ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯ:ಧ್ವಜಸ್ತಂಭ ಪ್ರತಿಷ್ಠಾಪನೆ, ಸಾಮೂಹಿಕ ವಿವಾಹ

ಧಾರ್ಮಿಕ ಕಾರ್ಯಕ್ರಮಗಳಿಂದ ನಾಡಿನಲ್ಲಿ ಶಾಂತಿ ನೆಮ್ಮದಿ: ಡಾ. ಶ್ರೀ ಹನುಮಂತನಾಥ ಸ್ವಾಮೀಜಿ

Team Udayavani, Apr 7, 2022, 2:36 PM IST

1-gh

ಕೊರಟಗೆರೆ: ದಾನಿಗಳ ಸಹಕಾರದಿಂದ ದೇವಾಲಯಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಸುವ ಮೂಲಕ ನಾಡಿನಲ್ಲಿ ಶಾಂತಿ ನೆಮ್ಮದಿ ನೆಲೆಸುವುದರೊಂದಿಗೆ ಸುಭಿಕ್ಷೆಯಾಗುತ್ತದೆ ಎಂದು ಎಲೆರಾಮಪುರ ಕುಂಚಿಟಿಗರ ಮಹಾಸಂಸ್ಥಾನ ಮಠ ಶ್ರೀ ನರಸಿಂಹಗಿರಿ ಸುಕ್ಷೇತ್ರದ ಡಾ.ಶ್ರೀ ಹನುಮಂತನಾಥಸ್ವಾಮಿ ಹೇಳಿದರು.

ಗೊರವನಹಳ್ಳಿ ಶ್ರೀ ಮಹಾಲಕ್ಷ್ಮೀ ದೇವಲಯದ ಆವರಣದಲ್ಲಿ ಶ್ರೀ ಮಹಾಲಕ್ಷ್ಮೀ ಚಾರಿಟಬಲ್ ಟ್ರಸ್ಟ್ ಹಾಗೂ ಬೆಂಗಳೂರಿನ ದಾನಿಗಳಾದ ಬಾಲಕೃಷ್ಣ ರವರು ಏರ್ಪಡಿಸಿದ್ದ ಧ್ವಜಸ್ತಂಭ ಪ್ರತಿಷ್ಠಾಪನೆ ಹಾಗೂ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿ, ಭಾರತೀಯ ಸಂಸ್ಕೃತಿ ಮತ್ತು ಆಚರಣೆಯಲ್ಲಿ ಆರ್ಥಪೂರ್ಣ ಆರೋಗ್ಯಕರ ಪರಿಕಲ್ಪನೆಯಿದೆ ಮನುಷ್ಯನು ಧಾರ್ಮಿಕತೆಯಿಂದ ಇದ್ದರೆ ಮಾನಸಿಕವಾಗಿ ಸದೃಢನಾಗಿ ದೇವತಾಕಾರ್ಯಗಳಲ್ಲಿ ಭಾಗವಹಿಸುತ್ತಿದ್ದರೆ ಎಂತಹ ಕಷ್ಟಗಳನ್ನೂ ಎದುರಿಸುವ ಶಕ್ತಿಯನ್ನು ಹೊಂದಿರುತ್ತಾನೆ. ಈ ನಿಟ್ಟಿನಲ್ಲಿ ದಾನಿಗಳಾದ ಬಾಲಕೃಷ್ಣರವರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಹೆಚ್ಚು ಆಸತ್ತಿ ಹೊಂದಿದ್ದು ದೇವತಾ ಕಾರ್ಯದೊಂದಿಗೆ ಉಚಿತ ಸಾಮೂಹಿಕ ವಿವಾಹ ಮಾಡಿಸುವ ಮೂಲಕ ಸಮಾಜಮುಖಿ ಸೇವೆಯಲ್ಲೂ ತೊಡಗಿಸಿಕೊಂಡಿದ್ದಾರೆ ಎಂದು ಹೇಳಿದರು.

ಕುಣಿಗಲ್ ಹರೇಶಂಕರ ಮಠದ ಶ್ರೀ ಸಿದ್ದರಾಮಚೈತನ್ಯಸ್ವಾಮೀಜಿ ಮಾತನಾಡಿ ದೇವರ ಕೃಪೆ ಪ್ರೇರಣೆ ಇಲ್ಲದೆ ಮನುಷ್ಯನ ಜೀವನದಲ್ಲಿ ಏನೂ ನಡೆಯುವುದಿಲ್ಲ ಮನುಕುಲದ ವಿಕಾಸಕ್ಕೆ ಭಗವಂತನ ಆಶೀರ್ವಾದ ಅತ್ಯಗತ್ಯ ದೇವರೆಂಬ ಅಗೊಚರ ಶಕ್ತಿಯಿಂದ ನಾವು ಬದುಕುತ್ತಿದ್ದವೆ, ನಾವು ಉತ್ತಮ ಜೀವನ ನಡೆಸ ಬೇಕಾದರೆ ಪ್ರತಿಯೊಬ್ಬ ಮನುಷ್ಯನು ದೇವಾಲಯಗಳಿಗೆ ಭೇಟಿ ನೀಡಿ ದೇವರ ಧ್ಯಾನ ಮಾಡುವ ಮೂಲಕ ಶಾಂತಿ ನೆಮ್ಮದಿ ಪಡೆಯುವಂತೆ ತಿಳಿಸಿ ಶ್ರೀಮಹಾಲಕ್ಷ್ಮೀ ಸನ್ನಿಧಿ ಯಲ್ಲಿ ವಿವಾಹವಾದ ನವ ಜೋಡಿಗಳಿಗೆ ಆಶೀರ್ವದಿಸಿದರು.

