![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
Farmers: ಕೊಬ್ಬರಿ; ನೋಂದಣಿಗಾಗಿ ರೈತರ ಜಾಗರಣೆ!
Team Udayavani, Mar 5, 2024, 10:24 AM IST
![Farmers: ಕೊಬ್ಬರಿ; ನೋಂದಣಿಗಾಗಿ ರೈತರ ಜಾಗರಣೆ!](https://www.udayavani.com/wp-content/uploads/2024/03/2-3-620x372.jpg)
ತಿಪಟೂರು: ಸರ್ಕಾರ ಮರು ಕೊಬ್ಬರಿ ನೋಂದಣಿ ಯನ್ನು ಸೋಮವಾರದಿಂದ ಪ್ರಾರಂಭಿಸಿದ್ದು ರೈತರು ಹಾಗೂ ಮಹಿಳೆಯರು, ವಯೋವೃದ್ಧರು, ಅಂಗವಿಕಲರು ಎಪಿಎಂಸಿ ಆವರಣದಲ್ಲಿ ಭಾನುವಾರ ಸಂಜೆಯಿಂದಲೇ ಜಮಾಯಿಸಿದ್ದರು.
ಮುಗಿಬಿದ್ದರು: ಆಯಾ ಹೋಬಳಿ ರೈತರಿಗೆ ಅನುಕೂಲವಾಗಲು ತಿಪಟೂರು ಎಪಿಎಂಸಿ ವ್ಯಾಪ್ತಿಯಲ್ಲಿ ಒಟ್ಟು 7ಖರೀದಿ ಕೇಂದ್ರ ತೆರೆಯಲಾಗಿದೆ. ತಿಪಟೂರು ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ 4 ಕೇಂದ್ರ ತೆರೆಯಲಾಗಿದ್ದು, ಒಂದು ಕೇಂದ್ರವನ್ನು ಮಹಿಳೆಯರಿಗಾಗಿ ಮೀಸಲಿರಿಸಲಾಗಿದೆ. ಕರಡಾಳು, ಕೊನೇಹಳ್ಳಿ, ಕೆ.ಬಿ.ಕ್ರಾಸ್ ಉಪ ಎಪಿಎಂಸಿ ಮಾರುಕಟ್ಟೆಗಳಲ್ಲಿ ತಲಾ ಒಂದೊಂದು ಕೇಂದ್ರ ತೆರೆಯಲಾಗಿದೆ.
ನೋಂದಣೆ ವಿಷಯ ಮೊದಲೇ ತಮ್ಮ ಗಮನಕ್ಕೆ ಬಂದಿದ್ದರಿಂದ ರೈತರು ಭಾನುವಾರ ಸಂಜೆಯಿಂದಲೇ ಸಂಬಂಧಪಟ್ಟ ಎಪಿಎಂಸಿ ಆವರಣದಲ್ಲಿ ತಮ್ಮ ಪಾದರಕ್ಷೆಗಳನ್ನು ಸರದಿ ಸಾಲಿನಲ್ಲಿ ಬಿಟ್ಟು ಕಾಯುತ್ತಿದ್ದರು. ದೂರದ ಊರುಗಳಿಂದ ಬಂದಿದ್ದವರು ಚಾಪೆ, ಹೊದಿಕೆ ತಂದು ರಾತ್ರಿಪೂರ್ತಿ ಆವರಣದಲ್ಲಿಯೇ ಮಲಗಿದ್ದು, ಸೋಮವಾರ ಬೆಳಗ್ಗೆಯಿಂದಲೇ ಸರದಿ ಸಾಲಿನಲ್ಲಿ ನಿಂತು ಹೆಸರು ನೋಂದಾಯಿಸಲು ಮುಗಿಬಿದ್ದರು.
ರೈತರಿಗೆ ನೆರಳು, ಕುಡಿವ ನೀರು, ನೋಂದಣೆಗೆ ಅವಶ್ಯವಿರುವ ಇಂಟರ್ನೆಟ್, ನುರಿತ ಕಂಪ್ಯೂಟರ್ ಆಪರೇಟರ್ ವ್ಯವಸ್ಥೆ ಮಾಡಲಾಗಿದೆ. ಉದ್ದುದ್ದ ಸಾಲುಗಳಲ್ಲಿ ವಯೋವೃದ್ಧರು, ಅಂಗವಿಕಲರು, ಮಹಿಳೆಯರಂತೂ ನಿಂತು ಸುಸ್ತಾಗಿ ಬಿರು ಬಿಸಿಲಿನಲ್ಲಿ ಊಟವಿಲ್ಲದೆ ಯಾತನೆ ಅನುಭವಿಸಿದರು.
