ಒತ್ತಡದ ಜೀವನದಿಂದ ಆರೋಗ್ಯ ಸಮಸ್ಯೆ


Team Udayavani, Nov 29, 2018, 4:28 PM IST

tmk-1.jpg

ತುಮಕೂರು: ಆರೋಗ್ಯ ಇಂದು ಎಲ್ಲರಿಗೂ ಬೇಕಾಗಿದೆ. ಮನುಷ್ಯನಿಗೆ ಅತಿ ಅಗತ್ಯವಿರುವ ವ್ಯವಸ್ಥೆಗಳಲ್ಲಿ ಆರೋಗ್ಯ ಪ್ರಮುಖ ಸ್ಥಾನ ಪಡೆದುಕೊಳ್ಳುತ್ತದೆ. ನಂತರದ ಸ್ಥಾನದಲ್ಲಿ ಶಿಕ್ಷಣ, ಆಹಾರ ಬರುತ್ತದೆ. ಒತ್ತಡದ ಬದುಕಿನಲ್ಲಿ ಹಣಗಳಿಕೆಗೆ ಹೆಚ್ಚು ಒತ್ತು ನೀಡಿದ ಪರಿಣಾಮ ಆರೋಗ್ಯ ಸಮಸ್ಯೆಗಳು ಅತಿ ಚಿಕ್ಕ ವಯಸ್ಸಿಗೆ ತಲೆದೋರುತ್ತಿದೆ ಎಂದು ಮಾಜಿ ಸಂಸದ ಜಿ.ಎಸ್‌.ಬಸವರಾಜು ಅಭಿಪ್ರಾಯಿಸಿದರು.

ನಗರದ ವೀರಶೈವ ಗುರುಕುಲ ವಿದ್ಯಾರ್ಥಿ ನಿಲಯದಲ್ಲಿ ಮಾಜಿ ಶಾಸಕ ದಿ.ಜಿ.ಎಸ್‌.ಶಿವನಂಜಪ್ಪ ಅವರ 90ನೇ ಹುಟ್ಟು ಹಬ್ಬದ ಅಂಗವಾಗಿ ಸಿದ್ದರಾಮೇಶ್ವರ್‌ ಬ್ಯಾಂಕ್‌, ಗುರುಕುಲ ವಿದ್ಯಾರ್ಥಿ ನಿಲಯ ಹಾಗೂ ಗುರುಕುಲ ವಿವಿಧೋದ್ದೇಶ ಸಹಕಾರ ಸಂಘ, ಬೆಂಗಳೂರಿನ ಅಪೊಲೋ ಆಸ್ಪತ್ರೆಯ ಸಹಕಾರದಲ್ಲಿ ಬುಧವಾರ ಏರ್ಪಡಿಸಿದ್ದ ಆರೋಗ್ಯ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಮೂಢ ನಂಬಿಕೆ ಬಿಡಿ: ಇಂದಿಗೂ ಹಳ್ಳಿಗಾಡಿನಲ್ಲಿ ಮನುಷ್ಯನಿಗೆ ಬರುವ ಕಾಯಿಲೆಗೂ ದೇವರು, ದಿಂಡಿರು ಕಾರಣ ಎಂಬ ಮೂಢ ನಂಬಿಕೆ ಬಿತ್ತಲಾಗುತ್ತಿದೆ. ಇದರಿಂದ ಹೊರಬರುವಂತೆ ಜನರಲ್ಲಿ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ. ಇದನ್ನು ಮಾಡುವವನೇ ನಿಜವಾದ ಜನನಾಯಕ ಎಂದು ನುಡಿದರು.
 
ಮಹನೀಯರೆ ಕಾರಣ: ಜಿಲ್ಲೆಯಲ್ಲಿ ವೀರಶೈವ ಸಮುದಾಯ ಇಷ್ಟು ಉತ್ತುಂಗಕ್ಕೆರಲು ಕಾರಣರಾದವರು ದಿ.ಜಿ.ಎಸ್‌.ಶಿವನಂಜಪ್ಪ ಮತ್ತು ಮಲ್ಲಿಕಾರ್ಜುನಯ್ಯ. ಅವರನ್ನು ಸಮುದಾಯ ಎಂದಿಗೂ ಮರೆಯುವಂತಿಲ್ಲ. ಹಳ್ಳಿಗಾಡಿನಿಂದ ನಗರಕ್ಕೆ ಬಂದಂತಹ ವೀರಶೈವ ಸಮುದಾಯ ಜನರು ನಗರದಲ್ಲಿ ನೆಲೆಗೊಳ್ಳಲು ಅಗತ್ಯವಿರುವ ಎಲ್ಲಾ ವ್ಯವಸ್ಥೆಯನ್ನು ಅಂದಿನ ಕಾಲದಲ್ಲಿ ಈ ಇಬ್ಬರು ಮಹನೀಯರು ಮಾಡಿದ ಪರಿಣಾಮ, ಇಂದು ನಗರದಲ್ಲಿ ವೀರಶೈವ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಲು ಸಾಧ್ಯವಾಗಿದೆ ಎಂದು ತಿಳಿಸಿದರು.

