ಗಣಿಗಾರಿಕೆ ಅಟ್ಟಹಾಸದಿಂದ ಕರಗಿದ ಗುಡ್ಡಗಳು


Team Udayavani, Apr 29, 2019, 11:39 AM IST

gudda

ತುಮಕೂರು : ಜಿಲ್ಲಾದ್ಯಂತ ನಡೆಯುತ್ತಿದ್ದ ಗಣಿಗಾರಿಕೆ ಅಟ್ಟಹಾಸದಿಂದ ಗೋಮಾಳ ಗುಡ್ಡಗಳೇ ಕರಗಿ ಹೋಗಿವೆ. ಗ್ರಾಮೀಣ ಪ್ರದೇಶಗಳಲ್ಲಿ ಪ್ರಾಣಿ, ಪಕ್ಷಿ ಗಳಿಗೆ ಆಶ್ರಯವಾಗಿದ್ದ ಗುಂಡು ತೋಪುಗಳು ಭೂಗಳ್ಳರ ಕಪಿಮುಷ್ಠಿಗೆ ಸಿಲುಕಿವೆ. ಈಗ ಸಾವಿರಾರು ವರ್ಷಗಳಿಂದ ಜನ ಜಾನುವಾರುಗಳಿಗೆ ನೀರು ಒದಗಿಸುವ ತಾಣವಾಗಿದ್ದ ಕೆರೆ ಕಟ್ಟೆಗಳನ್ನೂ ಕಬಳಿಸಲು ಭೂಮಾಫಿಯಾಗಳು ಸಂಚು ನಡೆಸುತ್ತಿರುವುದು ಬಯಲಾಗುತ್ತಿದೆ.

ಕೆರೆ ಕಟ್ಟೆಗಳನ್ನು ರಕ್ಷಿಸಿ ಅಂತರ್ಜಲ ವೃದ್ಧಿಗೊಳಿಸಿ ನೀರು ಶೇಖರಿಸಿ ಎನ್ನುವ ಘೋಷವಾಕ್ಯಗಳು ಎಲ್ಲೆಡೆ ರಾರಾಜಿಸುತ್ತವೆ. ಬಿದ್ದ ಮಳೆ ನೀರು ಹರಿದು ಹೋಗದೇ ಶೇಖರಿಸಿ ಭೂಮಿಗೆ ಇಂಗಿಸುವ ಕೆಲಸ ಮಾಡಿ ಅಂತರ್ಜಲ ಹೆಚ್ಚು ಮಾಡಿ ಎಂದು ಪ್ರಚಾರ ಗಳು ನಡೆಯುತ್ತಲೇ ಇವೆ.

ಭೂಗಳ್ಳರ ಪಾಲು: ಒಂದು ಕಾಲದಲ್ಲಿ ಕೆರೆ ಕಟ್ಟೆಗಳನ್ನು ಕಟ್ಟಿಸಿ ಜನ ಜಾನುವಾರುಗಳಿಗೆ ನೀರು ಒದಗಿಸಿದರೆ ಅದು ನಮ್ಮ ಪುಣ್ಯದ ಕೆಲಸ ಎಂದು ಭಾವಿಸುತ್ತಿದ್ದ ದಿನಗಳೂ ಇದ್ದವು. ಅದಕ್ಕಾಗಿ ಹಲವರು ಕೆರೆ ಕಟ್ಟೆ ಗಳನ್ನು ಕಟ್ಟಿಸಿದ್ದಾರೆ. ಬಾವಿ, ಕಲ್ಯಾಣಿ ನಿರ್ಮಿಸಿರುವ ಬಗ್ಗೆ ಇತಿಹಾಸದಿಂದ ತಿಳಿದು ಬರುತ್ತದೆ.

