ಬಸವಣ್ಣನ ತತ್ವಾದರ್ಶ ಪಾಲಿಸಿ


Team Udayavani, May 13, 2019, 4:47 PM IST

tumkur-tdy-5..

ತಿಪಟೂರು: ಬಸವಣ್ಣನವರನ್ನು ಕೇವಲ ಭಾಷಣಕ್ಕೆ ಸೀಮಿತಗೊಳಿಸದೇ, ಅವರ ತತ್ವಾದರ್ಶಗಳನ್ನು ಎಲ್ಲರೂ ಪಾಲಿಸುವ ಮೂಲಕ ಬಸವ ಜಯಂತಿಯನ್ನು ಅರ್ಥಪೂರ್ಣವಾಸಬೇಕು ಎಂದು ಸಾಹಿತಿ ಪ್ರೊ.ಟಿ.ಎಸ್‌.ನಾಗರಾಗಶೆಟ್ಟಿ ತಿಳಿಸಿದರು.

ನಗರದ ನಡೆ ನುಡಿ ಸಂಘಟನೆಯಿಂದ ನಡೆದ ‘ನಮ್ಮ ನಡೆ ನುಡಿಯಲ್ಲಿ ಬಸವಣ್ಣ’ ಎಂಬ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಚನಗಳು ಮನಸ್ಸನ್ನು ತಟ್ಟಬೇಕು: ಬಸವಣ್ಣನವರ ಜಯಂತಿಯಂದು ಮಾತ್ರ ಅವರನ್ನು ನೆನಪಿಸಿಕೊಳ್ಳದೇ, ತಮ್ಮ ನಿತ್ಯ ಬದುಕಿನಲ್ಲಿ ಬಸವಣ್ಣನವರ ತತ್ವಗಳನ್ನು ಎಷ್ಟರ ಮಟ್ಟಿಗೆ ಅಳವಡಿಸಿಕೊಂಡಿದ್ದೇವೆ ಎಂಬುದರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಶಿವಶರಣರ ಸಾಮಾಜಿಕ ಚಿಂತನೆಗಳು ಅವರ ಸರಳ ವಚನಗಳ ಮೂಲಕ ಮನೆ ಮನಗಳನ್ನು ಮುಟ್ಟಿವೆ. ಆದರೆ, ಅವು ಮನಸ್ಸನ್ನು ತಟ್ಟಬೇಕು. ಆತ್ಮಸಾಕ್ಷಿಯನ್ನು ಜಾಗೃತಗೊಳಿಸಬೇಕು ಎಂದು ತಿಳಿಸಿದರು.

ಬಸವಣ್ಣ ಭಾಷಣಕ್ಕೆ ಸೀಮಿತ ಬೇಡ: ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಕೆ.ಬಾಲಕೃಷ್ಣ ಮಾತನಾಡಿ, ಬಸವಣ್ಣ ಕೇವಲ ಭಾಷಣದ ವಸ್ತುವಾಗಿ ಸೀಮಿತವಾಗುತ್ತಿದ್ದಾರೆ. ಆಚರಣೆಯಲ್ಲಿ ಮಾತ್ರ ಇಂದಿಗೂ ಬಹಳಷ್ಟು ತಪ್ಪುಗಳು ನಿತ್ಯ ಗೋಚರಿಸುತ್ತವೆ. ಸಮಾಜದಲ್ಲಿ ಅಸಮಾನತೆ, ತಾರತಮ್ಯ ಎಲ್ಲೆಡೆ ಉಳಿದಿದೆ. ಅಂತಃಶುದ್ಧಿಯಿಂದ ಶರಣರ ವಿಚಾರಗಳನ್ನು ಸಾಕ್ಷೀಕರಿಸಿಕೊಂಡರೆ ಮಾತ್ರ ಸಮೃದ್ಧತೆ ಸಾಧ್ಯ ಎಂದು ಅಭಿಪ್ರಾಯಪಟ್ಟರು.

