ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ


Team Udayavani, Sep 11, 2021, 2:33 PM IST

ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

ಹುಳಿಯಾರು: ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಸೂಚನೆ ಮೇರೆಗೆ ಹುಳಿಯಾರಿನಲ್ಲಿ ನೂತನ ಸರ್ಕಾರಿ ಆಸ್ಪತ್ರೆ ನಿರ್ಮಿಸಲು
ಸೂಕ್ತ ಸ್ಥಳ ಪರಿಶೀಲನಾ ಕಾರ್ಯ ನಡೆಯಿತು.

ಆಸ್ಪತ್ರೆ ಮೇಲ್ದರ್ಜೆಗೇರಿಸಿ 100 ಹಾಸಿಗೆಯ ದೊಡ್ಡ ಆಸ್ಪತ್ರೆ ನಿರ್ಮಿಸಲು ಸಚಿವರು ಉದ್ದೇಶಿಸಿರುವುದರಿಂದ ಹಾಲಿ ಇರುವ ಆಸ್ಪತ್ರೆ ಜಾಗ ತೀರಾಕಿರಿದಾಗಿದೆ ಎನ್ನುವ ಕಾರಣದಿಂದ ಡಿಎಚ್‌ಒ ನಾಗೇಂದ್ರಪ್ಪ ಅವರ ನೇತೃತ್ವದಲ್ಲಿ ಯಳನಾಡು ರಸ್ತೆಯ ಪೆಟ್ರೋಲ್‌ ಬಂಕ್‌ ಹಿಂಭಾಗ, ಕೆಂಕೆರೆ ರಸ್ತೆಯ ಮುಕ್ತಿಧಾಮದ ಸಮೀಪ ಹಾಗೂ ಕಂಪನಹಳ್ಳಿ ಸಮೀಪದ ಸರ್ಕಾರಿ ಜಾಗವನ್ನು ವೀಕ್ಷಿಸಿ, ಲಭ್ಯವಿರುವ ಭೂಮಿಯ ವಿಸ್ತೀರ್ಣದ
ಮಾಹಿತಿಗಳನ್ನು ಸಂಗ್ರಹಿಸಿದರು.

ಮುಕ್ತಿಧಾಮದ ಬಳಿ ಕೇವಲ 2 ಎಕರೆ ಮಾತ್ರ ಸರ್ಕಾರಿ ಜಾಗವಿರುವ ಕಾರಣದಿಂದ ಈ ಸ್ಥಳವನ್ನು ಕೈ ಬಿಡಲಾಯಿತು. ಯಳನಾಡು ರಸ್ತೆಯ ಪೆಟ್ರೋಲ್‌ ಬಂಕ್‌ ಬಳಿ 15 ಎಕರೆಗೂ ಹೆಚ್ಚು ಸರ್ಕಾರಿ ಜಾಗವಿದೆಯಾದರೂ ಕೆಲವರು ಟಿಟಿ ಕಟ್ಟಿ ಸಾಗುವಳಿ ಮಾಡುತ್ತಿದ್ದಾರಲ್ಲದೆ ಇಲ್ಲಿಯೇ ಯಳನಾಡು ಪಂಚಾಯ್ತಿಯ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಿಸುತ್ತಿರುವುದರಿಂದ ಆಸ್ಪತ್ರೆ ನಿರ್ಮಾಣಕ್ಕೆ ಸೂಕ್ತ ಸ್ಥಳವಲ್ಲ ಎನ್ನುವ ಅಭಿಪ್ರಾಯಕ್ಕೆ ಬರಲಾಯಿತು.

