ಮಾಜಿ ಶಾಸಕ ಗಂಗಹನುಮಯ್ಯರಿಗೆ ಕೊರಟಗೆರೆ ಬಿಜೆಪಿ ಟಿಕೆಟ್ ನೀಡುವಂತೆ ಒತ್ತಾಯ

2013ರಲ್ಲಿ ಬಿಜೆಪಿ ಟಿಕೆಟ್ ತಪ್ಪಿಸಿದ್ದರ ಪರಿಣಾಮ ಪಕ್ಷ ಠೇವಣಿ ಕಳೆದುಕೊಳ್ಳಬೇಕಾಯಿತು

Team Udayavani, Nov 27, 2022, 7:01 PM IST

1-sasdad

ಕೊರಟಗೆರೆ: ಕೊರಟಗೆರೆ ಎಸ್ ಸಿ ಮೀಸಲು ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಶಾಸಕ ಗಂಗಹನುಮಯ್ಯನವರನ್ನು ಬಿಜೆಪಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲು ಅಭಿಮಾನಿಗಳು ಮನವಿ ಮಾಡಿಕೊಂಡಿದ್ದಾರೆ.

ಪಟ್ಟಣದ ನವೀನ್ ಕಂಫರ್ಟ್ ನಲ್ಲಿ ಭಾನುವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾದಿಗ ಜಾಗೃತಿ ಸಮಿತಿ ರಾಜ್ಯಾಧ್ಯಕ್ಷ ಶಿವಣ್ಣ ಮಾತನಾಡಿ, ಗಂಗಹನುಮಯ್ಯನವರು ಹಾಗೂ ಅವರ ಕುಟುಂಬದವರು 2006ರಿಂದಲೂ ಸಕ್ರಿಯವಾಗಿ ಭಾರತೀಯ ಜನತಾ ಪಕ್ಷವನ್ನು ಸಂಘಟಿಸುತ್ತಾ ಬಂದಿದ್ದು, ಎಲ್ಲಾ ಜನಾಂಗದ ಹಾಗೂ ಎಲ್ಲಾ ವರ್ಗಗಳು ಮೆಚ್ಚುವಂತಹ ಕೆಲಸವನ್ನು ಮಧುಗಿರಿಯಲ್ಲಿ 2 ಬಾರಿ ಶಾಸಕರಿದ್ದಾಗ ಮಾಡಿ ತೋರಿಸಿಕೊಟ್ಟಿದ್ದಾರೆ. ಹೀಗೆ ಎಲ್ಲ ವರ್ಗ ಮತ್ತು ಜನರು ಮೆಚ್ಚುವಂತಹ ವ್ಯಕ್ತಿತ್ವವುಳ್ಳ ವ್ಯಕ್ತಿತ್ವ ಗಂಗಹನುಮಯ್ಯನವರ ಕುಟುಂಬದ್ದು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೊರಟಗೆರೆ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಗಂಗಹನುಮಯ್ಯನವರ ಕುಟುಂಬದ ಯಾರೊಬ್ಬರಿಗಾದರೂ ಟಿಕೆಟ್ ನೀಡಿದರೆ ಗೆಲುವಿನ ಗುರಿ ತಲುಪಬಹುದು ಎಂದರು.

2008 ರ ಚುನಾವಣೆಯಲ್ಲಿ ಗಂಗಹನುಮಯ್ಯನವರು ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ 33,000 ಮತಗಳನ್ನು ಪಡೆಯಲು ಯಶಸ್ವಿಯಾಗಿದ್ದರು. ಅಂದೇ ಜಯಭೇರಿ ಬಾರಿಸಬಹುದಿತ್ತು ಆದರೆ ಜಾತ್ಯತೀತ ಜನತಾದಳದ ಅಭ್ಯರ್ಥಿಯು ಸಹ ಒಂದೇ ಸಮುದಾಯದವಾರಾದುದರಿಂದ ಮತ ವಿಭಜನೆಯಾಗಿ ಪರಾಭವ ಹೊಂದಬೇಕಾಯಿತು. 2013ರ ಚುನಾವಣೆಯಲ್ಲಿ ಕಾಣದ ಕೈಗಳ ಕೈವಾಡದಿಂದ ಬಿಜೆಪಿ ಟಿಕೆಟ್ ತಪ್ಪಿಸಿದರು. ಅದರ ಪರಿಣಾಮ ಪಕ್ಷವು ಠೇವಣಿ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಯಿತು ಎಂದು ತಿಳಿಸಿದರು.

