ಗೂಳೂರು ಮಹಾಗಣಪತಿ ಭವ್ಯ ವಿಸರ್ಜನೆ


Team Udayavani, Nov 27, 2017, 5:49 PM IST

tmk.jpg

ತುಮಕೂರು: ಇತಿಹಾಸ ಪ್ರಸಿದ್ಧ ಗೂಳೂರಿನ ಮಹಾ ಗಣಪತಿಯ ವಿಸರ್ಜನಾ ಮಹೋತ್ಸವದ ಭವ್ಯ ಮೆರವಣಿಗೆ ಭಾನುವಾರ ಗೂಳೂರಿನ ಮುಖ್ಯ ರಸ್ತೆಗಳಲ್ಲಿ ವೈಭವಯುತವಾಗಿ ನಡೆಯಿತು. ವಿವಿಧ ಕಲಾ ತಂಡಗಳು ಮೆರವಣಿಗೆ ರಂಗು ತಂದಿದ್ದು, ರಾಜ್ಯದ ವಿವಿಧ ಭಾಗಗಳಿಂದ ಬಂದಿದ್ದ ಭಕ್ತರು ಮೆರವಣಿಗೆಗೆ ಸಾಕ್ಷಿಯಾದರು.

ಗೂಳೂರು ಗಣೇಶ ಮೂರ್ತಿಯನ್ನು ದಿಪಾವಳಿ ಬಲಿಪಾಡ್ಯಮಿಯಂದು ಪ್ರತಿಷ್ಠಾಪಿಸಿ ಒಂದು ತಿಂಗಳ ಕಾಲ ಪೂಜೆ ಸಲ್ಲಿಸಿ, ನಂತರ ವಿಶೇಷ ಮೆರವಣಿಗೆ ಮಾಡಿ ವಿಸರ್ಜಿಸಲಾಗುತ್ತದೆ. ಪ್ರಸಕ್ತ ವರ್ಷದ ಮಹಾಗಣಪತಿಯ ವಿಸರ್ಜನಾ ಮಹೋತ್ಸವ ಶನಿವಾರ ರಾತ್ರಿ ಆರಂಭಗೊಂಡಿದ್ದು, ಭಾನುವಾರ ಸಂಜೆ ಗೂಳೂರು ಕೆರೆಯಲ್ಲಿ ಸಹಸ್ರಾರು ಭಕ್ತರ ಸಮುಖದಲ್ಲಿ ವಿಸರ್ಜಿಸಲಾಯಿತು.

ರಾತ್ರಿ ಮೆರವಣಿಗೆ: ಗೂಳೂರು ಗ್ರಾಮದ 18 ಕೋಮುಗಳ ಜನರು ಒಗ್ಗೂಡಿ ಆಚರಿಸುವ ಗೂಳೂರು ಗಣೇಶನ ಪೂಜೆ ಶನಿವಾರ ರಾತ್ರಿ ಸಂಪನ್ನಗೊಂಡಿತು. ಆಸ್ಥಾನ ಮಂಟಪದಿಂದ ಗಣೇಶ ಮೂರ್ತಿಯನ್ನು ಮೆರವಣಿಗೆಯ ರಥಕ್ಕೆ ತಂದು ಕೂರಿಸಲಾಯಿತು. ನಂತರ ರಾತ್ರಿ 1.30ರ ಸುಮಾರಿಗೆ ಆರಂಭವಾದ ಗಣೇಶನ ಮೆರವಣಿಗೆ ವಿವಿಧ ಜಾನಪದ ಕಲಾತಂಡಗಳಾದ ನಾದಸ್ವರ, ಕರಡಿಮಜಲು, ನಾಸಿಕ್‌ ಡೋಲು, ಕರಡಿವಾದ್ಯ, ವೀರಗಾಸೆ, ಕೀಲುಕುದುರೆ, ನಂದಿಕೋಲು, ಡೊಳ್ಳು ಕುಣಿತ, ಸೋಮನ ಕುಣಿತ, ಪೂಜಾ ಕುಣಿತ ತಂಡಗಳ ಪ್ರದರ್ಶನದ ಜೊತೆಗೆ, ಪಟಾಕಿ, ಬಾಣ, ಬಿರುಸುಗಳ ಸಿಡಿತದೊಂದಿಗೆ ಭಾನುವಾರ ಬೆಳಗಿನ ಜಾವ 6.30ರವರೆಗೆ ಜರುಗಿತು. 

