚು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, ಅವರ ಭವಿಷ್ಯ ಹಾಳಾಗಲಿದೆ ಎಂದರು.

ಯಾವುದೇ ಕಾರಣಕ್ಕೂ ಪವರ್‌ ಸ್ಟೇಷನ್‌ ನಿರ್ಮಿಸಲು ಸ್ಥಳ ಕೊಡುವುದಿಲ್ಲ. ಬೇರೆಡೆಗೆ ವರ್ಗಾವಣೆ ಮಾಡದಿದ್ದರೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಬೇರೆಡೆಗೆ ವರ್ಗಾವಣೆಗೆ ಆಗ್ರಹ: ಹಸಿರು ಸೇನೆ ರಾಜ್ಯಾಧ್ಯಕ್ಷ ಕೆಂಕೆರ ಸತೀಶ್‌ ಮಾತನಾಡಿ, ಚಿಕ್ಕ ನಾಯಕನ ಹಳ್ಳಿ ತಾ. ಡಿಂಕನಹಳ್ಳಿಯ ಫ‌ಲವತ್ತಾದ ಭೂಮಿಯಲ್ಲಿಯೇ ಪವರ್‌ ಸ್ಟೇಷನ್‌ ನಿರ್ಮಿಸಲುಹೊರಟಿರುವ ಅಧಿಕಾರಿಗಳಿಗೆ ಧಿಕ್ಕಾರ. ಸಚಿವರಾದಮಾಧುಸ್ವಾಮಿ ರೈತರಿಗೆ ಸ್ಪಂದಿಸಬೇಕಿದೆ. ತಹಸೀಲ್ದಾರ್‌, ಎಸಿ ಹಾಗೂ ಇತರೆ ಅಧಿಕಾರಿ ವರ್ಗದವರುಜಾಗವನ್ನು ಪರಿಶೀಲನೆ ಮಾಡಿ ಬೇರೆಡೆಗೆ ಪವರ್‌ಸ್ಟೇಷನ್‌ನ್ನು ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿದರು.

ಸರ್ಕಾರಕ್ಕೆ ಸಲ್ಲಿಸುತ್ತೇನೆ: ಮನವಿ ಸ್ವೀಕರಿಸಿ ಮಾತನಾಡಿದ ಉಪವಿಭಾಗಾಧಿಕಾರಿ ದಿಗ್ವಿಜಯ್‌ ಬೋಡ್ವೆ, ನಿಮ್ಮ ಎಲ್ಲಾ ಸಮಸ್ಯೆಗಳು ನಮಗೆ ಅರ್ಥವಾಗಿದ್ದು,ಆದರೆ ಭೂ ಸ್ವಾಧೀನಕ್ಕೆ ಮಾತ್ರ ನಮಗೆ ಅಧಿಕಾರವಿದ್ದುನೀವು ಈ ಬಗ್ಗೆ ಕೆಪಿಟಿಸಿಎಲ್‌ ಅಧಿಕಾರಿಗಳೊಂದಿಗೆಚರ್ಚಿಸಬೇಕು. ನಿಮ್ಮ ಮನವಿಯನ್ನು ಸರ್ಕಾರಕ್ಕೆ ಸಲ್ಲಿಸುತ್ತೇನೆ ಎಂದರು.

ನಗರದ ಶ್ರೀ ಕೆಂಪಮ್ಮದೇವಿ ದೇವಸ್ಥಾನದಿಂದಪಾದಯಾತ್ರೆ ಮೂಲಕ ತೆರಳಿ ಉಪವಿಭಾಗಾಧಿಕಾರಿಗಳಕಚೇರಿ ಮುಂಭಾಗ ಬಿ.ಎಚ್‌.ರಸ್ತೆ ತಡೆದು ಪ್ರತಿಭಟನೆನಡೆಸಿ ಉಪವಿಭಾಗಾಧಿಕಾರಿಗಳ ಕಚೇರಿ ತಲುಪಿ ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ಬಸ್ತಿಹಳ್ಳಿ ರಾಜಣ್ಣ,ದೇವರಾಜು ತಿಮ್ಲಾಪುರ, ಶ್ರೀಕಾಂತ್‌ ಕೆಳಹಟ್ಟಿ, ಕೆಆರ್‌ಎಸ್‌ ಪಕ್ಷ ಗಂಗಾಧರ್‌ ಕರೀಕೆರೆ, ಕೃಷಿಕ ಸಮಾಜದಹೊನ್ನರಾಜು, ಜಯಶ್ರೀ, ಪಾಂಡುರಂಗ, ರಾಜಣ್ಣ,ದಿನೇಶ್‌, ಬಸವರಾಜು, ಅಜ್ಜನಪಾಳ್ಯದ ಕಾಂತರಾಜು,ಬರಗೀಹಳ್ಳಿ ಮೂರ್ತಿ ಸೇರಿದಂತೆ ನೂರಾರುಸಂಖ್ಯೆಯಲ್ಲಿ ಅರಳೀಕೆರೆ, ಸಾಲಾಪುರ, ಅಜ್ಜನಪಾಳ್ಯ,ಡಿಂಕನಹಳ್ಳಿ, ಕೋರಗೆರೆ ಬರಗಿಹಳ್ಳಿ, ಬಟ್ಟರಹಳ್ಳಿ,ಹನುಮಂತಪುರ ಸೇರಿದಂತೆ ಅಕ್ಕಪಕ್ಕದ ಗ್ರಾಮದಮಹಿಳೆಯರು, ಭೂಮಿ ಕಳೆದುಕೊಂಡವರು ಭಾಗವಹಿಸಿದ್ದರು.

