ವಾರದಲ್ಲೇ ಹೇಮಾವತಿ ಜಲಾಶಯ ಭರ್ತಿ


Team Udayavani, Aug 9, 2020, 11:59 AM IST

ವಾರದಲ್ಲೇ ಹೇಮಾವತಿ ಜಲಾಶಯ ಭರ್ತಿ

ಹಾಸನ: ಈ ವರ್ಷ ಹೇಮಾವತಿ ಜಲಾಶಯ ಒಂದೇ ವಾರದಲ್ಲಿ ಭರ್ತಿಯಾಗಿದೆ. ಕಳೆದ ವರ್ಷ ಆಗಸ್ಟ್‌ 2ನೇ ವಾರದಲ್ಲಿ ಭರ್ತಿಯಾಗಿದ್ದ ಜಲಾಶಯ ಈ ವರ್ಷ ಆಗಸ್ಟ್‌ ಮೊದಲ ವಾರದಲ್ಲಿಯೇ 37.10 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯ ಭರ್ತಿ ಯಾಗಿರುವುದು ದಾಖಲೆ.

ಕಳೆದ ಭಾನುವಾರ ( ಆ.2) ರವರೆಗೂ ಮಳೆಯ ಕೊರತೆಯಿಂದ ರೈತರು ಪರದಾಡು ತ್ತಿದ್ದರು. ಮಲೆನಾಡು ಪ್ರದೇಶದಲ್ಲಿಯೂ ತುಂತುರು ಮಳೆಯಾಗುತ್ತಿದ್ದು, ಜಲಾಶಯಕ್ಕೆಕೇವಲ 1780 ಕ್ಯೂಸೆಕ್‌ ಒಳಹರಿವಿತ್ತು. ಜಲಾಶಯ ಭರ್ತಿಯಾಗದ ಆತಂಕವಿತ್ತು. ಆದರೆ ಸೋಮವಾರ (ಆ.3 ರಿಂದ) ಆರಂಭವಾದ ಮಳೆ ದಿನೆ. ದಿನೇ ರೌದ್ರಾವತಾರ ತಾಳುತ್ತಾ ಸಾಗಿತು. ಬುಧವಾರ 24,185 ಕ್ಯೂಸೆಕ್‌, ಗುರುವಾರ 36,849 ಕ್ಯೂಸೆಗೆ ಒಳ ಹರಿವು ಏರಿಕೆಯಾಗಿ ಜಲಾಶಯ ಭರ್ತಿಯಾಗುವ ಆಶಯ ಮೂಡಿತು.

ಜಲಾಶಯ ಭರ್ತಿ: ಶುಕ್ರವಾರ (ಆ.7) 47,320 ಕ್ಯೂಸೆಕ್‌ಗೆ ಏರಿದ ಒಳ ಹರಿವು ಶನಿವಾರದ ವೇಳೆಗೆ ಜಲಾಶಯಕ್ಕೆ 50,036 ಕ್ಯೂಸೆಕ್‌ ಒಳ ಹರಿವು ದಾಖಲಾಗಿ ಜಲಾಶಯ ಭರ್ತಿಯಾಗಿದೆ. ಜಲಾಶಯದಿಂದ ನದಿಗೆ 20 ಸಾವಿರ ಕ್ಯೂಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ. ಗರಿಷ್ಠ 37.10 ಟಿಎಂಸಿ ಸಂಗ್ರಹ ಸಾಮರ್ಥಯದ ಜಲಾಶಯದಲ್ಲಿ ಶನಿವಾರದ ವರೆಗೆ 34 ಟಿಎಂಸಿ ನೀರು ಸಂಗ್ರಹವಾಗಿದೆ.

ಪ್ರವಾಹ ನಿಯಂತ್ರಿಸಲು ಹಾಗೂ ಜಲಾಶಯದ ಸುರಕ್ಷತೆಯ ದೃಷ್ಟಿಯಿಂದ ಭಾನುವಾರದಿಂದ ಒಳಹರಿವಿನಷ್ಟೇ ನೀರನ್ನು ನದಿಗೆ ಬಿಟ್ಟು ಜಲಾಶಯದ ಸುರಕ್ಷತೆ ಕಾಪಾಡಿ ಕೊಳ್ಳಬೇಕಾಗಿದೆ. ನೀರು ಬಿಡಲಾಗಿದೆ: ನದಿಗೆ ನೀರು ಬಿಡುವುದರೊಂದಿಗೆ ಅಚ್ಚುಕಟ್ಟು ಪ್ರದೇಶಕ್ಕೂ ನಾಲೆಗಳ ಮೂಕ ನೀರು ಹರಿಸಲಾಗುತ್ತಿದೆ. ಹಾಸನ, ತುಮಕೂರು, ಮಂಡ್ಯ ಜಿಲ್ಲೆಯ ಅಚ್ಚುಕಟ್ಟು ಹೊಂದಿರುವ ಹೇಮಾವತಿ ಎಡದಂಡೆ ನಾಲೆಗೆ ಶುಕ್ರವಾರದಿಂದಲೇ ನೀರು ಹರಿಸಲಾಗುತ್ತಿದೆ. ಕಳೆದ ನಾಲ್ಕೈದು ದಿನಗಳ ಹಿಂದೆಯೇ ಹೇಮಾವತಿ ಬಲ ಮೇಲ್ದಂಡೆ ನಾಲೆಗೆ ನೀರು ಹರಿಸಲಾಗುತ್ತಿದೆ. ಆದರೆ ಬಲದಂಡೆ ನಾಲೆಗೆ ಇನ್ನೂ ನೀರು ಬಿಡುತ್ತಿಲ್ಲ.

