![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ತೋಟಗಾರಿಕೆ ಬೆಳೆಗಳಿಗೆ ಆರ್ಥಿಕ ನೆರವು
ವಿವಿಧ ಯೋಜನೆಗಳಡಿಯಲ್ಲಿ ರೈತರಿಗೆ ಸಹಾಯಧನ ಸೌಲಭ್ಯ
Team Udayavani, May 7, 2019, 5:25 PM IST
![Udayavani Kannada Newspaper](https://www.udayavani.com/wp-content/themes/desktop-udayavni/images/place-holder-620.jpg)
ಗುಬ್ಬಿ: ತೋಟಗಾರಿಕೆ ಇಲಾಖೆಯಿಂದ 2019 -20ನೇ ಸಾಲಿಗೆ ಜಿಲ್ಲೆಯಲ್ಲಿ ಅನುಷ್ಠಾನ ಗೊಳ್ಳು ತ್ತಿರುವ ವಿವಿಧ ಯೋಜನೆಗಳಡಿಯಲ್ಲಿ ಸಹಾ ಯಧನ ಸೌಲಭ್ಯವನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಸಹಾಯಕ ನಿರ್ದೇ ಶಕ ರಾಜಪ್ಪ ತಿಳಿಸಿದರು. ಆಸಕ್ತ ರೈತರು ಸಂಬಂಧಿಸಿದ ತಾಲೂಕು ತೋಟಗಾರಿಕೆ ಕಚೇರಿ, ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಿ ಏ.25-ಮೇ 25ರವೆರಗೆ ಅರ್ಜಿ ಸಲ್ಲಿಸಿ ಯೋಜ ನೆಗಳ ಸದ್ಬಳಕೆ ಮಾಡಿಕೊಳ್ಳಲು ತಿಳಿಸಲಾಗಿದೆ.
ಪ್ರಧಾನಮಂತ್ರಿ ಕೃಷಿ ಸಿಂಚಾಯಿ: ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಪದ್ಧತಿ ಆಳವಡಿಸಿ ಕೊಳ್ಳಲು ಗರಿಷ್ಠ 5 ಹೆಕ್ಟೇರ್ವರೆಗೆ ಸಹಾಯಧನ ನೀಡಲಾಗುವುದು.
ರಾಷ್ಟ್ರೀಯ ತೋಟಗಾರಿಕ ಮಿಷನ್: ತೋಟ ಗಾರಿಕಾ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ , ರೋಗ ಮತ್ತು ಕೀಟ ನಿಯಂತ್ರಣ, ನೀರು ಸಂಗ್ರಹಣಾ ಘಟಕ, ಪ್ಯಾಕ್ ಹೌಸ್ , ಜೇನುಕೃಷಿ, ಸಂರಕ್ಷಿತ ಬೇಸಾಯ ಹಾಗೂ ಸಂಸ್ಕರಣ ಘಟಕ, ಶೈತ್ಯಾಗಾರ ಮತ್ತು ಹಣ್ಣು ಮಾಗಿಸುವ ಘಟಕಗಳಿಗೆ ಸಹಾಯಧನ ನೀಡಲಾಗುವುದು.
ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ: ತೋಟ ಗಾರಿಕೆ ಬೆಳೆಗಳನ್ನ ಕೊಯ್ಲತ್ತರ ನಿರ್ವಹಣೆಗಾಗಿ ಪ್ಯಾಕ್ಹೌಸ್ ನಿರ್ಮಾಣ ಹಾಗೂ ಯಂತ್ರೋಪ ಕರಣ ಖರೀಧಿಸಲು ಸಹಾಯಧನ ನೀಡ ಲಾಗುವುದು.
ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆ: ಗುಚ್ಚ ಮಾದರಿಯಲ್ಲಿ ಹೊಸ ತಂತ್ರಜ್ನಾನ ಅಳವಡಿಸಿಕೊಂಡು ಪ್ರದೇಶ ವಿಸ್ತರಣೆ, ನೀರು ಸಂಗ್ರಹಣ ಘಟಕ, ಪ್ಯಾಕ್ಹೌಸ್ ನಿರ್ಮಾಣಕ್ಕೆ ಸಹಾಯಧನ ನೀಡುವುದು.