ರೈತರ ಪಟ್ಟು, ವಾಗ್ವಾದ : ಎಸಿ ಯಾವುದೋ ಮೀಟಿಂಗ್‌ನಲ್ಲಿ ಬ್ಯುಸಿ ಇದ್ದಕಾರಣ ಕಚೇರಿಯ ಒಳಗಡೆ ಬಂದು ಮನವಿನೀಡಿ ಎಂದು ಸಿಬ್ಬಂದಿಗಳು ತಿಳಿಸಿದಾಗ ಆಕ್ರೋಶ ಗೊಂಡ ರೈತರು, ನಾವು ಎರಡು ಕಿ. ಮೀ. ಪಾದಯಾತ್ರೆ ಮಾಡಿ ಬಂದಿದ್ದೇವೆ. ಅಧಿಕಾರಿಗಳಾದನೀವು ಸೌಜನ್ಯಕ್ಕಾದರೂ ಬಂದು ನಮ್ಮ ಕಷ್ಟಅರ್ಥಮಾಡಿಕೊಳ್ಳದೇ ಕುಳಿತಲ್ಲಿಯೇ ಮಾತನಾಡುತ್ತಾರೆ. ಉಪವಿಭಾಗಾಧಿಕಾರಿಗಳು ಹೊರ ಗಡೆ ಬಂದು ಮನವಿ ತೆಗೆದುಕೊಳ್ಳುವವರೆಗೂನಾವು ಕದಲುವುದಿಲ್ಲ ಎಂದು ಪಟ್ಟು ಹಿಡಿದರು.ನಂತರ ಉಪವಿಭಾಗಾಧಿಕಾರಿಗಳು ಬಂದು ಮನವಿ ಸ್ವೀಕರಿಸಿದರು.

ರೈತರನ್ನು ಒಕ್ಕಲೆಬ್ಬಿಸುವ ಕೆಲಸ : ಭಾರತೀಯ ಕೃಷಿಕ ಸಮಾಜದ ಗೌರವಾಧ್ಯಕ್ಷಪುಟ್ಟರಾಜು ಮಾತನಾಡಿ, ಉದ್ದೇಶ ಪೂರ್ವಕವಾಗಿಯೇ ರೈತರನ್ನು ಒಕ್ಕಲೆಬ್ಬಿಸುವ ಕೆಲಸಮಾಡಲಾಗುತ್ತಿದೆ. ರೈತರ ಜಮೀನಿನಲ್ಲಿ ಪವರ್‌ಸ್ಟೇಷನ್‌ ನಿರ್ಮಿಸಿ ವಿದ್ಯುತ್‌ ತಂತಿಗಳು ಹಾದುಹೋಗುವುದರಿಂದ ರೈತರು ಸಾವಿರಾರು ಎಕರೆಭೂಮಿಯನ್ನು ಕಳೆದುಕೊಳ್ಳಬೇಕಿದೆ. ರೈತಕುಟುಂಬಗಳು ಬೀದಿಗೆ ಬೀಳಲಿದ್ದು ನಮ್ಮ ಪ್ರಾಣಹೋದರೂ ಪರವಾಗಿಲ್ಲ ಭೂಮಿಯನ್ನುಬಿಟ್ಟುಕೊಡುವುದಿಲ್ಲ. ಬಂಜರು ಭೂಮಿ ಅಥವಾಜನರು ವಾಸಿಸುವ ಸ್ಥಳದಿಂದ ದೂರ ಇರುವ ಕಡೆಗೆ ಸ್ಟೇಷನ್‌ ವರ್ಗಾಯಿಸಬೇಕೆಂದು ಒತ್ತಾಯಿಸಿದರು.

 

ಟಾಪ್ ನ್ಯೂಸ್

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.