“ಜಾನಪದ ಸಂಸ್ಕೃತಿ ಮಾನವ ಜನಾಂಗದ ಬೆಳಕು’


Team Udayavani, Aug 12, 2017, 5:55 PM IST

janapada.jpg

ತುಮಕೂರು: ಓದು ಬರಹ ಗೊತ್ತಿಲ್ಲದ ಜಾನಪದರದ್ದು ಅಲಿಖೀತ ಸಂವಿಧಾನ. ಅವರ ಅಗಾಧ ಪಾರಂಪರಿಕ ಜಾನಪದ ಬಳಕೆಯಿಂದ
ನಮ್ಮ ಸಂಸ್ಕೃತಿ ಸಮೃದ್ಧವಾಗಿತ್ತೆಂದು ಕನ್ನಡ ಜಾನಪದ ಪರಿಷತ್‌ ರಾಜ್ಯ ಕಾರ್ಯಾಧ್ಯಕ್ಷ ಡಾ.ಎಸ್‌.ಬಾಲಾಜಿ ಅಭಿಪ್ರಾಯಪಟ್ಟರು.
 ಜಿಲ್ಲೆಯ ಕುಣಿಗಲ್‌ ತಾಲೂಕು ಕನ್ನಡ ಜಾನಪದ ಪರಿಷತ್‌ ತಾಲೂಕು ಘಟಕವನ್ನು ಡಮರುಗ ಬಾರಿಸುವುದರ ಮೂಲಕ
ಉದ್ಘಾಟಿಸಿ ಮಾತನಾಡಿ, ಜಾನಪದ ಸಂಸ್ಕೃತಿ ಮಾನವ ಜನಾಂಗದ ಬೆಳಕು ಎಂದರು. ಕೃಷಿ ಮತ್ತು ಜಾನಪದ ಸಂಸ್ಕೃತಿ ಹುಟ್ಟು ಸ್ತ್ರೀಯರಿಂದಾಗಿರುವುದು ಎಂಬುದು ಹೆಮ್ಮೆಯ ವಿಷಯ. ವಿಕಾಸಕ್ಕಾಗಿ ಜಾನಪದದ ಮೂಲಕ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿ ಸಮುದಾಯಕ್ಕೆ ಜಾನಪದ ಕಲೆಗಳ ಅರಿವು ಮತ್ತು ಪ್ರದರ್ಶನ ಕಲೆಗಳ ತರಬೇತಿ ಕಾರ್ಯಕ್ರಮವನ್ನು ಕನ್ನಡ ಜಾನಪದ ಪರಿಷತ್‌ ಹಮ್ಮಿಕೊಂಡಿದೆ ಎಂದು ಹೇಳಿದರು. ಕುಣಿಗಲ್‌ ನಿಂದ 8 ಕಿ.ಮೀ ದೂರದ ತಾಳೆಕೆರೆಯಲ್ಲಿ 12 ಎಕರೆ ವಿಶಾಲವಾದ ಪ್ರದೇಶದಲ್ಲಿ ಜಾನಪದ ಪ್ರಪಂಚವನ್ನು ಜಾನಪದ ಪರಿಷತ್‌ ಸ್ಥಾಪಿಸಿದ್ದು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕೆಂದರು. ಶಿಕ್ಷಣ ಇಲಾಖೆ ಶಾಲಾ ಕಾಲೇಜುಗಳಲ್ಲಿ ವಿಕಾಸಕ್ಕಾಗಿ ಜಾನಪದ ಕಾರ್ಯಕ್ರಮ ಹಮ್ಮಿಕೊಳ್ಳಲು ಸುತ್ತೋಲೆ ಹೊರಡಿಸಿದ್ದು ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಕನ್ನಡ ಜಾನಪದ ಪರಿಷತ್‌ ನೆರವಿನಿಂದ ಕಾರ್ಯಕ್ರಮ ಹಮ್ಮಿಕೊಳ್ಳಲು ಅನುಮತಿ ದೊರೆತಿದೆ ಎಂದು ತಿಳಿಸಿದರು. ಕನ್ನಡ ಜಾನಪದ ಪರಿಷತ್‌ ಜಿಲ್ಲಾಧ್ಯಕ್ಷ  ಪ್ರೋ.ಎಲ್‌.ಶ್ರೀನಿವಾಸಮೂರ್ತಿ, ಭಾರತದಲ್ಲಿ ಕುರಿ, ಕೋಳಿಗಳ ಸಮೀಕ್ಷೆಗಳಾಗಿವೆ. ಆದರೆ ಜಾನಪದ ಕಲಾವಿದರ ಸಮೀಕ್ಷೆಯಾಗದಿರುವುದು ವಿಷಾದನೀಯ. ಕನ್ನಡ ಜಾನಪದ ಪರಿಷತ್‌ ಕಲಾವಿದರ ಸಮೀಕ್ಷೆ ಮಾಡುವುದರ ಮೂಲಕ ದಾಖಲೀಕರಣ ಕಾರ್ಯನಿರ್ವಹಿಸುತ್ತಿದೆ ಎಂದು ನುಡಿದರು. ಕುಣಿಗಲ್‌ ಜಾನಪದಕ್ಕೆ ಅತ್ಯಮೂಲ್ಯ ಕೊಡುಗೆ ಸಲ್ಲಿಸಿದ್ದು. ರಾಜ್ಯ-ರಾಷ್ಟ್ರ ಮಟ್ಟದ ಕಾರ್ಯಕ್ರಮಗಳನ್ನೂ ಕುಣಿಗಲ್‌ ತಾಲೂಕಿನಲ್ಲಿ ಹಮ್ಮಿಕೊಳ್ಳುವಷ್ಟು ಇಲ್ಲಿನ ಜನರು ನೆಲಮಣ್ಣಿನ ಋಣವನ್ನರಿತ ವಿಶಾಲಹೃದಯಿಗಳು ಎಂದು ಅಭಿಪ್ರಾಯಪಟ್ಟರು. ಮೌಖೀಕ ಪರಂಪರೆಯೇ ಜಾನಪದ: ಸಿದ್ಧಾರ್ಥ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಎಚ್‌.ಕೆ.ರಘು ಮಾತನಾಡಿ, ಜಾನಪದ ನಮ್ಮ ಮೂಲ ಬದುಕು. ನಮ್ಮೊಳಗಿನ ಮೌಖೀಕ ಪರಂಪರೆ ಜಾನಪದವಾಗಿದೆ. ಭಾಷೆಯಿಲ್ಲದೆ, ಬಾಯಿಂದ ಬಾಯಿಗೆ ಬಂದ ಹಾಡುಗಳೇ ಜನಪದ ಹಾಡುಗಳಾಗಿವೆ. ಜಾನಪದ ಒಂದು ಕುಟುಂಬವಾಗಿದ್ದು ಇದರ ನೆರಳಿನಲ್ಲಿ ಅನೇಕ ಶಾಖೆಗಳಿವೆ ಎಂದು ಹೇಳಿದರು. ಕುಣಿಗಲ್‌ ಕನ್ನಡ ಸಾಹಿತ್ಯ ಪರಿಷತ್‌ನ ನಿಕಟ ಪೂರ್ವ ಅಧ್ಯಕ್ಷರಾದ
ದಿನೇಶಕುಮಾರ್‌, ನಾವೆಲ್ಲರೂ ಕನ್ನಡ ಜಾನಪದ ಪರಿಷತ್‌ ಜೊತೆಗಿರುತ್ತೇವೆ. ನಮ್ಮ ನೆಲದ ಋಣ ತೀರಿಸಲು ನಮಗೆ ಸಿಕ್ಕ ಒಂದು ಅವಕಾಶ ಇಲ್ಲಿಯ ಕಲೆಗಳನ್ನು ವಿದ್ಯಾರ್ಥಿಗಳಿಗೆ ಕಲಿಸುವಲ್ಲಿ ಶ್ರಮಿಸುತ್ತೇವೆಂದರು. ಜಾನಪದ ಸಂಸ್ಕೃತಿ ರೂಪಿಸಿಕೊಳ್ಳಿ: ಇತಿಹಾಸ ಉಪನ್ಯಾಸಕ ಎಸ್‌. ರಂಗಸ್ವಾಮಿ, ಜಾನಪದ ಕಲೆ ಮನೆ ಮನಗಳನ್ನು ಬೆಳಗಲಿ. ನಾವೆಲ್ಲರೂ ಜಾನಪದ ಸಂಸ್ಕೃತಿ ರೂಢಿಸಿಕೊಳ್ಳುವುದರ ಮೂಲಕ ಒತ್ತಡದ ಬದುಕಿಗೆ ಪೂರ್ಣ ವಿರಾಮವಿಡಬಹುದು. ನಾಡಿನ ಕಲೆ ಸಂಸ್ಕೃತಿಯನ್ನು ಉಳಿಸಿ-ಬೆಳೆಸಲು ಮುಂದಾಗಬೇಕೆಂದು ಸಲಹೆ ನೀಡಿದರು. ಪರಿಷತ್ತಿನ ಕಾರ್ಯಕ್ರಮಗಳಿಗೆ ಸಹಕಾರ ನೀಡುವೆ:ಅಧ್ಯಕ್ಷತೆ ವಹಿಸಿ ಮಾತನಾಡಿದ ಶ್ರೀಸಿದ್ಧಾರ್ಥ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಬಿ.ಆರ್‌.ರಂಗಸ್ವಾಮಿ, ಕನ್ನಡ ಜಾನಪದ ಪರಿಷತ್‌ ಉತ್ತಮ ಉದ್ದೇಶಗಳನ್ನು ಒಳಗೊಂಡು ಕಾರ್ಯನಿರ್ವಹಿಸುತ್ತಿರುವುದು ಹೆಮ್ಮೆಯ ವಿಷಯ. ಮುಂದಿನ ದಿನಗಳಲ್ಲಿ ಕಾರ್ಯಕ್ರಮಗಳನ್ನು ರೂಪಿಸುವಲ್ಲಿ ಪರಿಷತ್‌ ಜೊತೆ ಇರುತ್ತೇವೆ ಎಂದು ನುಡಿದರು. ಕಾರ್ಯಕ್ರಮದಲ್ಲಿ ತಾಲೂಕು ಕನ್ನಡ ಜಾನಪದ ಪರಿಷತ್ತಿನ ಅಧ್ಯಕ್ಷ ಆನಂದಮೂರ್ತಿ, ಅಶ್ವಿ‌ನಿ,
ಮಯೂರ ಮಿತ್ರ ಬೊಮ್ಮಣ್ಣ ಕವಿ ಮತ್ತಿತರರಿದ್ದರು. 

ಟಾಪ್ ನ್ಯೂಸ್

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.