ಮಿಂಚಕಲ್ಲು ಬೆಟ್ಟದಲ್ಲಿ ವೆಂಕಟರಮಣ ಸ್ವಾಮಿ ದೇವಾಲಯದ ಅಡಿಗಲ್ಲು ಪೂಜೆ

ಸಸಿ ನೆಡುವ ಕಾರ್ಯಕ್ರಮ,ಆಯುರ್ವೇದ ಆರೋಗ್ಯ ತಪಾಸಣಾ ಶಿಬಿರ

Team Udayavani, Nov 10, 2022, 8:54 PM IST

1-sadsdsad

ಕೊರಟಗೆರೆ: ಮಿಂಚಕಲ್ಲು ಬೆಟ್ಟ ಶ್ರೀ ವೆಂಕಟರಮಣ ಸ್ವಾಮಿ ಮತ್ತು ಆಂಜನೇಯ ಸ್ವಾಮಿ ದೇವಾಲಯ ಅಭಿವೃದ್ದಿ ಸಮಿತಿ, ಪಾರಂಪರಿಕ ವೈದ್ಯ ಪರಿಷತ್ ತುಮಕೂರು ಹಾಗೂ ಆಯುಷ್ ಇಲಾಖೆ ತುಮಕೂರು ಇವರು ಜೊತೆಗೂಡಿ ತುಮಕೂರು ತಾಲೂಕು, ಬೆಳಧರ ಗ್ರಾಮ ಪಂಚಾಯಿತಿ ವಾಪ್ತಿಯಲ್ಲಿ ಇರುವ ಮಿಂಚಕಲ್ಲು ಬೆಟ್ಟದಲ್ಲಿ ವೆಂಕಟರಮಣ ಸ್ವಾಮಿಯ ದೇವಾಲಯದ ಅಡಿಗಲ್ಲು ಪೂಜೆ, ಆಯುರ್ವೇದ ಗಿಡಮೂಲಿಕೆಗಳ ಸಸಿ ನೆಡುವ ಕಾರ್ಯಕ್ರಮ ಮತ್ತು ಆಯುರ್ವೇದ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಪೂಜ್ಯ ಬಾಲಕೃಷ್ಣ ಗರೂಜಿರವರು ಪಾರಂಪರಿಕ ವೈದ್ಯಕೀಯ ಪರಂಪರೆಯು ಇತ್ತೀಚಿನ ದಿನಗಳಲ್ಲಿ ಮರೆಯಾಗುತ್ತಿದ್ದು ಇತ್ತೀಚಿನ ಯುವಜನತೆ ಪಾರಂಪರಿಕ ವೈದ್ಯಕೀಯ ಪದ್ದತಿಯನ್ನು ಹೆಚ್ಚು ಅಳವಡಿಸಿಕೊಂಡು ಪ್ರೋತ್ಸಾಹಿಸಬೇಕು ಎಂದು ಸಲಹೆ ನೀಡಿದರು.

ವೈಕುಂಟಗಿರಿ ನಾಮ ಫಲಕವನ್ನು ಉದ್ಘಾಟಿಸಿ ತಹಶೀಲ್ದಾರ್ ಜಿ.ವಿ.ಮೋಹನ್ ಕುಮಾರ್ ಮಾತನಾಡಿ ಮಿಂಚಕಲ್ಲು ಬೆಟ್ಟದಲ್ಲಿ ಶ್ರೀ ವೆಂಕಟರಮಣ ಸ್ವಾಮಿ ದೇವಾಲಯವನ್ನು ನಿರ್ಮಾಣ ಮಾಡಬೇಕೆಂದಿರುವುದು ಸಂತಸದ ವಿಷಯ ಧಾರ್ಮಿಕ ಆಚರಣೆಯಲ್ಲಿ, ಪಾರಂಪರಿಕ ವೈದ್ಯ ಪದ್ದತಿಯನ್ನು ಅಳವಡಿಸಿಕೊಂಡು ಎಲ್ಲರೂ ಉತ್ತಮ ಆರೋಗ್ಯಯುತ ಜೀವನ ನೆಡೆಸುವಂತೆ ತಿಳಿಸುತ್ತಾ ನಿಮ್ಮ ಎಲ್ಲಾ ಈ ಉತ್ತಮ ಕಾರ್ಯಗಳಿಗೆ ನನ್ನ ವಯಕ್ತಿಕ ಸಹಕಾರವಿದೆ ಎಂದು ತಿಳಿಸಿದರು.