ಸಾರ್ವಜನಿಕ ಸಂಪತ್ತು ನಮ್ಮದಲ್ಲ ಅದು ಎಲ್ಲ ಜನರಿಗೆ ಸೇರಿದ್ದು, ಕೆರೆ, ಕಟ್ಟೆಗಳು, ಗುಂಡು ತೋಪು ಗಳು, ಗೋಮಾಳಗಳು ಸಾರ್ವಜನಿಕರ ಆಸ್ತಿ ಅದು ಸರ್ಕಾರಿ ಆಸ್ತಿ. ಇದನ್ನು ಯಾರೂ ಒತ್ತುವರಿ ಮಾಡು ವಂತಿಲ್ಲ, ಅಕ್ರಮವಾಗಿ ಪ್ರವೇಶಿಸುವಂತಿಲ್ಲ, ಈ ಆಸ್ತಿಗಳನ್ನು ಸಂರಕ್ಷಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ. ಆದರೆ, ಇಂದು ಗೋಮಾಳಗಳು, ಗುಂಡು ತೋಪುಗಳು, ರಾಜಗಾಲುವೆಗಳು, ಕೆರೆಕಟ್ಟೆಗಳು, ಉದ್ಯಾನವನಗಳು ಭೂಗಳ್ಳರ ಪಾಲಾಗುತ್ತಿವೆ.

ಬರಗಾಲ ಪೀಡಿತ ಜಿಲ್ಲೆಯಾಗಿರುವ ಜಿಲ್ಲೆಯಲ್ಲಿ ಕೃಷಿ ಹಾಗೂ ಕುಡಿಯುವ ನೀರಿನ ಆಶ್ರಯ ತಾಣ ಗಳಾಗಿರುವ ಕೆರೆ, ಕಟ್ಟೆಗಳು ತುಂಬಿದ್ದರೆ ಇಡೀ ಜಿಲ್ಲೆಯಲ್ಲಿ ಸಮೃದ್ಧವಾದ ಮಳೆ ಬೆಳೆಯಾಗುತ್ತದೆ, ಅಂತರ್ಜಲವೂ ವೃದ್ಧಿಯಾಗಿ ಕುಡಿಯುವ ನೀರಿನ ಸಮಸ್ಯೆ ನೀಗುತ್ತದೆ.

ಎಲ್ಲೆಡೆ ಒತ್ತುವರಿ: ಆದರೆ, ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಸಮರ್ಪಕವಾಗಿ ಮಳೆ ಬೆಳೆಯಾಗದಿರಲು ಅಂತರ್ಜಲ ಮಟ್ಟ ಕುಸಿದಿರುವುದೇ ಮೂಲ ಕಾರಣ ವಾಗಿದೆ. ಇದಕ್ಕೆ ಕೆರೆ, ಕಟ್ಟೆಗಳಲ್ಲಿ ನೀರಿಲ್ಲದಿರುವುದು, ಇರುವ ಕೆರೆ, ಕಟ್ಟೆಗಳಿಗೆ ಹರಿದು ಬರುತ್ತಿದ್ದ, ರಾಜ ಕಾಲುವೆಗಳು, ಹಳ್ಳಗಳನ್ನು ಒತ್ತುವರಿ ಮಾಡಿರುವುದು. ಜೊತೆಗೆ ಕೆರೆ ಅಂಗಳವನ್ನು ಭೂಗಳ್ಳರು ತಮ್ಮ ಹಿಡಿತದಲ್ಲಿ ಇಟ್ಟುಕೊಂಡಿರುವುದೇ ಕೆರೆ, ಕಟ್ಟೆಗಳು ತುಂಬದೇ ಇರಲು ಕಾರಣವಾಗಿವೆ.

ಈ ಹಿಂದೆ ಇದ್ದ ಕೆರೆ ಅಂಗಳಗಳ ವಿಸ್ತೀರ್ಣಕ್ಕೂ ಇಂದು ಇರುವ ಕೆರೆ ಅಂಗಳಗಳಿಗೂ ಅಜಗಜಾಂತರ ವ್ಯತ್ಯಾಸಗಳು ಕಂಡು ಬರುತ್ತಿರುವುದಕ್ಕೆ ಕೆರೆ ಅಂಗಳಗಳನ್ನು ಒತ್ತುವರಿ ಮಾಡಿರುವುದೇ ಮೂಲ ಕಾರಣವಾಗಿದೆ.