ಶ್ರೀ ಮಹಾಲಕ್ಷ್ಮೀ ದೇವಾಲಯ ಟ್ರಸ್ಟ್ ನ ಅಧ್ಯಕ್ಷ ಬಿ.ಜಿ.ವಾಸುದೇವ ಮಾತನಾಡಿ ಕಳೆದ ಕೆಲ ವರ್ಷಗಳಿಂದ ಸರ್ಕಾರ ಮತ್ತು ಟ್ರಸ್ಟ್ ನ ನಡುವೆ ವಿವಾದವಿದ್ದು ಇತ್ತೀಚೆಗೆ ಮತ್ತೆ ಟ್ರಸ್ಟ್ ಆಡಳಿತಕ್ಕೆ ಬಂದಿದ್ದು ಮುಂದಿನ ದಿನಗಳಲ್ಲಿ ಭಕ್ತಾದಿಗಳ ಸಹಕಾರ ದಿಂದ ದೇವಾಲಯದ ಅಭಿವೃದ್ಧಿ ಯೊಂದಿಗೆ ಮೊದಲಿನಂತೆ ಸಾಮಾಜಿಕ ಸೇವೆಗಳಿಗೆ ಶ್ರಮಿಸುವುದಾಗಿ ತಿಳಿಸಿದ ಅವರು ದೇವಾಲಯದ ಆವರಣದಲ್ಲಿ ಧ್ವಜಜಸ್ಥಂಭ ನವಗ್ರಹ ದೇವಾಲಯ ಹಾಗೂ ಮಾರುತಿ ದೇವಾಲಯ ನಿರ್ಮಿಸಿ ಪ್ರಾಣಪ್ರತಿಷ್ಠಾಪನೆ ಕಾರ್ಯದೊಂದಿಗೆ ಉಚಿತ ಸಾಮೂಹಿ ವಿವಾಹಗಳನ್ನು ಮಾಡಿದ ಧಾನಿ ಬಾಲಕೃಚ್ಣರವರಿಗೆ ಅಭಿನಂದಿಸಿದರು. ಕಾರ್ಯಕ್ರಮದ ಅಂಗವಾಗಿ ಗಣಪತಿ ಪೂಜೆ, ಪುನ್ಯಾಹವಾಚನ, ಪ್ರಾಯಶ್ವಿತ ಸಂಕಲ್ಪ, ರಕ್ಷಾಬಂಧನ, ಅಂಕುರಾರ್ಪಣೆ, ಆರಾಧನೆ ಸೇರಿದಂತೆ ವಿವಿಧ ಹೋಮ ಹವನಗಳೊಂದಿಗೆ ಉಚಿತ ಸಮೂಹಿಕ ವಿವಾಹ ಹಾಗೂ ಧ್ವಜಸ್ತಂಭ ಪ್ರಾಣಪ್ರತಿಷ್ಠಾಪನೆ ಕಾರ್ಯ ನಡೆಯಿತು

ಈ ಸಂದರ್ಬದಲ್ಲಿ ಧ್ವಜಸ್ತಂಭದ ದಾನಿ ಬಾಲಕೃಷ್ಣ ಮತ್ತು ಅವರು ಕುಟುಂಬವರ್ಗ, ದೇವಾಲಯ ಟ್ರಸ್ಟ್ನ ಕಾರ್ಯದರ್ಶಿ ಚಿಕ್ಕನರಸಯ್ಯ, ಖಜಾಂಚಿ ಜಿ.ಎಲ್.ಮಂಜುನಾಥ್, ಧಮ್ಮದರ್ಶಿಗಳಾದ ಡಾ. ಟಿ.ಎಸ್.ಲಕ್ಷ್ಮೀಕಾಂತ, ಟಿ.ಆರ್.ನಟರಾಜು, ಎಸ್.ಶ್ರೀಪ್ರಸಾದ್, ರವಿರಾಜೇ ಅರಸ್, ಆರ್.ಮುರಳೀಕೃಷ್ಣ, ಓಂಕಾರೇಶ್, ಆರ್.ಜಗದೀಶ್, ರಾಮಲಿಂಗಯ್ಯ, ನರಸರಾಜು, ಲಕ್ಷ್ಮೀನರಸಯ್ಯ, ಎನ್.ಜಿ.ನಾಗರಜು, ಗುತ್ತಿಗೆದಾರ ಎ.ಡಿ.ಬಲರಾಮಯ್ಯ, ದೇವಾಲಯದ ಕಾರ್ಯನಿರ್ವಹಣಾಧಿಕಾರಿ ಕೇಶವಮೂರ್ತಿ ಸೇರಿದಂತೆ ಟ್ರಸ್ಟ್ ನ ಎಲ್ಲಾ ಸಿಬ್ಬಂದಿ ವರ್ಗದವರು ಹಾಜರಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.