ರಾಜಕೀಯ ಲಾಭಕ್ಕಾಗಿ ಹೇಮೆ ಹೋರಾಟ


Team Udayavani, Feb 27, 2019, 6:56 AM IST

rajakiyaa.jpg

ಕುಣಿಗಲ್‌: ಲೋಕಸಭಾ ಚುನಾವಣೆ ರಾಜಕೀಯ ಲಾಭ ಪಡೆಯಲು ಹೇಮಾವತಿ ನೀರಿನ ವಿಚಾರ ಮುಂದಿಟ್ಟುಕೊಂಡು ಹೋರಾಟ ಮಾಡುತ್ತಿದ್ದೀರಾ ಎಂದು ಮಾಜಿ ಸಂಸದ ಜಿ.ಎಸ್‌.ಬಸವರಾಜು ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದ ಸಂಸದ ಡಿ.ಕೆ.ಸುರೇಶ್‌, ಮೊದಲು ನಿಮಗೆ ಬಿಜೆಪಿಯಿಂದ ಟಿಕೆಟ್‌ ಸಿಗುತ್ತಾ ಎಂಬುದರ ಬಗ್ಗೆ ಖಾತರಿ ಪಡಿಸಿಕೊಳ್ಳಿ ಎಂದು ವ್ಯಂಗ್ಯವಾಡಿದ್ದಾರೆ.

ತಾಲೂಕಿನ ಹೆಬ್ಬೂರು ಮತ್ತು ಎಡೆಯೂರು ವ್ಯಾಪ್ತಿಯ ಹೇಮಾವತಿ ಅಚ್ಚುಕಟ್ಟು ಪ್ರದೇಶದ 46 ಕೋಟಿ ರೂ.ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ತಾಲೂಕಿನ ಅಮೃತೂರು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಆವರಣದಲ್ಲಿ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು. 

ಆಗ ಏನ್‌ ಮಾಡುತ್ತಿದ್ದೀರಿ: ಕುಣಿಗಲ್‌ ತಾಲೂಕಿನ ಜನರ ಆಶೀರ್ವಾದದಿಂದ ನಾಲ್ಕು ಬಾರಿ ಸಂಸದರಾಗಿದ್ದೀರಾ, ಆದರೆ, ನಿಮ್ಮನ್ನು ಗೆಲ್ಲಿಸಿದ ತಾಲೂಕಿನ ಜನತೆಗೆ ನಿಮ್ಮ ಕೊಡುಗೆ ಏನು ಎಂದು ಜಿಎಸ್‌ಬಿ ವಿರುದ್ಧ ಹರಿಹಾಯ್ದರು. ನೀವು ಸಂಸದರಾಗಿದ್ದ ವೇಳೆ ಕಾವೇರಿ ಕೊಳ್ಳದ ನೀರನ್ನು ಕೃಷ್ಣ ಕೊಳ್ಳಕ್ಕೆ ತೆಗೆದುಕೊಂಡು ಹೋಗುವಾಗ ಏನು ಮಾಡುತ್ತಿದ್ದೀರಿ. ತುಮಕೂರು ಜಿಲ್ಲೆಗೆ ಹೇಮಾವತಿ 24 ಟಿಎಂಸಿ ನೀರು ನಿಗದಿಪಡಿಸಲಾಗಿದೆ.

ಈ ಪೈಕಿ ಕುಣಿಗಲ್‌ ತಾಲೂಕಿಗೆ 4 ಟಿಎಂಸಿ ನೀರು ಹರಿಯಬೇಕಾಗಿದೆ. ಆದರೆ. ನೀವು ಅಧಿಕಾರದಲ್ಲಿದ್ದ ವೇಳೆ ಹೇಮಾವತಿ ನಾಲೆಯ ಬಗ್ಗೆ ಎಚ್ಚರ ವಹಿಸಿ ಅಭಿವೃದ್ಧಿಪಡಿಸಿದ್ದರೆ, ಈ ಸಮಸ್ಯೆ ಎದುರಾಗುತ್ತಿರಲಿಲ್ಲ, ನಿಮ್ಮ ಬೇಜವಾಬ್ದಾರಿಯಿಂದ ಜಿಲ್ಲೆಯ ಜನರು ಸಮಸ್ಯೆ ಎದುರಿಸಬೇಕಾಗಿದೆ ಎಂದರು. ನಿಮಗೆ ಈ ಬಾರಿ ಬಿಜೆಪಿ ಟಿಕೆಟ್‌ ಕೊಡಲ್ಲ. ಆ ಕಡೆ ಗಮನ ಹರಿಸಿ.