ಕೈಗೊಂಡಿಲ್ಲ ಎನ್ನುವ ಆರೋಪ: ಸುಪ್ರೀಂಕೋರ್ಟ್‌ ಆದೇಶದಂತೆ ಯಾವುದೇ ಕೆರೆ ಕಟ್ಟೆ ಒತ್ತುವರಿ ಮಾಡುವಂತಿಲ್ಲ. ಇರುವ ಕೆರೆ, ಕಟ್ಟೆಗಳನ್ನು ಯಥಾಸ್ಥಿತಿ ಕಾಪಾಡಬೇಕು ಎನ್ನುವ ನಿಯಮವಿದೆ. ಅದೇ ರೀತಿ ಯಲ್ಲಿ ಭೂ ಕಂದಾಯ ಕಾಯ್ದೆ 192 (ಎ) ಪ್ರಕಾರ ಒತ್ತುವರಿ ದಾರನ ಮೇಲೆ 192 (ಬಿ) ಪ್ರಕಾರ ಒತ್ತುವರಿಗೆ ತೆರವು ಮಾಡದ ಅಧಿಕಾರಿ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು. ಆದರೆ, ಈ ವರೆಗೂ ಕೆರೆ ಒತ್ತುವರಿದಾರರ ಮೇಲೆ ಯಾವುದೇ ರೀತಿ ಕ್ರಮ ಕೈಗೊಂಡಿಲ್ಲ ಎನ್ನುವ ಆರೋಪ ಸಾರ್ವ ಜನಿಕರಿಂದ ಕೇಳಿಬರುತ್ತಿದೆ.

ಕೆರೆ ಕಟ್ಟೆಗಳ ಒತ್ತುವರಿ ತಡೆ ಕಾನೂನುಗಳನ್ನೇ ಗಾಳಿಗೆ ತೂರಿ ತಮ್ಮ ಮನಸ್ಸಿಗೆ ಬಂದಂತೆ ಒತ್ತುವರಿ ಮಾಡುತ್ತಿರುವುದು ಎಲ್ಲೆಡೆ ಕಂಡು ಬರುತ್ತಿದೆ. ಈ ಬಗ್ಗೆ ಜಿಲ್ಲಾಡಳಿತ ಎಚ್ಚೆತ್ತು ಕೆರೆ, ಕಟ್ಟೆಗಳನ್ನು ಸಂರಕ್ಷಿಸಿ ಒತ್ತುವರಿಯನ್ನು ತಡೆಯುವತ್ತ ಹೆಚ್ಚು ಗಮನ ನೀಡುವುದು ಅಗತ್ಯವಾಗಿದೆ.

ಕಣ್ಮರೆ ಆಗುತ್ತಿವೆ ರಾಜಗಾಲುವೆಗಳು: ಕೆರೆಗಳಿಗೆ ನೀರು ಹರಿದು ಬರುವ ರಾಜಗಾಲುವೆಗಳು ಮತ್ತು ಕೆರೆ ತುಂಬಿದ ನಂತರ ಕೋಡಿ ಬಿದ್ದು ನೀರು ಹರಿದು ಹೋಗುವ ಹಳ್ಳ ಕೊಳ್ಳಗಳು ಮತ್ತು ಕೆರೆಯ ನೀರಿನ ತೂಬು ಎತ್ತಿದಾಗ ರೈತರ ಜಮೀನುಗಳಿಗೆ ಕೆರೆ ನೀರು ಹರಿದು ಹೋಗುತ್ತಿದ್ದ ಹಳ್ಳಗಳು ಇಂದು ಭೂಗಳ್ಳರ ಪಾಲಾಗಿವೆ. ಸಿಕ್ಕಷ್ಟೇ ಸಿಗಲಿ ಎಂದು ನೀರು ಹರಿಯುವ ಜಾಗವನ್ನೆಲ್ಲಾ ಒತ್ತುವರಿ ಮಾಡಿಕೊಂಡು ನೀರು ಕೆರೆಗೆ ಹರಿಯದಂತೆ ಕೆರೆಯ ನೀರು ಹೊರ ಹೋಗದಂತೆ ಒತ್ತುವರಿ ಮಾಡಿರುವುದು ಎಲ್ಲೆಡೆ ಕಂಡು ಬಂದಿದೆ.