ಇದನ್ನೂ ಓದಿ:ಕಾಂಗ್ರೆಸ್ ಮುಖಂಡ ಜೈನುಲ್ಲಾ ಖಾನ್ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಕೊನೆಗೆ ಕಂಪನಹಳ್ಳಿ ಸಮೀಪದ ಗೌಡಗೆರೆ ಸರ್ವೆ ನಂಬರ್‌ 22ರಲ್ಲಿ ಪರಿಶೀಲನೆ ಮಾಡಲಾಯಿತು. ಇಲ್ಲಿ 35 ಎಕರೆ ಸರ್ಕಾರಿ ಜಾಗವಿದೆಯಲ್ಲದೆ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿದೆ. ಈ ಭೂಮಿಯಲ್ಲಿ ಪ್ರಸ್ತುತ ಯಾರೊಬ್ಬರೂ ಸಾಗುವಳಿ ಮಾಡದೆ ಖಾಲಿಯಿದ್ದು, ಯಾವುದೇ ತಂಟೆತಕರಾರು ಇಲ್ಲದೆ ಆಸ್ಪತ್ರೆ ನಿರ್ಮಿಸಬಹುದಾಗಿದೆ. ಮುಂದಿನ ದಿನಗಳಲ್ಲಿ ಅಗ್ನಿಶಾಮಕ ಠಾಣೆ ಸೇರಿದಂತೆ ಇತರೆ ಸರ್ಕಾರಿ ಕಟ್ಟಡ ಗಳನ್ನು ನಿರ್ಮಿಸಲು ಸೂಕ್ತವಾಗಿದೆ ಎಂಬ ಅಭಿಪ್ರಾಯವನ್ನು ಅಧಿಕಾರಿಗಳ ತಂಡ ವ್ಯಕ್ತಪಡಿಸಿತು. ಡಿಎಚ್‌ಒ ನಾಗೇಂದ್ರಪ್ಪ ಮಾತನಾಡಿ, ಶೀಘ್ರದಲ್ಲೇ ತಹಶೀಲ್ದಾರ್‌ ಅವರೊಂದಿಗೆ ಮತ್ತೂಮ್ಮೆ ಗೌಡಗೆರೆ ಸರ್ವೆ ನಂಬರ್‌ 22 ಪರಿಶೀಲಿಸಿ ಇಲಾಖೆಯಅಭಿಪ್ರಾಯ ಸೇರಿದಂತೆ ಸಮಗ್ರ ವರದಿ ಪಡೆದು ಸಚಿವರ ಗಮನಕ್ಕೆ ತರಲಾಗುವುದು. ಅವರ ಸಲಹೆ ಸೂಚನೆಯಂತೆ ಆಸ್ಪತ್ರೆ ನಿರ್ಮಿಸುವ ನಿಟ್ಟಿನಲ್ಲಿ ಮುಂದಿನ ಹೆಜ್ಜೆ ಹಿಡಲಾಗುವುದು ಎಂದು ತಿಳಿಸಿದರು. ಟಿಎಚ್‌ಒ ನವೀನ್‌, ತಾಪಂ ಮಾಜಿ ಅಧ್ಯಕ್ಷ ಕೆಂಕೆರೆ ನವೀನ್‌, ಪಪಂ ಸದಸ್ಯ ಹೇಮಂತ್‌, ಕೆಎಂಎಲ್‌ಕಿರಣ್‌, ಮುಖಂಡ ಜಯಣ್ಣ, ಬಳೆದಾಸಪ್ಪ, ಅಶೋಕ್‌ಬಾಬು, ಪಾತ್ರೆ ಪರಮೇಶ್‌ ಮತ್ತಿತರರು ಇದ್ದರು.

ಹುಳಿಯಾರಿಗೆ ಸಚಿವರ
ಬಂಪರ್‌ ಕೊಡುಗೆ
ಹುಳಿಯಾರಿನ ಜನ ಹಾಲಿ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸುವಂತೆ ಎರಡೂ ದಶಕಗಳಿಂದ ಕೇಳಿ ಕೊಳ್ಳುತ್ತಿದ್ದರು. ಮಾಜಿ ಸಚಿವ ಟಿ.ಬಿ.ಜಯಚಂದ್ರ ಸೇರಿದಂತೆ ಅಂದಿನ ಜನಪ್ರತಿನಿಧಿಗಳು ಈಗ ಮೇಲ್ದರ್ಜೆ
ಗೇರಿಸುತ್ತೇವೆ, ಆಗ ಮೇಲ್ದರ್ಜೆಗೇರಿಸುತ್ತೇವೆ ಎಂದು ದಿನದೂಡಿದರೆ ವಿನಃ ಮೇಲ್ದರ್ಜೆಗೇರಿಸಲಿಲ್ಲ. ಆದರೆ, ಸಚಿವ ಜೆ.ಸಿ.ಮಾಧುಸ್ವಾಮಿ
ಅವರು ಹುಳಿಯಾರಿನವರ ಪಾಲಿಗೆ ಬಂಪರ್‌ ಕೊಡುಗೆ ಎನ್ನುವಂತೆ ಸಮುದಾಯ ಆರೋಗ್ಯ ಕೇಂದ್ರಕ್ಕಿಂತಲೂ ದೊಡ್ಡದಾದ100 ಹಾಸಿಗೆಯ ಆಸ್ಪತ್ರೆ ನಿರ್ಮಿಸಲು ಮುಂದಾಗಿದ್ದಾರೆ.

ಸಮುದಾಯ ಆರೋಗ್ಯ ಕೇಂದ್ರ ವಾದರೆ ಹೆರಿಗೆ ತಜ್ಞರು, ಮಕ್ಕಳ ವೈದ್ಯರು ಸೇರಿದಂತೆ 3 ಮಂದಿ ವೈದ್ಯರಿದ್ದು 30 ಹಾಸಿಗೆಯ ಸೌಲಭ್ಯ ವಿರುತ್ತದೆ. 100 ಹಾಸಿಗೆಯ ಆಸ್ಪತ್ರೆಯಾದರೆ ಮೂಳೆ, ಚರ್ಮ, ಇಎನ್‌ಟಿ,ಕಣ್ಣು ಸೇರಿದಂತೆ 11 ಮಂದಿ ತಜ್ಞ ವೈದ್ಯರು ಸೇರಿದಂತೆ ಅಗತ್ಯ ಸಿಬ್ಬಂದಿ, ಔಷಧ, ಲ್ಯಾಬ್‌ ಸೌಕರ್ಯ ಸಿಗಲಿದೆ.
-ನಾಗೇಂದ್ರಪ್ಪ, ಡಿಎಚ್‌ಒ

 

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.