ಕೃಷಿಭಾಗ್ಯ ಯೋಜನೆ: ಸಂರಕ್ಷಿತ ಬೇಸಾಯದಡಿ ಪಾಲಿಹೌಸ್, ನೆರಳು ಪರದೆ, ಘಟಕ ಹಾಗೂ ಕೃಷಿ ಹೊಂಡ ಚಟುವಟಿಕೆಗಳಿಗೆ ಸಹಾಯಧನ ನೀಡಲಾಗುವುದು.
ಗ್ರಾಮೀಣ ಉದ್ಯೋಗ ಖಾತರಿ: ತೆಂಗು, ಮಾವು, ಸಪೋಟ, ಬಾಳೆ, ಕಾಳು ಮೆಣಸು, ನುಗ್ಗೆ, ಪಪ್ಪಾಯಿ, ಗೇರು ಬೆಳೆ, ಹಾಗೂ ವಿವಿಧ ತೋಟಗಾರಿಕ ಬೆಳೆಗಳ ಪ್ರದೇಶ ವಿಸ್ತರಣೆ ಕಾರ್ಯಕ್ರಮಗಳನ್ನು ತೆಂಗು ಹಾಗೂ ಮಾವು ಪುನಶ್ಚೇತನ, ಕೊಳವೆ ಬಾವಿ ಮರು ಪೂರಣ, ಮಣ್ಣು ಮತ್ತು ನೀರು ಸಂರಕ್ಷಣೆ ಕಾಮಗಾರಿ ಗಳನ್ನು ರೈತರ ಜಮೀನಿನಲ್ಲಿ ಅನುಷ್ಠಾನ ಗೊಳಿಸುವುದು.
ಇನ್ನು ಉಳಿದಂತೆ ತೋಟಗಾರಿಕ ಬೆಳೆಗಳಿಗೆ ಮಳೆಯಾಶ್ರಿತ ಖುಷ್ಕಿ ಕೈಷಿಗೆ ನೀರು ಸರಬ ರಾಜಿಗೆ ಟ್ಯಾಂಕರ್ ಖರೀದಿಗೆ ಸಹಾಯಧನ, ಖಾಸಗಿ ಮಧುವನ ಸ್ಥಾಪನೆಗೆ ಆಸಕ್ತ ರೈತರಿಗೆ ಸಹಾಯಧನವನ್ನು ನೀಡಲಾಗುವುದು ಎಂದು ತಾಲೂಕು ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ರಾಜಪ್ಪ ತಿಳಿಸಿದರು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shobha-Kharandlaje](https://www.udayavani.com/wp-content/uploads/2024/07/Shobha-Kharandlaje-150x90.jpg)
Congrees Government; ರಾಜ್ಯದಲ್ಲಿರುವುದು ಗೋಲ್ಮಾಲ್ ಸರ್ಕಾರ: ಕೇಂದ್ರ ಸಚಿವೆ ಶೋಭಾ
![5-tumkur](https://www.udayavani.com/wp-content/uploads/2024/07/5-tumkur-150x90.jpg)
Tumkur ZP CEO ಕೊರಟಗೆರೆ ರೌಂಡ್ಸ್; ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಿಇಓ ಪ್ರಭು.ಜಿ
![4-koratagere](https://www.udayavani.com/wp-content/uploads/2024/07/4-koratagere-150x90.jpg)
Koratagere: ಮಜ್ಜಿಗೆ ಫ್ಯಾಕ್ಟರಿಯ ಬಾಯ್ಲರ್ ಸ್ಪೋಟ; ಕಾರ್ಮಿಕನಿಗೆ ಗಂಭೀರ ಗಾಯ
![1-ewewqe](https://www.udayavani.com/wp-content/uploads/2024/07/1-ewewqe-150x85.jpg)
Koratagere; ಬಸ್ ಗಳ ಸಮಸ್ಯೆ: ಅಳಲು ತೋಡಿಕೊಂಡ ವಿದ್ಯಾರ್ಥಿಗಳು
![Naxal chandru- Naxal Chandru arrested after 19 years; What is the case?](https://www.udayavani.com/wp-content/uploads/2024/07/Naxal-150x86.jpg)
Naxal chandru-19 ವರ್ಷದ ಬಳಿಕ ನಕ್ಸಲ್ ಚಂದ್ರು ಸೆರೆ; ಏನಿದು ಪ್ರಕರಣ?
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.