ಗೋಡೆ ಮೇಲೆ ಜನಾಕರ್ಷಿಸುವ ಚಿತ್ತಾರ

ಶತಮಾನ ಕಂಡ ಶಾಲೆ ಗೋಡೆಯ ಮೇಲೆಕಲಾವಿದ® ‌ಕುಂಚದಿಂದ ಅರಳಿರುವ ಚಿತ್ರಗಳು

Team Udayavani, Dec 16, 2020, 5:28 PM IST

ಗೋಡೆ ಮೇಲೆ ಜನಾಕರ್ಷಿಸುವ ಚಿತ್ತಾರ

ತುಮಕೂರು: ಚಿತ್ರಕಲೆ ಅನ್ನೋದು ಒಂದೇ ನೋಟಕ್ಕೆ ಎಂಥವರನ್ನೂ ಸೆಳೆದು ಬಿಡುತ್ತೆ, ಅದಲ್ಲೂ ಕಲಾವಿದ ಕುಂಚದಲ್ಲಿ ಅರಳುವ ಚಿತ್ರಗಳು ಸುಂದರವಾಗಿದ್ದರೆ ನೋಡುಗರನ್ನು ತನ್ನತ್ತ ಸೆಳೆಯುತ್ತದೆ. ಶತಮಾನಕಂಡಿರುವ ಶಾಲೆಯ ಗೋಡೆಯ ಮೇಲೆ ಕಲಾವಿದನ ಕುಂಚದಿಂದ ಅರಳಿರುವ ಚಿತ್ತಾರಗಳು ಜನರನ್ನು ಆಕರ್ಷಿಸುತ್ತಿವೆ.

ನಗರದ ಎಂಪ್ರಸ್‌ ಶಾಲೆಯ ಗೋಡೆ ಮೇಲೆಹಾಗೂ ಶಾಲಾ ಕೊಠಡಿ ಒಳಗೆ ಅರಳಿರುವ ಚಿತ್ರಗಳನ್ನು ನೋಡಿದ್ರೆ ಸಾಕು ಎಂಥವರು ತಲೆ ದೂಗದೇ ಇರಲಾರರು. ನಗರದ ಎಂಪ್ರಸ್‌ ಶಾಲೆಯಲ್ಲಿಶಾಲಾ ಕೊಠಡಿ ಹಾಗೂ ಗೋಡೆಯ ಮೇಲೆ ವಿವಿಧ ರೀತಿಯ ಬಣ್ಣದಚಿತ್ತಾರ ನೋಡುಗರ ಕಣ್ಣಿಗೆ ಹಬ್ಬದಂತೆ ಭಾಸವಾಗುತ್ತವೆ. ಇಲ್ಲಿನ ಯುಕೆಜಿ, ಎಲ್‌ಕೆಜಿ ಮಕ್ಕಳಿಗಾಗಿ ಬಣ್ಣದ ಲೋಕವನ್ನೇ ಸೃಷ್ಟಿಸಲಾಗಿದೆ. ಮಕ್ಕಳಿಗೆ ಇಷ್ಟವಾಗುವ ರೀತಿಯ ಚಿತ್ರಗಳನ್ನೇ ಬರೆಯಲಾಗಿದ್ದು, ಇವು ಮಕ್ಕಳ ಕಲಿಕಾ ಆಸಕ್ತಿ ಹೆಚ್ಚಿಸಲಿವೆ.