ಜಿಲ್ಲಾ ಆಯುಷ್ ಅಧಿಕಾರಿಗಳಾದ ಸಂಜೀವಮೂರ್ತಿರವರು ಮಾತನಾಡಿ ಯೋಗ, ವ್ಯಾಯಾಮ, ಹಸಿರು ತರಕಾರಿ, ಸಿರಿಧಾನ್ಯ, ಹೆಚ್ಚು ಪೋಷಕಾಂಶ ಇರುವ ಆಹಾರವನ್ನು ಸೇವನೇ ಮಾಡುವುದರಿಂದ ಉತ್ತಮ ಆರೋಗ್ಯ ಮತ್ತು ದೀರ್ಘ ಆಯುಷ್ಯ ಪಡೆಯಬಹುದು ಎಂದು ಸಲಹೆ ನೀಡಿದರು ಮತ್ತು ಉಚಿತ ಆಯುರ್ವೇದ ಆರೋಗ್ಯ ತಪಾಸಣ ಶಿಬಿರದ ಅನುಕೂಲವನ್ನು ಪಡೆದುಕೊಳ್ಳುವಂತೆ ಮನವಿ ಮಾಡಿದರು.

ತಾಲ್ಲೂಕು ಪಾರಂಪರಿಕ ವೈದ್ಯ ಪರಿಷತ್, ಅಧ್ಯಕ್ಷರಾದ ಕುಂ.ಶಿ.ಸದಾಶಿವಯಯ್ಯ ಮಾತನಾಡಿ ಕೆಲವು ಆಯುರ್ವೇದ ಗುಣವುಳ್ಳ ಸಸ್ಯಗಳನ್ನು ಪರಿಚಯಿಸಿ ಅವುಗಳಿಂದ ಮನೆಮದ್ದು ತಯಾರಿಕೆ ಮತ್ತು ಬಳಕೆಮಾಡುವ ಬಗ್ಗೆ ತಿಳಿವಳಿಕೆ ನೀಡಿದರು

ತುಮಕೂರು ತಾಲ್ಲೂಕು ಪಾರಂಪರಿಕ ವೈದ್ಯ ಪರಿಷತ್, ಅಧ್ಯಕ್ಷ ಕುಂ.ಶಿ.ಸದಾಶಿವಯ್ಯ ಮಾತನಾಡಿ ಕೆಲವು ಆಯುರ್ವೇದ ಗುಣವುಳ್ಳ ಸಸ್ಯಗಳನ್ನು ಪರಿಚಯಿಸಿ ಅವುಗಳಿಂದ ಮನೆಮದ್ದು ತಯಾರಿಕೆ ಮತ್ತು ಬಳಕೆಮಾಡುವ ಬಗ್ಗೆ ತಿಳಿವಳಿಕೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷರಾದ ಮೂಡಲಗಿರಿಯಪ್ಪನವರು ಪುರಾತನ ಇತಿಹಾಸ ಹೊಂದಿರುವ ಮಿಂಚಕಲ್ಲು ಬೆಟ್ಟದಲ್ಲಿ ಶ್ರೀ ವೆಂಕಟೇಶ್ವರಸ್ವಾಮಿಯ ಪಾದುಕೆಯಿದ್ದು ಶತಮಾನಗಳಿಂದ ಪಾದುಕೆಗಳಿಗೆ ಪೂಜೆ, ಆರತಿ, ಹೋಮ ಅನ್ನಸಂತರ್ಪಣೆ ಇತ್ಯಾದಿ ಕಾರ್ಯಗಳನ್ನು ಮಾಡುತ್ತಾ ಬಂದಿದ್ದು ಈ ಜಾಗದಲ್ಲಿ ದೇವಾಲಯ ನಿರ್ಮಾಣ ಮಾಡಬೇಕೆಂಬುದು ಭಕ್ತಾದಿಗಳ ಬಹು ವರ್ಷಗಳ ಕನಸಾಗಿದ್ದು ಭಕ್ತಾದಿಗಳು ದೇವಾಲಯ ನಿರ್ಮಾಣಕ್ಕೆ ತನು, ಮನ, ಧನ ಅರ್ಪಿಸಿ ದೇವರ ಕೃಪೆಗೆ ಪಾತ್ರರಾಗಬೇಕೆಂದು ಮನವಿ ಮಾಡಿದರು.