ಅವಕಾಶ: ಬೆಂಬಲ ಬೆಲೆಯಡಿ ರೈತರಿಂದ ಉಂಡೆ ಕೊಬ್ಬರಿ ಖರೀದಿಗೆ ಹೆಸರು ನೋಂದಣಿ ಪ್ರಕ್ರಿಯೆ ನಡೆಯುತ್ತಿದ್ದು ರೈತರು ಯಾವ ಕೇಂದ್ರದಲ್ಲಿ ತಮ್ಮ ಹೆಸರು ನೋಂದಾಯಿಸಿರುತ್ತಾರೋ ಅದೇ ಕೇಂದ್ರಕ್ಕೆ ಎಫ್ಎಕ್ಯೂ ಗುಣಮಟ್ಟದ ಕೊಬ್ಬರಿ ಜತೆಗೆ ತಮ್ಮ ಆಧಾರ್ ಕಾರ್ಡ್ ಪ್ರತಿ, ಫ್ರೂಟ್ ಐಡಿಯೊಂದಿಗೆ ಕೊಬ್ಬರಿ ಖರೀದಿಸುವ ದಿನಾಂಕ ತಿಳಿಸಿದಾಗ ತಂದು ಮಾರಾಟ ಮಾಡಬೇಕು. ಪ್ರತಿ ಎಕರೆಗೆ 6 ಕ್ವಿಂಟಲ್, ಪ್ರತಿ ರೈತರಿಂದ ಗರಿಷ್ಠ 15 ಕ್ವಿಂಟಲ್ ಕೊಬ್ಬರಿ ಖರೀದಿಗೆ ಅವಕಾಶ ನೀಡಲಾಗಿದೆ ಎಂದು ಎಪಿಎಂಸಿ ಅಧಿಕಾರಿಗಳು ತಿಳಿಸಿದ್ದಾರೆ.
ಮುನ್ನೆಚ್ಚರಿಗೆ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆ : ಕೊಬ್ಬರಿ ಬೆಲೆ ಕಳೆದ 2-3 ವರ್ಷಗಳಿಂದ ನಿರಂತರವಾಗಿ ಇಳಿಕೆಯಾಗುತ್ತಿದ್ದು ಈಗ ನಫೆಡ್ ಮೂಲಕವಾದರೂ ಕ್ವಿಂಟಲ್ ಕೊಬ್ಬರಿಗೆ 13,500 ರೂ.ಗಳಾದರೂ ಸಿಗಲಿದೆ ಎಂಬ ಆಸೆಯಿಂದ ರೈತರು ನೋಂದಣೆಗೆ ಮುಗಿ ಬೀಳುತ್ತಿದ್ದು ಸರದಿ ಸಾಲಿನಲ್ಲಿ ಗಲಾಟೆ, ಘರ್ಷಣೆಗಳಾಗದಂತೆ ಪೊಲೀಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಮುಂದಿನ 45 ದಿನಗಳವರೆಗೆ ಕೊಬ್ಬರಿ ನೋಂದಣಿ ಪ್ರಕ್ರಿಯೆ ಹಾಗೂ ಖರೀದಿಗೆ ಅವಕಾಶವಿದ್ದು ಈ ರೀತಿ ಬಂದು ಕಾಯಬೇಡಿ ಎಂದು ಅಧಿಕಾರಿಗಳು ತಿಳಿಸಿದರೂ ರೈತರು ಜಾಗ ಬಿಟ್ಟು ಹೋಗುತ್ತಿಲ್ಲ. ಕಳೆದ ಬಾರಿಯಂತೆ ಎಲ್ಲಿ ನೋಂದಣಿ ಬೇಗ ಮುಗಿಯುತ್ತದೆಯೋ ಎಂಬ ಆತಂಕದಿಂದ ರೈತರು ನೋಂದಣಿ ಮಾಡಿಸಿಕೊಂಡೇ ಹೋಗೋಣ ಎಂದು ಕಾದು ಕುಳಿತಿದ್ದಾರೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shobha-Kharandlaje](https://www.udayavani.com/wp-content/uploads/2024/07/Shobha-Kharandlaje-150x90.jpg)
Congrees Government; ರಾಜ್ಯದಲ್ಲಿರುವುದು ಗೋಲ್ಮಾಲ್ ಸರ್ಕಾರ: ಕೇಂದ್ರ ಸಚಿವೆ ಶೋಭಾ
![5-tumkur](https://www.udayavani.com/wp-content/uploads/2024/07/5-tumkur-150x90.jpg)
Tumkur ZP CEO ಕೊರಟಗೆರೆ ರೌಂಡ್ಸ್; ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಿಇಓ ಪ್ರಭು.ಜಿ
![4-koratagere](https://www.udayavani.com/wp-content/uploads/2024/07/4-koratagere-150x90.jpg)
Koratagere: ಮಜ್ಜಿಗೆ ಫ್ಯಾಕ್ಟರಿಯ ಬಾಯ್ಲರ್ ಸ್ಪೋಟ; ಕಾರ್ಮಿಕನಿಗೆ ಗಂಭೀರ ಗಾಯ
![1-ewewqe](https://www.udayavani.com/wp-content/uploads/2024/07/1-ewewqe-150x85.jpg)
Koratagere; ಬಸ್ ಗಳ ಸಮಸ್ಯೆ: ಅಳಲು ತೋಡಿಕೊಂಡ ವಿದ್ಯಾರ್ಥಿಗಳು
![Naxal chandru- Naxal Chandru arrested after 19 years; What is the case?](https://www.udayavani.com/wp-content/uploads/2024/07/Naxal-150x86.jpg)
Naxal chandru-19 ವರ್ಷದ ಬಳಿಕ ನಕ್ಸಲ್ ಚಂದ್ರು ಸೆರೆ; ಏನಿದು ಪ್ರಕರಣ?
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.