ತುಮಕೂರು ನಗರದ ಪ್ರಮುಖ ಕೆರೆಯಾಗಿರುವ ಅಮಾನಿಕೆರೆಗೆ ನೀರು ಹರಿದು ಬರುತ್ತಿದ್ದ ಪ್ರಮುಖ ರಾಜಗಾಲುವೆಗಳೇ ಇಂದು ಮಾಯವಾಗಿವೆ. ಇದರಿಂದ ಕೆರೆಗೆ ಹರಿದು ಬರುತ್ತಿದ್ದ ಮಳೆಯ ನೀರು ಬರದಂತಾಗಿದೆ. ಕೆರೆ ತುಂಬುವದೇ ಕಷ್ಟವಾಗಿದೆ. ಇದಲ್ಲದೇ ತುಮಕೂರು ಅಮಾನಿಕೆರೆ ಸುತ್ತಮುತ್ತಾ ಇದ್ದ ರಾಜಗಾಲುವೆಗಳು, ಹಳ್ಳಗಳನ್ನು ಒತ್ತುವರಿ ಮಾಡಿ ಕಟ್ಟಡಗಳನ್ನು ಕಟ್ಟಿಕೊಂಡಿದ್ದಾರೆ.

ಒಟ್ಟಾರೆಯಾಗಿ ಜಿಲ್ಲಾಡಳಿತ ಸರ್ಕಾರಿ ಜಮೀನು ಗಳನ್ನು ಭೂಗಳ್ಳರಿಂದ ಬಿಡಿಸಿ ಸರ್ಕಾರಕ್ಕೆ ಸ್ವಾಧೀನ ಪಡಿಸಿಕೊಳ್ಳಲು ಮುಂದಾಗಬೇಕಾಗಿದೆ. ತುಮಕೂರು ಈಗ ಸ್ಮಾರ್ಟ್‌ ಸಿಟಿಯಾಗಿ ಬೆಳವಣಿಗೆ ಆಗಲು ಎಲ್ಲ ರೀತಿಯ ತಯಾರಿ ನಡೆಯುತ್ತಿದೆ. ಸ್ಮಾರ್ಟ್‌ ಸಿಟಿ ವಿವಿಧ ಕಾಮಗಾರಿಗಳು ನಡೆಯುತ್ತಿವೆ. ನಗರದ ಜನ ಸಂಖ್ಯೆ ಬೆಳೆವಣಿಗೆಗೆ ಅನುಗುಣವಾಗಿ ಮೂಲ ಸೌಲಭ್ಯಗಳನ್ನು ಕಲ್ಪಿಸಬೇಕಾಗಿದೆ. ಜೊತೆಗೆ ಭೂಮಿಯ ಅಂತರ್ಜಲ ವೃದ್ದಿಸಲು ಕೆರೆ ಕಟ್ಟೆಗಳು, ರಾಜಗಾಲುವೆ ಗಳನ್ನು ಉಳಿಸಿ, ಅಭಿವೃದ್ಧಿ ಪಡಿಸುವುದು ಮಹತ್ತರ ವಾಗಿದೆ. ಈ ಕಾರ್ಯದಲ್ಲಿ ಜಿಲ್ಲಾಧಿಕಾರಿ ಡಾ.ಕೆ. ರಾಕೇಶ್‌ ಕುಮಾರ್‌ ದಿಟ್ಟ ಹೆಜ್ಜೆ ಇಡುವರೇ?

ಚಿ.ನಿ.ಪುರುಷೋತ್ತಮ್‌

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.