ದೇವಾಲಯ ಸಮಿತಿಯ ಕಾರ್ಯದರ್ಶಿಯವರಾದ ವಾಸುದೇವಕುಮಾರ್‌ರವರು ತುಮಕೂರು ನಗರದಿಂದ 20 ಕಿ.ಮೀ ದೂರವಿರುವ ಮಿಂಚಕಲ್ಲು ಬೆಟ್ಟವು ಸುಮಾರು 400 ವರ್ಷಗಳ ಇತಿಹಾಸ ಪರಂಪರೆಯನ್ನು ಹೊಂದಿದ್ದು ಈ ಬೆಟ್ಟವು 3612.8 ಅಡಿಗಳ ಎತ್ತರದ ಬೆಟ್ಟವಾಗಿದ್ದು, ಐದು ಸುತ್ತಿನ ಕೋಟೆ, ಕೋಟೆ ಬಾಗಿಲುಗಳು, 8 ರಿಂದ 10 ನೀರಿನ ದೊಣೆಗಳು, ಮಂಟಪಗಳು ಶ್ರೀ ಆಂಜನೇಯ ಸ್ವಾಮಿ ದೇವಾಲಯ, ಶ್ರೀ ವೆಂಕಟರಮಣ ಸ್ವಾಮಿಯ ಪಾದಗಳು ಇದ್ದು ಇವುಗಳು ಅಳಿವಿನ ಅಂಚಿನಲ್ಲಿದ್ದು ಸರ್ಕಾರ ಇವುಗಳನ್ನು ಉಳಿಸಿ ಅಭಿವೃದ್ದಿಪಡಿಸಿ ದಾರ್ಮಿಕ ಮತ್ತು ಪ್ರವಾಸಿ ಕ್ಷೇತ್ರವಾಗಿ ಮಾಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾದ ನಗರಾಭಿವೃದಿ ಪ್ರಾಧಿಕಾರದ ಆಯುಕ್ತರಾದ ಗೋಪಾಲ್ ಜಾದವ್, ಕಂದಾಯ ಅಧಿಕಾರಿಯಾದ ದೇವರಾಜು, ಬೆಳಧರ ಗ್ರಾಮ ಪಂಚಾಯಿತಿ ಸದಸ್ಯರಾದ ಪುಟ್ಟರಾಜು, ಯಶೋದಮ್ಮ, ಮಹೇಶ್, ಶೋಭ, ಪಾರಂಪರಿಕ ವೈದ್ಯ ಪರಿಷತ್ ಸಂಚಾಲಕರಾದ ಸರೇಶ್ ಕುಮಾರ್, ಮಿಂಚಕಲ್ಲು ಬೆಟ್ಟ ಶ್ರೀ ವೆಂಕಟರಮಣ ಸ್ವಾಮಿ ಮತ್ತು ಆಂಜನೇಯ ಸ್ವಾಮಿ ದೇವಾಲಯ ಅಭಿವೃದ್ದಿ ಸಮಿತಿ ಗೌರವ ಅಧ್ಯಕ್ಷರಾದ ತಿಮ್ಮೇಗೌಡ್ರು, ನಿರ್ದೇಶಕರಾದ ರಾಮಚಂದ್ರಪ್ಪ, ಜಯರಾಮಯ್ಯ, ಪಿ ಸಿದ್ದಗಂಗಪ್ಪ, ಮಾರುತಿ, ಡಿ.ನರಸರಾಜು, ಸಿ.ಡಿ.ನರಸರಾಜು, ಹನುಮಂತರಾಜು, ಬಸವರಾಜು, ಸಿ ಆರ್ ರಂಗನಾಥ್ ಸ್ವಾಮಿ, ಸರೇಶ್, ತಿಮ್ಮರಾಜು, ಒಬಳಾಪುರ ಗ್ರಾಪಂ ಸದಸ್ಯ ಆನಂದ್ ಇದ್ದರು.

ಚಿತ್ರ:ಮಿಂಚುಕಲ್ಲು ಬೆಟ್ಟ ಶ್ರೀ ವೆಂಕಟೇಶ್ವರ ಸ್ವಾಮಿ ಮತ್ತು ಆಂಜನೇಯ ಸ್ವಾಮಿ ಸೇವಾ ಸಮಿತಿ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮ ವನ್ನು ಪೂಜ್ಯರಾದ ಬಾಲಕೃಷ್ಣ ಗುರೂಜಿ ಉದ್ಘಾಟನೆ ಮಾಡಿದರು.

ಟಾಪ್ ನ್ಯೂಸ್

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.