ಸಸಿ ನೆಟ್ಟು ಪೋಷಣೆ ಮಾಡದ ಅರಣ್ಯ ಇಲಾಖೆ

ಒಣಗಲು ಶುರುವಾದ ನೂರಾರು ಸಸಿಗಳು ರಸ್ತೆ ಬದಿಯಲ್ಲಿ ನೆಟ್ಟ ಸಸಿಗಳಿಗೆ ನೀರೇ ಇಲ್ಲ

Team Udayavani, May 4, 2019, 4:30 PM IST

tumkur-6-tdy..

ಹುಳಿಯಾರು ಯಳನಾಡು ರಸ್ತೆಯಲ್ಲಿ ನಿರ್ಮಿಸಿರುವ ನೆಡುತೋಪು ಒಣಗಿರುವುದು

ಹುಳಿಯಾರು: ರಸ್ತೆ ಬದಿ ನೆಟ್ಟಿರುವ ಸಸಿಗಳನ್ನು ಅರಣ್ಯ ಇಲಾಖೆ ಸಂಪೂರ್ಣವಾಗಿ ಮರೆತಿದೆ. ಇಲ್ಲಿನ ಯಳನಾಡು ರಸ್ತೆಯ ಎರಡು ಬದಿಯ ಇಕ್ಕೆಲಗಳಲ್ಲಿ ವಿವಿಧ ಬಗೆಯ ಸಸಿಗಳು ಇನ್ನೂ ಬೆಳವಣಿಗೆ ಹಂತದ್ದು ನಿಷ್ಕಾಳಜಿಯ ಕಾರಣ ಬಿಸಿಲು ಮತ್ತು ದನಕರುಗಳ ದಾಳಿಗೆ ಒಳಗಾಗಿವೆ. ಹಸಿರೀಕರಣ ಯೋಜನೆ ಅರಣ್ಯ ಇಲಾಖೆಯ ಮಹತ್ವಾ ಕಾಂಕ್ಷಿ ಕಾರ್ಯಕ್ರಮ. ಈ ಯೋಜನೆಗೆ ಪೂರಕವಾಗಿ ಹುಳಿಯಾರಿನಿಂದ ಯಳನಾಡು ಗ್ರಾಮದವರೆಗೂ ನೆಡುತೋಪು ನಿರ್ಮಿಸಿತ್ತು. ಆದರೆ, ನಿರ್ವಹಣೆ ಇಲ್ಲದೇ ಹಾಕಿರುವ ಸಸಿಗಳು ಒಣಗುತ್ತಿದ್ದು, ಖರ್ಚು ಮಾಡಿರುವ ಹಣ ವ್ಯರ್ಥವಾಗಿದೆ.

ನಿರ್ಲಕ್ಷ್ಯ: ರಸ್ತೆ ಬದಿ ಸಸಿಗಳನ್ನು ನೆಟ್ಟು ಪೋಷಿಸಲು ಸರ್ಕಾರ ಉದ್ದೇಶಿಸಿ ನೌಕರರನ್ನು ನಿಯೋಜಿಸಿತ್ತು. ದಿನಗೂಲಿ ಸಿಬ್ಬಂದಿ, ಅಧಿಕಾರಿಗಳು ನಿಯೋಜಿಸಿ ರುವ ಜಾಗಗಳಲ್ಲಿ ಸಸಿ ನೆಟ್ಟು ಪೋಷಣೆ ಮಾಡ ಬೇಕು. ಆದರೆ ಈ ಕೆಲಸಕ್ಕೆ ನಿರ್ಲಕ್ಷ್ಯ ವಹಿಸಿದ್ದು ಯೋಜನೆ ಹಳ್ಳ ಹಿಡಿದಿದೆ.