ಮಕ್ಕಳ ಕಣ್ಣಿಗೆ ಹಬ್ಬ: ಚಿತ್ರಕಲಾ ಶಿಕ್ಷಕರ ತಂಡಇಲ್ಲಿನ ಶಾಲೆ ಗೋಡೆಗಳ ಮೇಲೆ ವಿಶೇಷ ಚಿತ್ರಗಳನ್ನು ಬರೆದಿದ್ದಾರೆ, ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗಲಿವೆ. ಗಣಿತದ ಆಯಾಮ ರಚನೆ, ಹಣ್ಣು, ತರಕಾರಿ ರಾರಾಜಿಸುತ್ತಿವೆ,ಪ್ರಾಣಿಪಕ್ಷಿಗಳು ಹಾರುತ್ತಿವೆಯೋನೋ ಎಂಬಂತೆ ಭಾಸವಾಗುವ ಚಿತ್ರಗಳು, ಓಡುತ್ತಿರುವ ರೈಲು,ಸೂರ್ಯನ ಉದಯ, ಪ್ರಕೃತಿ ಸೌಂದರ್ಯ, ಶಾಲಾ ಮೈದಾನ, ಹಾರುವ ಚಿಟ್ಟೆಗಳು,ಮಿಕ್ಕಿ ಮೌಸ್‌, ಛೋಟಾ ಭೀಮ್‌ ಸೇರಿದಂತೆ ವಿವಿಧಚಿತ್ರಗಳು ಶಾಲಾಗೋಡೆಗಳ ಮೇಲೆ ಅರಳಿ ನಿಂತಿವೆ.

ಮಕ್ಕಳ ಕಲಿಕೆಗೆ ಅನುಕೂಲವಾಗಲು ಸ್ಲೇಟ್‌ಗಳ ಮಾದರಿ ಚಿತ್ರ ಬರೆಯಲಾಗಿದ್ದು, ಅಲ್ಲಿಯೇ ಎಲ್‌ಕೆಜಿ,ಯುಕೆಜಿ ಮಕ್ಕಳಿಗೆ ಬರೆಯುವ ವ್ಯವಸ್ಥೆ ಕಲ್ಪಿಸಲಾಗಿದೆ. ಇಷ್ಟೆಲ್ಲಾ ಚಿತ್ರಗಳು ಚಿತ್ರಕಲಾ ಶಿಕ್ಷಕರಾದ ರವೀಶ್‌ಕೆ.ಎಂ., ಜಿಎಚ್‌ಎಸ್‌ ನೇರಳೇಕೆರೆ, ರಂಗಸ್ವಾಮ್ಯಯ್ಯ ಜಿಎಚ್‌ಎಸ್‌ ಚೇಳೂರು, ಇಂದ್ರಕುಮಾರ್‌ ಜಿಎಚ್‌ ಎಸ್‌ ಹೆಬ್ಬೂರು, ಆನಂದ್‌ ಜಿಎಚ್‌ಎಸ್‌ ಕೊಂಡ್ಲಿ,ವೇಣುಗೋಪಾಲ್‌ ಜಿಎಚ್‌ಎಸ್‌ ಶೇಷೇನಹಳ್ಳಿ ಹಾಗೂ ಹೀನಾ ಕೌಸರ್‌ ಜೆಜಿಜಿಸಿ ತುಮಕೂರು ಇವರ ಕೈಚಳಕದಲ್ಲಿ ಅರಳುತ್ತಿದ್ದು, ಮಕ್ಕಳ ‌ ಪಾಲಿಗೆ ಬಹು ಉಪಯುಕ್ತವಾಗಲಿದೆ.

ಮಕ್ಕಳಿಗೆ ಅನುಕೂಲ: ಕೋವಿಡ್ ಕಾರಣದಿಂದ ಎಲ್‌ ಕೆಜಿ, ಯುಕೆಜಿ ಶಾಲೆ ಆರಂಭವಾಗಿಲ್ಲ, ಇದರ ನಡುವೆ ಚಿತ್ರಕಲಾ ಶಿಕ್ಷಕರು ಮುಂದೆ ಶಾಲೆ ಆರಂಭವಾಗುವವ ವೇಳೆಗೆ ಉತ್ತಮ ಚಿತ್ರ ಬರೆದರೆ ಮಕ್ಕಳಿಗೆ ಅನುಕೂಲ ಆಗಲಿದೆ ಎಂದು ನಿರ್ಧರಿಸಿ ಚಿತ್ತಾರ ಮೂಡಿಸಿದ್ದಾರೆ. ಚಿತ್ರಕಲಾ ಶಿಕ್ಷಕರ ಕಾರ್ಯಕ್ಕೆ ಎಂಪ್ರಸ್‌ ಕಾಲೇಜಿನ ಪ್ರಾಶುಪಾಲ ಕೆ.ಎಸ್‌.ಸಿದ್ದಲಿಂಗಪ್ಪ, ಉಪ ಪ್ರಾಶುಪಾಲ ಎಸ್‌.ಕೃಷಪ್ಪ ಹಾಗೂ ಶಿಕ್ಷಣಇಲಾಖೆ ಸಹಕಾರ ನೀಡಿದೆ.