ರಾಜ್ಯದ ವಿವಿಧ ಭಾಗಗಳಿಂದ ಬಂದಿದ್ದ ಅಪಾರ ಭಕ್ತರು ಮಹಾ ಗಣಪತಿಗೆ ಪೂಜೆ ಸಲ್ಲಿಸಿದರು. ಭಾನುವಾರ ಸಂಜೆವರೆಗೂ ಗೂಳೂರಿನ ಪ್ರಮುಖ ರಸ್ತೆಗಳಲ್ಲಿ ಭವ್ಯ ಮೆರವಣಿಗೆ ಸಾಗಿ, ಸಂಜೆ 5 ಗಂಟೆಯವರೆಗೂ ನಡೆಯಿತು. ನಂತರ ಸಂಜೆ ಗೋಧೂಳಿ ಲಗ್ನದಲ್ಲಿ ಗೂಳೂರು ಕೆರೆಯಲ್ಲಿ ನಿರ್ಮಿಸಿರುವ ಕಲ್ಯಾಣಯಲ್ಲಿ ಗಣೇಶ ಮೂರ್ತಿಯ ವಿಸರ್ಜನಾ ಮಹೋತ್ಸವ ಅತಿ ವಿಜೃಂಭಣೆಯಿಂದ ಜರುಗಿತ್ತು. 

ಸಿಡಿ ಮದ್ದಿನ ಪ್ರದರ್ಶನ: ಜಿಲ್ಲೆಯಲ್ಲಿ ಗೂಳೂರು ಗಣೇಶನ ಪರಸೆ ಎಂದು ಪ್ರಸಿದ್ಧಿ ಪಡೆದಿರುವ ಗಣೇಶ ಮಹೋತ್ಸವದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದರು. ಉತ್ಸವದಲ್ಲಿ ಶನಿವಾರ ಮಧ್ಯರಾತ್ರಿ ಎರಡು ಗಂಟೆಯಲ್ಲಿ ನಡೆದ ಆಕರ್ಷಕ ಮದ್ದಿನ ಪ್ರದರ್ಶನ 500 ಅಡಿ ಉದ್ದದ ಜೋಗ್‌ ಫಾಲ್ಸ್‌ , ನೂರು ಬಾರಿ ಹೊಡೆಯುವ ಔಟ್ಸ್‌ ಮತ್ತು ಪ್ಯಾರಾಚೂಟ್‌ಗಳನ್ನು ನೋಡಿ ಸಂತಸಪಟ್ಟರು. 

ಭಾನುವಾರ ಸಂಜೆ ಐದು ಗಂಟೆಯಲ್ಲಿ ಗೂಳೂರು ಕೆರೆಯಲ್ಲಿ ಮಹಾ ಗಣಪತಿಯ ವಿಸರ್ಜನೆ ಮಾಡುವ ವೇಳೆಯಲ್ಲಿ ಕೆರೆಯ ಬಳಿ ಒಂದು ಸಾವಿರ ಅಡಿ ಮೇಲಕ್ಕೆ ಹೋಗುವ ಔಟ್ಸ್‌ನಲ್ಲಿ ಜೀವಂತ ಪಾರಿವಾಳ ಮತ್ತು ಕೋಲಿಗಳನ್ನು ಹಾರಿಸಿ ನೋಡುಗರ ಗಮನ ಸೆಳೆದರು.ಗಣೇಶ್‌ ವಿಸರ್ಜನೆಯಲ್ಲಿ ಪಾಲ್ಗೊಂಡಿದ್ದ ಭಕ್ತರಿಗೆ ಪ್ರಸಾದ ಮತ್ತು ಅನ್ನಸಂತರ್ಪಣೆ ನಡೆಯಿತು.

ಬಂದೋಬಸ್ತ್: ರಾಜ್ಯ ವಿವಿಧ ಬಾಗಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿತ್ತು.

ಟಾಪ್ ನ್ಯೂಸ್

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.