ತಳ ಸಮುದಾಯಗಳ ಕೊಡುಗೆ ಅಪಾರ: ತಾಲೂಕು ಶರಣ ಸಾಹಿತ್ಯ ಪರಿಷತ್‌ ಅಧ್ಯಕ್ಷ ಕೆ.ಎಂ.ಪರಮೇಶ್ವರಯ್ಯ ಮಾತನಾಡಿ, ದಲಿತರನ್ನು ಕುಡಿಯುವ ನೀರಿನ ಬಾವಿ ಮುಟ್ಟಿಸದಿದ್ದ ದಿನಗಳನ್ನು ಕಂಡಿದ್ದೇವೆ. ಸಾಂಸ್ಕೃತಿಕ ಮತ್ತು ಸಾಮಾಜಿಕವಾಗಿ ಅಪಾರ ಕೊಡುಗೆ ನೀಡುತ್ತಿರುವ ತಳ ಸಮುದಾಯಗಳು ಸಮಾಜದ ಸ್ವಾಸ್ಥ ್ಯಕ್ಕೆ ಅಪಾರ ಕೊಡುಗೆ ನೀಡಿವೆ. ಆದರೆ, ಆ ಸಮುದಾಯಗಳನ್ನು ಕೇವಲ ದುಡಿಸಿಕೊಳ್ಳಲು ಬಳಸಿಕೊಂಡು ತಾರತಮ್ಯ ಎಸಗುವ ಮನಸ್ಥಿತಿ ದೂರವಾಗಬೇಕು ಎಂದು ತಿಳಿಸಿದರು.

ಅಸಮಾನತೆ ನೀಗಲಿ: ಸಾಹಿತಿ ಬಿಳಿಗೆರೆ ಕೃಷ್ಣಮೂರ್ತಿ ಮಾತನಾಡಿ, ಹನ್ನೆರಡನೆ ಶತಮಾನದ ಮಹಾಮನೆ ಪರಿಕಲ್ಪನೆ ಇಂದಿಗೂ ಅಗತ್ಯವಿದೆ. ಎಲ್ಲಾ ಜಾತಿ, ಜನಾಂಗಗಳನ್ನು ಒಟ್ಟಿಗೆ ಕರೆದೊಯ್ಯುವ ಶಕ್ತಿ ಶರಣರ ವಿಚಾರಗಳಲ್ಲಿವೆ. ಪ್ರತಿ ಊರಿನಲ್ಲೂ ಮಹಾಮನೆ ಪ್ರತಿರೂಪಗಳು ಸೃಷ್ಟಿಯಾದರೆ ಅಸಮಾನತೆಗೆ ಆಸ್ಪದ ಇರುವುದಿಲ್ಲ ಎಂದು ಹೇಳಿದರು.

ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿ: ಕತೆಗಾರ ಎಸ್‌. ಗಂಗಾಧರಯ್ಯ ಮಾತನಾಡಿ, ನಾವು ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದಾಗ ಶಿಕ್ಷಕರು ಕೂಡ ಮಕ್ಕಳ ಬಗ್ಗೆ ತಾರತಮ್ಯ ಮಾಡುತ್ತಿದ್ದರು. ಈಗ ಕಾಲ ಬದಲಾದರೂ ಸಮಾಜದ ಮನಸ್ಥಿತಿ ಬದಲಾಗಿಲ್ಲ. ಶಿಕ್ಷಕರಾದರೂ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುತ್ತಾ ಬಂದರೆ ಮಾತ್ರ ಮುಂದಾದರೂ ಪರಿವರ್ತನೆ ಸಾಧ್ಯ ಎಂದರು.

ಸಂವಾದದಲ್ಲಿ ಪ್ರಾಂಶುಪಾಲ ಎಂ.ಡಿ.ಶಿವಕುಮಾರ್‌, ದಲಿತ ಮುಖಂಡರಾದ ರಂಗಸ್ವಾಮಿ, ಬಜಗೂರು ಮಂಜುನಾಥ್‌, ಎಸ್‌.ಎ.ಶ್ರೀನಿವಾಸ್‌, ರಂಗಕರ್ಮಿ ಸತೀಶ್‌, ತಿಪಟೂರು ಕೃಷ್ಣ, ಉಜ್ಜಜ್ಜಿ ರಾಜಣ್ಣ, ಅಲ್ಲಾಬಕಾಶ್‌, ಚೆನ್ನೇಗೌಡ, ಗೋವಿಂದರಾಜು, ಸಂತೋಷ್‌, ಆನಂದ್‌, ಸಾ.ಚ.ಜಗದೀಶ್‌, ಡಾ.ರಘುಪತಿ, ಶ್ರೀಕಾಂತ್‌ ಕೆಳಹಟ್ಟಿ, ದೇವರಾಜ್‌, ಶೈಲಜಾ, ಸಂಘಮಿತ್ರೆ ಮುಂತಾದವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.