ನಾಲೆಗಳಿಗೆ ನೀರು ಬಿಡದೆ ಪಶ್ಚಾತ್ತಾಪ: ಜಲಾಶಯದಲ್ಲಿ ಜುಲೈ ಮೊದಲ ವಾರದಲ್ಲಿಯೇ 12 ಟಿಎಂಸಿ ನೀರಿತ್ತು. ನಾಲೆಗಳಲ್ಲಿ ಅಚ್ಚಕಟ್ಟು ಪ್ರದೇಶಕ್ಕೆ ನೀರು ಹರಿಸಿ ಮುಂಗಾರು ಬೆಳೆಗಳ ಬಿತ್ತನೆಗೆ ಸಿದ್ಧತೆ ಮಾಡಿಕೊಳ್ಳಲು ಸಹ ಕರಿಸಬೇಕು ಎಂದು ಅಚ್ಚುಕಟ್ಟು ಪ್ರದೇಶದ ರೈತರು ಹಾಗೂ ಶಾಸಕರು ಒತ್ತಾಯ ಮಾಡ ಲಾರಂಭಿಸಿದ್ದರು. ಆದರೆ ಜಿಲ್ಲಾ ಉಸ್ತುವಾರಿ ಸಚಿವರು ಗಮನ ಕೊಡಲೇ ಇಲ್ಲ. ಹಿಂದಿನ ವರ್ಷಗಳಲ್ಲಿ ಯಾವ್ಯಾವ ದಿನಾಂಕಗಳಂದು ನೀರು ಬಿಡಲಾಗಿದೆ ಎಂಬ ದಾಖಲೆಗಳನ್ನು ಪರಿಶೀಲಿಸಿ ಆನಂತರ ನಾಲೆಗಳಲ್ಲಿ ನೀರು ಬಿಡುವ ತೀರ್ಮಾನ ಮಾಡಲಾಗುವುದು ಎಂದು ಒಂದು ತಿಂಗಳು ಕಾಲ ತಳ್ಳುತ್ತಾ ಬಂದರು.

ಈಗ ಜಲಾಶಯ ಭರ್ತಿಯಾಗಿ ಹೆಚ್ಚುವರಿ ನೀರು ಪ್ರವಾಹವಾಗಿ ನದಿಗೆ ವ್ಯರ್ಥವಾಗಿ ಹರಿದು ಹೋಗುತ್ತಿದೆ. ಜುಲೈ ತಿಂಗಳಿನಲ್ಲಿಯೇನಾಲೆಗಳಲ್ಲಿ ವಿಶೇಷವಾಗಿ ಎಡದಂಡೆ ನಾಲೆಯಲ್ಲಿ ನೀರು ಬಿಟ್ಟಿದ್ದರೆ ತುಮಕೂರು, ಮಂಡ್ಯ, ಹಾಸನ ಜಿಲ್ಲೆಯ ಕೆರೆಗಳನ್ನು ಈ ವೇಳೆಗಾಗಲೇ ತುಂಬಿಸಬಹುದಿತ್ತು. ಮುಖ್ಯವಾಗಿ ತುಮ ಕೂರು ಜಿಲ್ಲೆಯ ಜನರು ನೀರಿಗೆ ಹಾಹಾಕಾರಪಡುವುದನ್ನು ಒಂದು ತಿಂಗಳಲ್ಲಿ ತಪ್ಪಿಸಬಹುದಾಗಿತ್ತು. ಆದರೆ ಈಗ ಹೆಚ್ಚುವರಿ ನೀರು ನದಿಗೆ ಹರಿಯುವುದನ್ನು ನೋಡಿ ಒಂದು ತಿಂಗಳು ಮೊದಲು ನಾಲೆಗಳಿಗೆ ನೀರು ಬಿಡದಿದ್ದಕ್ಕೆ ಪಶ್ಚಾತ್ತಾಪ ಪಡುವಂತಾಗಿದೆ

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.