ಶಿಕ್ಷಕ ವೃಂದವೇ ಮೆಚ್ಚುಗೆ: ಒಟ್ಟಾರೆ ತುಮಕೂರು ಜಿಲ್ಲಾ ಚಿತ್ರ ಕಲಾ ಸಂಘಹಾಗೂ ಚಿತ್ರಕಲಾ ಶಿಕ್ಷಕರ ತಂಡಇಡೀ ಶಾಲೆಯಲ್ಲಿ 50ಕ್ಕೂ ಹೆಚ್ಚು ಮಕ್ಕಳಿಗೆ ಮುದ್ದುಎನಿಸುವ ಚಿತ್ರಗಳನ್ನು ಬರೆದಿದ್ದಾರೆ, ಬಣ್ಣದಲ್ಲಿಕಂಗೊಳಿಸುತ್ತಿರುವ ಶಾಲಾ ಆವರಣವನ್ನು ನೋಡಿದರೆ ಆನಂದ, ಚಿತ್ರಕಲಾ ಶಿಕ್ಷಕರ ಕಾರ್ಯಕ್ಕೆ ಇಡೀ ಶಿಕ್ಷಕ ವೃಂದವೇ ಮೆಚ್ಚುಗೆ ವ್ಯಕ್ತಪಡಿಸಿದೆ.

ಶಾಲಾ ಕೊಠಡಿಹಾಗೂ ಗೋಡೆ ಮೇಲೆ ಚಿತ್ರಕಲೆಬರೆದಿರುವುದರಿಂದ ಪುಟಾಣಿ ಮಕ್ಕಳು ಕಲಿಕೆಯಲ್ಲಿ ಆಸಕ್ತಿ ಹೊಂದಲಿದ್ದಾರೆ. ಅಲ್ಲದೆ
ಚಿತ್ರಗಳು ಮಕ್ಕಳಿಗೆಇಷ್ಟವಾಗಲಿವೆ, ಆ ಚಿತ್ರಗಳು ಯಾವು,ಅದರ ಹೆಸರೇನು ಎಂಬುದನ್ನು ಮಕ್ಕಳಿಗೆ ಟೀಚರ್‌ಗಳು ತಿಳಿಸಿಕೊಡಲು ಅನುಕೂಲವಾಗಲಿದೆ. ಸರ್ಕಾರಿ ಶಾಲೆಯಲ್ಲಿಚಿತ್ರ ಬರೆಯಲು ತುಂಬಾ ಖುಷಿಯಾಯಿತು,ಯಾವ ಖಾಸಗಿ ಶಾಲೆಗೂ ಕಮ್ಮಿಇಲ್ಲ ಎಂಬಂತೆ ಎಂಪ್ರಸ್‌ನಲ್ಲಿನ ಎಲ್‌ಕೆಜಿ,ಯುಕೆಜಿ ಶಾಲೆ ಬಣ್ಣದಿಂದ ಕಂಗೊಳಿಸುತ್ತಿದೆ, ಇದು ನಮಗೆ ಹೆಮ್ಮೆಯ ಸಂಗತಿ. -ರವೀಶ್‌ಕೆ.ಎಂ., ಚಿತ್ರಕಲಾ ಶಿಕ್ಷಕ, ಜಿಎಚ್‌ಎಸ್‌ ನೇರಳೇಕೆರೆ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.