ಸಸಿ ನೆಟ್ಟು ಪೋಷಣೆ ಮಾಡದ ಅರಣ್ಯ ಇಲಾಖೆ

ಒಣಗಲು ಶುರುವಾದ ನೂರಾರು ಸಸಿಗಳು ರಸ್ತೆ ಬದಿಯಲ್ಲಿ ನೆಟ್ಟ ಸಸಿಗಳಿಗೆ ನೀರೇ ಇಲ್ಲ

Team Udayavani, May 4, 2019, 4:30 PM IST

tumkur-6-tdy..

ಹುಳಿಯಾರು ಯಳನಾಡು ರಸ್ತೆಯಲ್ಲಿ ನಿರ್ಮಿಸಿರುವ ನೆಡುತೋಪು ಒಣಗಿರುವುದು

ಹುಳಿಯಾರು: ರಸ್ತೆ ಬದಿ ನೆಟ್ಟಿರುವ ಸಸಿಗಳನ್ನು ಅರಣ್ಯ ಇಲಾಖೆ ಸಂಪೂರ್ಣವಾಗಿ ಮರೆತಿದೆ. ಇಲ್ಲಿನ ಯಳನಾಡು ರಸ್ತೆಯ ಎರಡು ಬದಿಯ ಇಕ್ಕೆಲಗಳಲ್ಲಿ ವಿವಿಧ ಬಗೆಯ ಸಸಿಗಳು ಇನ್ನೂ ಬೆಳವಣಿಗೆ ಹಂತದ್ದು ನಿಷ್ಕಾಳಜಿಯ ಕಾರಣ ಬಿಸಿಲು ಮತ್ತು ದನಕರುಗಳ ದಾಳಿಗೆ ಒಳಗಾಗಿವೆ. ಹಸಿರೀಕರಣ ಯೋಜನೆ ಅರಣ್ಯ ಇಲಾಖೆಯ ಮಹತ್ವಾ ಕಾಂಕ್ಷಿ ಕಾರ್ಯಕ್ರಮ. ಈ ಯೋಜನೆಗೆ ಪೂರಕವಾಗಿ ಹುಳಿಯಾರಿನಿಂದ ಯಳನಾಡು ಗ್ರಾಮದವರೆಗೂ ನೆಡುತೋಪು ನಿರ್ಮಿಸಿತ್ತು. ಆದರೆ, ನಿರ್ವಹಣೆ ಇಲ್ಲದೇ ಹಾಕಿರುವ ಸಸಿಗಳು ಒಣಗುತ್ತಿದ್ದು, ಖರ್ಚು ಮಾಡಿರುವ ಹಣ ವ್ಯರ್ಥವಾಗಿದೆ.

ನಿರ್ಲಕ್ಷ್ಯ: ರಸ್ತೆ ಬದಿ ಸಸಿಗಳನ್ನು ನೆಟ್ಟು ಪೋಷಿಸಲು ಸರ್ಕಾರ ಉದ್ದೇಶಿಸಿ ನೌಕರರನ್ನು ನಿಯೋಜಿಸಿತ್ತು. ದಿನಗೂಲಿ ಸಿಬ್ಬಂದಿ, ಅಧಿಕಾರಿಗಳು ನಿಯೋಜಿಸಿ ರುವ ಜಾಗಗಳಲ್ಲಿ ಸಸಿ ನೆಟ್ಟು ಪೋಷಣೆ ಮಾಡ ಬೇಕು. ಆದರೆ ಈ ಕೆಲಸಕ್ಕೆ ನಿರ್ಲಕ್ಷ್ಯ ವಹಿಸಿದ್ದು ಯೋಜನೆ ಹಳ್ಳ ಹಿಡಿದಿದೆ.

