ನಗರದಲ್ಲಿ ಹಸಿದವರಿಗೆ ಉಚಿತ ಊಟ
Team Udayavani, May 12, 2021, 5:56 PM IST
ತುಮಕೂರು: ಕೊರೊನಾ ಈ ಸಂಕಷ್ಟದ ವೇಳೆಹಸಿದುಕೊಂಡು ಯಾರೂ ಇರಬಾರದುಎಂದು ಜಿಲ್ಲೆಯಲ್ಲಿ ಇರುವ ಇಂದಿರಾಕ್ಯಾಂಟೀನ್ಗಳಲ್ಲಿ 3 ಹೊತ್ತು ಊಟ ಸಿಗುವಂತೆಮಾಡಿದ್ದು, ಮಂಗಳವಾರದಿಂದಲೇ ನಗರದಲ್ಲಿಉಚಿತ ಊಟ ಕೊಡುವ ಯೋಜನೆಗೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಚಾಲನೆ ನೀಡಿದರು.
ಈ ವೇಳೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಮಾತನಾಡಿ, ಲಾಕ್ಡೌನ್ ಘೋಷಣೆಯಾಗಿರುವುದರಿಂದ ಈ ಸಂದರ್ಭದಲ್ಲಿ ಬಡವರು, ಕೂಲಿಕಾರ್ಮಿಕರು, ವಲಸಿಗರು ಸೇರಿದಂತೆ ಇತರೆದುರ್ಬಲ ವರ್ಗದವರಿಗೆ ಅನುಕೂಲವಾಗುವನಿಟ್ಟಿನಲ್ಲಿ ಸರ್ಕಾರದ ಆದೇಶದಂತೆ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಚಾಲ್ತಿಯಲ್ಲಿರುವ ಇಂದಿರಾ ಕ್ಯಾಂಟೀನ್ಗಳಲ್ಲಿ ಉಚಿತವಾಗಿಊಟ ವಿತರಿಸಲಾಗುವುದು ಎಂದರು.
ಕೋವಿಡ್ ಮಾರ್ಗಸೂಚಿಗಳ®ಯ Ì ಉಚಿತವಾಗಿ ಬೆಳಗಿನ ಉಪಾಹಾರ, ಮಧ್ಯಾಹ್ನ ಹಾಗೂರಾತ್ರಿ ಊಟ ನೀಡಲು ಅಗತ್ಯ ಕ್ರಮವಹಿಸಲಾಗುವುದು. ನಿತ್ಯ ಆಹಾರ ಸೇವಿಸುವ ಜನರಸಂಖ್ಯೆ ವಿವರಗಳನ್ನು ಕಡ್ಡಾಯವಾಗಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರುಮತ್ತು ಸ್ಥಳೀಯ ಸಂಸ್ಥೆಗಳ ಮುಖ್ಯÓರು§ಪರಿವೀಕ್ಷಣೆ ಮಾಡಬೇಕು. ನಿಗದಿಪಡಿಸಲಾಗಿರುವ ಅಗತ್ಯ ಕ್ರಮಗಳನ್ನು ಯಾವುದೇಲೋಪಗಳಿ ಲ್ಲದೆ ಕೈಗೊಳ್ಳಬೇಕು ಎಂದುನಿರ್ದೇಶಿಸಿದರು.
ಪಾಲಿಕೆ ಆಯುಕ್ತೆ ರೇಣುಕಾ ಭೇಟಿ: ನಗರದಲ್ಲಿಇರುವ ನಾಲ್ಕು ಇಂದಿರಾ ಕ್ಯಾಂಟೀನ್ಗಳಿಗೆತುಮಕೂರು ಪಾಲಿಕೆ ಆಯುಕ್ತೆ ರೇಣುಕಾಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಂದಿರಾಕ್ಯಾಂಟೀನ್ಗಳಲ್ಲಿ ಜನರಿಗೆ ಉಚಿತವಾಗಿ ಊಟನೀಡಲಾಗುತ್ತಿದ್ದು, ಆರ್ಥಿಕವಾಗಿ ಸಂಕಷ್ಟದಲ್ಲಿಇರುವವರು, ಕೂಲಿ ಕಾರ್ಮಿಕರು ಅನಾಥರುಇಲ್ಲಿ ಊಟ ಮಾಡಬಹುದಾಗಿದೆ.
ಊಟಮಾಡಲು ಬರುವವರು ಕೊರೊನಾ ಮಾರ್ಗಸೂಚಿಯನ್ನು ತಪ್ಪದೇ ಪಾಲಿಸಬೇಕು. ನಗರದಲ್ಲಿಇರುವ ನಾಲ್ಕು ಇಂದಿರಾ ಕ್ಯಾಂಟೀನ್ನಿಂದಈವರೆಗೆ 1100 ರಿಂದ 1200 ಜನರು ಊಟಮಾಡುತ್ತಿದ್ದರು. ಈಗ 2000 ಜನರ ವರೆಗೆನಾವು ಅವಕಾಶ ಮಾಡಿಕೊಂಡಿದ್ದೇವೆ ಎಂದರು.ತುಮಕೂರು ಮಹಾನಗರ ಪಾಲಿಕೆ ಯಿಂದಇಂದಿರಾ ಕ್ಯಾಂಟೀನ್ ಮೂಲಕ ನೀಡುತ್ತಿರುವಉಚಿತ ಊಟ ನೀಡಲಾಗುತ್ತಿದ್ದು, ಜನರುಕೋವಿಡ್ ನಿಯಮ ಪಾಲಿಸಬೇಕು ಎಂದುಮೇಯರ್ ಬಿ.ಜಿ.ಕೃಷ್ಣಪ್ಪ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ
Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!
Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು
ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್ ಹೆಗಡೆಗೆ ಟಿಕೆಟ್ ತಪ್ಪಿದೆ: ಸೋಮಣ್ಣ
MUST WATCH
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