ಟ್ಯಾಂಕರ್‌ ಮೂಲಕ ಸಸಿಗಳಿಗೆ ನೀರು ಹಾಕದೆ ನಿರ್ಲಕ್ಷ್ಯಿಸಿರುವುದರಿಂದ ಬೇಸಿಗೆ ಬಿಸಿಲಿನ ಝಳಕ್ಕೆ ಹಲವು ಸಸಿಗಳು ಸಂಪೂರ್ಣ ಒಣಗಿ ನಿಂತಿವೆ. ತಡೆಬೇಲಿ ಕಿತ್ತುಹೋಗಿವೆ. ಕೆಲ ಕಡೆ ಬೀಡಾಡಿ ದನಗಳಿಂದ ಸಸಿಗಳು ಅರ್ಧಕ್ಕೆ ಮುರಿದಿವೆ. ಅತ್ತ ದಾರಿ ಹೋಕರಿಗೆ ನೆರಳಿನ ಕೊಡೆಯಂತಿ ರುತ್ತಿದ್ದ ರಸ್ತೆ ಬದಿ ಸಸಿಗಳ ಸಂಖ್ಯೆ ದಿನದಿಂದ ದಿನಕ್ಕೆ ಕ್ಷೀಣಿ ಸುತ್ತಿದೆ. ಇತ್ತ ಮರ ಸಸಿಗಳ ರಕ್ಷಣೆ ಮತ್ತು ಪೋಷಣೆ ಹೊಣೆ ಹೊತ್ತ ಅರಣ್ಯ ಇಲಾಖೆ ಮಾತ್ರ ನೆಟ್ಟ ಸಸಿಗಳ ಬಗ್ಗೆ ಮುತುವರ್ಜಿ ವಹಿಸದೆ ಒಣಗಲು ಬಿಟ್ಟು ಪರಿಸರ ಪ್ರಿಯರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಯೋಜನೆ ತಲುಪಿಸಿ: ಅರಣ್ಯ ಇಲಾಖೆ ಜವಾಬ್ದಾರಿ ಯುತವಾಗಿ ಕೆಲಸ ಮಾಡಲು ಮುಂದಾಗಬೇಕಿದೆ. ನೆಡು ತೋಪು ನಿರ್ವಹಣೆ ಹೊಣೆ ಹೊತ್ತ ಸಿಬ್ಬಂದಿಗೆ ತಕ್ಷಣ ಟ್ಯಾಂಕರ್‌ ಮೂಲಕ ನೀರು ಹಾಕುವಂ ತೆಯೂ, ಕಿತ್ತು ಹೋಗಿರುವ ಬೇಲಿ ಸರಿಪಡಿಸು ವಂತೆಯೂ ನಿರ್ದೇಶನ ನೀಡಬೇಕಿದೆ. ಹುಳಿಯಾರಿನ ಪರಿಸರ ಪ್ರೇಮಿ ರಾಜುಬಡಗಿ, ಇತ್ತೀಚಿನ ದಿನಗಳಲ್ಲಿ ರಸ್ತೆ ಅಭಿವೃದ್ಧಿ ನೆಪದಲ್ಲಿ ಸಾವಿರಾರು ಮರಗಳ ಮಾರಣ ಹೋಮ ನಡೆದಿದೆ. ಕಳೆದ 2-3 ತಿಂಗಳ ಹಿಂದಷ್ಟೇ ಹುಳಿಯಾರು ಪಟ್ಟಣದ ನೂರಾರು ವರ್ಷ ಹಳೆಯ ಹೆಮ್ಮರಗಳನ್ನು ಧರೆಗುರುಳಿಸಿದ್ದರು. ಆದರೆ ಬೆಳಸುವ ಕಾರ್ಯ ಮಾತ್ರ ಸಮರ್ಪಕವಾಗಿ ಆಗುತ್ತಿಲ್ಲ. ಸಸಿ ಬೆಳೆಸ ಲೆಂದೇ ಸರ್ಕಾರ ಹಣ ಕೊಟ್ಟರೂ ಪ್ರಯೋಜನ ವಾಗುತ್ತಿಲ್ಲ. ಹಾಗಾಗಿಯೇ ಈ ಭಾಗ ನಿರಂತರ ಬರಲಾಗಕ್ಕೆ ತುತ್ತಾಗುತ್ತಿದೆ ಎಂದು ತಿಳಿಸಿದ್ದಾರೆ.

.ಎಚ್.ಬಿ.ಕಿರಣ್‌ ಕುಮಾರ್‌

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.