ಕಾರ್ಯಕರ್ತ ಲಕ್ಷ್ಮಿಪತಿ ಮಾತನಾಡಿ, ಕಳೆದ ಲೋಕಸಭಾ ಚುನಾವಣೆಯಲ್ಲಿ ಲೋಕಸಭೆ ಅಭ್ಯರ್ಥಿಯಾಗಿದ್ದ ಸಂಸದ ಜಿ. ಎಸ್ ಬಸವರಾಜ್ ರವರು ಗಂಗಹನುಮಯ್ಯರ ಮನೆಗೆ ಧಾವಿಸಿ, ನಮ್ಮನ್ನೆಲ್ಲ ಅಲ್ಲಿಗೆ ಕರೆಸಿ ಮುಂದಿನ ದಿನಮಾನಗಳಲ್ಲಿ ಕೊರಟಗೆರೆ ಕ್ಷೇತ್ರಕ್ಕೆ ಗಂಗಹನುಮಯ್ಯರಿಗೆ ಅಥವಾ ಅವರ ಕುಟುಂಬದ ಒಬ್ಬರಿಗೆ ಟಿಕೆಟ್ ನೀಡುತ್ತೇವೆ ಎಂದು ತಿಳಿಸಿದ್ದರು. ಗಂಗಹನುಮಯ್ಯ ಆಗ ಅವರ ಕಾರ್ಯವೈಖರಿಯನ್ನು ಕಂಡು ತಾವೆಲ್ಲರೂ ಕೂಡ ಸಂತೋಷಪಡಬೇಕೆಂದು ಎಂದು ನಮ್ಮೆಲ್ಲರ ಸಮ್ಮುಖದಲ್ಲಿ ಪ್ರಮಾಣ ಮಾಡಿದ್ದರು. ಅದರಂತೆ ಇಂದು ಆ ಮಾತನ್ನು ಉಳಿಸಿಕೊಳ್ಳಬೇಕು. ಬಿಜೆಪಿ ಟಿಕೆಟ್ ಕೊಡಿಸುವ ಜವಾಬ್ದಾರಿ ಸನ್ಮಾನ್ಯ ಸಂಸದರದ್ದಾಗಿರುತ್ತದೆ ಎಂದರು.

ಈ ಸಂದರ್ಭದಲ್ಲಿ ಕೆಎಲ್ ನರಸಿಂಹಯ್ಯ, ಜಿಲ್ಲಾ ಸಂಘಟನಾ ಕಾರ್ಯದರ್ಶಿ, ಕೃಷ್ಣಪ್ಪ ಕಾರ್ಯದರ್ಶಿ ವೆಂಕಟಸ್ವಾಮಿ, ಶಿವರಾಜ್, ಕೃಷ್ಣಮೂರ್ತಿ, ದೇವರಾಜ್, ನವೀನ್ ಕುಮಾರ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

ಟಾಪ್ ನ್ಯೂಸ್

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shobha-Kharandlaje

Congrees Government; ರಾಜ್ಯದಲ್ಲಿರುವುದು ಗೋಲ್ಮಾಲ್‌ ಸರ್ಕಾರ: ಕೇಂದ್ರ ಸಚಿವೆ ಶೋಭಾ 

5-tumkur

Tumkur ZP CEO ಕೊರಟಗೆರೆ ರೌಂಡ್ಸ್; ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಿಇಓ ಪ್ರಭು.ಜಿ

4-koratagere

Koratagere: ಮಜ್ಜಿಗೆ ಫ್ಯಾಕ್ಟರಿಯ ಬಾಯ್ಲರ್ ಸ್ಪೋಟ; ಕಾರ್ಮಿಕನಿಗೆ ಗಂಭೀರ ಗಾಯ

1-ewewqe

Koratagere; ಬಸ್ ಗಳ ಸಮಸ್ಯೆ: ಅಳಲು ತೋಡಿಕೊಂಡ ವಿದ್ಯಾರ್ಥಿಗಳು

Naxal chandru- Naxal Chandru arrested after 19 years; What is the case?

Naxal chandru-19 ವರ್ಷದ ಬಳಿಕ ನಕ್ಸಲ್‌ ಚಂದ್ರು ಸೆರೆ; ಏನಿದು ಪ್ರಕರಣ?

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.