ಬೆಳಗ್ಗೆ ಬೇಗ ಏಳಿ: ಮೂಳೆ ಮತ್ತು ಕೀಲು ರೋಗ ತಜ್ಞ ಡಾ. ಯೋಗೀಶ್‌ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಅಸ್ಟಿಯಾ
ಪೋರಸಿಸ್‌ ಎಂಬ ಕಾಯಿಲೆ ಚಿಕ್ಕ ವಯಸ್ಸಿನವರನ್ನು ಕಾಡುತ್ತಿದೆ. ಇದಕ್ಕೆ ಪ್ರಮುಖ ಕಾರಣ. ದೇಹಕ್ಕೆ ಮಿಟಮಿನ್‌ ಡಿ ಅಂಶದ ಕೊರತೆ. ಬೆಳಗಿನ ವೇಳೆ ದೊರೆಯುವ ಎಳೆ ಬಿಸಿಲಿನಲ್ಲಿ ಮನುಷ್ಯನ ದೇಹಕ್ಕೆ ಮಿಟಮಿನ್‌ ಡಿ ಪುಕ್ಕಟ್ಟೆಯಾಗಿ ದೊರೆಯುತ್ತದೆ. ಬೆಳಗಿನ ಹೊತ್ತು ಬೇಗ ಎದ್ದು, ವಾಯುವಿಹಾರ ಮಾಡುವುದರಿಂದ ಮೂಳೆಗಳ ಸವೆತದಂಥ ಕಾಯಿಲೆಯಿಂದ ಹೊರಬರಬಹುದೆಂದು ಸಲಹೆ ನೀಡಿದರು.

ಉಪಯೋಗಕಾರಿ: ಸಿದ್ದರಾಮೇಶ್ವರ ಬ್ಯಾಂಕ್‌ ಬ್ಯಾಂಕಿನ ಅಧ್ಯಕ್ಷ ಬಸವರಾಜಪ್ಪ ಮಾತನಾಡಿ, ಶಿವನಂಜಪ್ಪ ಅವರು ರಾಜಕೀಯವಾಗಿ, ಸಾಮಾಜಿಕವಾಗಿ ಸಮುದಾಯದ ಬಗ್ಗೆ ಕಾಳಜಿ ಹೊಂದಿದ್ದವರು. ಅಂತಹವರ ಹೆಸರಿನಲ್ಲಿ ನಡೆಯುತ್ತಿರುವ ಈ ಆರೋಗ್ಯ ಶಿಬಿರ ಹೆಚ್ಚು ಜನರಿಗೆ ಉಪಯೋಗಕಾರಿಯಾಗಲಿ ಎಂದರು. 

ವೇದಿಕೆಯಲ್ಲಿ ಸಿದ್ದರಾಮೇಶ್ವರ ಬ್ಯಾಂಕ್‌ ಬ್ಯಾಂಕಿನ ಅಧ್ಯಕ್ಷರಾದ ಪಿ.ಎನ್‌.ಶಿವರುದ್ರಯ್ಯ, ಉಪಾಧ್ಯಕ್ಷರಾದ ಬಿ.ಬಿ.ಮಹದೇವಯ್ಯ, ನಿರ್ದೇಶಕರಾದ ಬಿ.ಎಸ್‌.ಜೋತಿಲಕ್ಷ್ಮೀ, ಗುರುಕುಲ ವಿವಿಧೋದ್ದೇಶ ಬ್ಯಾಂಕ್‌ ಬ್ಯಾಂಕ್‌ನ ಅಧ್ಯಕ್ಷ ಮಲ್ಲಿಕಾರ್ಜುನಯ್ಯ, ಸಕ್ಕರೆ ರೋಗ ತಜ್ಞರಾದ ಡಾ.ಧೀರಜ್‌ ಕುಮಾರ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಶಿಬಿರದಲ್ಲಿ ಹೃದ್ರೋಗ, ಮೂಳೆ ಮತ್ತು ಕೀಲು, ಮಧುಮೇಹ, ರಕ್ತದೊತ್ತಡ ಹಾಗೂ ಇನ್ನಿತರ ಕಾಯಿಲೆ ಬಗ್ಗೆ ಅಪೊಲೋ ಆಸ್ಪತ್ರೆಯ ತಜ್ಞ ವೈದ್ಯರು ರೋಗಿಗಳನ್ನು ಪರೀಕ್ಷಿಸಿ, ಸಲಹೆ, ಸೂಚನೆ ಜೊತೆಗೆ, ಔಷಧ ವಿತರಿಸಿದರು. ಶಿಬಿರದಲ್ಲಿ 500ಕ್ಕೂ ಹೆಚ್ಚು ಜನರ ಭಾಗವಹಿಸಿದ್ದರು. 

ಟಾಪ್ ನ್ಯೂಸ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.