ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ಕೆ ಶಾಸಕರಿಂದ ಚಾಲನೆ
Team Udayavani, Aug 25, 2020, 2:58 PM IST
ತುರುವೇಕೆರೆ: ತಾಲೂಕಿನ ಮಾಯಸಂದ್ರ ಹೋಬಳಿಯ ಯರದೇಹಳ್ಳಿ ಸಮೀಪದ ಡಿ 26 ಹೇಮಾವತಿ ಉಪನಾಲೆಯಲ್ಲಿ ಪೂಜೆ ಸಲ್ಲಿಸುವ ಮೂಲಕ ಈ ಭಾಗದ ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ಕೆ ಶಾಸಕ ಮಸಾಲಜಯರಾಂ ಚಾಲನೆ ನೀಡಿದರು.
ನಂತರ ಮಾತನಾಡಿ, ಕಳೆದ 20 ವರ್ಷ ಗಳಿಂದ ಯಾವೊಬ್ಬ ಜನಪ್ರತಿನಿಧಿಯೂ ಈ ಭಾಗದ ಕೆರೆಗಳಿಗೆ ಹೇಮಾವತಿ ನೀರು ಹರಿಸದೆ ಬರಪೀಡಿತ ಪ್ರದೇಶವಾಗಿತ್ತು. ರೈತರು ಯಾವುದೇ ಬೆಳೆ ಬೆಳೆದರೂ ಉತ್ತಮ ಫಸಲು ಸಿಗುತ್ತಿರಲಿಲ್ಲ. ಜೊತೆಗೆ ಸಾವಿರಾರು ಅಡಿಗಳ ಕೊಳವೆ ಬಾವಿ ಕೊರೆಸಿದರು ಒಂದು ಹನಿ ನೀರು ಬರುತ್ತಿರಲಿಲ್ಲ. ಇದನ್ನರಿತು ಮಾಯಸಂದ್ರ ಹೋಬಳಿಯ ರೈತರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಬಳಿ ನಿಯೋಗ ಹೋಗಿ ಈ ಭಾಗದ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಲಾಗಿತು. ಅದರಂತೆ ಮಾಯಸಂದ್ರ ಹೋಬಳಿ ಭಾಗದ ಉಪನಾಲೆಗಳಲ್ಲಿನ ಕಸಕಟ್ಟಿಗಳನ್ನು ತೆರವುಗೊಳಿಸಲು 40 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗಿತ್ತು.
ಸಿಎಸ್ಪುರ ಮತ್ತು ಮಾಯಸಂದ್ರ ಹೋಬಳಿ ಹಾಗೂ ಕ್ಷೇತ್ರದ ವಿವಿಧ ಭಾಗದ ಕೆರೆಗಳಿಗೆ ನೀರು ಬಿಡುವ ಕೆಲಸವನ್ನು ಬಿಜೆಪಿ ಸರ್ಕಾರ ಹೊರತು ಪಡಿಸಿ ಮತ್ತ್ಯಾವ ಸರ್ಕಾರಗಳು ಮಾಡಲಿಲ್ಲ. ಹಾಗಾಗಿ ಹಂತ ಹಂತವಾಗಿ ತಾಲೂಕಿನ ಎಲ್ಲ ಕೆರೆ ಕಟ್ಟೆಗಳನ್ನು ತುಂಬಿಸುವೆ. ಡಿಸೆಂಬರ್ ಅಂತ್ಯದವರೆಗೂ ಹೇಮಾವತಿ ನಾಲಾ ನೀರು ಹರಿಯುವುದರಿಂದ ಯಾವ ರೈತರೂ ಗೊಂದಲಕ್ಕೆ ಒಳಗಾಗದಿರೆಂದು ಭರವಸೆ ನೀಡಿದರು.
ಮಾಯಸಂದ್ರ ಹೋಬಳಿಯ ಗುಡ್ಡೇನ ಹಳ್ಳಿ ರೈತರ ತೆಂಗಿನ ಸಸಿಗಳನ್ನು ಶಾಸಕ ಮಸಾಲ ಜಯರಾಂ ಕೀಳಿಸಿದ್ದಾರೆಂಬ ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪಿಸಿ ಪಾದಯಾತ್ರೆ ಮಾಡುವ ಬಗ್ಗೆ ಪ್ರಶ್ನೆಯೊಂದಕ್ಕೆ ಉತ್ತರಿಸಿ, ಈ ವಿಚಾರದಲ್ಲಿ ನನ್ನ ಪಾತ್ರವೇನಿಲ್ಲ. ಈ ಬಗ್ಗೆ ರೈತರಲ್ಲಿ ತಪ್ಪು ಗ್ರಹಿಕೆ ಬೇಡ. ನಾಳೆಯೇ ಗುಡ್ಡೇನಹಳ್ಳಿ ಗ್ರಾಮದಲ್ಲಿ ತಹಶೀಲ್ದಾರ್ ಹಾಗೂ ಉಪಭಾಗಾಧಿಕಾರಿ ಸಮ್ಮುಖದಲ್ಲಿ ರೈತ ಸಂವಾದ ನಡೆಸಿ ಕಾನೂನಾತ್ಮಕವಾಗಿ ರೈತರಿಗೆ ನ್ಯಾಯ ಒದಗಿಸಿಕೊಡುವೆ. ಈ ವಿಚಾರದಲ್ಲಿ ರೈತರು ಬೇರೆಯವರ ಮಾತಿಗೆ ಕಿವಿಗೊಟ್ಟರೆ ಅವರೆ ಜವಾಬ್ದಾರರು ಎಂದರು.
ಜಿಪಂ ಸದಸ್ಯೆ ಜಯಲಕ್ಷ್ಮೀ ಜಯರಾಂ, ಮಾಜಿ ಸದಸ್ಯ ಶ್ರೀನಿವಾಸ್, ತಾಪಂ ಸದಸ್ಯ ಮಹಲಿಂಗಯ್ಯ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ
Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು
ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್ ಕಾರ್ಯಕರ್ತೆಯರು
2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ
MUST WATCH
ಹೊಸ ಸೇರ್ಪಡೆ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Karkala: ಕಾಂಗ್ರೆಸ್ಸಿನಿಂದ ಬೃಹತ್ ಪರಿವರ್ತನಾ ರ್ಯಾಲಿ
Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