ಟ್ಯಾಂಕರ್‌ ಮೂಲಕ ಸಸಿಗಳಿಗೆ ನೀರು ಹಾಕದೆ ನಿರ್ಲಕ್ಷ್ಯಿಸಿರುವುದರಿಂದ ಬೇಸಿಗೆ ಬಿಸಿಲಿನ ಝಳಕ್ಕೆ ಹಲವು ಸಸಿಗಳು ಸಂಪೂರ್ಣ ಒಣಗಿ ನಿಂತಿವೆ. ತಡೆಬೇಲಿ ಕಿತ್ತುಹೋಗಿವೆ. ಕೆಲ ಕಡೆ ಬೀಡಾಡಿ ದನಗಳಿಂದ ಸಸಿಗಳು ಅರ್ಧಕ್ಕೆ ಮುರಿದಿವೆ. ಅತ್ತ ದಾರಿ ಹೋಕರಿಗೆ ನೆರಳಿನ ಕೊಡೆಯಂತಿ ರುತ್ತಿದ್ದ ರಸ್ತೆ ಬದಿ ಸಸಿಗಳ ಸಂಖ್ಯೆ ದಿನದಿಂದ ದಿನಕ್ಕೆ ಕ್ಷೀಣಿ ಸುತ್ತಿದೆ. ಇತ್ತ ಮರ ಸಸಿಗಳ ರಕ್ಷಣೆ ಮತ್ತು ಪೋಷಣೆ ಹೊಣೆ ಹೊತ್ತ ಅರಣ್ಯ ಇಲಾಖೆ ಮಾತ್ರ ನೆಟ್ಟ ಸಸಿಗಳ ಬಗ್ಗೆ ಮುತುವರ್ಜಿ ವಹಿಸದೆ ಒಣಗಲು ಬಿಟ್ಟು ಪರಿಸರ ಪ್ರಿಯರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಯೋಜನೆ ತಲುಪಿಸಿ: ಅರಣ್ಯ ಇಲಾಖೆ ಜವಾಬ್ದಾರಿ ಯುತವಾಗಿ ಕೆಲಸ ಮಾಡಲು ಮುಂದಾಗಬೇಕಿದೆ. ನೆಡು ತೋಪು ನಿರ್ವಹಣೆ ಹೊಣೆ ಹೊತ್ತ ಸಿಬ್ಬಂದಿಗೆ ತಕ್ಷಣ ಟ್ಯಾಂಕರ್‌ ಮೂಲಕ ನೀರು ಹಾಕುವಂ ತೆಯೂ, ಕಿತ್ತು ಹೋಗಿರುವ ಬೇಲಿ ಸರಿಪಡಿಸು ವಂತೆಯೂ ನಿರ್ದೇಶನ ನೀಡಬೇಕಿದೆ. ಹುಳಿಯಾರಿನ ಪರಿಸರ ಪ್ರೇಮಿ ರಾಜುಬಡಗಿ, ಇತ್ತೀಚಿನ ದಿನಗಳಲ್ಲಿ ರಸ್ತೆ ಅಭಿವೃದ್ಧಿ ನೆಪದಲ್ಲಿ ಸಾವಿರಾರು ಮರಗಳ ಮಾರಣ ಹೋಮ ನಡೆದಿದೆ. ಕಳೆದ 2-3 ತಿಂಗಳ ಹಿಂದಷ್ಟೇ ಹುಳಿಯಾರು ಪಟ್ಟಣದ ನೂರಾರು ವರ್ಷ ಹಳೆಯ ಹೆಮ್ಮರಗಳನ್ನು ಧರೆಗುರುಳಿಸಿದ್ದರು. ಆದರೆ ಬೆಳಸುವ ಕಾರ್ಯ ಮಾತ್ರ ಸಮರ್ಪಕವಾಗಿ ಆಗುತ್ತಿಲ್ಲ. ಸಸಿ ಬೆಳೆಸ ಲೆಂದೇ ಸರ್ಕಾರ ಹಣ ಕೊಟ್ಟರೂ ಪ್ರಯೋಜನ ವಾಗುತ್ತಿಲ್ಲ. ಹಾಗಾಗಿಯೇ ಈ ಭಾಗ ನಿರಂತರ ಬರಲಾಗಕ್ಕೆ ತುತ್ತಾಗುತ್ತಿದೆ ಎಂದು ತಿಳಿಸಿದ್ದಾರೆ.

.ಎಚ್.ಬಿ.ಕಿರಣ್‌ ಕುಮಾರ್‌

ಟಾಪ್ ನ್ಯೂಸ್

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur; ನನ್ನನ್ನು ಬರಿಗೈಯಲ್ಲಿ ಕಳುಹಿಸಬೇಡಿ: ಸೋಮಣ್ಣ

Tumkur; ನನ್ನನ್ನು ಬರಿಗೈಯಲ್ಲಿ ಕಳುಹಿಸಬೇಡಿ: ಸೋಮಣ್ಣ

12-pavagada

Pavagada: ರಸ್ತೆ ಅಪಘಾತ; ವ್ಯಕ್ತಿ ಸ್ಥಳದಲ್ಲೇ ಸಾವು

ಮನೆಗೆ ಬರುತ್ತೇನೆಂದ ಸೋಮಣ್ಣಗೆ “ಬರಬೇಡಿ’ ಎಂದ ಮಾಧುಸ್ವಾಮಿ!

ಮನೆಗೆ ಬರುತ್ತೇನೆಂದ ಸೋಮಣ್ಣಗೆ “ಬರಬೇಡಿ’ ಎಂದ ಮಾಧುಸ್ವಾಮಿ!

1-qweqewq

Koratagere;ಕಾರು ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು: ಇಬ್ಬರು ಗಂಭೀರ

9-pavagada

Pavagada: ಪತ್ನಿಯನ್ನು ಹತ್ಯೆ ಮಾಡಿ ಪತಿ ಪರಾರಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.