ಏಕೆ ಸುಮ್ಮನೆ ಕುಣಿಗಲ್‌ ತಾಲೂಕಿನ ವಿರುದ್ಧ ಮಾತನಾಡುತ್ತಿದೀªರಾ. ನಾವು ಎಲ್ಲಿಗೂ ನೀರು ತೆಗೆದುಕೊಂಡು ಹೋಗುತ್ತಿಲ್ಲ. ಕುಣಿಗಲ್‌ಗೆ ಮಾತ್ರ ನೀರು ಸರಾಗವಾಗಿ ಹರಿಯಲು ಪೈಪ್‌ಲೈನ್‌ ಲಿಂಕ್‌ ಮಾಡಿಕೊಳ್ಳುತ್ತಿದೇªವೆ. ಟಿಬಿಸಿ ನಾಲೆ ಅಗಲೀಕರಣಕ್ಕೆ 422 ಕೋಟಿ ರೂ.ಗಳನ್ನು ಸಮ್ಮಿಶ್ರ ಸರ್ಕಾರ ಮಂಜೂರಾತಿ ಮಾಡಿದೆ. ಇಲ್ಲಿ ನಾವು ತುಮಕೂರು ಜಿಲ್ಲೆಗೆ ಹರಿಸುವ ನೀರಿಗೆ ವಿರೋಧ ಮಾಡಿಲ್ಲ. ಆದರೆ ಕುಣಿಗಲ್‌ಗೆ ಮಾತ್ರ ನೀರು ಕೇಳುತ್ತಿದ್ದೇವೆ ಎಂದರು.

ಕಳಪೆ ಮಾಡಿದರೆ ಕಾಮಗಾರಿ ನಿಲ್ಲಿಸಿ: ನಮಗೆ ಗುತ್ತಿಗೆದಾರರು ಮುಖ್ಯ ಅಲ್ಲ ಜನ ಮುಖ್ಯ. ರಸ್ತೆ ಕಾಮಗಾರಿ ಕಳಪೆ ಮಾಡಿದರೆ ಮುಲಾಜಿಲ್ಲದೆ ತಡೆದು ನಿಲ್ಲಿಸಿ. ನಿಮ್ಮೂರ ರಸ್ತೆ ಶಾಶ್ವತವಾಗಿರಬೇಕು ಎಂದು ಸಾರ್ವಜನಿಕರಿಗೆ ಸಂಸದರು ಸಲಹೆ ನೀಡಿದರು. 

ಶಾಸಕ ಡಾ.ರಂಗನಾಥ್‌, ಜಿ.ಪಂ ಸದಸ್ಯೆ ಅನುಸೂಯಮ್ಮ ವೈ.ಕೆ.ಆರ್‌, ಪುರಸಭಾ ಅಧ್ಯಕ್ಷೆ ನಳಿನಾ, ತಾಪಂ ಸದಸ್ಯರಾದ ವಿಶ್ವನಾಥ್‌, ಮುಖಂಡರಾದ ಕೆಂಪೀರೇಗೌಡ, ಕೆಂಪೇಗೌಡ, ಅಲ್ಲಾಬಕಾಶ್‌, ನಂಜೇಗೌಡ್ರು, ಆಡಿಟರ್‌ ನಾಗರಾಜ್‌, ಗೂಳಿಗೌಡ, ರೆಹಮಾನ್‌ ಷರೀಫ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ‌ ವೆಂಕಟರಾಮು, ರಂಗಣ್ಣಗೌಡ, ಪುರಸಭಾ ಸದಸ್ಯರಾದ ಚಂದ್ರಶೇಖರ್‌, ಪಾಪಣ್ಣ, ಗ್ರಾಪಂ ಅಧ್ಯಕ್ಷ ವೆಂಕಟರಾಮು, ಸದಸ್ಯರಾದ ಕಮಲಮ್ಮ, ಶ್ರೀನಿವಾಸ್‌ ಇದ್ದರು. 

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

Lok Sabha Elections; ಶಾಂತಿಯುತ ಮತದಾನಕ್ಕೆ ಸಿದ್ದತೆ : ಡಿವೈಎಸ್‌ಪಿ ಓಂ ಪ್ರಕಾಶ್

Lok Sabha Elections; ಶಾಂತಿಯುತ ಮತದಾನಕ್ಕೆ ಸಿದ್ದತೆ : ಡಿವೈಎಸ್‌ಪಿ ಓಂ ಪ್ರಕಾಶ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.