ಖಾಸಗಿ ಬಸ್‌ ವೇಗಕ್ಕೆ ಬೀಳಲಿ ಕಡಿವಾಣ


Team Udayavani, Nov 8, 2019, 5:32 PM IST

tk-tdy-1

ತುಮಕೂರು: ತುಮಕೂರು, ಪಾವಗಡ ರಸ್ತೆ ಪ್ರತಿನಿತ್ಯ ಅಪಘಾತದ ಸ್ಥಳವಾಗಿ ಮಾರ್ಪಟ್ಟಂತಿದೆ. ಹೊಸ ಕೆಶಿಪ್‌ ರಸ್ತೆ ಆಗಿರುವುದರಿಂದ ಚಾಲಕರು ವೇಗವಾಗಿ ವಾಹನ ಚಲಾಯಿಸುತ್ತಾರೆ. ಇದರಿಂದ ಅಪಘಾತಗಳು ಹೆಚ್ಚಾಗುತ್ತಿದ್ದು, ವೇಗಕ್ಕೆ ಕಡಿವಾಣ ಹಾಕಿ ಎಂದು ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ.

ತುಮಕೂರಿನಿಂದ ಮಧುಗಿರಿ ಮತ್ತು ಪಾವಗಡಕ್ಕೆ ಪ್ರತಿ ಐದು ನಿಮಿಷಕ್ಕೊಮ್ಮೆ ಖಾಸಗಿ ಬಸ್‌ಗಳು ಸಂಚರಿಸುತ್ತಿವೆ. ಒಂದು ಬಸ್‌ ನಿಲ್ದಾಣದಿಂದ, ಇನ್ನೊಂದು ನಿಲ್ದಾಣಕ್ಕೆ ನಿಗದಿಪಡಿಸಿದ ಅವಧಿಯೊಳಗೆ ತಲುಪಬೇಕು ಎನ್ನುವ ಕಾರಣಕ್ಕೆ ಚಾಲಕರು ವೇಗವಾಗಿ ಬಸ್‌ ಚಲಾಯಿಸುತ್ತಾರೆ. ಮಾರ್ಗಮಧ್ಯೆ ಪ್ರಯಾಣಿಕರನ್ನು ಬಸ್‌ಗೆ ಹತ್ತಿಸಿಕೊಳ್ಳುವ ವೇಳೆ ತಡವಾದರೆ, ಬಸ್‌ ನಿಲ್ದಾಣದಲ್ಲಿ ತೊಂದರೆಯಾಗುತ್ತದೆ ಎನ್ನುವ ಕಾರಣಕ್ಕೆ ನಿಯಮ ಉಲ್ಲಂಸಿ ವಾಹನ ಓಡಿಸುತ್ತಾರೆ.  ಈ ರೀತಿ ಚಾಲಕರು ವೇಗವಾಗಿ ಬಸ್‌ ಚಲಿಸುವಾಗ ಎದುರುಗಡೆ ಬರುವ ವಾಹನ, ಪ್ರಾಣಿ, ಪಾದಚಾರಿಗಳು ಬಂದಾಗ ಹಠಾತ್‌ ಬ್ರೇಕ್‌ ಹಾಕಿದಾಗ ಅಪಘಾತಗಳು ಸಂಭವಿಸುತ್ತವೆ.

ಅಪಘಾತ ಅಂಕಿ-ಅಂಶ: ತುಮಕೂರಿನಿಂದ ಮಧುಗಿರಿ ಮತ್ತು ಪಾವಗಡ ವ್ಯಾಪ್ತಿ ಯಲ್ಲಿ ಕಳೆದ ಮೂರು ವರ್ಷಗಳಿಂದ ಆಗಿರುವ ಅಪಘಾತ ಅಂಕಿ-ಅಂಶ ನೋಡಿದರೆ ಆತಂಕ ಮೂಡಿಸುವಂತಿದೆ. ತುಮಕೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ 2017ರಲ್ಲಿ ನಡೆದ ಅಪಘಾತದಲ್ಲಿ 39 ಸಾವು, 77 ಗಾಯ, 2018ರಲ್ಲಿ 45 ಸಾವು, 88 ಗಾಯ, 2019ರಲ್ಲಿ 28 ಸಾವು, 71 ಗಾಯ, ಕೊರಟಗೆರೆ 2017ರಲ್ಲಿ 13 ಸಾವು, 35 ಗಾಯ, 2018ರಲ್ಲಿ 15 ಸಾವು, 83 ಗಾಯ, 2019 11 ಸಾವು, 43 ಗಾಯ, ಮಧುಗಿರಿ 2017ರಲ್ಲಿ 15 ಸಾವು, 70 ಗಾಯ, 2018ರಲ್ಲಿ 22 ಸಾವು, 74 ಗಾಯ, 2019ರಲ್ಲಿ22 ಸಾವು, 57 ಗಾಯ, ಮಿಡಿಗೇಶಿ 2017ರಲ್ಲಿ 20 ಸಾವು, 16 ಗಾಯ, 2018ರಲ್ಲಿ 23 ಸಾವು, 31 ಗಾಯ, 2019 ರಲ್ಲಿ 21 ಸಾವು, 26 ಗಾಯ, ಪಾವಗಡ 2017 ರಲ್ಲಿ 8 ಸಾವು, 6 ಗಾಯ, 2018ರಲ್ಲಿ 16 ಸಾವು, 12 ಗಾಯ, 2019ರಲ್ಲಿ 14 ಸಾವು, 7 ಗಾಯ ಸಂಭವಿಸಿದೆ.ಜನ ಸಂಚಾರ ಪ್ರದೇಶ ಗಳಲ್ಲೂ ನಿಧಾನ ವಾಗಿ ಚಲಿಸದೆ ವೇಗವಾಗಿ ವಾಹನ ಓಡಿಸು ತ್ತಾರೆ. ಇದರಿಂದ ಅಪಘಾತ ಸಂಭವಿಸುತ್ತಿವೆ. ಇದಕ್ಕೆ ನಿಯಂತ್ರಣ ಹಾಕಿ ಎಂದು ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎನ್ನುತ್ತಾರೆ ನಾಗರೀಕರು.

 

-ಚಿ.ನಿ. ಪುರುಷೋತ್ತಮ

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.